Homeಮುಖಪುಟಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

ಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

- Advertisement -
- Advertisement -

ಹೊಸದಿಲ್ಲಿ: ಬಿಹಾರ ಸೇರಿದಂತೆ ದೇಶದ ಹಲವೆಡೆ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಮೂಲಕ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್ (AIMMM) ತೀವ್ರ ಕಳವಳ ವ್ಯಕ್ತಪಡಿಸಿದೆ. ಮುಸ್ಲಿಂ ಸಂಘಟನೆಗಳು ಮತ್ತು ಪ್ರಮುಖ ವ್ಯಕ್ತಿಗಳ ಒಕ್ಕೂಟವಾಗಿರುವ ಮುಶಾವರತ್, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೋಮು ಹಿಂಸಾಚಾರ ಮತ್ತು ದ್ವೇಷದ ಅಪರಾಧಗಳು ಅಪಾಯಕಾರಿ ಮಟ್ಟಕ್ಕೆ ಹೆಚ್ಚಿರುವುದನ್ನು ಖಂಡಿಸಿದೆ.

ಶನಿವಾರ ಇಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಮುಶಾವರತ್ ದೇಶದಲ್ಲಿ ಮುಸ್ಲಿಮರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿತು. ಅಸ್ಸಾಂನಲ್ಲಿ ಮುಸ್ಲಿಮರನ್ನು ಕಾನೂನುಬಾಹಿರವಾಗಿ ಒಕ್ಕಲೆಬ್ಬಿಸುವುದು ಮತ್ತು ದೇಶದ ವಿವಿಧ ಭಾಗಗಳಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸುವುದು ಈ ಅಪಾಯಕಾರಿ ಪ್ರವೃತ್ತಿಗಳ ಭಾಗವಾಗಿದೆ ಎಂದು ಅದು ಹೇಳಿದೆ. ಈ ವಿದ್ಯಮಾನಗಳು ದೇಶದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ತಳಹದಿಗೆ ಗಂಭೀರ ಅಪಾಯವನ್ನು ತಂದೊಡ್ಡುತ್ತಿವೆ ಎಂದು ಸಭೆ ಎಚ್ಚರಿಸಿದೆ.

ಮತದಾರರ ಹಕ್ಕುಗಳ ದುರುಪಯೋಗ ಮತ್ತು ಕಾನೂನು ಸವಾಲುಗಳ ಕುರಿತು ಮುಶಾವರತ್‌ನ ಪತ್ರಿಕಾ ಪ್ರಕಟಣೆಯು ಗಂಭೀರ ಆತಂಕ ವ್ಯಕ್ತಪಡಿಸಿದೆ. ಮತದಾರರ ಪಟ್ಟಿಗಳಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ಕಾಯ್ದುಕೊಳ್ಳಲು ಜಾರಿಗೆ ತಂದ ‘ಎಸ್ಐಆರ್’ ಪ್ರಕ್ರಿಯೆಯು, ಇಂದು ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ದುರ್ಬಲರಾದ ಅಂಚಿನ ಸಮುದಾಯಗಳ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲು ದುರುಪಯೋಗವಾಗುತ್ತಿದೆ ಎಂದು ಅದು ಹೇಳಿದೆ. ಭಾರತದ ಸಂವಿಧಾನವು ಖಾತ್ರಿಪಡಿಸಿದ ಪ್ರಜಾಪ್ರಭುತ್ವದ ಹಕ್ಕುಗಳ ಮೇಲೆ ನಡೆಯುತ್ತಿರುವ ಈ ವ್ಯವಸ್ಥಿತ ದಾಳಿಯನ್ನು AIMMM ತೀವ್ರವಾಗಿ ವಿರೋಧಿಸಿದೆ

“ಮತದಾನದ ಹಕ್ಕು ಕೇವಲ ಸವಲತ್ತಲ್ಲ, ಅದು ಪೌರತ್ವದ ಮೂಲಭೂತ ಅಭಿವ್ಯಕ್ತಿ. ಅದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವು ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುವ ದಾಳಿಯಾಗಿದೆ” ಎಂದು ಮುಶಾವರತ್ ಪ್ರತಿಪಾದಿಸಿದೆ. ಸಭೆಯಲ್ಲಿ 2025ರ ವಕ್ಫ್ (ತಿದ್ದುಪಡಿ) ಕಾಯಿದೆಯ ಅಪಾಯಕಾರಿ ಪರಿಣಾಮ, ಮಲೆಗಾಂವ್ ಸ್ಫೋಟಗಳ ಆರೋಪಿಗಳ ಖುಲಾಸೆ ಮತ್ತು ಮಲೆಗಾಂವ್ ಹಾಗೂ ಮುಂಬೈ ರೈಲು ಸ್ಫೋಟಗಳ ತೀರ್ಪುಗಳಿಗೆ ಮಹಾರಾಷ್ಟ್ರ ಸರ್ಕಾರದ ವಿಭಿನ್ನ ಪ್ರತಿಕ್ರಿಯೆಗಳ ಬಗ್ಗೆಯೂ ಆತಂಕ ವ್ಯಕ್ತಪಡಿಸಲಾಯಿತು.

ಅಮೆರಿಕ ಹೇರಿರುವ ಸುಂಕಗಳಿಂದಾಗಿ ಭಾರತೀಯ ರಫ್ತುದಾರರು, ಕೈಗಾರಿಕೆಗಳು ಮತ್ತು ಲಕ್ಷಾಂತರ ಕಾರ್ಮಿಕರ ಬದುಕು ಅಪಾಯಕ್ಕೆ ಸಿಲುಕಿದೆ. ಈ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರವು ಅಪಕ್ವತೆ ಮತ್ತು ದೂರದೃಷ್ಟಿಯ ಕೊರತೆಯನ್ನು ಪ್ರದರ್ಶಿಸಿದೆ. ಇದು ನಮ್ಮ ಕಾರ್ಯತಂತ್ರದ ಪಾಲುದಾರರನ್ನು ಮತ್ತಷ್ಟು ದೂರ ಮಾಡಿ, ಜಾಗತಿಕ ವ್ಯಾಪಾರದಲ್ಲಿ ಭಾರತದ ಸ್ಥಾನವನ್ನು ಕುಗ್ಗಿಸುತ್ತಿದೆ ಎಂದು AIMIM ಉಪಾಧ್ಯಕ್ಷ ನಾವಿದ್ ಹಮೀದ್ ಅವರು ಆಳವಾದ ಕಳವಳ ವ್ಯಕ್ತಪಡಿಸಿದರು.

ಇಸ್ರೇಲಿ ಸರ್ಕಾರವು ಪ್ಯಾಲೆಸ್ತೀನ್ ಜನರ ವಿರುದ್ಧ ನಡೆಸುತ್ತಿರುವ ನರಮೇಧ, ಯುದ್ಧ ಅಪರಾಧಗಳು ಮತ್ತು ದೌರ್ಜನ್ಯಗಳ ಬಗ್ಗೆಯೂ ಎಐಎಂಎಂ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಜಿನೀವಾ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅದು ಖಂಡಿಸಿದೆ. ಗಾಝಾದಲ್ಲಿ ಕದನ ವಿರಾಮ, ಮಾನವೀಯ ನೆರವಿನ ಪ್ರವೇಶ ಮತ್ತು ದಿಗ್ಬಂಧನವನ್ನು ಕೊನೆಗೊಳಿಸಲು ತಕ್ಷಣದ ಅಂತರರಾಷ್ಟ್ರೀಯ ಹಸ್ತಕ್ಷೇಪಕ್ಕೆ ಮುಶಾವರತ್ ಕರೆ ನೀಡಿದೆ.

ಬೇಡಿಕೆಗಳು ಮತ್ತು ಭವಿಷ್ಯದ ಕಾರ್ಯತಂತ್ರ ಮುಶಾವರತ್‌ನ ಅಧ್ಯಕ್ಷ ಫಿರೋಜ್ ಅಹ್ಮದ್ ಅಡ್ವೊಕೇಟ್ ಅವರು ಸಂಸ್ಥೆಯ ಬದ್ಧತೆಗಳನ್ನು ಪುನರುಚ್ಚರಿಸಿದರು. ಮತದಾರರ ಹಕ್ಕುಗಳ ಕಸಿದುಕೊಳ್ಳುವಿಕೆ, ಕೋಮು ಹಿಂಸಾಚಾರ, ಸಾಂಸ್ಥಿಕ ಪಕ್ಷಪಾತ ಮತ್ತು ದಬ್ಬಾಳಿಕೆಗೆ ಕಾನೂನು, ರಾಜಕೀಯ ಮತ್ತು ನೈತಿಕ ಪ್ರತಿರೋಧವನ್ನು ನೀಡುವುದಾಗಿ ಅವರು ಪ್ರತಿಜ್ಞೆ ಮಾಡಿದರು. ಅಲ್ಲದೆ, ಮುಶಾವರತ್ ಶೀಘ್ರದಲ್ಲೇ ದೆಹಲಿಯಲ್ಲಿ ಈ ವಿಷಯಗಳ ಕುರಿತು ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುವುದಾಗಿ ಘೋಷಿಸಿದರು.

ಮುಶಾವರತ್‌ನ ಪ್ರಮುಖ ಬೇಡಿಕೆಗಳು ಹೀಗಿವೆ:

ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವುದು: ಅದರ ಪ್ರಸ್ತುತ ದೋಷಪೂರಿತ ರೂಪದಲ್ಲಿ ನಡೆಯುತ್ತಿರುವ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಿ, ಇದುವರೆಗೆ ಅಳಿಸಿಹಾಕಿರುವ ಹೆಸರುಗಳ ಬಗ್ಗೆ ಸಮಗ್ರ ಮತ್ತು ಸ್ವತಂತ್ರ ಪರಿಶೀಲನೆ ನಡೆಸಬೇಕು.

ಅಸ್ಸಾಂ ಒಕ್ಕಲೆಬ್ಬಿಸುವಿಕೆ ನಿಲ್ಲಿಸುವುದು: ಸೂಕ್ತ ಪುನರ್ವಸತಿ ಮತ್ತು ಕಾನೂನು ಪ್ರಕ್ರಿಯೆಯಿಲ್ಲದೆ ಅಸ್ಸಾಂನಲ್ಲಿನ ಒಕ್ಕಲೆಬ್ಬಿಸುವಿಕೆಯನ್ನು ತಕ್ಷಣವೇ ನಿಲ್ಲಿಸಬೇಕು. ಬಾಧಿತ ಸಮುದಾಯಗಳಿಗೆ ರಕ್ಷಣೆ ನೀಡಿ, ಪೌರತ್ವ ಮತ್ತು ಭೂ ದಾಖಲೆಗಳ ಪಾರದರ್ಶಕ ಪರಿಶೀಲನೆ ನಡೆಸಬೇಕು.

ಪ್ಯಾಲೆಸ್ತೀನ್‌ಗೆ ಬೆಂಬಲ: ಭಾರತ ಸರ್ಕಾರವು ಪ್ಯಾಲೆಸ್ತೀನ್ ಪರ ತನ್ನ ಐತಿಹಾಸಿಕ ನಿಲುವನ್ನು ಎತ್ತಿ ಹಿಡಿದು, ಇಸ್ರೇಲಿ ಯುದ್ಧ ಅಪರಾಧಗಳ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು.

ದೇಶೀಯ ಮತ್ತು ಜಾಗತಿಕ ಬಿಕ್ಕಟ್ಟುಗಳು ಪರಸ್ಪರ ಸಂಬಂಧ ಹೊಂದಿದ್ದು, ನ್ಯಾಯ, ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಮೇಲೆ ನಡೆಯುತ್ತಿರುವ ದಾಳಿಗಳೆಂದು ನಾವೈದ್ ಹಮೀದ್ ಹೇಳಿದರು. ಈ ಸವಾಲುಗಳನ್ನು ಎದುರಿಸಲು ಮುಶಾವರತ್ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಉತ್ತರಾಖಂಡ: ರಾಮನಗರದಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿದ್ದ ದಶಕಗಳ ಹಳೆಯ ಸಮಾಧಿ ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...