Homeಕರ್ನಾಟಕಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

- Advertisement -
- Advertisement -

ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ.

ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ ಕಾಲೇಜು ಉಜಿರೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತಾ ದಿನಾಂಕ 22.12.1986ರಂದು ಉಜಿರೆ ಕಾಲೇಜಿಗೆ ಹೋದವಳು ಸಂಜೆ ಧರ್ಮಸ್ಥಳ ತನಕ ಬಂದು ಕಾಣೆಯಾಗಿರುತ್ತಾಳೆ. ಆಕೆಯ ಮೃತದೇಹ ದಿನಾಂಕ 17.02.1987 ರಂದು ನೆರಿಯ ಹೊಳೆಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಮ್ಮ ತಂದೆ ಮನೆಯು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಇತ್ತು” ಎಂದು ವಿವರಿಸಿದ್ದಾರೆ.

ಮುಂದುವರಿದು, “ನನ್ನ ತಂಗಿ ಅಪಹರಣ, ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಕಾರಣ, ಆಕೆಯ ಅಸಹಜ ಸಾವಿಗೆ ಕಾರಣರಾದ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಸಿಪಿಐಎಂ ಮುಖಂಡರೂ ಆಗಿದ್ದ ನನ್ನ ತಂದೆ ದಿವಂಗತ ದೇವಾನಂದ ಅವರು ಸಿಪಿಐಎಂ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ರೂಪಿಸಿದ್ದರು. ಹೋರಾಟಕ್ಕೆ ಮಣಿದ ಸರ್ಕಾರ ಕೊನೆಗೆ ಪ್ರಕರಣದ ತನಿಖೆ ನಡೆಸಲು ಸಿಓಡಿ ತನಿಖೆಗೆ ಆದೇಶಿಸಿತು. ವಿಧಾನ ಸಭೆಯಲ್ಲಿ ಚರ್ಚೆ ಆಗಿರುವುದು ಕೂಡಾ ವಿಧಾನಸಭಾ ದಾಖಲೆಯಲ್ಲಿ ಇರಬೇಕು. ಅಂದು ಸಚಿವರಾಗಿದ್ದ ರಾಚಯ್ಯ ಅವರೂ ಧರ್ಮಸ್ಥಳ ಗ್ರಾಮದ ಬೊಳಿಯಾರಲ್ಲಿರುವ ನಮ್ಮ ಮನೆಗೆ ಬಂದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ಕೊನೆಗೆ ತನಿಖೆಯು ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿ ನಮಗೆ ನ್ಯಾಯ ಸಿಗದಂತಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೆಬರಹವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ. ಅದನ್ನು ತೆಗೆದು ತನಿಖೆ ನಡೆಸಿದರೆ ಕೊಲೆಯಾದ ಖಚಿತತೆ ಸಿಗಲಿದೆ ಹಾಗೂ ನನಗೆ ತಿಳಿದ ಸಾಕ್ಷಿನುಡಿಯಲು ನಾನು ಸಿದ್ಧಳಿದ್ದೇನೆ. ಆದ್ದರಿಂದ ನನ್ನ ತಂಗಿಯ ಪ್ರಕರಣವನ್ನು ರೀ-ಓಪನ್ ಮಾಡಿ, ಹೂತಿಟ್ಟ ಕಳೆಬರವನ್ನು ತೆಗೆದು ತನಿಖೆ ನಡೆಸಿ ತಂಗಿಯ ಸಾವಿಗೆ ನ್ಯಾಯ ಒದಗಿಸಬೇಕಾಗಿ ಹಾಗೂ ಅಪರಾಧಿಗಳ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಮಾಡುತ್ತೇನೆ” ಎಂದಿದ್ದಾರೆ.

39 ವರ್ಷಗಳ ಹಿಂದೆ ಕೊಲೆಯಾದ ಪದ್ಮಲತಾ

ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಾವತಿ, “ನನ್ನ ತಂಗಿ ಕೊಲೆಯಾಗಿ 39 ವರ್ಷಗಳು ಕಳೆಯಿತು. ಇದುವರೆಗೆ ನಮಗೆ ನ್ಯಾಯ ಸಿಕ್ಕಿಲ್ಲ. ಕೊಲೆಗಾರರು ಯಾರು ಅಂತ ಪತ್ತೆಯಾಗಿಲ್ಲ. ಈಗ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅವರು ಪದ್ಮಲತಾ ಕೊಲೆಗಾರರನ್ನೂ ಪತ್ತೆ ಹಚ್ಚಬಹುದು ಎಂಬ ನಿರೀಕ್ಷೆಯಿಂದ ದೂರು ಕೊಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಪದ್ಮಲತಾ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ‘ಪತ್ತೆ ಹಚ್ಚಲಾಗದ ಪ್ರಕರಣ’ ಎಂದು ವರದಿ ಕೊಟ್ಟಿತ್ತು. ಈಗ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನಮಗೆ ನ್ಯಾಯ ಸಿಗಬಹುದು ಎಂಬ ಭರವಸೆಯಲ್ಲಿ ದೂರು ಕೊಟ್ಟಿದ್ದೇವೆ ಎಂದಿದ್ದಾರೆ.

ಪದ್ಮಲತಾ ಕೊಲೆಗಾರರು ಯಾರು ಎಂದು ಗೊತ್ತಾಗಬೇಕು. ಅವರಿಗೆ ಸರಿಯಾಗಿ ಶಿಕ್ಷೆಯಾಗಬೇಕು ಎಂದು ಇಂದ್ರಾವತಿ ಆಗ್ರಹಿಸಿದ್ದಾರೆ.

ಸಿಪಿಐ(ಎಂ) ಪಕ್ಷದ ತಾಲೂಕು ಸಮಿತಿ ಸದಸ್ಯ ಮಾತನಾಡಿ, “ದೇವಾನಂದರ ಮಗಳು ಪದ್ಮಲತಾ ಡಿಸೆಂಬರ್ 22, 1986ರಂದು ಕಾಲೇಜಿಗೆ ತೆರಳಿದವಳು ವಾಪಸ್ ಧರ್ಮಸ್ಥಳಕ್ಕೆ ಬಸ್‌ನಲ್ಲಿ ಬಂದಿರುವುದನ್ನು ಆಕೆಯ ಸಹಪಾಠಿಗಳು ನೋಡಿದ್ದರು. ಆಮೇಲೆ ಪದ್ಮಲತಾ ಕಣ್ಮರೆಯಾಗಿದ್ದಳು. ಫೆಬ್ರವರಿ 17, 1987ರಂದು ಕೊಳೆತ ಸ್ಥಿತಿಯಲ್ಲಿ ನೆರಿಯ ಹೊಳೆಯ ಸಮೀಪ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ವಸ್ತ್ರ ಮತ್ತು ಕೈಗೆ ಕಟ್ಟಿದ್ದ ವಾಚ್‌ನಿಂದ ಅದು ಪದ್ಮಲತಾ ಮೃತದೇಹ ಎಂದು ನಾವು ಗುರುತು ಹಿಡಿದಿದ್ದೆವು ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದರೂ ಸರಿಯಾದ ತನಿಖೆ ನಡೆದಿರಲಿಲ್ಲ. ಸಿಐಡಿ ಪತ್ತೆಯಾಗದ ಪ್ರಕರಣ ಎಂದು ಹಿಂಬರಹ ಕೊಟ್ಟಿತ್ತು. ಸಿಐಡಿ ಅಪರಾಧಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಿರಲಿಲ್ಲ. ನಾವು ಅವತ್ತು ಪದ್ಮಲತಾಳ ಶವ ಸುಟ್ಟಿರಲಿಲ್ಲ. ಅಗತ್ಯ ಬಂದರೆ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಬಹುದು ಎಂದು ಮುಂದಾಲೋಚನೆಯಿಂದ ಹಾಗೆ ಮಾಡಿದ್ದೆವು. ಈಗ ಮತ್ತೆ ಎಸ್‌ಐಟಿ ರಚನೆಯಾಗಿದೆ. ಹಾಗಾಗಿ ಮತ್ತೊಮ್ಮೆ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...