Homeಕರ್ನಾಟಕಒಳಮೀಸಲಾತಿ ಹೋರಾಟ| 30 ವರ್ಷಗಳ ಹೋರಾಟದ ಫಲವಾಗಿ ಒಂದು ಹಣ್ಣು ಸಿಗುತ್ತಿದೆ, ಅದನ್ನು ಕಳೆದುಕೊಳ್ಳಬಾರದು: ಪಿಚ್ಚಳ್ಳಿ...

ಒಳಮೀಸಲಾತಿ ಹೋರಾಟ| 30 ವರ್ಷಗಳ ಹೋರಾಟದ ಫಲವಾಗಿ ಒಂದು ಹಣ್ಣು ಸಿಗುತ್ತಿದೆ, ಅದನ್ನು ಕಳೆದುಕೊಳ್ಳಬಾರದು: ಪಿಚ್ಚಳ್ಳಿ ಶ್ರೀನಿವಾಸ್

- Advertisement -
- Advertisement -

ನಮ್ಮ 30 ವರ್ಷಗಳ ಹೋರಾಟದ ಫಲವಾಗಿ ಇಂದು ಒಂದು ಹಣ್ಣು ಸಿಗುತ್ತಿದೆ, ಅದನ್ನು ನಾವು ಕಳೆದುಕೊಳ್ಳಬಾರದು. ಒಳ ಮೀಸಲಾತಿ ಸಂಬಂಧ ಜಸ್ಟೀಸ್ ನಾಗಮೋಹನ್‌ ದಾಸ್ ನೀಡಿರುವ ವರದಿಯಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಅದನ್ನು ಸರಿಪಡಿಸಕೊಂಡು ಜಾರಿಗಾಗಿ ಆಗ್ರಹಿಸಬೇಕು ಎಂದು ಹಿರಿಯ ಕಲಾವಿದರು ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡರಾದ ಪಿಚ್ಚಳ್ಳಿ ಶ್ರೀನಿವಾಸ್ ಸಲಹೆ ನೀಡಿದರು.

ಒಳಮೀಸಲಾತಿ ಜಾರಿ ಸಂಬಂಧ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಇದೇ ಮಳೆಗಾಲ ಅಧಿವೇಶನದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಪ್ರೀಢಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಒಳಮೀಸಲಾತಿಗೆ ಸಂಬಂಧಿಸಿದ ಜಸ್ಟೀಸ್ ನಾಗಮೋಹನ ದಾಸ್ ನೀಡಿರುವ ವರದಿಯ ಸಾಧಕ-ಬಾಧಕಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಅಧಿಕೃತವಲ್ಲ. ವರದಿಯಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಅವೆಲ್ಲವನ್ನೂ ಕೂಡ ಹೊಲೆಯ-ಮಾದಿಗ ಸೇರಿದಂತೆ ಅಸ್ಪೃಶ್ಯ ಕುಲಗಳೆಲ್ಲಾ ಒಟ್ಟಿಗೆ ಕೂರು ಮಾತನಾಡಿಕೊಳ್ಳಬೇಕು. ನಮಗೆಲ್ಲಾ ಒಪ್ಪಿತ ವರದಿಯನ್ನು ಜಾರಿ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಬೇಕಿದೆ” ಎಂದು ಕಿವಿಮಾತು ಹೇಳಿದರು.

“ಒಳ ಮೀಸಲಾತಿ ಜಾರಿಗಾಗಿ ಆರಂಭವಾಗಿರುವ ಈ ಧರಣಿಯಯನ್ನು ನಾವು ಮುಂದುವರಿಸಬೇಕಿದೆ. ಹಾಗಾಗಿ, ಎಲ್ಲಿವರೆಗೂ ಮುಂದುವರಿಉಯುತ್ತದೆಯೋ ಅಲ್ಲಿವರೆಗೂ ನಾವು ನಮ್ಮ ಬದ್ಧತೆ ಮತ್ತು ಪ್ರಾಮಾಣಿಕವಾಗಿ ಈ ಹೋರಾಟದಲ್ಲಿ ಕಾರ್ಯಕರ್ತರಾಗಿ ತನು, ಮನ, ಧನವನ್ನು ಸಲ್ಲಿಸಬೇಕಾಗಿದೆ” ಎಂದರು.

“ನಾನು ಕಲಾವಿದನಾಗಿ ಇಡೀ ರಾಜ್ಯದ ಹಳ್ಳಿಗಳಲ್ಲಿ ದಸಂಸ ವಿಚಾರಗಳನ್ನು ಮನೆಮನಗಳನ್ನು ಮುಟ್ಟಿಸಿದ್ದೇನೆ. ಈ ತರಹದ ಸಾಮಾಜಿಕ ಜವಾಬ್ದಾರಿಯನ್ನು ನಾವು ಸಂಘಟನೆ ಮುಖಾಂತರವೇ ಹಲವಾರು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ವಿಶೇಷವಾಗಿ, 30 ವರ್ಷಗಳ ಫಲವಾಗಿ ಇಂದು ಒಂದು ಹಣ್ಣು ಸಿಗುವ ಸಂದರ್ಭದಲ್ಲಿ ನಾವು ಕಳೆದುಕೊಳ್ಳಬಾರದು. ನಮ್ಮ ಹಕ್ಕು ಪಡೆದುಕೊಳ್ಳುವ ಸಲುವಾಗಿ, ಸಣ್ಣಪುಟ್ಟ ಮನಸ್ಥಾಪಗಳನ್ನು ಪಕ್ಕಕ್ಕೆ ಇಡಬೇಕಾಗಿದೆ. ನಾನು ಈ ಹೋರಾಟದಲ್ಲಿ ಪೂರ್ಣಪ್ರಮಾಣದಲ್ಲಿ ಭಾಗವಹಿಸುತ್ತೇನೆ” ಎಂದು ಅವರು ಘೋಷಿಸಿದರು.

ಒಳಮೀಸಲಾತಿ ಹೋರಾಟ| ಸಿದ್ದರಾಮಯ್ಯ ಅವರ ದಲಿತಪರ ಬದ್ಧತೆ ಬಹಿಂರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಅಂಬಣ್ಣ ಅರೋಲಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....