Homeಮುಖಪುಟಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ 'ನರೇಟಿವ್' ಸೃಷ್ಟಿ ಎಂದು ತಜ್ಞರ ಆರೋಪ

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ ‘ನರೇಟಿವ್’ ಸೃಷ್ಟಿ ಎಂದು ತಜ್ಞರ ಆರೋಪ

- Advertisement -
- Advertisement -

ಗುವಾಹಟಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗಳಿಗೆ ಮುನ್ನ, ಅಸ್ಸಾಂ ಸರ್ಕಾರವು ‘ಅತಿಕ್ರಮಣ’ ತೆರವುಗೊಳಿಸುವ ಹೆಸರಿನಲ್ಲಿ ನಡೆಸುತ್ತಿರುವ ಸರಣಿ ತೆರವು ಕಾರ್ಯಾಚರಣೆಗಳು ತೀವ್ರ ವಿವಾದಕ್ಕೆ ಕಾರಣವಾಗಿವೆ. ಇದು ಕೇವಲ ಭೂಮಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲ, ಬದಲಿಗೆ ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ‘ಕಥಾನಕ’ ಸೃಷ್ಟಿಸುವ ಪ್ರಯತ್ನ ಎಂದು ರಾಜಕೀಯ ಹಾಗೂ ಸಾಮಾಜಿಕ ತಜ್ಞರು ಗಂಭೀರ ಆರೋಪ ಮಾಡಿದ್ದಾರೆ.

ಈ ತೆರವು ಕಾರ್ಯಾಚರಣೆಗಳ ಬಗ್ಗೆ ವಿವಿಧ ಕ್ಷೇತ್ರಗಳ ಗಣ್ಯರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನೆರೆಯ ರಾಜ್ಯಗಳ ಆಕ್ರಮಣದಿಂದ ಗಡಿ ಪ್ರದೇಶಗಳನ್ನು ರಕ್ಷಿಸುವ ಸಲುವಾಗಿ ವಿಭಿನ್ನ ಸಮುದಾಯಗಳ ಜನರನ್ನು ಅಂತರ-ರಾಜ್ಯ ಗಡಿಗಳ ಬಫರ್ ವಲಯಗಳಲ್ಲಿ ನೆಲೆಸಲಾಗಿತ್ತು. ಆದರೆ ಈಗ ಅವರನ್ನು ಅಮಾನವೀಯವಾಗಿ ತೆರವುಗೊಳಿಸಲಾಗುತ್ತಿದೆ ಎಂದು ತಜ್ಞರು ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

‘ಹಿಂದೂ-ಮುಸ್ಲಿಂ’  ನರೇಟಿವ್ ಸೃಷ್ಟಿಯ ಪ್ರಯತ್ನ: ನರರೋಗ ತಜ್ಞರ ಆತಂಕ

ಪ್ರಸಿದ್ಧ ನರರೋಗ ತಜ್ಞ ಮತ್ತು ರಾಜಕೀಯ ವಿಶ್ಲೇಷಕ ನವನೀಲ್ ಬರುವಾ ಈ ಕುರಿತು ಮಾತನಾಡುತ್ತಾ, “ಇತ್ತೀಚಿನ ತೆರವು ಕಾರ್ಯಾಚರಣೆಗಳ ನಿಜವಾದ ಉದ್ದೇಶ ಅತಿಕ್ರಮಣಗಳನ್ನು ತೆರವುಗೊಳಿಸುವುದಲ್ಲ. ಬದಲಾಗಿ, ಮೇಲಿನ ಅಸ್ಸಾಂನಲ್ಲಿ ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ನರೇಟಿವ್ ಅನ್ನು ಸೃಷ್ಟಿಸುವುದು,” ಎಂದು ಹೇಳಿದ್ದಾರೆ. ಕಳೆದ ವರ್ಷ ಗೌರವ್ ಗೊಗೊಯ್ ಲೋಕಸಭಾ ಚುನಾವಣೆಯಲ್ಲಿ ಗೆದ್ದು, ಕಾಂಗ್ರೆಸ್‌ನ ರಾಜ್ಯ ಅಧ್ಯಕ್ಷರಾದ ನಂತರ ಮೇಲಿನ ಅಸ್ಸಾಂನಲ್ಲಿ ‘ಗೌರವ್ ಪರ ಅಲೆಯು’ ಸೃಷ್ಟಿಯಾಗಿದೆ. ಇದನ್ನು ಹಿಮ್ಮೆಟ್ಟಿಸಲು ಬಿಜೆಪಿ ಈ ತೆರವು ಕಾರ್ಯಾಚರಣೆಗಳ ಮೂಲಕ ಹಿಂದೂ-ಮುಸ್ಲಿಂ ವಿಭಜನೆಯ ನರೇಟಿವ್ ಅನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದೆ ಎಂದು ಬರುವಾ ಆರೋಪಿಸಿದ್ದಾರೆ.

“ನಾನು ಖಚಿತವಾಗಿ ಹೇಳಬಲ್ಲೆ, 2026ರ ಮಾರ್ಚ್ ನಂತರ ಈ ಕಾರ್ಯಾಚರಣೆಗಳು ನಿಲ್ಲುತ್ತವೆ ಮತ್ತು ‘ಮಿಯಾಗಳ’ ಅತಿಕ್ರಮಣದ ಕುರಿತಾದ ಸುದ್ದಿಯನ್ನು ನಾವು ದೀರ್ಘಕಾಲ ಕೇಳುವುದಿಲ್ಲ,” ಎಂದು ಅವರು ಭವಿಷ್ಯ ನುಡಿದಿದ್ದಾರೆ. ಅಸ್ಸಾಂನಲ್ಲಿ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರಿಗೆ ‘ಮಿಯಾ’ ಎಂಬ ಪದವನ್ನು ಬಳಸಲಾಗುತ್ತದೆ, ಇದನ್ನು ಸಾಮಾನ್ಯವಾಗಿ ಬಾಂಗ್ಲಾದೇಶಿ ವಲಸಿಗರೆಂದು ಗುರುತಿಸಲಾಗುತ್ತದೆ ಎಂದರು.

ಪುನರ್ವಸತಿ ಇಲ್ಲದೆ ತೆರವು

ಹ್ಯಾಂಡಿಕ್ ಗರ್ಲ್ಸ್ ಕಾಲೇಜಿನ ರಾಜಕೀಯ ವಿಜ್ಞಾನದ ಸಹಾಯಕ ಪ್ರಾಧ್ಯಾಪಕಿ ಪಲ್ಲವಿ ದೇಕಾ ಮಾತನಾಡಿ, “ರಂಗ್ಮಾ ರಿಸರ್ವ್ ಫಾರೆಸ್ಟ್‌ನಲ್ಲಿ ನಡೆದ ತೆರವು ಕಾರ್ಯಾಚರಣೆಯಲ್ಲಿ ಜನರನ್ನು ‘ಸರಿಯಾದ ಪುನರ್ವಸತಿ’ ಇಲ್ಲದೆ ಹೊರಹಾಕಲಾಗಿದೆ. ಇದು ಕೇವಲ ಅರಣ್ಯವನ್ನು ಉಳಿಸುವ ಸರ್ಕಾರದ ಪ್ರಯತ್ನಕ್ಕಿಂತ ಹೆಚ್ಚಾಗಿ, ಮುಂಬರುವ ಚುನಾವಣೆಗಳಲ್ಲಿ ತೀವ್ರ ಕೋಮು ಧ್ರುವೀಕರಣ ಸೃಷ್ಟಿಸುವ ಉದ್ದೇಶದಿಂದ ನಡೆಸಲಾಗಿದೆ” ಎಂದು ಆರೋಪಿಸಿದರು.

ಪ್ರಸಿದ್ಧ ವಕೀಲ ಶಾಂತನು ಬೋರ್ಥಾಕುರ್ ಅವರು ಈ ತೆರವು ಕಾರ್ಯಾಚರಣೆಗಳನ್ನು “ಸಂಪೂರ್ಣ ತಾರತಮ್ಯ’’ ಎಂದು ಬಣ್ಣಿಸಿದರು. “ಕೇವಲ ಒಂದು ಸಮುದಾಯವನ್ನು ಗುರಿಯಾಗಿಸಿ ತೆರವುಗೊಳಿಸುತ್ತಿರುವುದು ನ್ಯಾಯಸಮ್ಮತವಲ್ಲ. ಇತರ ಸಮುದಾಯಗಳ ವಿರುದ್ಧ ಯಾವುದೇ ತೆರವು ಕಾರ್ಯಾಚರಣೆ ನಡೆಯುವುದಿಲ್ಲ ಎಂಬ ಮುಖ್ಯಮಂತ್ರಿಯ ಇತ್ತೀಚಿನ ಹೇಳಿಕೆ ಸಂವಿಧಾನ ವಿರೋಧಿ ಮತ್ತು ಕಾನೂನಿನಿಂದ ಅನುಮತಿಸಲ್ಪಟ್ಟಿಲ್ಲ,” ಎಂದು ಬೋರ್ಥಾಕುರ್ ಸ್ಪಷ್ಟಪಡಿಸಿದರು. ರಂಗ್ಮಾದಲ್ಲಿ 1,500 ಮುಸ್ಲಿಂ ಕುಟುಂಬಗಳನ್ನು ಹೊರಹಾಕಲಾಗಿದ್ದು, ಉಳಿದ ಬೋಡೋ, ನೇಪಾಳಿ, ಮಣಿಪುರಿ ಸೇರಿದಂತೆ ಇತರೆ ಸಮುದಾಯಗಳ ಕುಟುಂಬಗಳು ಅರಣ್ಯ ಹಕ್ಕುಗಳ ಸಮಿತಿಯಿಂದ (FRC) ಪ್ರಮಾಣಪತ್ರಗಳನ್ನು ಹೊಂದಿದ್ದರಿಂದ ಅವರನ್ನು ಬಿಡಲಾಗಿದೆ ಎಂದು ವರದಿಯಾಗಿದೆ ಎಂದಿದ್ದಾರೆ.

ಐತಿಹಾಸಿಕ ಹಿನ್ನೆಲೆ ಕಡೆಗಣನೆ

ದಿಬ್ರುಗಢ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಕೌಸ್ತುಭ್ ದೇಕಾ ಅವರು ಈ ಘಟನೆಯನ್ನು ರಾಜ್ಯದ ಸಂಕೀರ್ಣ ಸಾಮಾಜಿಕ-ರಾಜಕೀಯ ಇತಿಹಾಸದ ಪ್ರತಿಬಿಂಬ ಎಂದಿದ್ದಾರೆ. “ಸರ್ಕಾರ ಮೂರು ಅಂಶಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು: ನಿಜವಾದ ಭಾರತೀಯ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಬಾರದು, ‘ಅರಣ್ಯ ಹಕ್ಕುಗಳ ಕಾಯ್ದೆ’ ಯಂತಹ ಕಾನೂನುಗಳನ್ನು ಗೌರವಿಸಬೇಕು ಮತ್ತು ಈ ಪ್ರಕ್ರಿಯೆಯು ನೆರೆಯ ರಾಜ್ಯಗಳೊಂದಿಗಿನ ಗಡಿ ವಿವಾದಗಳಿಗೆ ಇನ್ನಷ್ಟು ಉರಿಯನ್ನು ಹೆಚ್ಚಿಸಬಾರದು,” ಎಂದು ಅವರು ಸಲಹೆ ನೀಡಿದ್ದಾರೆ.

1978-79ರಲ್ಲಿ ಗೋಲಾಪ್ ಬೋರ್ಬೊರಾ ಸರ್ಕಾರ ಮತ್ತು 1985ರಲ್ಲಿ ಎಜಿಪಿ ಸರ್ಕಾರವು ಈ ಪ್ರದೇಶಗಳಲ್ಲಿ ಕೆಲವು ಕುಟುಂಬಗಳನ್ನು ನೆಲೆಸಿದ್ದವು. “ಐತಿಹಾಸಿಕ ಹಿನ್ನೆಲೆಯನ್ನು ಪರಿಗಣಿಸದೆ ಜನರನ್ನು ತೆರವುಗೊಳಿಸುವುದು ಸೂಕ್ತವಲ್ಲ. ಇದು ಅಮಾನವೀಯ ಮತ್ತು ಅನಿಯಂತ್ರಿತ ಕ್ರಮ,” ಎಂದು ಅವರು ಖಂಡಿಸಿದರು. “ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಕಾಲುದಾರಿ ನಿವಾಸಿಗಳನ್ನೂ ಪುನರ್ವಸತಿ ಇಲ್ಲದೆ ತೆರವುಗೊಳಿಸಲು ಸಾಧ್ಯವಿಲ್ಲ,” ಎಂದು ಬೋರ್ಥಾಕುರ್ ಅವರು ಈ ಕ್ರಮಗಳ ಕಾನೂನುಬಾಹಿರತೆಯನ್ನು ಎತ್ತಿ ತೋರಿಸಿದರು.

ಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...