Homeಮುಖಪುಟಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

ಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

- Advertisement -
- Advertisement -

ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ವಂಚನೆ ಸಾಕ್ಷಿ ಸಮೇತ ಬಯಲಾಗಿದೆ.

ಅಕ್ರಮದಲ್ಲಿ ಭಾಗಿಯಾದ ಅಧಿಕಾರಗಳನ್ನು ಅಮಾನತುಗೊಳಿಸಿ ಸಮಗ್ರ ತನಿಖೆಗೆ ಆದೇಶಿಸಬೇಕು.

ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್‌ ಡಾಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು.

ಚುನಾವಣಾ ಆಯೋಗ ಸಾರ್ವಜನಿಕ ಕ್ಷಮೆ ಕೇಳಿ ರಾಜಿನಾಮೆ ನೀಡಬೇಕು.

…………………………………………………………….

ಬೆಂಗಳೂರು: ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಕುರಿತು ರಾಹುಲ್ ಗಾಂಧಿ ಮಾಡಿರುವ ಆರೋಪಗಳಿಗೆ ಹಲವು ಸಾಕ್ಷ್ಯಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಮರು ಚುನಾವಣೆ ನಡೆಸಬೇಕು, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ, ತನಿಖೆ ನಡೆಸಬೇಕು ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು, ಇತ್ತೀಚೆಗೆ ರಾಹುಲ್ ಗಾಂಧಿ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮಹದೇವಪುರ ವಿಧಾನಸಭಾ ವಲಯದಲ್ಲಿ ನಡೆದಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಹೇಳಿದೆ. ಈ ಆರೋಪಗಳು ಸಾಕ್ಷ್ಯಾಧಾರ ಸಮೇತ ಇವೆ ಎಂದು ಸಂಘಟನೆ ತಿಳಿಸಿದೆ.

ರಾಹುಲ್‌ ಗಾಂಧಿ ಮಾಡಿದ ಪತ್ರಿಕಾ ಗೋಷ್ಟಿ ಮತ್ತು ಬಿಚ್ಚಿಟ್ಟ ಮಾಹಿತಿಗಳು ಅನುಮಾನಕ್ಕಾಸ್ಪದವಿಲ್ಲದಂತೆ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ವಲಯದ ಮತದಾರರ ಪಟ್ಟಿಯಲ್ಲಿ ನಡೆದಿರುವ ಅಪರಾಧಿ ಚಟುವಟಿಕೆಗಳು ಸಾಬೀತಾಗಿವೆ. ಇದು ಆರೋಪವಲ್ಲ, ಸಾಕ್ಷ್ಯ. ಐದು ಬಗೆಯ ಅಕ್ರಮಗಳ ಕುರಿತು ಒಂದಲ್ಲ, ಸಾವಿರಾರು ಸಾಕ್ಷಿಗಳನ್ನು ಒದಗಿಸಲಾಗಿದೆ. ನಕಲಿ ಮತದಾರರನ್ನು ಸೃಷ್ಟಿಸಿರುವ, ತಂದೆಯ ಹೆಸರಿಲ್ಲದ, ವಿಳಾಸವಿಲ್ಲದ ಮತಚೀಟಿಗಳನ್ನು ವಿತರಿಸಿರುವ, ಭಾವಚಿತ್ರವೇ ಇಲ್ಲದಂತೆ ಅಥವಾ ಕಾಣದಂತೆ ಮತ ಚೀಟಿ ನೀಡಿರುವ, ಒಂದೇ ವಿಳಾಸದಲ್ಲಿ 40, 80 ಜನರಿಗೆ ಮತಚೀಟಿ ಸೃಷ್ಟಿಸಿರುವ, ಹೊಸ ಮತದಾರರಿಗೆ ನೀಡಬೇಕಾದ ನಮೂನೆ 6ನ್ನು ದುರುಪಯೋಗಪಡಿಸಿಕೊಂಡಿರುವ, ಅಪರಾಧ ಸಾಕಷ್ಟು ಸಾಕ್ಷ್ಯಗಳ ಮೂಲಕ ಸಾಬೀತಾಗಿದೆ ಎಂದು ಎದ್ದೇಳು ಕರ್ನಾಟಕ ಹೇಳಿದೆ.

ಇದು ಒಂದು ಲೋಕಸಭಾ ಕ್ಷೇತ್ರದ, ಒಂದು ವಿಧಾನ ಸಭಾ ಕ್ಷೇತ್ರದಲ್ಲಿ ನಡೆದಿರುವ ಅಕ್ರಮ. ಇಡೀ ದೇಶದಲ್ಲಿ ನೂರಾರು ಕಡೆ ಇದು ನಡೆದಿರುವ ಎಲ್ಲಾ ಸಾಧ್ಯತೆಗಳೂ ಇವೆ. ಚುನಾವಣಾ ಫಲಿತಾಂಶ ಬಂದ ಕೂಡಲೇ ಅಕ್ರಮ ನಡೆದಿರುವ ಸಾಧ್ಯತೆಗಳ ಬಗ್ಗೆ ಎದ್ದೇಳು ಕರ್ನಾಟಕ ಹೇಳಿಕೆ ನೀಡಿತ್ತು. ಮರು ಮತದಾನಕ್ಕೆ ಹಾಕವಂತೆ ಬೆಂಗಳೂರು ಕೇಂದ್ರದ ಅಭ್ಯರ್ಥಿಯನ್ನೂ ಒತ್ತಾಯಿಸಿತ್ತು. ಜುಲೈ 2024 ರಲ್ಲಿ Vote For Democracy ಎಂಬ ಸಂಸ್ಥೆ ವರದಿಯೊಂದನ್ನು [Conduct of Lok sabha elections 2024] ಬಿಡುಗಡೆ ಮಾಡಿ, ಅದರಲ್ಲಿ ದೇಶದ 79 ಕ್ಷೇತ್ರಗಳಲ್ಲಿ ಮತಕಳವು ನಡೆದಿರುವುದಕ್ಕೆ ಸಾಂದರ್ಭಿಕ ಸಾಕ್ಷ್ಯವನ್ನು ಮುಂದಿಟ್ಟಿತ್ತು. ಚುನಾವಣಾ ಆಯೋಗವು ಎಷ್ಟು ಮತದಾನ ನಡೆದಿದೆ ಎಂಬ ಬಗ್ಗೆ ನೀಡಿದ ಎರಡು ಸಂಖ್ಯೆಗಳ ನಡುವಿನ ಅಂತರ ಆ ಕ್ಷೇತ್ರದ ಗೆಲುವಿನ ಅಂತರಕ್ಕಿಂತ ಹೆಚ್ಚಿರುವುದನ್ನು ಗುರುತಿಸಿ ಈ ಕ್ಷೇತ್ರಗಳಲ್ಲಿ ಕಳುವಾಗಿರುವ ಎಲ್ಲಾ ಸಾಧ್ಯತೆಗಳಿವೆ ಎಂದು ಆರೋಪಿಸಿತ್ತು. ಆ 79 ಕ್ಷೇತ್ರಗಳ ಪಟ್ಟಿಯನ್ನು ಒದಗಿಸಿತ್ತು. ಅದರಲ್ಲಿ ಕರ್ನಾಟಕದ 6 ಕ್ಷೇತ್ರಗಳ ಹೆಸರುಗಳು ಇದ್ದವು. ಅದರಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರವೂ ಇತ್ತು. ಈಗ ಈ 79 ಕ್ಷೇತ್ರದ ಪೈಕಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದೆ ಎಂದು ಅದು ಹೇಳಿದೆ.

ಈ ಸಾಕ್ಷ್ಯವನ್ನು ಹೊರತೆಗೆಯಲು ನಡೆದಿರುವ ಪರಿಶ್ರಮ ಅಪಾರವಾದುದು, ಶ್ಲಾಘನೀಯವಾದುದು. ಚುನಾವಣಾ ಆಯೋಗವು ಡಿಜಿಟಲ್‌ ಡಾಟಾವನ್ನು ಒದಗಿಸಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಹಸ್ರಾರು ಪುಟಗಳ ಮುದ್ರಿತ ದಾಖಲೆಯನ್ನು ಒಂದೊಂದಾಗಿ ಪರಿಶೀಲಿಸಿ, ತಾಳೆ ಹಾಕಿ, ಈ ಬೃಹತ್‌ ಸಾಕ್ಷ್ಯವನ್ನು ಸಿದ್ಧಪಡಿಸಲಾಗಿದೆ. ಇದನ್ನು ಸಿದ್ಧಪಡಿಸಿದ ತಂಡಕ್ಕೆ, ಅದಕ್ಕೆ ಬೆಂಬಲ ನೀಡಿದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರಿಗೆ, ಅದನ್ನು ದಿಟ್ಟವಾಗಿ ಮತ್ತು ಪರಿಣಾಮಕಾರಿಯಾಗಿ ಮುಂದಿಟ್ಟ ರಾಹುಲ್‌ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ಎದ್ದೇಳು ಕರ್ನಾಟಕ ತಿಳಿಸಿದೆ.

ಸಂವಿಧಾನ ಪದ್ದತಿಗೆ ವಿರುದ್ಧವಾಗಿ ಚುನಾವಣಾ ಆಯೋಗವನ್ನು ತಾನೇ ನೇಮಿಸಿರುವ ಬಿಜೆಪಿ ಸರ್ಕಾರ, ಅದನ್ನು ಬಳಸಿಕೊಂಡು ಪ್ರಜಾತಂತ್ರವನ್ನು ಕೊಲೆ ಮಾಡಲು ಹೊರಟಿದೆ. ಜನಾಕ್ರೋಶ ಬೆಳೆಯುತ್ತಿದ್ದು, ಚುನಾವಣೆಗಳಲ್ಲಿ ಸೋಲುವ ಭೀತಿ ಹೆಚ್ಚಿರುವುದರಿಂದ, ಮತಗಳನ್ನು ಅಪಹರಿಸುವ ಮತ್ತು ಕಳ್ಳ ಮತಗಳನ್ನು ಬರೆಸುವ ಮತ ಮಾಫಿಯಾ ಕೆಲಸಕ್ಕೆ ಕೈಹಾಕಿದೆ ಎಂದು ಅದು ಆರೋಪಿಸಿದೆ.

ಸಾಕ್ಷ್ಯಗಳನ್ನು ಮುಂದಿಟ್ಟಾಗ ಮೌನ ಧರಿಸುವುದು ಅಪರಾಧವನ್ನು ಮುಚ್ಚಿಡುವ ತಂತ್ರವಾಗುತ್ತದೆ. ಚುನಾವಣ ಆಯೋಗವು ಮಾತನಾಡಬೇಕು ಎಂದು ನಾವು ಆಗ್ರಹಿಸುತ್ತೇವೆ. ಒಂದು ವೇಳೆ ರಾಹುಲ್‌ ಗಾಂಧಿ ಬಿಚ್ಚಿಟ್ಟ ಸತ್ಯ ಸತ್ಯವಲ್ಲ ಎಂಬುದಾದರೆ ಅದನ್ನು ಚುನಾವಣಾ ಆಯೋಗವು ತಡಮಾಡದೆ ಜನತೆಯ ಮುಂದಿಡಬೇಕು. ಅಥವಾ ತಾನು ಮಾಡಿದ ತಪ್ಪಿಗಾಗಿ ಜನತೆಯ ಮುಂದೆ ಕ್ಷಮೆಯಾಚಿಸಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಈ ಅಕ್ರಮದ ತನಿಖೆಯಾಗಬೇಕು. ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಮರುಮತದಾನಕ್ಕೆ ಆದೇಶ ಹೊರಡಿಸಬೇಕು.  ಕೊನೆಯದಾಗಿ ಮತದಾರರ ಪಟ್ಟಿ ಮತ್ತು ಮತದಾನ ನಡೆದ ವಿಧಾನಕ್ಕೆ ಸಂಬಂಧಪಟ್ಟಂತೆ ಇರುವ ಎಲ್ಲಾ ಡಿಜಿಟಲ್‌ ಡಾಟಾವನ್ನು ಬಿಡುಗಡೆ ಮಾಡಬೇಕು. ಇದನ್ನು ಮಾಡದಿದ್ದರೆ ನಾಗರೀಕರಾದ ನಾವು ಸುಮ್ಮನೆ ಕೂರುವುದಿಲ್ಲ ರಾಜ್ಯವ್ಯಾಪಿ ಪ್ರತಿಭಟನೆ ಆರಂಭಿಸುತ್ತೇವೆ ಎಂದು ಎದ್ದೇಳು ಕರ್ನಾಟಕ ಎಚ್ಚರಿಕೆ ನೀಡಿದೆ

‘ಎದ್ದೇಳು ಕರ್ನಾಟಕ’ ಸಂಘಟನೆಯ ಆಗ್ರಹಗಳು:

*ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಬೇಕು

* ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ಸಮಗ್ರ ತನಿಖೆ ನಡೆಸಬೇಕು

* ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್ ಡೇಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು

* ಚುನಾವಣಾ ಆಯೋಗವು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ರಾಜೀನಾಮೆ ನೀಡಬೇಕು

ಈಗಾಗಲೇ ಸಾಕ್ಷ್ಯಾಧಾರಗಳು ಲಭ್ಯವಿದ್ದರೂ ಮೌನವಾಗಿರುವುದು ಅಪರಾಧವನ್ನು ಮುಚ್ಚಿಡುವ ತಂತ್ರ ಎಂದು ಸಂಘಟನೆ ಹೇಳಿದೆ. ಒಂದು ವೇಳೆ ಈ ಆರೋಪಗಳು ಸುಳ್ಳಾಗಿದ್ದರೆ ಚುನಾವಣಾ ಆಯೋಗವು ಸ್ಪಷ್ಟೀಕರಣ ನೀಡಬೇಕು, ಇಲ್ಲವಾದರೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಈ ಹೇಳಿಕೆಯನ್ನು ತಾರಾ ರಾವ್, ಮೊಹಮ್ಮದ್ ಕುನ್ನಿ, ಫಾ.ಅರುಣ್ ಲೂಯಿಸ್, ಕೆ.ಎಲ್.ಅಶೋಕ್ ಮತ್ತು ಜಿ.ಎಂ.ವೀರಸಂಗಯ್ಯ ಅವರು ‘ಎದ್ದೇಳು ಕರ್ನಾಟಕ’ದ ಪರವಾಗಿ ನೀಡಿದ್ದಾರೆ.

ಬಿಹಾರ| ಮತಪಟ್ಟಿ ಪರಿಷ್ಕರಣೆ ವಿರೋಧಿಸಿ ಪ್ರತಿಭಟನೆ-ಬಂಧನ: ಅವರು ಯಾವುದಕ್ಕೆ ಹೆದರುತ್ತಿದ್ದಾರೆ? ಎಂದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...