HomeUncategorizedಪೌರತ್ವ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಗೆ: ಯಾರಿಗಿದೆ ಬಹುಮತ??

ಪೌರತ್ವ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಗೆ: ಯಾರಿಗಿದೆ ಬಹುಮತ??

- Advertisement -
- Advertisement -

ಬಹುಚರ್ಚಿತ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿರುವುದು ಸರಿಯಷ್ಟೇ. ಆದರೆ ಅಸಲಿ ಅಗ್ನಿಪರೀಕ್ಷೆ ಇಂದು ರಾಜ್ಯಸಭೆಯಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆಯಲ್ಲಿ ಚರ್ಚೆಯ ನಂತರ ಬಹುಮತಕ್ಕೆ ಬೀಳುವ ಸಂಭವವಿದ್ದು ತೀವ್ರ ಕುತೂಹಲ ಕೆರಳಿಸಿದೆ.

ಮಸೂದೆಯನ್ನು ಮೇಲ್ಮನೆಯಲ್ಲಿ ಸಹ ಸರಾಗವಾಗಿ ಪಾಸುವ ಮಾಡುವ ಬಗ್ಗೆ ಪಕ್ಷಕ್ಕೆ ವಿಶ್ವಾಸವಿದೆ ಎಂದು ಆಡಳಿತಾರೂಡ BJP ಬಿಜೆಪಿ ಮೂಲಗಳು ತಿಳಿಸಿವೆ.

ಎನ್‌ಡಿಎಯು ಲೋಕಸಭೆಯಲ್ಲಿ ಅಗಾಧ ಬಹುಮತವನ್ನು ಹೊಂದಿತ್ತು. ಹಾಗಾಗಿಯೇ ಅಲ್ಲಿ ಮಸೂದೆಯ ಪರವಾಗಿ 311 ಮತಗಳನ್ನು ಪಡೆಯಲು ಸಾಧ್ಯವಾದರೆ ಅದರ ವಿರುದ್ಧ 80 ಮತಗಳಷ್ಟೇ ಬಿದ್ದಿದ್ದವು.

ಪ್ರಸ್ತುತ ರಾಜ್ಯಸಭೆಯಲ್ಲಿ 240 ಸದಸ್ಯರ ಬಲವಿದೆ. ಬಹುಮತ 121 ಆಗಿದೆ. ಎಐಎಡಿಎಂಕೆ, ಜನತಾದಳ-ಯುನೈಟೆಡ್ ಮತ್ತು ಅಕಾಲಿ ದಳದಂತಹ ಪಕ್ಷಗಳನ್ನು ಒಳಗೊಂಡ ಎನ್‌ಡಿಎ 116 ಸದಸ್ಯರನ್ನು ಹೊಂದಿದೆ ಮತ್ತು ಇತರ 14 ಜನರ ಬೆಂಬಲವನ್ನು ಅದು ನಿರೀಕ್ಷಿಸುತ್ತಿದೆ. ಆಗ ಅದರ ಸಂಖ್ಯೆ 130 ಆಗಲಿದ್ದು ಮಸೂದೆ ಮಂಡನೆ ಸಹಾಯಕವಾಗಲಿದೆ.

ಈ 14 ಜನ ಹೊರಗಿನ ಸದಸ್ಯರಲ್ಲಿ ಲೋಕಸಭೆಯಲ್ಲಿ ಮಸೂದೆಯ ಪರವಾಗಿ ಮತ ಚಲಾಯಿಸಿದ ಬಿಜೆಪಿಯ ಮಾಜಿ ಮಿತ್ರ ಶಿವಸೇನೆಯೂ ಮೂವರು ಸದಸ್ಯರನ್ನು ಒಳಗೊಂಡಿದೆ. ಆದರೆ ರಾಜ್ಯಸಭೆಯಲ್ಲಿ ಅದರ ಬೆಂಬಲ ಖಚಿತವಾಗಿಲ್ಲ ಎಂದು ಹೇಳಿದ್ದಾರೆ. ಶಿವಸೇನೆ ಬೆಂಬಲ ನೀಡದಿದ್ದರೂ ಸಹ ಬಿಜೆಪಿಗೆ 127 ಸದಸ್ಯರ ಬೆಂಬಲ ದೊರಕಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿಯ ಏಳು ಸದಸ್ಯರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್‌ಸಿಪಿಯಿಂದ ಇಬ್ಬರು ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿಯಿಂದ ಇಬ್ಬರು ಮತ್ತು ಶಿವಸೇನೆಯ ಮೂವರು ಸದಸ್ಯರು ಬಿಜೆಪಿಗೆ ಹೊರಗಿನಿಂದ ಬೆಂಬಲ ಸೂಚಿಸಬಹುದಾದ 14 ರಾಜ್ಯಸಭಾ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಏನಿದು ಪೌರತ್ವ ತಿದ್ದುಪಡಿ ಮಸೂದೆ?

ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) 64 ಸದಸ್ಯರನ್ನು ಹೊಂದಿದೆ. ಮತ್ತು ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂ) ದಂತಹ ಇತರ 46 ರಾಜ್ಯಸಭಾ ಸದಸ್ಯರು ಮಸೂದೆಯನ್ನು ವಿರೋಧಿಸುತ್ತಿದ್ದಾರೆ. ಅವರ ಒಟ್ಟು ಸಂಖ್ಯೆ 110 ಆಗಲಿದೆ.

ಈ ನಡುವೆ ನಿತೀಶ್‌ ಕುಮಾರ್‌ರವರ ಜೆಡಿಯು ಮಸೂದೆಯನ್ನು ಬೆಂಬಲಿಸಬಾರದು ಎಂದು ಅದರ ಉಪಾಧ್ಯಕ್ಷರಾದ ಪ್ರಶಾಂತ್‌ ಕಿಶೋರ್‌ ಒತ್ತಾಯಿಸಿದ್ದರೆ. ಹಾಗಾಗಿ ಏನಾದರೂ ಸಂಭವಿಸಬಹುದೆಂಬ ನಿರೀಕ್ಷೆಯಲ್ಲಿ ವಿರೋಧ ಪಕ್ಷಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...