Homeಮುಖಪುಟಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ...

ಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ ಮಾಡುವ ಪ್ರತಿಜ್ಞೆ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವಿವಾದಿತ ಕಟ್ಟಡದ ಬಳಿಯಿದ್ದ ನವಾಬ್ ಸಮದ್ ಖಾನ್ ಅವರ ಸಮಾಧಿಯನ್ನು ಹಿಂದುತ್ವ ಗುಂಪುಗಳು ಧ್ವಸಂಗೊಳಿಸಿದ ಘಟನೆ ಸೋಮವಾರ (ಆ.11) ನಡೆದಿದೆ.

ಬಿಜೆಪಿ, ಬಜರಂಗದಳ ಸೇರಿದಂತೆ ವಿವಿಧ ಹಿಂದುತ್ವ ಗುಂಪುಗಳ ಸದಸ್ಯರು ಕೋಲುಗಳನ್ನು ಹಿಡಿದುಕೊಂಡು ಏಕಾಏಕಿ ವಿವಾದಿತ ಕಟ್ಟಡದ ಪರಿಸರಕ್ಕೆ ನುಗ್ಗಿದ್ದು, ಕಟ್ಟಡದ ಹೊರಗಡೆಯಿದ್ದ ಸಮಾಧಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ.

ದುಷ್ಕೃತ್ಯದಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ವರದಿಗಳ ಪ್ರಕಾರ, ಫತೇಪುರ್ ಜಿಲ್ಲೆಯ ಸದರ್ ತಾಲೂಕಿನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಸಮಾಧಿ ಮತ್ತು ಕಟ್ಟಡ ವಿವಾದ ಕೇಂದ್ರ ಬಿಂದುವಾಗಿದೆ. ಇಲ್ಲಿನ ಸರ್ವೆ ನಂಬರ್ 753ರಲ್ಲಿ ಮಕ್ಬರಾ ಮಾಂಗಿ( ಸೂಫಿ ಸಂತರ ಸಮಾಧಿ ಇರುವ ಜಾಗ ಎಂದು ಹೇಳಬಹುದು) ಇದೆ ಎಂದು ಸರ್ಕಾರದ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ವಿಡಿಯೋಗಳಲ್ಲಿ ಇಸ್ಲಾಮಿಕ್ ಶೈಲಿಯ ಬೃಹತ್ ಪುರಾತನ ಕಟ್ಟಡ ಮತ್ತು ಅದರ ಸಮೀಪ ಸಮಾಧಿ ಇರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಪುರಾತನ ಕಟ್ಟಡದ ಅಂಗಳದಲ್ಲಿ ನವಾಬ್ ಸಮದ್ ಖಾನ್ ಅವರ ಸಮಾಧಿ ಇದೆ. ಇದನ್ನು ಸರ್ಕಾರ ರಾಷ್ಟ್ರೀಯ ಆಸ್ತಿ ಎಂದು ಗುರುತಿಸಿದೆ.

ಸರ್ಕಾರಿ ದಾಖಲೆಗಳಲ್ಲಿ ಕೂಡ ವಿವಾದಿತ ಕಟ್ಟಡವನ್ನು ಚಕ್ರವರ್ತಿ ಔರಂಗಜೇಬರ ಆಳ್ವಿಕೆಯಲ್ಲಿ ಪೈಲಾನಿಯ ಫೌಜ್‌ದಾರ್ ಆಗಿದ್ದ ನವಾಬ್ ಅಬ್ದುಸಮದ್ ಖಾನ್ ಬಹದ್ದೂರ್ ಅವರ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆ ಹಂಚಿಕೊಂಡಿದ್ದಾರೆ.

ಆದರೆ, ಹಿಂದುತ್ವ ಗುಂಪುಗಳು ಇದು ಠಾಕೂರ್ಜಿ ಮತ್ತು ಶಿವನಿಗೆ ಅರ್ಪಿತವಾದ ದೇವಾಲಯವಾಗಿದ್ದು, ಸಾವಿರ ವರ್ಷಗಳಿಗಿಂತ ಹಳೆಯದು ಎಂದು ಹೇಳಿಕೊಂಡಿವೆ.

ಸದರ್ ತಾಲೂಕಿನಲ್ಲಿರುವ ನವಾಬ್ ಅಬ್ದುಸಮದ್ ಅವರ ಸಮಾಧಿ ವಾಸ್ತವವಾಗಿ ಸಾವಿರ ವರ್ಷಗಳಷ್ಟು ಹಳೆಯದಾದ ಠಾಕೂರ್ಜಿ ಮತ್ತು ಶಿವನ ದೇವಾಲಯವಾಗಿದೆ ಎಂದು ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಮುಖ್ಲಾಲ್ ಪಾಲ್ ಆರೋಪಿಸಿದ ನಂತರ ವಿವಾದ ಭುಗಿಲೆದ್ದಿದೆ. ಕಟ್ಟಡದ ಒಳಗೆ ಕಮಲದ ಹೂವು ಮತ್ತು ತ್ರಿಶೂಲ ಇದೆ ಎಂದು ತಮ್ಮ ಆರೋಪಕ್ಕೆ ಹಿಂದುತ್ವ ಗುಂಪುಗಳು ಪುರಾವೆಯಾಗಿ ಉಲ್ಲೇಖಿಸಿದೆ.

ವರದಿಗಳ ಪ್ರಕಾರ, ಮುಖ್ಲಾಲ್ ಪಾಲ್ ಅವರು ಸನಾತನಿಗಳು ಸೋಮವಾರ ಬೆಳಿಗ್ಗೆ 9 ಗಂಟೆಗೆ ಪುರಿ ಠಾಕೂರ್ ಡಾಕ್ ಬಂಗಲೆಯಿಂದ ಮೆರವಣಿಗೆ ನಡೆಸಿ, ವಿವಾದಿತ ಜಾಗದಲ್ಲಿ ಪೂಜೆ ಸಲ್ಲಿಸಲು ಸೇರುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಅವರ ಕರೆಯ ನಂತರ, ಹಿಂದುತ್ವ ಸಂಘಟನೆಯ ಸದಸ್ಯರು ಸಮಾಧಿಯ ಹೊರಗಿನ ಪ್ರದೇಶವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತರು ಪೂಜೆ ಸಲ್ಲಿಸಲು ಮುಂದಾಗಿದ್ದು ಬಿಗುವಿನ ವಾತಾವರಣ ಸೃಷ್ಟಿಸಿತ್ತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋಗಳಲ್ಲಿ ಕೈಯಲ್ಲಿ ಕೇಸರಿ ಧ್ವಜ ಮತ್ತು ಕೋಲುಗಳನ್ನು ಹಿಡಿದು ವಿವಾದಿತ ಕಟ್ಟಡದ ಪ್ರದೇಶಕ್ಕೆ ನುಗ್ಗಿದ ಹಿಂದುತ್ವ ಗುಂಪು, ಪುರಾತನ ಕಟ್ಟಡ ಮತ್ತು ಸಮಾಧಿಯ ಸುತ್ತ ದಾಂದಲೆ ನಡೆಸಿದ್ದನ್ನು ನೋಡಬಹುದು. ದುಷ್ಕರ್ಮಿಗಳು ಜೈಶ್ರೀರಾಮ್ ಘೋಷಣೆ ಕೂಗಿರುವುದು ಮತ್ತು ಪೊಲೀಸರ ಮುಂದೆಯೇ ವಿವಾದಿತ ಜಾಗಕ್ಕೆ ನುಗ್ಗುವುದು ಕೂಡ ವಿಡಿಯೋದಲ್ಲಿ ಇದೆ.

ಘಟನೆಯ ನಂತರ ಜಿಲ್ಲಾಡಳಿತ ಭಾರೀ ಪೊಲೀಸ್ ಮತ್ತು ಪಿಎಸಿ ಪಡೆಗಳನ್ನು ನಿಯೋಜಿಸಿದೆ ಮತ್ತು ವಿವಾದಿತ ಸ್ಥಳದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಮತ್ತಷ್ಟು ಅಶಾಂತಿ ಉಂಟಾಗದಂತೆ ಎಚ್ಚರ ವಹಿಸಿದೆ ಎಂದು ವರದಿಯಾಗಿದೆ.

ವಿವಾದಿತ ಪ್ರದೇಶದೊಳಗೆ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಯ ಆದೇಶದ ಮೇರೆಗೆ ಬ್ಯಾರಿಕೇಡ್ ಹಾಕಲಾಗುತ್ತಿದೆ.

ಫತೇಪುರ್ ಬಜರಂಗದಳ ಜಿಲ್ಲಾ ಸಹ-ಸಂಚಾಲಕ ಧರ್ಮೇಂದ್ರ ಸಿಂಗ್ ಕೂಡ ಸಮಾಧಿಯಲ್ಲಿ ಪೂಜೆ ಸಲ್ಲಿಸುವ ಬಗ್ಗೆ ಘೋಷಿಸಿದ್ದರು. “ನಾವು ಮಧ್ಯಾಹ್ನ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ. ಆಡಳಿತವು ನಮ್ಮನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯ ಉಪಾಧ್ಯಕ್ಷ ವೀರೇಂದ್ರ ಪಾಂಡೆ ಅವರು ಈ ಸ್ಥಳವು ಭಗವಾನ್ ಭೋಲೆನಾಥ ಮತ್ತು ಶ್ರೀಕೃಷ್ಣನಿಗೆ ಅರ್ಪಿತವಾದ ದೇವಾಲಯವಾಗಿದೆ, ಸಮಾಧಿಯಲ್ಲ ಎಂದು ಹೇಳಿದ್ದಾರೆ.

ಧಾರ್ಮಿಕ ಚಿಹ್ನೆಗಳು, ಪರಿಕ್ರಮ ಮಾರ್ಗ ಮತ್ತು ದೇವಾಲಯವನ್ನು ಅವರು ಸಾಕ್ಷಿಯಾಗಿ ತೋರಿಸಿದ್ದು, ಆಗಸ್ಟ್ 16 ರಂದು ಜನ್ಮಾಷ್ಟಮಿ ಆಚರಣೆಗಾಗಿ ಆ ಸ್ಥಳವನ್ನು ಸ್ವಚ್ಛಗೊಳಿಸಬೇಕು ಎಂದಿದ್ದಾರೆ.

“ನಾವು ಹತ್ತು ದಿನಗಳ ಹಿಂದೆಯೇ ಆಡಳಿತಕ್ಕೆ ಮಾಹಿತಿ ನೀಡಿದ್ದೆವು. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಪಾಂಡೆ ಹೇಳಿದ್ದು, ಇದು ಹಿಂದೂಗಳ ನಂಬಿಕೆಯ ಕೇಂದ್ರ ಸ್ಥಳ, ಮರಳಿ ಪಡೆಯುತ್ತೇವೆ ಎಂದಿದ್ದಾರೆ.

ಇಂಡಿಯಾ ಟುಡೇ ಪ್ರಕಾರ, ಆಡಳಿತವು ಭೂಮಿಯನ್ನು ಅಧಿಕೃತವಾಗಿ ರಾಷ್ಟ್ರೀಯ ಆಸ್ತಿ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಪುನರುಚ್ಚರಿಸಿದೆ. ಅಧಿಕಾರಿಗಳು ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ತಡೆಯಲು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ರಾಷ್ಟ್ರೀಯ ಉಲಮಾ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ನಸೀಮ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಇತಿಹಾಸವನ್ನು ವಿರೂಪಗೊಳಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದಿದ್ದಾರೆ.

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ ‘ನರೇಟಿವ್’ ಸೃಷ್ಟಿ ಎಂದು ತಜ್ಞರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ...

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...