Homeಮುಖಪುಟಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ...

ಉತ್ತರ ಪ್ರದೇಶ: ಫತೇಪುರ್‌ನಲ್ಲಿ ಪುರಾತನ ಸಮಾಧಿ ಧ್ವಂಸಗೊಳಿಸಿದ ಹಿಂದುತ್ವ ಗುಂಪು; ದೇವಾಲಯ ಎಂದು ವಾದ, ಪೂಜೆ ಮಾಡುವ ಪ್ರತಿಜ್ಞೆ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ವಿವಾದಿತ ಕಟ್ಟಡದ ಬಳಿಯಿದ್ದ ನವಾಬ್ ಸಮದ್ ಖಾನ್ ಅವರ ಸಮಾಧಿಯನ್ನು ಹಿಂದುತ್ವ ಗುಂಪುಗಳು ಧ್ವಸಂಗೊಳಿಸಿದ ಘಟನೆ ಸೋಮವಾರ (ಆ.11) ನಡೆದಿದೆ.

ಬಿಜೆಪಿ, ಬಜರಂಗದಳ ಸೇರಿದಂತೆ ವಿವಿಧ ಹಿಂದುತ್ವ ಗುಂಪುಗಳ ಸದಸ್ಯರು ಕೋಲುಗಳನ್ನು ಹಿಡಿದುಕೊಂಡು ಏಕಾಏಕಿ ವಿವಾದಿತ ಕಟ್ಟಡದ ಪರಿಸರಕ್ಕೆ ನುಗ್ಗಿದ್ದು, ಕಟ್ಟಡದ ಹೊರಗಡೆಯಿದ್ದ ಸಮಾಧಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ.

ದುಷ್ಕೃತ್ಯದಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ವರದಿಗಳ ಪ್ರಕಾರ, ಫತೇಪುರ್ ಜಿಲ್ಲೆಯ ಸದರ್ ತಾಲೂಕಿನ ರೆಡಿಯಾ ಪ್ರದೇಶದ ಅಬು ನಗರದಲ್ಲಿರುವ ಸಮಾಧಿ ಮತ್ತು ಕಟ್ಟಡ ವಿವಾದ ಕೇಂದ್ರ ಬಿಂದುವಾಗಿದೆ. ಇಲ್ಲಿನ ಸರ್ವೆ ನಂಬರ್ 753ರಲ್ಲಿ ಮಕ್ಬರಾ ಮಾಂಗಿ( ಸೂಫಿ ಸಂತರ ಸಮಾಧಿ ಇರುವ ಜಾಗ ಎಂದು ಹೇಳಬಹುದು) ಇದೆ ಎಂದು ಸರ್ಕಾರದ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ವಿಡಿಯೋಗಳಲ್ಲಿ ಇಸ್ಲಾಮಿಕ್ ಶೈಲಿಯ ಬೃಹತ್ ಪುರಾತನ ಕಟ್ಟಡ ಮತ್ತು ಅದರ ಸಮೀಪ ಸಮಾಧಿ ಇರುವುದನ್ನು ನೋಡಬಹುದು. ವರದಿಗಳ ಪ್ರಕಾರ, ಪುರಾತನ ಕಟ್ಟಡದ ಅಂಗಳದಲ್ಲಿ ನವಾಬ್ ಸಮದ್ ಖಾನ್ ಅವರ ಸಮಾಧಿ ಇದೆ. ಇದನ್ನು ಸರ್ಕಾರ ರಾಷ್ಟ್ರೀಯ ಆಸ್ತಿ ಎಂದು ಗುರುತಿಸಿದೆ.

ಸರ್ಕಾರಿ ದಾಖಲೆಗಳಲ್ಲಿ ಕೂಡ ವಿವಾದಿತ ಕಟ್ಟಡವನ್ನು ಚಕ್ರವರ್ತಿ ಔರಂಗಜೇಬರ ಆಳ್ವಿಕೆಯಲ್ಲಿ ಪೈಲಾನಿಯ ಫೌಜ್‌ದಾರ್ ಆಗಿದ್ದ ನವಾಬ್ ಅಬ್ದುಸಮದ್ ಖಾನ್ ಬಹದ್ದೂರ್ ಅವರ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆ ಹಂಚಿಕೊಂಡಿದ್ದಾರೆ.

ಆದರೆ, ಹಿಂದುತ್ವ ಗುಂಪುಗಳು ಇದು ಠಾಕೂರ್ಜಿ ಮತ್ತು ಶಿವನಿಗೆ ಅರ್ಪಿತವಾದ ದೇವಾಲಯವಾಗಿದ್ದು, ಸಾವಿರ ವರ್ಷಗಳಿಗಿಂತ ಹಳೆಯದು ಎಂದು ಹೇಳಿಕೊಂಡಿವೆ.

ಸದರ್ ತಾಲೂಕಿನಲ್ಲಿರುವ ನವಾಬ್ ಅಬ್ದುಸಮದ್ ಅವರ ಸಮಾಧಿ ವಾಸ್ತವವಾಗಿ ಸಾವಿರ ವರ್ಷಗಳಷ್ಟು ಹಳೆಯದಾದ ಠಾಕೂರ್ಜಿ ಮತ್ತು ಶಿವನ ದೇವಾಲಯವಾಗಿದೆ ಎಂದು ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಮುಖ್ಲಾಲ್ ಪಾಲ್ ಆರೋಪಿಸಿದ ನಂತರ ವಿವಾದ ಭುಗಿಲೆದ್ದಿದೆ. ಕಟ್ಟಡದ ಒಳಗೆ ಕಮಲದ ಹೂವು ಮತ್ತು ತ್ರಿಶೂಲ ಇದೆ ಎಂದು ತಮ್ಮ ಆರೋಪಕ್ಕೆ ಹಿಂದುತ್ವ ಗುಂಪುಗಳು ಪುರಾವೆಯಾಗಿ ಉಲ್ಲೇಖಿಸಿದೆ.

ವರದಿಗಳ ಪ್ರಕಾರ, ಮುಖ್ಲಾಲ್ ಪಾಲ್ ಅವರು ಸನಾತನಿಗಳು ಸೋಮವಾರ ಬೆಳಿಗ್ಗೆ 9 ಗಂಟೆಗೆ ಪುರಿ ಠಾಕೂರ್ ಡಾಕ್ ಬಂಗಲೆಯಿಂದ ಮೆರವಣಿಗೆ ನಡೆಸಿ, ವಿವಾದಿತ ಜಾಗದಲ್ಲಿ ಪೂಜೆ ಸಲ್ಲಿಸಲು ಸೇರುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

ಅವರ ಕರೆಯ ನಂತರ, ಹಿಂದುತ್ವ ಸಂಘಟನೆಯ ಸದಸ್ಯರು ಸಮಾಧಿಯ ಹೊರಗಿನ ಪ್ರದೇಶವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತರು ಪೂಜೆ ಸಲ್ಲಿಸಲು ಮುಂದಾಗಿದ್ದು ಬಿಗುವಿನ ವಾತಾವರಣ ಸೃಷ್ಟಿಸಿತ್ತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋಗಳಲ್ಲಿ ಕೈಯಲ್ಲಿ ಕೇಸರಿ ಧ್ವಜ ಮತ್ತು ಕೋಲುಗಳನ್ನು ಹಿಡಿದು ವಿವಾದಿತ ಕಟ್ಟಡದ ಪ್ರದೇಶಕ್ಕೆ ನುಗ್ಗಿದ ಹಿಂದುತ್ವ ಗುಂಪು, ಪುರಾತನ ಕಟ್ಟಡ ಮತ್ತು ಸಮಾಧಿಯ ಸುತ್ತ ದಾಂದಲೆ ನಡೆಸಿದ್ದನ್ನು ನೋಡಬಹುದು. ದುಷ್ಕರ್ಮಿಗಳು ಜೈಶ್ರೀರಾಮ್ ಘೋಷಣೆ ಕೂಗಿರುವುದು ಮತ್ತು ಪೊಲೀಸರ ಮುಂದೆಯೇ ವಿವಾದಿತ ಜಾಗಕ್ಕೆ ನುಗ್ಗುವುದು ಕೂಡ ವಿಡಿಯೋದಲ್ಲಿ ಇದೆ.

ಘಟನೆಯ ನಂತರ ಜಿಲ್ಲಾಡಳಿತ ಭಾರೀ ಪೊಲೀಸ್ ಮತ್ತು ಪಿಎಸಿ ಪಡೆಗಳನ್ನು ನಿಯೋಜಿಸಿದೆ ಮತ್ತು ವಿವಾದಿತ ಸ್ಥಳದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಮತ್ತಷ್ಟು ಅಶಾಂತಿ ಉಂಟಾಗದಂತೆ ಎಚ್ಚರ ವಹಿಸಿದೆ ಎಂದು ವರದಿಯಾಗಿದೆ.

ವಿವಾದಿತ ಪ್ರದೇಶದೊಳಗೆ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಯ ಆದೇಶದ ಮೇರೆಗೆ ಬ್ಯಾರಿಕೇಡ್ ಹಾಕಲಾಗುತ್ತಿದೆ.

ಫತೇಪುರ್ ಬಜರಂಗದಳ ಜಿಲ್ಲಾ ಸಹ-ಸಂಚಾಲಕ ಧರ್ಮೇಂದ್ರ ಸಿಂಗ್ ಕೂಡ ಸಮಾಧಿಯಲ್ಲಿ ಪೂಜೆ ಸಲ್ಲಿಸುವ ಬಗ್ಗೆ ಘೋಷಿಸಿದ್ದರು. “ನಾವು ಮಧ್ಯಾಹ್ನ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತೇವೆ. ಆಡಳಿತವು ನಮ್ಮನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯ ಉಪಾಧ್ಯಕ್ಷ ವೀರೇಂದ್ರ ಪಾಂಡೆ ಅವರು ಈ ಸ್ಥಳವು ಭಗವಾನ್ ಭೋಲೆನಾಥ ಮತ್ತು ಶ್ರೀಕೃಷ್ಣನಿಗೆ ಅರ್ಪಿತವಾದ ದೇವಾಲಯವಾಗಿದೆ, ಸಮಾಧಿಯಲ್ಲ ಎಂದು ಹೇಳಿದ್ದಾರೆ.

ಧಾರ್ಮಿಕ ಚಿಹ್ನೆಗಳು, ಪರಿಕ್ರಮ ಮಾರ್ಗ ಮತ್ತು ದೇವಾಲಯವನ್ನು ಅವರು ಸಾಕ್ಷಿಯಾಗಿ ತೋರಿಸಿದ್ದು, ಆಗಸ್ಟ್ 16 ರಂದು ಜನ್ಮಾಷ್ಟಮಿ ಆಚರಣೆಗಾಗಿ ಆ ಸ್ಥಳವನ್ನು ಸ್ವಚ್ಛಗೊಳಿಸಬೇಕು ಎಂದಿದ್ದಾರೆ.

“ನಾವು ಹತ್ತು ದಿನಗಳ ಹಿಂದೆಯೇ ಆಡಳಿತಕ್ಕೆ ಮಾಹಿತಿ ನೀಡಿದ್ದೆವು. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಪಾಂಡೆ ಹೇಳಿದ್ದು, ಇದು ಹಿಂದೂಗಳ ನಂಬಿಕೆಯ ಕೇಂದ್ರ ಸ್ಥಳ, ಮರಳಿ ಪಡೆಯುತ್ತೇವೆ ಎಂದಿದ್ದಾರೆ.

ಇಂಡಿಯಾ ಟುಡೇ ಪ್ರಕಾರ, ಆಡಳಿತವು ಭೂಮಿಯನ್ನು ಅಧಿಕೃತವಾಗಿ ರಾಷ್ಟ್ರೀಯ ಆಸ್ತಿ ಸಮಾಧಿ ಎಂದು ದಾಖಲಿಸಲಾಗಿದೆ ಎಂದು ಪುನರುಚ್ಚರಿಸಿದೆ. ಅಧಿಕಾರಿಗಳು ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ತಡೆಯಲು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ರಾಷ್ಟ್ರೀಯ ಉಲಮಾ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ್ ನಸೀಮ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ಇತಿಹಾಸವನ್ನು ವಿರೂಪಗೊಳಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಎಂದಿದ್ದಾರೆ.

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ: ಮುಂದಿನ ವರ್ಷ ನಡೆಯುವ ಚುನಾವಣೆಗಾಗಿ ‘ನರೇಟಿವ್’ ಸೃಷ್ಟಿ ಎಂದು ತಜ್ಞರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...