Homeಮುಖಪುಟ"ನಾನು ಈ ಬಗ್ಗೆ ಪರಿಶೀಲಿಸುತ್ತೇನೆ": ಬೀದಿ ನಾಯಿಗಳ ಕುರಿತ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಿಜೆಐ...

“ನಾನು ಈ ಬಗ್ಗೆ ಪರಿಶೀಲಿಸುತ್ತೇನೆ”: ಬೀದಿ ನಾಯಿಗಳ ಕುರಿತ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಿಜೆಐ ಪ್ರತಿಕ್ರಿಯೆ

- Advertisement -
- Advertisement -

ಬೀದಿ ನಾಯಿಗಳಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆಗಾಗಿ ಬುಧವಾರ (ಆ.13) ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ನೇತೃತ್ವದ ಪೀಠದ ಮುಂದೆ ಪ್ರಸ್ತಾಪಿಸಲಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ. “ನಾನು ಈ ಬಗ್ಗೆ ಪರಿಶೀಲಿಸುತ್ತೇನೆ” ಎಂದು ಅರ್ಜಿದಾರರಿಗೆ ಭರವಸೆ ನೀಡಿದರು.

ಕಾನ್ಫರೆನ್ಸ್ ಫಾರ್ ಹ್ಯೂಮನ್ ರೈಟ್ಸ್ (ಇಂಡಿಯಾ) ಸಂಸ್ಥೆಯ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠದ ಮುಂದೆ ಸಂಸ್ಥೆಯ ಪರ ವಕೀಲ ಪ್ರಸ್ತಾಪಿಸಿದರು. ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಮತ್ತೊಂದು ಪೀಠವು ಈಗಾಗಲೇ ಆದೇಶವನ್ನು ನೀಡಿದೆ ಎಂದು ಸಿಜೆಐ ಗಮನಸೆಳೆದರು.

ಆಗಸ್ಟ್ 11ರಂದು, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು, “ನಾಯಿ ಕಡಿತದ ಪ್ರಕರಣಗಳು ‘ಅತ್ಯಂತ ಭೀಕರ’ ಪರಿಸ್ಥಿತಿಗೆ ಕಾರಣವಾಗಿವೆ ಎಂದಿತ್ತು. ದೆಹಲಿ-ಎನ್‌ಸಿಆರ್‌ನಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ‘ಸಾಧ್ಯವಾದಷ್ಟು ಬೇಗ’ ಶಾಶ್ವತವಾಗಿ ಸ್ಥಳಾಂತರಿಸಲು ಆದೇಶಿಸಿತ್ತು.

ಬೀದಿ ನಾಯಿಗಳ ಸಮಸ್ಯೆಗೆ ಸಂಬಂಧಿಸಿದ ಅರ್ಜಿಗಳನ್ನು ಆಯಾ ಹೈಕೋರ್ಟ್‌ಗಳಿಗೆ ವರ್ಗಾಯಿಸಿ ನ್ಯಾಯಮೂರ್ತಿ ಜೆ.ಕೆ ಮಹೇಶ್ವರಿ ನೇತೃತ್ವದ ಪೀಠವು ಮೇ 2024ರಲ್ಲಿ ಹೊರಡಿಸಿದ ಆದೇಶವನ್ನು ಬುಧವಾರ ವಕೀಲರು ಸಿಜೆಐ ಪೀಠದ ಮುಂದೆ ಉಲ್ಲೇಖಿಸಿದರು. ‘ಈ ಬಗ್ಗೆ ನಾವು ಪರಿಶೀಲಿಸುತ್ತೇವೆ’ ಎಂದು ಸಿಜೆಐ ಹೇಳಿದರು.

ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದನ್ನು ನಿಯಂತ್ರಿಸಲು ನಿಯಮಿತ ಸಂತಾನಹರಣ ಮತ್ತು ರೋಗನಿರೋಧಕ ಕಾರ್ಯಕ್ರಮಗಳನ್ನು ಕಡ್ಡಾಯಗೊಳಿಸುವ 2001ರ ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಕಾನ್ಫರೆನ್ಸ್ ಫಾರ್ ಹ್ಯೂಮನ್ ರೈಟ್ಸ್ (ಇಂಡಿಯಾ) ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ.

ಆಗಸ್ಟ್ 11ರ ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ನಾಯಿ ಆಶ್ರಯಗಳನ್ನು ಕಾಲಾನಂತರದಲ್ಲಿ ಹೆಚ್ಚಿಸಬೇಕಾಗುತ್ತದೆ ಎಂದು ಹೇಳಿತ್ತು. ಆರರಿಂದ ಎಂಟು ವಾರಗಳಲ್ಲಿ ಸುಮಾರು 5,000 ನಾಯಿಗಳ ಆಶ್ರಯವನ್ನು ಸ್ಥಾಪಿಸುವ ಮೂಲಕ ಈ ಕಾರ್ಯ ಪ್ರಾರಂಭಿಸಲು ದೆಹಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಇದಲ್ಲದೆ, ನಾಯಿಗಳ ಸ್ಥಳಾಂತರ ಕಾರ್ಯಾಚರಣೆ ವೇಳೆ ಯಾವುದೇ ರೀತಿಯ ಅಡಚಣೆ ಉಂಟಾದರೆ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನ್ಯಾಯಪೀಠ ಎಚ್ಚರಿಸಿತ್ತು. ಇದು ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕಾರಣವಾಗಬಹುದು ಎಂದಿತ್ತು

ನಾಯಿ ಕಡಿತ ಪ್ರಕರಣ: ಬಿಬಿಎಂಪಿ ವ್ಯಾಪ್ತಿಯ ಆರು ತಿಂಗಳಲ್ಲಿ 13,800 ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...