ನಾನು ಆರೋಗ್ಯವಾಗಿದ್ದೇನೆ, ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಉಪಚುನಾವಣೆ ಸೋಲಿನ ಬಳಿಕೆ ವಿಪಕ್ಷ ನಾಯಕ ಮತ್ತು ಕಾಂಗ್ರೆಸ್ ಶಾಸಕಾಂಗ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಕೆಲವು ಕಿಡಿಗೇಡಿಗಳು ಗಾಳಿ ಸುದ್ದಿ ಹರಡಿದ್ದರಿಂದ ಅವರು ಸ್ಪಷ್ಟನೆ ನೀಡಿದ್ದಾರೆ.
Rumours about my health is baseless. I am healthy and fine. I have come to Doctor for a regular health check-up so there is no need to worry.
— Siddaramaiah (@siddaramaiah) December 11, 2019
ಈ ಕುರಿತು ಫೇಸ್ ಬುಕ್ ಮತ್ತು ಟ್ವಿಟ್ಟರ್ನಲ್ಲಿ ನಾನು ಆರೋಗ್ಯವಾಗಿದ್ದೇನೆ. ಗಾಳಿ ಸುದ್ದಿಗಳನ್ನು ನಂಬಬೇಡಿ ಎಂದು ಬರೆದುಕೊಂಡಿದ್ದಾರೆ.
ನಿನ್ನೆ ತಾನೇ ಅವರು ಕೇಂದ್ರದ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದರು ಮತ್ತು ಅಂಗನವಾಡಿ ಕಾರ್ಮಿಕರ ಪರ ದನಿಯೆತ್ತಿದ್ದರು.