Homeಕರ್ನಾಟಕ`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ `ಫೀನಿಕ್ಸ್ ಪೊಲಿಟಿಷಿಯನ್’ ಅಂತಲೇ ಹೆಸರಾದ ದೇವೇಗೌಡರು ಈ ಉಪಚುನಾವಣೆಯ ಫಲಿತಾಂಶದ ನಂತರ ಗಂಭೀರ ಆತ್ಮವಿಮರ್ಶೆ ಮಾಡಿಕೊಳ್ಳಲೇಬೇಕಾದ ಸಂದಿಗ್ಧತೆ ಎದುರಾಗಿದೆ. ಜೆಡಿಎಸ್‍ನ ಶೂನ್ಯ ಸಂಪಾದನೆ ತಳ್ಳಿಹಾಕುವಂತಹ ಸಂಗತಿಯಲ್ಲ. ಯಾರು ಏನೇ ಹೇಳಲಿ ದೇವೇಗೌಡರ ಪೊಲಿಟಿಕ್ಸ್ ನಿಂತಿರುವುದೇ ಜಾತಿರಾಜಕಾರಣದ ಬುನಾದಿಯ ಮೇಲೆ. ಪ್ರಧಾನಿ ಹುದ್ದೆಗೇರಿ `ರಾಷ್ಟ್ರೀಯ ನಾಯಕ’ನಾಗುವ ವೈಯಕ್ತಿಕ ಅವಕಾಶ ಒದಗಿಬಂದಾಗಲು ಅವರು ತಮ್ಮ ಪಕ್ಷವನ್ನು `ಜಾತಿ ಕಂಫರ್ಟ್ ಜೋನ್’ನಿಂದ ಆಚೆಗೆ ಹರಡುವ ಪ್ರಯತ್ನವನ್ನೇ ಮಾಡಲಿಲ್ಲ. ಇತ್ತ ಕುಮಾರಸ್ವಾಮಿ ಎರಡೆರಡು ಬಾರಿ ಮುಖ್ಯಮಂತ್ರಿಯಾದರು ಹಳೇ ಮೈಸೂರು ಪ್ರಾಂತ್ಯದಾಚೆಗೆ ಜೆಡಿಎಸ್ ತನ್ನ ಪ್ರಭಾವ ವಿಸ್ತರಿಸಲಿಲ್ಲ. ಕಾರಣ ಸ್ಪಷ್ಟ. ರಾಜ್ಯದ ರಾಜಕಾರಣವನ್ನು ನಿರ್ಧರಿಸಬಲ್ಲ ಎರಡು ಪ್ರಭಾವಿ ಜಾತಿಗಳಲ್ಲಿ ಒಂದಾದ ಒಕ್ಕಲಿಗ ವೋಟ್ ಬ್ಯಾಂಕ್ ದಾಟುವ ಯಾವ ರಿಸ್ಕೂ ದೇವೇಗೌಡರಿಗಾಗಲಿ, ಅವರ ಕುಟುಂಬಕ್ಕಾಗಿ ಬೇಕಾಗಿರಲಿಲ್ಲ. ಏನಿಲ್ಲವೆಂದರೂ 35 ರಿಂದ 40 ಸೀಟುಗಳನ್ನು ಗೆಲ್ಲಿಸಬಹುದಾದ ಆರೇಳು ಜಿಲ್ಲೆಗಳ ಪ್ರಭಾವಿ ಒಕ್ಕಲಿಗ ಸಮುದಾಯದ ಅಧಿಪತ್ಯವನ್ನು ಸಿದ್ಧಿಸಿಕೊಂಡರೆ ರಾಜಕಾರಣದಲ್ಲಿ ಚಲಾವಣೆಗೆ ಬರುವುದು ಕಷ್ಟವೇನಲ್ಲ. ಇದು ಜೆಡಿಎಸ್‍ನ ಲಾಜಿಕ್ಕು. ಇಷ್ಟು ದಿನ ಒಕ್ಕಲಿಗ ಸಮುದಾಯವು ಕೂಡಾ ದೇವೇಗೌಡರು ಮತ್ತು ಜೆಡಿಎಸ್ ಅನ್ನು ತಮ್ಮ ಜಾತಿ ಅಸ್ಮಿತೆಯ ಭಾಗವಾಗಿಯೇ ಕಂಡಿದ್ದರಿಂದ ಜೆಡಿಎಸ್, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಎಂಥಾ ಪ್ರತಿರೋಧಗಳು ಎದುರಾದರೂ ಗೆಲುವಿನ ದಡ ಮುಟ್ಟುತ್ತಿತ್ತು. ಈ ಲೆಕ್ಕಾಚಾರದ ಅಡಿಯಲ್ಲೆ ದೊಡ್ಡದೊಡ್ಡ ಘಟಾನುಘಟಿ ನಾಯಕರುಗಳನ್ನೂ ಸೈಡ್‍ಲೈನ್ ಮಾಡಿ ತಮ್ಮ ಕುಟುಂಬ ರಾಜಕಾರಣವನ್ನು ವಿಸ್ತರಿಸುತ್ತಾ ಬಂದರು. ಆದರೆ ಫಲಿತಾಂಶ ಅವರ ಜಾತಿ ರಾಜಕಾರಣದ ಅಡಿಪಾಯಕ್ಕೇ ಭರ್ಜರಿ ಏಟು ಕೊಟ್ಟಿದೆ.

ಉಪ ಚುನಾವಣೆ ನಡೆದ ಕೆ.ಆರ್.ಪೇಟೆ, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳು ಜೆಡಿಎಸ್‍ನ ಭದ್ರ ಬೇರುಗಳಿರುವ ಕ್ಷೇತ್ರಗಳು. ಇಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕ. ಆದರೆ ಈ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಸೋತಿದೆ. ಹೊಸಕೋಟೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನು ಬೆಂಬಲಿಸುವ ಮೂಲಕ ಜೆಡಿಎಸ್ ತನ್ನ ಮತದಾರರನ್ನು ಬೇರೆಯವರತ್ತ ಕೈಚೆಲ್ಲಿ ಕುಳಿತುಕೊಂಡಿದ್ದರೆ, ಹುಣಸೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಪಾರ್ಟಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಹೊಸಕೋಟೆ ಹೊರತುಪಡಿಸಿ ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಇದೇ ಮೊದಲ ಬಾರಿ ಗೆಲುವಿನ ನಗೆ ಬೀರಿದೆ. ನಿರ್ದಿಷ್ಟವಾಗಿ ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡ ಗೆದ್ದಿರೋದು ಜೆಡಿಎಸ್‍ಗೆ ದೊಡ್ಡ ಆಘಾತವೇ ಸರಿ. ಯಾಕೆಂದರೆ ದೇವೇಗೌಡರ ಕುಟುಂಬ ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿತ್ತು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿಯ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸುವಷ್ಟರಮಟ್ಟಿಗೆ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಒಕ್ಕಲಿಗರು ದೇವೇಗೌಡರ ಮೇಲಿನ ನಿಷ್ಠೆಯಿಂದ ವಿಮುಖರಾದ್ದರಿಂದ ಯಡ್ಯೂರಪ್ಪನವರ ತವರು ಕ್ಷೇತ್ರವಾದ ಇಲ್ಲಿ ಬಿಜೆಪಿ ಚೊಚ್ಚಲ ನಗೆ ಬೀರಿದೆ.

ಹಾಗೆ ನೋಡಿದರೆ, ಕಳೆದ ಲೋಕಸಭಾ ಚುನಾವಣೆಯಲ್ಲೆ ದೇವೇಗೌಡರ `ಜಾತಿ ಬ್ರಹ್ಮಾಸ್ತ್ರ’ ತನ್ನ ಮೊನಚು ಕಳೆದುಕೊಂಡಿದ್ದರ ಸೂಚನೆಗಳು ಲಭಿಸಿದ್ದವು. ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಜೆಡಿಎಸ್ ಗೆಲ್ಲಲು ಸಾಧ್ಯವಾದದ್ದು ಕೇವಲ ಒಂದರಲ್ಲಿ ಮಾತ್ರ. ಸ್ವತಃ ದೇವೇಗೌಡರು ಮತ್ತವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ, ಕ್ರಮವಾಗಿ ತುಮಕೂರು ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದರು. ಇವೆರಡೂ ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳು ಅನ್ನೋದು ಇಲ್ಲಿ ಗಮನಾರ್ಹ. ಹಾಸನದಲ್ಲಿ ಎಚ್.ಡಿ.ರೇವಣ್ಣ ಮೈಚಳಿ ಬಿಟ್ಟು ತಮ್ಮ ಕಾಂಗ್ರೆಸ್ ವಿರೋಧಿಗಳ ಮನೆಗೂ ಹೋಗಿ ರಾಜಿಸಂಧಾನಕ್ಕೆ ಮುಂದಾಗದಿದ್ದರೆ ಜೆಡಿಎಸ್ ಒಂದೂ ಸ್ಥಾನವಿಲ್ಲದೆ ಭಾರೀ ಮುಖಭಂಗ ಅನುಭವಿಸಬೇಕಾಗುತ್ತಿತ್ತೇನೊ.
ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‍ರ ಎದುರು ತಮ್ಮ ಕುಟುಂಬದ ನಿಖಿಲ್ ಕುಮಾರಸ್ವಾಮಿಯನ್ನು ಅಖಾಡಕ್ಕಿಳಿಸಿದ್ದು ದೇವೇಗೌಡರು ಮಾಡಿದ ದೊಡ್ಡ ಯಡವಟ್ಟು. ಒಕ್ಕಲಿಗರು ಮೊದಲ ಬಾರಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ದನಿ ಬಿಚ್ಚಲು ಅದು ಅವಕಾಶ ಮಾಡಿಕೊಟ್ಟಿತು. ಅದರ ಪ್ರಭಾವವನ್ನು ಸ್ವತಃ ಗೌಡರು ತುಮಕೂರಿನಲ್ಲೂ ಅನುಭವಿಸಬೇಕಾಗಿ ಬಂದಿತು.

ಈ ಉಪಚುನಾವಣೆಯ ಫಲಿತಾಂಶ ಗೌಡರ ರಾಜಕಾರಣದಿಂದ ಒಕ್ಕಲಿಗರು ಮತ್ತಷ್ಟು ವಿಮುಖರಾಗಿರುವುದನ್ನು ಒತ್ತಿ ಹೇಳುತ್ತಿದೆ. ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಗೆ ಬೇಕಾದರೂ ಮೈತ್ರಿಗೆ ಸಿದ್ಧ ಎಂಬ ದೇವೇಗೌಡರ ಪಾರ್ಟಿಯ ಚಂಚಲ ನಿಲುವುಗಳು ಕೂಡಾ ಒಕ್ಕಲಿಗರು ಜೆಡಿಎಸ್‍ನಿಂದ ದೂರ ಸರಿಯುವಂತೆ ಮಾಡಿರುವ ಸಾಧ್ಯತೆಯುಂಟು. ದೇವೇಗೌಡರು ತಮ್ಮನ್ನು ತಾವು ಒಕ್ಕಲಿಗ ನಾಯಕ ಎಂದು ಬಿಂಬಿಸಿಕೊಂಡಂತೆ, ಅವರ ಮಗ ಕುಮಾರಸ್ವಾಮಿಯವರು ತಮ್ಮನ್ನು ಪ್ರೊಜೆಕ್ಟ್ ಮಾಡಿಕೊಳ್ಳುವಲ್ಲಿ ಎಡವುತ್ತಾ ಬಂದದ್ದು ಕೂಡಾ ಜೆಡಿಎಸ್‍ನ ಈ ಪರಿಸ್ಥಿತಿಗೆ ಮತ್ತೊಂದು ಕಾರಣ.

ಕುಮಾರಸ್ವಾಮಿಯವರ ವೈಖರಿಗೆ ಪಕ್ಷದೊಳಗೇ ಆಂತರಿಕ ಬಂಡಾಯವೂ ಭುಗಿಲೆದ್ದಿದೆ. ಉಪಚುನಾವಣೆಗೆ ಕೆಲ ದಿನ ಮೊದಲು ಬಸವರಾಜ ಹೊರಟ್ಟಿ, ಟಿ.ಎ.ಶರವಣ ಮೊದಲಾದ ನಾಯಕರ ನಿಯೋಗವೊಂದು ದೇವೇಗೌಡರನ್ನು ಭೇಟಿಯಾಗಿ ಕುಮಾರಸ್ವಾಮಿ ವಿರುದ್ಧ ದೂರು ಹೇಳಿಕೊಂಡಿದ್ದರು. ಅವರೆಲ್ಲ ರೆಸಾರ್ಟ್ ಬಂಡಾಯಕ್ಕೂ ಅಣಿಯಾಗಿದ್ದರು. ಕೊನೇಕ್ಷಣದಲ್ಲಿ ಅದು ರದ್ದಾಯ್ತು. ಆದರೆ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು ಥರದ ನಾಯಕರಿಗೆ ಇವತ್ತಿಗೂ ಬೇಗುದಿ ಶಮನವಾಗಿಲ್ಲ. ಬೈ ಎಲೆಕ್ಷನ್ ಹೊರಬಿದ್ದ ಬೆನ್ನಿಗೇ ಜೆಡಿಎಸ್‍ನ ವೈಎಸ್‍ವಿ ದತ್ತ, “ಪಕ್ಷವನ್ನು ಉಳಿಸೋದು ದಿನೇದಿನೆ ಕಷ್ಟವಾಗುತ್ತಿರೋದ್ರಿಂದ ಈಗ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ಈ ಕಠಿಣ ನಿರ್ಧಾರ ತಗೋಳದಿದ್ರೆ ಪಕ್ಷಕ್ಕೆ ಉಳಿಗಾಲವಿಲ್ಲ ಅಂತ ದೇವೇಗೌಡರಿಗೆ ನಾನೇ ಹೇಳ್ತೀನಿ” ಎಂದು ಹೇಳಿರುವುದು ಜೆಡಿಎಸ್ ಒಳಗಿನ ಬೇಗುದಿಯನ್ನು ಸೂಚಿಸುತ್ತದೆ. ಈ ಫಲಿತಾಂಶವು ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಕೂತಿರುವ ನಾಯಕರ ಸಂಖ್ಯೆಯನ್ನು ಮತ್ತು ಅವರ ಧೈರ್ಯವನ್ನು ಹಿಗ್ಗಿಸಿದರೆ ಅಚ್ಚರಿಯಿಲ್ಲ.

ದೇವೇಗೌಡರಿಗೆ ಇಂತಹ ಆಂತರಿಕ ಬಂಡಾಯಗಳೇನು ಹೊಸದಲ್ಲ. ಆದರೆ ಒಕ್ಕಲಿಗ ಸಮುದಾಯವೇ ತಮ್ಮ ಕುಟುಂಬದಿಂದ ನಿಧಾನಕ್ಕೆ ಹಿಂದೆ ಸರಿಯುತ್ತಿರುವುದು ಮಾತ್ರ ಅವರ `ಫೀನಿಕ್ಸ್’ ಮನಸ್ಸನ್ನು ಕಂಗೆಡಿಸದೇ ಇರಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬ ವ್ಯಕ್ತಿ ಎಲ್ಲಾ ಕಾಲಕ್ಕೂ, ಎಲ್ಲಾ ಜನರನ್ನೂ ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...