Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

ಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

- Advertisement -
- Advertisement -

ತಪ್ಪುದಾರಿಯಲ್ಲಿ ಸರ್ಕಾರಿ ಬ್ಯಾಂಕುಗಳಿಂದ ಪಡೆದ ಸಾಲಗಳನ್ನು ಉದ್ದೇಶ ಪೂರ್ವಕವಾಗಿ ತೀರಿಸದೆ ಛದ್ಮವೇಷಧಾರಿ ಕೈಗಾರಿಕೋದ್ಯಮಿಗಳು ಇಂದು ಬ್ಯಾಂಕಿಗ್ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಈ ವ್ಯವಹಾರದಲ್ಲಿ ಹೇರಳ ಭ್ರಷ್ಟಾಚಾರ ನಡೆಯುತ್ತಿದೆ.
2018ರ ಮಾರ್ಚ್ 25ರ ಲೆಕ್ಕದಂತೆ ಭಾರತೀಯ ಬ್ಯಾಂಕುಗಳಲ್ಲಿ ಸಾರ್ವಜನಿಕರು ತೊಡಗಿಸಿದ್ದ ಮೊತ್ತ 110 ಲಕ್ಷ ಕೋಟಿ. ಈ ಹಣದಲ್ಲಿ 80ಲಕ್ಷÀ ಕೋಟಿ ರೂಪಾಯಿಗಳು 21 ಸರ್ಕಾರಿ ಬ್ಯಾಂಕುಗಳಲ್ಲೇ ಇತ್ತು. ಬ್ಯಾಂಕುಗಳು ಸಾರ್ವಜನಿಕರ ಈ ಹಣವನ್ನು ಹೇಗೆ ನಿರ್ವಹಿಸಿದವು ಎಂಬುದನ್ನು ನೋಡೋಣ. 2017-18ರ ಸಾಲಿನಲ್ಲಿ ಈ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 19 ಬ್ಯಾಂಕುಗಳು ನಷ್ಟದಲ್ಲಿರುವುದಾಗಿ ಸರ್ಕಾರ ಘೋಷಣೆ ಮಾಡಿತು. ನಷ್ಟದ ಮೊತ್ತ ಎಷ್ಟು ಗೊತ್ತೇ? ಬರೋಬ್ಬರಿ 87,351 ಕೋಟಿಗಳು. ಪರಿಣಾಮವಾಗಿ ಈ ವರ್ಷ ಕೇಂದ್ರ ಸರ್ಕಾರ ಪ್ರಧಾನಿಯವರ ಯೋಜನೆಗಳಾದ ನೀರಾವರಿ, ಗ್ರಾಮೀಣ ರಸ್ತೆ, ಕುಡಿಯುವ ನೀರಿನ ಯೋಜನೆ, ಸ್ವಚ್ಛಭಾರತ ಆಂದೋಲನ, ಶಿಕ್ಷಣಗಳಿಗೆ ತೆಗೆದಿಟ್ಟಿರುವ ಹಣವನ್ನು ಈ 19 ರಾಷ್ಟ್ರೀಕೃತ ಬ್ಯಾಂಕುಗಳು ಸಾಲವಾಗಿ ಪಂಗನಾಮ ಹಾಕುವವರಿಗೆ ನೀಡಿವೆ. ಈ 19 ಬ್ಯಾಂಕುಗಳಲ್ಲಿ 9 ಬ್ಯಾಂಕುಗಳು ನೀಡಿರುವ ಒಟ್ಟು ಸಾಲದಲ್ಲಿ ಶೇ.15ರಷ್ಟು ಸಾಲ ಸುಸ್ತಿಯಲ್ಲಿದೆ; ಈ ಸಾಲಗಳು ವಸೂಲಾಗುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿವೆ. ಇನ್ನೂ 6 ಬ್ಯಾಂಕುಗಳು ಇನ್ನಷ್ಟು ಹಣ ವಸೂಲಾಗದ ಸಾಲಗಳ ಪಟ್ಟಿಯನ್ನು ಘೋಷಿಸುವುದರಲ್ಲಿವೆ.
ಒಟ್ಟಿನಲ್ಲಿ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 17 ಬ್ಯಾಂಕುಗಳಲ್ಲಿ ವಸೂಲಾಗದ ಸಾಲ ಏರಿಕೆಯಾಗಿದೆ. ಈ ವಸೂಲಾಗದ ಸಾಲಗಳ ಪಿಡುಗು 2007ರಲ್ಲೇ ಶುರುವಾಗಿತ್ತು. ವಿಶ್ವ ಆರ್ಥಿಕ ಮುಗ್ಗಟ್ಟು, ಕಲ್ಲಿದ್ದಲು ಹಗರಣ, 2ಜಿ ಹಗರಣ ಕೂಡ ಅದೇ ಸಮಯದಲ್ಲೇ ನಡೆದರೂ ಕೂಡ ಬ್ಯಾಂಕುಗಳು ಅಲ್ಲಿಯವರೆಗೆ ತಮ್ಮ ಬಂಡವಾಳವನ್ನು ಖoಟಟouಣ ಮಾಡುತ್ತಿದ್ದವು. 2007ರಿಂದ ನುಂಗಣ್ಣಗಳ ಪಾಲಾಗುತ್ತಾ ಬಂದ ರಾಷ್ಟ್ರೀಕೃತ ಬ್ಯಾಂಕುಗಳ ಬಂಡವಾಳ 2018ರಲ್ಲಿ 9 ಲಕ್ಷ ಕೋಟಿಗಳಿಗೇರಿದೆ.
2017-18ರಲ್ಲಿ ಕಂಪೆನಿಗಳಿಂದ, ವ್ಯಕ್ತಿಗಳಿಂದ ಸಂಗ್ರಹವಾದ ಆದಾಯ ತೆರಿಗೆಗಿಂತಲೂ ಈ ನುಂಗಣ್ಣರ ಪಾಲಾದ ಮೊತ್ತ ಅಧಿಕವಾಗಿತ್ತು. ಬ್ಯಾಂಕಿನಲ್ಲಿ ತೊಡಗಿಸುವ ಠೇವಣಿ ಹಣಕ್ಕೆ ವಿಮೆ ಸೌಲಭ್ಯ ಇತ್ತು. ಅದರ ಪರಿಮಿತಿ ಒಂದುಲಕ್ಷ ಠೇವಣಿಗೆ ಮಾತ್ರ. ಒಂದುಲಕ್ಷ ಮೀರಿದ ಠೇವಣಿಗೆ ಭದ್ರತೆ ಇದೆಯೇ? ಬ್ಯಾಂಕುಗಳು ಈ ಹೊಣೆ ಹೊರುತ್ತವೆಯೇ?
ಆದರೆ ಲಕ್ಷಕ್ಕಿಂತ ಕಡಿಮೆ ಠೇವಣಿಯ ಮೊತ್ತ 30-50 ಲಕ್ಷಕೋಟಿ. ಅಂದರೆ ಉಳಿದ 70% ಇಡುಗಂಟನ್ನಿಟ್ಟವರಿಗೆ ಯಾವ ಭದ್ರತೆಯೂ ಇಲ್ಲ. ಇವರಿಟ್ಟಿರುವ ಠೇವಣಿ 72 ಲಕ್ಷಕೋಟಿ. ಜನರು ತಾವು ಕಷ್ಟಪಟ್ಟು ಗಳಿಸಿದ ಹಣವನ್ನು ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡಿ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವುದು ಮಕ್ಕಳ ಶಿಕ್ಷಣ, ಮದುವೆ, ಮನೆಕೊಳ್ಳುವುದು, ನಿವೃತ್ತ ಜೀವನ ಮುಂತಾದ ಕಾರಣಕ್ಕಾಗಿ. ಇವರ ಹಣದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದೆ ಬರಬೇಕು.ಈ 70% ಜನರ ಹಣದ ಭದ್ರತೆಗಾಗಿ ಸರ್ಕಾರ ಜ್ಞಾನಸಂಗಮ, ಇಂದ್ರಧನುಷ್, ಬ್ಯಾಂಕ್‍ಬೋರ್ಡ್ ಬ್ಯೂರೋ ಮುಂತಾದ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿತ್ತು. ಅವುಗಳೆಲ್ಲವೂ ಈಗ ವಿಫಲಗೊಂಡಿವೆ. ಪಾಪರ್ ಚೀಟಿ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಯೋಚನೆ ಮಾಡುತ್ತಿದೆ. ಇದು ಒಂದು ಸ್ವಾಗತಾರ್ಹ ವಿಚಾರ. ಒಂದು ವರ್ಷ ಕಳೆದ ಮೇಲೆ ಸರ್ಕಾರ ಸಾಲಕೊಟ್ಟು ಹಣ ಕಳೆದುಕೊಂಡಿರುವ 12 ಬ್ಯಾಂಕುಗಳ ಪೈಕಿ 2 ಮಾತ್ರ litigation ನಿಂದ ಪಾರಾಗಿವೆ. ಈಗಾಗಲೇ 2511 ಪಾಪರ್ ಚೀಟಿ ಕೇಸುಗಳು ದಾಖಲಾಗಿದ್ದು ಅವು ಇನ್ನಷ್ಟು ಹೆಚ್ಚಾಗಲಿವೆ. ಈ ವೇಗದಲ್ಲೇ ಕೇಸುಗಳು ದಾಖಲಾಗುವುದಾದರೆ ಬ್ಯಾಂಕುಗಳು ಸಾಲವಸೂಲಿಗೆ ಸುದೀರ್ಘ ಕಾಲ ಕಾಯಬೇಕಾಗಬಹುದು.
ಈಗ ಕೆಲವು ದಿನಗಳ ಹಿಂದೆ ಹಂಗಾಮಿ ಹಣಕಾಸು ಮಂತ್ರಿ ಪೀಯೂಷ್ ಗೋಯಲ್ ಸಾಲವಸೂಲಿಯನ್ನೂ ಸುಗಮಗೊಳಿಸಲು ಬ್ಯಾಂಕುಗಳ meಡಿgeಡಿ ಮಾಡಲಾಗುವುದೆಂದೂ ಕರಡು ಸಾಲದ ಬ್ಯಾಂಕೊಂದನ್ನು ಆರಂಭಿಸಬೇಕೆಂದೂ ವಿಚಾರ ಮಾಡಿ, ಸಮಿತಿಯೊಂದನ್ನು ರಚಿಸಿದ್ದಾರೆ. ಆದರೆ ಸಮಿತಿಗಳನ್ನು ಮಾಡುವ, ವರದಿ ತರಿಸಿಕೊಳ್ಳುವ ಸಮಯ ಈಗ ಮೀರಿಹೋಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ತುಂಬಿ ಅವುಗಳ ನಿರ್ವಹಣೆಗೆ ಹೊಸ ರೂಪ ಕೊಡಬೇಕು. ಬ್ಯಾಂಕುಗಳು ಸರ್ಕಾರದ ನೇರ ಹಿಡಿತಕ್ಕೆ ಬರಬಾರದು. ಬ್ಯಾಂಕುಗಳ ಮೇಲ್ವಿಚಾರಣೆಗೆ ಒಂದು ಸ್ವತಂತ್ರ ಆಡಳಿತ ಸಂಸ್ಥೆ ಅಸ್ತಿತ್ವಕ್ಕೆ ಬರಬೇಕು.

 

  • – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...