Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

ಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

- Advertisement -
- Advertisement -

ತಪ್ಪುದಾರಿಯಲ್ಲಿ ಸರ್ಕಾರಿ ಬ್ಯಾಂಕುಗಳಿಂದ ಪಡೆದ ಸಾಲಗಳನ್ನು ಉದ್ದೇಶ ಪೂರ್ವಕವಾಗಿ ತೀರಿಸದೆ ಛದ್ಮವೇಷಧಾರಿ ಕೈಗಾರಿಕೋದ್ಯಮಿಗಳು ಇಂದು ಬ್ಯಾಂಕಿಗ್ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಈ ವ್ಯವಹಾರದಲ್ಲಿ ಹೇರಳ ಭ್ರಷ್ಟಾಚಾರ ನಡೆಯುತ್ತಿದೆ.
2018ರ ಮಾರ್ಚ್ 25ರ ಲೆಕ್ಕದಂತೆ ಭಾರತೀಯ ಬ್ಯಾಂಕುಗಳಲ್ಲಿ ಸಾರ್ವಜನಿಕರು ತೊಡಗಿಸಿದ್ದ ಮೊತ್ತ 110 ಲಕ್ಷ ಕೋಟಿ. ಈ ಹಣದಲ್ಲಿ 80ಲಕ್ಷÀ ಕೋಟಿ ರೂಪಾಯಿಗಳು 21 ಸರ್ಕಾರಿ ಬ್ಯಾಂಕುಗಳಲ್ಲೇ ಇತ್ತು. ಬ್ಯಾಂಕುಗಳು ಸಾರ್ವಜನಿಕರ ಈ ಹಣವನ್ನು ಹೇಗೆ ನಿರ್ವಹಿಸಿದವು ಎಂಬುದನ್ನು ನೋಡೋಣ. 2017-18ರ ಸಾಲಿನಲ್ಲಿ ಈ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 19 ಬ್ಯಾಂಕುಗಳು ನಷ್ಟದಲ್ಲಿರುವುದಾಗಿ ಸರ್ಕಾರ ಘೋಷಣೆ ಮಾಡಿತು. ನಷ್ಟದ ಮೊತ್ತ ಎಷ್ಟು ಗೊತ್ತೇ? ಬರೋಬ್ಬರಿ 87,351 ಕೋಟಿಗಳು. ಪರಿಣಾಮವಾಗಿ ಈ ವರ್ಷ ಕೇಂದ್ರ ಸರ್ಕಾರ ಪ್ರಧಾನಿಯವರ ಯೋಜನೆಗಳಾದ ನೀರಾವರಿ, ಗ್ರಾಮೀಣ ರಸ್ತೆ, ಕುಡಿಯುವ ನೀರಿನ ಯೋಜನೆ, ಸ್ವಚ್ಛಭಾರತ ಆಂದೋಲನ, ಶಿಕ್ಷಣಗಳಿಗೆ ತೆಗೆದಿಟ್ಟಿರುವ ಹಣವನ್ನು ಈ 19 ರಾಷ್ಟ್ರೀಕೃತ ಬ್ಯಾಂಕುಗಳು ಸಾಲವಾಗಿ ಪಂಗನಾಮ ಹಾಕುವವರಿಗೆ ನೀಡಿವೆ. ಈ 19 ಬ್ಯಾಂಕುಗಳಲ್ಲಿ 9 ಬ್ಯಾಂಕುಗಳು ನೀಡಿರುವ ಒಟ್ಟು ಸಾಲದಲ್ಲಿ ಶೇ.15ರಷ್ಟು ಸಾಲ ಸುಸ್ತಿಯಲ್ಲಿದೆ; ಈ ಸಾಲಗಳು ವಸೂಲಾಗುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿವೆ. ಇನ್ನೂ 6 ಬ್ಯಾಂಕುಗಳು ಇನ್ನಷ್ಟು ಹಣ ವಸೂಲಾಗದ ಸಾಲಗಳ ಪಟ್ಟಿಯನ್ನು ಘೋಷಿಸುವುದರಲ್ಲಿವೆ.
ಒಟ್ಟಿನಲ್ಲಿ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 17 ಬ್ಯಾಂಕುಗಳಲ್ಲಿ ವಸೂಲಾಗದ ಸಾಲ ಏರಿಕೆಯಾಗಿದೆ. ಈ ವಸೂಲಾಗದ ಸಾಲಗಳ ಪಿಡುಗು 2007ರಲ್ಲೇ ಶುರುವಾಗಿತ್ತು. ವಿಶ್ವ ಆರ್ಥಿಕ ಮುಗ್ಗಟ್ಟು, ಕಲ್ಲಿದ್ದಲು ಹಗರಣ, 2ಜಿ ಹಗರಣ ಕೂಡ ಅದೇ ಸಮಯದಲ್ಲೇ ನಡೆದರೂ ಕೂಡ ಬ್ಯಾಂಕುಗಳು ಅಲ್ಲಿಯವರೆಗೆ ತಮ್ಮ ಬಂಡವಾಳವನ್ನು ಖoಟಟouಣ ಮಾಡುತ್ತಿದ್ದವು. 2007ರಿಂದ ನುಂಗಣ್ಣಗಳ ಪಾಲಾಗುತ್ತಾ ಬಂದ ರಾಷ್ಟ್ರೀಕೃತ ಬ್ಯಾಂಕುಗಳ ಬಂಡವಾಳ 2018ರಲ್ಲಿ 9 ಲಕ್ಷ ಕೋಟಿಗಳಿಗೇರಿದೆ.
2017-18ರಲ್ಲಿ ಕಂಪೆನಿಗಳಿಂದ, ವ್ಯಕ್ತಿಗಳಿಂದ ಸಂಗ್ರಹವಾದ ಆದಾಯ ತೆರಿಗೆಗಿಂತಲೂ ಈ ನುಂಗಣ್ಣರ ಪಾಲಾದ ಮೊತ್ತ ಅಧಿಕವಾಗಿತ್ತು. ಬ್ಯಾಂಕಿನಲ್ಲಿ ತೊಡಗಿಸುವ ಠೇವಣಿ ಹಣಕ್ಕೆ ವಿಮೆ ಸೌಲಭ್ಯ ಇತ್ತು. ಅದರ ಪರಿಮಿತಿ ಒಂದುಲಕ್ಷ ಠೇವಣಿಗೆ ಮಾತ್ರ. ಒಂದುಲಕ್ಷ ಮೀರಿದ ಠೇವಣಿಗೆ ಭದ್ರತೆ ಇದೆಯೇ? ಬ್ಯಾಂಕುಗಳು ಈ ಹೊಣೆ ಹೊರುತ್ತವೆಯೇ?
ಆದರೆ ಲಕ್ಷಕ್ಕಿಂತ ಕಡಿಮೆ ಠೇವಣಿಯ ಮೊತ್ತ 30-50 ಲಕ್ಷಕೋಟಿ. ಅಂದರೆ ಉಳಿದ 70% ಇಡುಗಂಟನ್ನಿಟ್ಟವರಿಗೆ ಯಾವ ಭದ್ರತೆಯೂ ಇಲ್ಲ. ಇವರಿಟ್ಟಿರುವ ಠೇವಣಿ 72 ಲಕ್ಷಕೋಟಿ. ಜನರು ತಾವು ಕಷ್ಟಪಟ್ಟು ಗಳಿಸಿದ ಹಣವನ್ನು ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡಿ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವುದು ಮಕ್ಕಳ ಶಿಕ್ಷಣ, ಮದುವೆ, ಮನೆಕೊಳ್ಳುವುದು, ನಿವೃತ್ತ ಜೀವನ ಮುಂತಾದ ಕಾರಣಕ್ಕಾಗಿ. ಇವರ ಹಣದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದೆ ಬರಬೇಕು.ಈ 70% ಜನರ ಹಣದ ಭದ್ರತೆಗಾಗಿ ಸರ್ಕಾರ ಜ್ಞಾನಸಂಗಮ, ಇಂದ್ರಧನುಷ್, ಬ್ಯಾಂಕ್‍ಬೋರ್ಡ್ ಬ್ಯೂರೋ ಮುಂತಾದ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿತ್ತು. ಅವುಗಳೆಲ್ಲವೂ ಈಗ ವಿಫಲಗೊಂಡಿವೆ. ಪಾಪರ್ ಚೀಟಿ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಯೋಚನೆ ಮಾಡುತ್ತಿದೆ. ಇದು ಒಂದು ಸ್ವಾಗತಾರ್ಹ ವಿಚಾರ. ಒಂದು ವರ್ಷ ಕಳೆದ ಮೇಲೆ ಸರ್ಕಾರ ಸಾಲಕೊಟ್ಟು ಹಣ ಕಳೆದುಕೊಂಡಿರುವ 12 ಬ್ಯಾಂಕುಗಳ ಪೈಕಿ 2 ಮಾತ್ರ litigation ನಿಂದ ಪಾರಾಗಿವೆ. ಈಗಾಗಲೇ 2511 ಪಾಪರ್ ಚೀಟಿ ಕೇಸುಗಳು ದಾಖಲಾಗಿದ್ದು ಅವು ಇನ್ನಷ್ಟು ಹೆಚ್ಚಾಗಲಿವೆ. ಈ ವೇಗದಲ್ಲೇ ಕೇಸುಗಳು ದಾಖಲಾಗುವುದಾದರೆ ಬ್ಯಾಂಕುಗಳು ಸಾಲವಸೂಲಿಗೆ ಸುದೀರ್ಘ ಕಾಲ ಕಾಯಬೇಕಾಗಬಹುದು.
ಈಗ ಕೆಲವು ದಿನಗಳ ಹಿಂದೆ ಹಂಗಾಮಿ ಹಣಕಾಸು ಮಂತ್ರಿ ಪೀಯೂಷ್ ಗೋಯಲ್ ಸಾಲವಸೂಲಿಯನ್ನೂ ಸುಗಮಗೊಳಿಸಲು ಬ್ಯಾಂಕುಗಳ meಡಿgeಡಿ ಮಾಡಲಾಗುವುದೆಂದೂ ಕರಡು ಸಾಲದ ಬ್ಯಾಂಕೊಂದನ್ನು ಆರಂಭಿಸಬೇಕೆಂದೂ ವಿಚಾರ ಮಾಡಿ, ಸಮಿತಿಯೊಂದನ್ನು ರಚಿಸಿದ್ದಾರೆ. ಆದರೆ ಸಮಿತಿಗಳನ್ನು ಮಾಡುವ, ವರದಿ ತರಿಸಿಕೊಳ್ಳುವ ಸಮಯ ಈಗ ಮೀರಿಹೋಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ತುಂಬಿ ಅವುಗಳ ನಿರ್ವಹಣೆಗೆ ಹೊಸ ರೂಪ ಕೊಡಬೇಕು. ಬ್ಯಾಂಕುಗಳು ಸರ್ಕಾರದ ನೇರ ಹಿಡಿತಕ್ಕೆ ಬರಬಾರದು. ಬ್ಯಾಂಕುಗಳ ಮೇಲ್ವಿಚಾರಣೆಗೆ ಒಂದು ಸ್ವತಂತ್ರ ಆಡಳಿತ ಸಂಸ್ಥೆ ಅಸ್ತಿತ್ವಕ್ಕೆ ಬರಬೇಕು.

 

  • – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...