Homeನಿಜವೋ ಸುಳ್ಳೋಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು...

ಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು..

- Advertisement -
- Advertisement -

ತಮ್ಮ ವಿರೋಧಿಗಳ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅಥವಾ ತಮ್ಮ ಕೆಟ್ಟ ಕೆಲಸಗಳನ್ನು ಮುಚ್ಚಿಹಾಕಲು ಫೇಕ್‌ ನ್ಯೂಸ್‌ಗಳನ್ನು ಹಲವಾರು ಜನ ಹರಡುತ್ತಿದ್ದಾರೆ. ಆದರೆ ಅದೇ ಫೇಕ್‌ನ್ಯೂಸ್‌ಗಳು ಒಂದು ದಿನ ತಮ್ಮ ವಿರುದ್ಧವೇ ತಿರುಗಿಬೀಳಬಹುದೆಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ.. ಅದು ಈ ದೇಶದ ಗೃಹಮಂತ್ರಿ, ಅತಿ ದೊಡ್ಡ ಪಕ್ಷದ ಅಧ್ಯಕ್ಷ ಅಮಿತ್‌ ಶಾರವರೆ ಅದಕ್ಕೆ ಬಲಿಯಾಗಿದ್ದಾರೆ.

ಅಂದು ಕಾಂಗ್ರೆಸ್ ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡಿತು: ಅಮಿತ್ ಶಾ

ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ವೇಳೆ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್ ಶಾ ಅಂದು 1947ರಲ್ಲಿ ಕಾಂಗ್ರೆಸ್ ಭಾರತವನ್ನು ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡದಿದ್ದರೆ ಇಂದು ಈ ಮಸೂದೆಯ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಇವರ ಈ ಹೇಳಿಕೆ ನಿಜವೇ? ಭಾರತ ಪಾಕಿಸ್ತಾನ ವಿಭಜನೆಗೆ ಕಾಂಗ್ರೆಸ್‌ ಕಾರಣವೇ ಎಂದು ಹುಡುಕಹೊರಟರೆ ಮೇಲ್ನೋಟಕ್ಕೆ ಅದು ಸುಳ್ಳು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

1947ರಲ್ಲಿ ಜೆ.ಬಿ ಕೃಪಲಾನಿಯವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅದಕ್ಕೂ ಒಂದು ವರ್ಷದ ಮೊದಲು ಜವಹಾರಲಾಲ್‌ ನೆಹರು ಅಧ್ಯಕ್ಷರಾಗಿದ್ದರು. ಇವರೆಲ್ಲರೂ ಭಾರತದ ವಿಭಜನೆಗೆ ವಿರುದ್ಧವಾಗಿದ್ದರು. ಎಲ್ಲಕ್ಕಿಂತ ಹೆಚ್ಚು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತ ವಿಭಜನೆಯ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ವಾಸ್ತವವೆಂದರೆ ಹಾಲಿ ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ನ ಮೊಹಮ್ಮದ್ ಆಲಿ ಜಿನ್ನಾ ಧಾರ್ಮಿಕ ಆಧಾರದ ಮೇಲೆ ಭಾರತ ಪಾಕಿಸ್ತಾನ ವಿಭಜನೆಯನ್ನು ಬೆಂಬಲಿಸಿದವರು. ಆದರೆ ಕಾಂಗ್ರೆಸ್ ವಿಭಜನೆಗೆ ವಿರುದ್ಧವಾಗಿತ್ತು ಎಂದು ಅಮಿತ್‌ ಶಾ ಸುಳ್ಳು ಹೇಳಿದ್ದಾರೆ. ಆ ಮೂಲಕ ಜನರಲ್ಲಿ ಕಾಂಗ್ರೆಸ್‌ ವಿರೋಧಿ ಮನೋಭಾವವನ್ನು ಬಿತ್ತುವುದು ಮತ್ತು ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ಪಡೆಯುವುದು ಅವರ ಉದ್ದೇಶವಾಗಿದೆ.

ಸತ್ಯ ಏನೆಂದರೆ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾರತ ವಿಭಜನೆಯನ್ನು ತಡೆಯಲು ಅತ್ಯುತ್ತಮ ಪ್ರಯತ್ನ ಮಾಡಿದ್ದರು..

ಈ ಸುಳ್ಳನ್ನು ಅಮಿತ್‌ ಶಾರವರು ಪಾರ್ಲಿಮೆಂಟ್‌ನಲ್ಲಿ ಹೇಳುತ್ತಿರುವಾಗಲೇ ಅವರ ಕುರಿತೇ ಇನ್ನೊಂದು ಸುಳ್ಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅದೆನೆಂದು ಓದಿಬಿಡಿ

ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿಯ ಕಾಲಿಗೆ ಬಿದ್ದ ಗೃಹ ಸಚಿವ  ಅಮಿತ್ ಶಾ..

ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಲ್ಲಿ ಭಾಗಿಯಾಗಿರುವ ನಿತ್ಯಾನಂದ ಸ್ವಾಮಿ ದೇಶಬಿಟ್ಟು ಓಡಿ ಹೋಗಿದ್ದಾರೆ. ಆದರೆ ಅವರನ್ನು ಟ್ರೋಲ್ ಮಾಡುವ ಪೋಸ್ಟ್‌ಗಳು ಮಾತ್ರ ಹೆಚ್ಚು ಹೆಚ್ಚು ಓಡಾಡುತ್ತಿವೆ. ಅದರಲ್ಲಿ ಹೆಚ್ಚು ಟ್ರೋಲ್ ಆಗಿರುವುದು ಗೃಹ ಸಚಿವ ಅಮಿತ್ ಶಾರವರು ನಿತ್ಯಾನಂದ ಸ್ವಾಮಿಯ ಕಾಲಿಗೆ ಬೀಳುತ್ತಿರುವ ಪೋಸ್ಟ್ ವೈರಲ್ ಆಗಿದೆ.

ದೇಶದ ಗೃಹಮಂತ್ರಿಗಳು ಆರೋಪಿಯನ್ನು ಜೈಲಿಗೆ ಕಳಿಸುವುದು ಬಿಟ್ಟು ಅವರ ಕಾಲಿಗೆ ಬೀಳುತ್ತಿದ್ದಾರೆ. ಈಗಾದರೆ ಭಾರತದ ಪರಿಸ್ಥಿತಿ ಉದ್ದಾರ ಎಂದು ಜನ ಟ್ರೋಲ್‌ ಮಾಡಿದ್ದಾರೆ. ನೂರಾರು ಜನ ಈ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಷೇರ್‌ ಮಾಡಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರ್‌ ಫ್ಯಾಕ್ಟ್‌ ಚೆಕ್‌ ಮಾಡಿದಾಗ ತಿಳಿದು ಬಂದ ಸತ್ಯ ಏನೆಂದರೆ ಆ ಫೋಟೊದಲ್ಲಿರುವ ವ್ಯಕ್ತಿ ಅಮಿತ್‌ ಶಾ ಅಲ್ಲ. ಅವರು ಅಮಿತ್ ಶಾರಂತೆ ಕಂಡರೂ ಸಹ ಅವರು ಮಾರಿಷಸ್‌ನ ಕಮಿಷನರ್ ಜಗದೀಶ್ವರ್‌ ಗೋಬುರ್ದನ್‌ ಆಗಿದ್ದಾರೆ. ಅವರು ನಿತ್ಯಾನಂದ ಸ್ವಾಮಿಯ ಆಶ್ರಮಕ್ಕೆ ಭೇಟಿ ನೀಡಿದ್ದಾಗ ಅವರು ಪಾದಕ್ಕೆರಗಿದ್ದರು. ಆ ಫೋಟೊವನ್ನು ತಪ್ಪಾಗಿ ಅಮಿತ್ ಶಾ ಎಂದು ಗುರುತಿಸಲಾಗಿದೆ.

ಅವರನ್ನು ಸ್ಪಷ್ಟವಾಗಿ ಗುರುತಿಸುವ ಒರಿಜಿನಲ್ ಫೋಟೊ ಇಲ್ಲಿದೆ ನೋಡಿ.

ಹಾಗಾಗಿ ಷೇರ್‌ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಬೇಕಾಗಿದೆ. ನಾವು ಯಾವುದೇ ಕಾರಣಕ್ಕೂ ಫೇಕ್‌ನ್ಯೂಸ್‌ಗಳನ್ನು ಷೇರ್ ಮಾಡಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಅಮಿತ್‌ ಶಾ ರಂತವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸುಳ್ಳನ್ನು ಹೇಳಬಾರದು. ಸುಳ್ಳು ಹೇಳದಿದ್ದವರ ವಿರುದ್ಧವೂ ಫೇಕ್‌ನ್ಯೂಸ್‌ಗಳು ಬರುತ್ತಿರುವುದು ನಿಜ. ಆದರೆ ನಮ್ಮನ್ನು ನಾವು ಸುಳ್ಳು ಹೇಳದಂತೆ, ಫೇಕ್‌ನ್ಯೂಸ್‌ ಹಂಚದಂತೆ ನೋಡಿಕೊಂಡರೆ ಈ ಸಮಸ್ಯೆಗೆ ಸ್ವಲ್ಪ ಪರಿಹಾರ ಸಿಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...