Homeಕರ್ನಾಟಕಕಳಸ| ದಲಿತ ಯುವಕನ ಆತ್ಮಹತ್ಯೆಗೆ ಪೊಲೀಸ್ ದೌರ್ಜನ್ಯವೇ ಕಾರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನಶಕ್ತಿ ಸಂಘಟನೆ...

ಕಳಸ| ದಲಿತ ಯುವಕನ ಆತ್ಮಹತ್ಯೆಗೆ ಪೊಲೀಸ್ ದೌರ್ಜನ್ಯವೇ ಕಾರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನಶಕ್ತಿ ಸಂಘಟನೆ ಆಗ್ರಹ; ಕಳಸ ಚಲೋ’ ಎಚ್ಚರಿಕೆ

- Advertisement -
- Advertisement -

ಕಳಸ: ಕಳಸ ಸಮೀಪದ ಸಂಸೆ ಗ್ರಾಮದ ದಲಿತ ಯುವಕ ನಾಗೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕುದುರೆಮುಖ ಪೊಲೀಸರ ವಿರುದ್ಧ ಜನಶಕ್ತಿ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಪೊಲೀಸರ ದೌರ್ಜನ್ಯ ಹಾಗೂ ಸ್ಥಳೀಯ ಗೂಂಡಾಗಳ ಹಲ್ಲೆಯೇ ನಾಗೇಶ್ ಸಾವಿಗೆ ನೇರ ಕಾರಣ ಎಂದು ಸಂಘಟನೆ ಗಂಭೀರ ಆರೋಪ ಮಾಡಿದೆ. ಈ ಕೂಡಲೇ ತಪ್ಪಿತಸ್ಥ ಪೊಲೀಸರು ಮತ್ತು ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸಮಿತಿ ಎಚ್ಚರಿಕೆ ನೀಡಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಸಂಘಟನೆ ತಿಳಿಸಿರುವ ಪ್ರಕಾರ, ನಾಗೇಶ್ ಮೇಲೆ ಕುದುರೆಮುಖ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಮತ್ತು ಸ್ಥಳೀಯ ಮೇಲ್ಜಾತಿ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಂತರ, ನಾಗೇಶ್ ಅವರ ಬದುಕಿಗೆ ಆಧಾರವಾಗಿದ್ದ ಆಟೋವನ್ನು ಸುಳ್ಳು ಪ್ರಕರಣ ದಾಖಲಿಸಿ ಜಪ್ತಿ ಮಾಡಲಾಗಿದೆ. ಇದರಿಂದ ತೀವ್ರವಾಗಿ ನೊಂದ ನಾಗೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಪೊಲೀಸರು ಮತ್ತು ಗೂಂಡಾಗಳು ಸೇರಿಕೊಂಡು ನಡೆಸಿದ ವ್ಯವಸ್ಥಿತ ದೌರ್ಜನ್ಯ ಎಂದು ಸಂಘಟನೆ ಖಂಡಿಸಿದೆ.

ಸಂಘಟನೆಯ ಪ್ರಮುಖ ಬೇಡಿಕೆಗಳು ಇವು:

ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಅವರನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿ, ಕೊಲೆ ಪ್ರಕರಣ ದಾಖಲಿಸಬೇಕು.

ಸುಳ್ಳು ಪ್ರಕರಣ ದಾಖಲಿಸಿ, ನಾಗೇಶ್ ಆತ್ಮಹತ್ಯೆಗೆ ಕಾರಣರಾದ ಕುದುರೆಮುಖ ಸಬ್ ಇನ್ಸ್‌ಪೆಕ್ಟರ್ ಆದರ್ಶ್ ಅವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು.

ಹಲ್ಲೆ ನಡೆಸಿದ ಸ್ಥಳೀಯ ಗೂಂಡಾಗಳಾದ ರಕ್ಷಿತ್ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು.

ಪೊಲೀಸ್ ಇಲಾಖೆಯೇ ನಾಗೇಶ್ ಕುಟುಂಬದ ಸಂಪೂರ್ಣ ಜವಾಬ್ದಾರಿ ಹೊರಬೇಕು.

ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಮತ್ತು ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು.

ಈ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಿದರೆ, ಜಿಲ್ಲೆಯ ಎಲ್ಲ ದಲಿತ ಹಾಗೂ ಪ್ರಗತಿಪರ ಸಂಘಟನೆಗಳೊಂದಿಗೆ ಸೇರಿ ‘ಕಳಸ ಚಲೋ’ ಬೃಹತ್ ಪ್ರತಿಭಟನೆಯನ್ನು ಆಯೋಜಿಸುವುದಾಗಿ ಜನಶಕ್ತಿ ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ. ಈ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಸಂಘಟನೆ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ

ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿತ್ತು.

ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕ ನಾಗೇಶನಿಗೆ ಮನಸೋ ಇಚ್ಛೆ ಬಂದಂಗೆ ಹಲ್ಲೆ ಮಾಡಲಾಗಿತ್ತು ಎಂದು ಎಲ್ಲೆಡೆ ಸುದ್ದಿ ಹರಡಿತ್ತು ಹಾಗೂ ಎಫ್​ಐಅರ್ ಕೂಡ ದಾಖಲಾಗಿತ್ತು. ಹಾಗೆಯೇ, ನಾಗೇಶ್​ ವಿರುದ್ಧ ಸುಳ್ಳು ಎಫ್​ಐಆರ್ ಪೊಲೀಸರು ದಾಖಲಿಸಿದ್ದರು ಎನ್ನಲಾಗಿದೆ. ಮೃತ ಯುವಕನ ಜೀಪ್ ಸಹ ಪೊಲೀಸರು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಗೇಶ್​ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್​ ಆಮಟೆ, ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಮಂಗಳವಾರ ಪೊಲೀಸ್ ಠಾಣೆಯಲ್ಲಿ ಎಂಟು ಸಾವಿರ ಹಣ ದಂಡ ಕಟ್ಟುವಂತೆ ನಾಗೇಶ್​ ಗೆ ತಿಳಿಸಿದರು. ಈ ಕುರಿತು ಹಣ ಸಂಗ್ರಹಿಸಲು ಎಲ್ಲರ ಬಳಿ ಕೇಳಿದಾಗ ಇಲ್ಲವೆಂದು ತಿಳಿದಾಗ, ಮಾಡದ ತಪ್ಪಿಗೆ ದಂಡ ಕಟ್ಟಬೇಕೆಂದು ಬುಧಾವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ಮಾಹಿತಿ  ನೀಡಿದ್ದರು.

ಈ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್ ಆಮಟೆ ಪೊಲೀಸ್ ಪೇದೆ ಸಿದ್ದೇಶ್​ ನನ್ನು ಅಮಾನತ್ತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್​ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಚೆನ್ನೈಯಲ್ಲಿ ನೈರ್ಮಲ್ಯ ಕಾರ್ಮಿಕರ ಪ್ರತಿಭಟನೆ: ಸ್ವಾತಂತ್ರ್ಯ ಮುನ್ನಾದಿನ 2000 ಕಾರ್ಮಿಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...