Homeಕರ್ನಾಟಕಕಳಸ| ದಲಿತ ಯುವಕನ ಆತ್ಮಹತ್ಯೆಗೆ ಪೊಲೀಸ್ ದೌರ್ಜನ್ಯವೇ ಕಾರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನಶಕ್ತಿ ಸಂಘಟನೆ...

ಕಳಸ| ದಲಿತ ಯುವಕನ ಆತ್ಮಹತ್ಯೆಗೆ ಪೊಲೀಸ್ ದೌರ್ಜನ್ಯವೇ ಕಾರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನಶಕ್ತಿ ಸಂಘಟನೆ ಆಗ್ರಹ; ಕಳಸ ಚಲೋ’ ಎಚ್ಚರಿಕೆ

- Advertisement -
- Advertisement -

ಕಳಸ: ಕಳಸ ಸಮೀಪದ ಸಂಸೆ ಗ್ರಾಮದ ದಲಿತ ಯುವಕ ನಾಗೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕುದುರೆಮುಖ ಪೊಲೀಸರ ವಿರುದ್ಧ ಜನಶಕ್ತಿ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಪೊಲೀಸರ ದೌರ್ಜನ್ಯ ಹಾಗೂ ಸ್ಥಳೀಯ ಗೂಂಡಾಗಳ ಹಲ್ಲೆಯೇ ನಾಗೇಶ್ ಸಾವಿಗೆ ನೇರ ಕಾರಣ ಎಂದು ಸಂಘಟನೆ ಗಂಭೀರ ಆರೋಪ ಮಾಡಿದೆ. ಈ ಕೂಡಲೇ ತಪ್ಪಿತಸ್ಥ ಪೊಲೀಸರು ಮತ್ತು ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸಮಿತಿ ಎಚ್ಚರಿಕೆ ನೀಡಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಸಂಘಟನೆ ತಿಳಿಸಿರುವ ಪ್ರಕಾರ, ನಾಗೇಶ್ ಮೇಲೆ ಕುದುರೆಮುಖ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಮತ್ತು ಸ್ಥಳೀಯ ಮೇಲ್ಜಾತಿ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಂತರ, ನಾಗೇಶ್ ಅವರ ಬದುಕಿಗೆ ಆಧಾರವಾಗಿದ್ದ ಆಟೋವನ್ನು ಸುಳ್ಳು ಪ್ರಕರಣ ದಾಖಲಿಸಿ ಜಪ್ತಿ ಮಾಡಲಾಗಿದೆ. ಇದರಿಂದ ತೀವ್ರವಾಗಿ ನೊಂದ ನಾಗೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಪೊಲೀಸರು ಮತ್ತು ಗೂಂಡಾಗಳು ಸೇರಿಕೊಂಡು ನಡೆಸಿದ ವ್ಯವಸ್ಥಿತ ದೌರ್ಜನ್ಯ ಎಂದು ಸಂಘಟನೆ ಖಂಡಿಸಿದೆ.

ಸಂಘಟನೆಯ ಪ್ರಮುಖ ಬೇಡಿಕೆಗಳು ಇವು:

ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಅವರನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿ, ಕೊಲೆ ಪ್ರಕರಣ ದಾಖಲಿಸಬೇಕು.

ಸುಳ್ಳು ಪ್ರಕರಣ ದಾಖಲಿಸಿ, ನಾಗೇಶ್ ಆತ್ಮಹತ್ಯೆಗೆ ಕಾರಣರಾದ ಕುದುರೆಮುಖ ಸಬ್ ಇನ್ಸ್‌ಪೆಕ್ಟರ್ ಆದರ್ಶ್ ಅವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು.

ಹಲ್ಲೆ ನಡೆಸಿದ ಸ್ಥಳೀಯ ಗೂಂಡಾಗಳಾದ ರಕ್ಷಿತ್ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು.

ಪೊಲೀಸ್ ಇಲಾಖೆಯೇ ನಾಗೇಶ್ ಕುಟುಂಬದ ಸಂಪೂರ್ಣ ಜವಾಬ್ದಾರಿ ಹೊರಬೇಕು.

ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಮತ್ತು ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು.

ಈ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಿದರೆ, ಜಿಲ್ಲೆಯ ಎಲ್ಲ ದಲಿತ ಹಾಗೂ ಪ್ರಗತಿಪರ ಸಂಘಟನೆಗಳೊಂದಿಗೆ ಸೇರಿ ‘ಕಳಸ ಚಲೋ’ ಬೃಹತ್ ಪ್ರತಿಭಟನೆಯನ್ನು ಆಯೋಜಿಸುವುದಾಗಿ ಜನಶಕ್ತಿ ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ. ಈ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಸಂಘಟನೆ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ

ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿತ್ತು.

ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕ ನಾಗೇಶನಿಗೆ ಮನಸೋ ಇಚ್ಛೆ ಬಂದಂಗೆ ಹಲ್ಲೆ ಮಾಡಲಾಗಿತ್ತು ಎಂದು ಎಲ್ಲೆಡೆ ಸುದ್ದಿ ಹರಡಿತ್ತು ಹಾಗೂ ಎಫ್​ಐಅರ್ ಕೂಡ ದಾಖಲಾಗಿತ್ತು. ಹಾಗೆಯೇ, ನಾಗೇಶ್​ ವಿರುದ್ಧ ಸುಳ್ಳು ಎಫ್​ಐಆರ್ ಪೊಲೀಸರು ದಾಖಲಿಸಿದ್ದರು ಎನ್ನಲಾಗಿದೆ. ಮೃತ ಯುವಕನ ಜೀಪ್ ಸಹ ಪೊಲೀಸರು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಗೇಶ್​ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್​ ಆಮಟೆ, ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಮಂಗಳವಾರ ಪೊಲೀಸ್ ಠಾಣೆಯಲ್ಲಿ ಎಂಟು ಸಾವಿರ ಹಣ ದಂಡ ಕಟ್ಟುವಂತೆ ನಾಗೇಶ್​ ಗೆ ತಿಳಿಸಿದರು. ಈ ಕುರಿತು ಹಣ ಸಂಗ್ರಹಿಸಲು ಎಲ್ಲರ ಬಳಿ ಕೇಳಿದಾಗ ಇಲ್ಲವೆಂದು ತಿಳಿದಾಗ, ಮಾಡದ ತಪ್ಪಿಗೆ ದಂಡ ಕಟ್ಟಬೇಕೆಂದು ಬುಧಾವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ಮಾಹಿತಿ  ನೀಡಿದ್ದರು.

ಈ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್ ಆಮಟೆ ಪೊಲೀಸ್ ಪೇದೆ ಸಿದ್ದೇಶ್​ ನನ್ನು ಅಮಾನತ್ತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್​ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಚೆನ್ನೈಯಲ್ಲಿ ನೈರ್ಮಲ್ಯ ಕಾರ್ಮಿಕರ ಪ್ರತಿಭಟನೆ: ಸ್ವಾತಂತ್ರ್ಯ ಮುನ್ನಾದಿನ 2000 ಕಾರ್ಮಿಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...