Homeಕರ್ನಾಟಕಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್‌ಎಸ್‌ಎಸ್‌ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ‍್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೋದಿ ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿಎಂ, “ಸ್ವಾತಂತ್ರ್ಯಹೋರಾಟದಲ್ಲಿ ಎಂದೂ ಭಾಗವಹಿಸದೆ ಇದ್ದ ಮತ್ತು ಇತ್ತೀಚಿನವರೆಗೆ ನಮ್ಮ ಹೆಮ್ಮೆಯ ತ್ರಿವರ್ಣ ರಾಷ್ಟ್ರಧ್ವಜವನ್ನು ತಮ್ಮ ಕಚೇರಿಯಲ್ಲಿ ಆರೋಹಣ ಮಾಡಲು ನಿರಾಕರಿಸಿದ್ದ ಆರ್‌ಎಸ್‌ಎಸ್‌ಗೆ ಅಭಿನಂದನೆ ಸಲ್ಲಿಸುವ ಮೂಲಕ ಮೋದಿಯವರು ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪವಿತ್ರವಾದ ವೇದಿಕೆಯನ್ನು ತಮ್ಮ ಸ್ಥಾನದ ಮೂಲಕ ದುರುಪಯೋಗ ಮಾಡಿಕೊಂಡಿದ್ದಾರೆ ಎಂದಿದ್ದಾರೆ.

ಸ್ವತಂತ್ರ ಭಾರತದಲ್ಲಿ ಬಿಜೆಪಿ ಸೇರಿದಂತೆ ಯಾವ ಪಕ್ಷಗಳ ಪ್ರಧಾನ ಮಂತ್ರಿಯವರೂ ಈ ರೀತಿ ಸ್ವಾತಂತ್ರ್ಯೋತ್ಸವದ ವೇದಿಕೆಯನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿಲ್ಲ. ನರೇಂದ್ರ ಮೋದಿಯವರು ದೇಶದ ಜನ ಗೌರವಿಸುವ ಈ ವೇದಿಕೆಯ ಘನತೆ-ಗೌರವಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಸಿಎಂ ಬೇಸರ ಹೊರ ಹಾಕಿದ್ದಾರೆ.

ಆರ್‌ಎಸ್‌ಎಸ್ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆಗಳೇ ಇಲ್ಲ. ಅದೇ ರೀತಿ ನಾಗಪುರದಲ್ಲಿರುವ ಆರ್‌ಎಸ್‌ಎಸ್‌ನ ಕೇಂದ್ರ ಕಚೇರಿಯಲ್ಲಿ 2001ರ ವರೆಗೆ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ದಿನಗಳಲ್ಲಿ ರಾಷ್ಟ್ರ ಧ್ವಜದ ಆರೋಹಣ ಮಾಡಿರಲೇ ಇಲ್ಲ. 2001ರಲ್ಲಿ ಧ್ವಜಾರೋಹಣ ಮಾಡಿದ್ದ ತಮ್ಮದೇ ಸಂಘಟನೆಯ ಯುವಕರ ವಿರುದ್ಧ ಆರ್‌ಎಸ್‌ಎಸ್ ದೂರು ಕೊಟ್ಟು ಜೈಲಿಗೆ ಅಟ್ಟಿತ್ತು ಎನ್ನುವುದನ್ನು ದೇಶದ ಜನ ಮರೆತಿಲ್ಲ ಎಂದಿದ್ದಾರೆ.

ಕೆಂಪುಕೋಟೆ ಭಾರತೀಯ ಜನತಾ ಪಕ್ಷದ ರಾಜಕೀಯ ವೇದಿಕೆ ಅಲ್ಲ, ಆ ಸ್ಥಳದಲ್ಲಿ ಪಕ್ಷಾತೀತವಾಗಿ ಆಚರಿಸಲಾಗುವ ಸ್ವಾತಂತ್ರ್ಯತ್ಸೋವದಲ್ಲಿ ಎಲ್ಲ ಜಾತಿ-ಧರ್ಮ, ಪಕ್ಷ-ಪಂಥಗಳ ಜನ ಭಾಗವಹಿಸುತ್ತಾರೆ. ಅಂತಹ ಪವಿತ್ರ ವೇದಿಕೆಯಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮಾತನಾಡದೆ ಆರ್‌ಎಸ್‌ಎಸ್ ಪ್ರಚಾರಕನಂತೆ ಮಾತನಾಡಿರುವುದು ದುರದೃಷ್ಟಕರ ಎಂದು ಸಿಎಂ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಹನ್ನೊಂದು ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ದಿನ ಆರ್‌ಎಸ್‌ಎಸ್ ಅನ್ನು ನೆನಪು ಮಾಡಿಕೊಳ್ಳದ ಪ್ರಧಾನಿ ನರೇಂದ್ರ ಮೋದಿಯವರು, ಈ ಬಾರಿ ಆರ್‌ಎಸ್‌ಎಸ್ ಸೇವೆಯನ್ನು ಸ್ಮರಿಸಿಕೊಂಡಿರುವುದು ಖಂಡಿತ ಅದರ ಮೇಲಿನ ಅಭಿಮಾನದಿಂದ ಅಲ್ಲ. ಇದಕ್ಕೆ ಮುಖ್ಯ ಕಾರಣ ಕುಸಿಯುತ್ತಿರುವ ಜನಪ್ರಿಯತೆಯಿಂದಾಗಿ ಅವರಲ್ಲಿ ಹುಟ್ಟಿರುವ ಅಭದ್ರತೆ. ಕಳೆದ ಚುನಾವಣೆಯಲ್ಲಿನ ಹಿನ್ನಡೆಯ ನಂತರ ಮೋದಿಯವರು ತಮ್ಮ ಮಾತೃಸಂಸ್ಥೆಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಶ್ವದ ಅತಿ ದೊಡ್ಡ ಸರ್ಕಾರೇತರ ಸೇವಾ ಸಂಸ್ಥೆ ಎಂದು ನರೇಂದ್ರ ಮೋದಿ ಅವರು ಬಣ್ಣಿಸಿರುವ ಆರ್‌ಎಸ್‌ಎಸ್, ಇಂದಿನವರೆಗೂ ಅಧಿಕೃತವಾಗಿ ನೋಂದಣಿಯಾಗದ, ಸಾರ್ವಜನಿಕ ದೇಣಿಗೆ ಸಂಗ್ರಹಿಸಿದರೂ ತೆರಿಗೆ ಪಾವತಿ ಮಾಡದ ಮತ್ತು ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಯಾಗಿದೆ. ಪಾರದರ್ಶಕತೆಯಾಗಲಿ, ಉತ್ತರದಾಯಿತ್ವವಾಗಲಿ ಇಲ್ಲದ ಆರ್‌ಎಸ್‌ಎಸ್ ರಹಸ್ಯ ಸಂಘಟನೆಯಾಗಿಯೇ ಕೆಲಸ ಮಾಡುತ್ತಿರುವುದನ್ನು ದೇಶದ ಜನತೆ ಗಮನಿಸದ್ದಾರೆ ಎಂದಿದ್ದಾರೆ.

ಕೋಮುವಾದವನ್ನೇ ಉಸಿರಾಗಿಸಿಕೊಂಡ ಆರ್‌ಎಸ್‌ಎಸ್ ಹಿಂದೂ ಧರ್ಮವನ್ನು ರಾಜಕೀಯ ಆಯುಧವಾಗಿ ಬಳಸಿಕೊಂಡು ಭಾರತೀಯರನ್ನು ಒಡೆದು ಹಾಕಿ ಭಾರತೀಯ ಜನತಾ ಪಕ್ಷವನ್ನು ರಾಜಕೀಯವಾಗಿ ಬಲಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿದೆ. ಇವರಿಗೆ ದೇಶದ ಬಗ್ಗೆಯಾಗಲಿ, ಹಿಂದೂ ಧರ್ಮದ ಬಗ್ಗೆಯಾಗಲಿ ಯಾವ ಪ್ರೀತಿ-ಅಭಿಮಾನ, ಬದ್ಧತೆಯಾಗಲಿ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ಸಿಎಂ ಕಿಡಿಕಾರಿದ್ದಾರೆ.

ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್‌ಎಸ್‌ಎಸ್‌ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಭಾರತದ ಕಲ್ಪನೆ ನಾಶಮಾಡುವ ಪ್ರಯತ್ನವನ್ನು ಕೋಮುವಾದಿ ಶಕ್ತಿಗಳು ಬಲಪಡಿಸುತ್ತಿವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...