Homeಮುಖಪುಟ'ಅಮ್ಮ' ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು...

‘ಅಮ್ಮ’ ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು ಆಯ್ಕೆ

- Advertisement -
- Advertisement -

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಎ.ಎಂ.ಎಂ.ಎ- ಅಮ್ಮ) ಅಧ್ಯಕ್ಷೆಯಾಗಿ ನಟಿ ಶ್ವೇತಾ ಮೆನನ್ ಆಯ್ಕೆಯಾಗಿದ್ದು, ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಒಟ್ಟು 159 ಮತಗಳನ್ನು ಪಡೆದು ಶ್ವೇತಾ ಮೆನನ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ನಟ ದೇವನ್ ಅವರಿಗೆ ಸೋಲಾಗಿದೆ. ದೇವನ್ 132 ಮತಗಳನ್ನು ಪಡೆದಿದ್ದಾರೆ. ನಟಿ ಹಾಗೂ ಡಬ್ಬಿಂಗ್ ಕಲಾವಿದೆ ಕುಕ್ಕು ಪರಮೇಶ್ವರನ್ ಅವರು ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಎ.ಎಂ.ಎಂ.ಎನ ಉನ್ನತ ಹುದ್ದೆಗಳಿಗೆ ಮಹಿಳೆಯರು ಆಯ್ಕೆಯಾಗಿದ್ದಾರೆ.

 

View this post on Instagram

 

A post shared by AMMA (@amma.association)

“ನಾವು ಮಹಿಳೆಯರು ಚುನಾವಣೆಯಲ್ಲಿ ಗೆದ್ದಿದ್ದೇವೆ. ನನಗೆ ತುಂಬಾ ಸಂತೋಷವಾಗಿದೆ” ಎಂದು ಶ್ವೇತಾ ಮಾಧ್ಯಮಗಳಿಗೆ ತಿಳಿಸಿದ್ದು, ಎಲ್ಲಾ ಸದಸ್ಯರು ಒಟ್ಟಾಗಿ ಸಂಘವಾಗಿ ಮುಂದುವರಿಯುತ್ತೇವೆ.
ಈ ಹಿಂದೆ ಎ.ಎಂ.ಎಂ.ಎ ತೊರೆದ ಮಹಿಳಾ ನಟರನ್ನು ಮರಳಿ ಕರೆತರಲು ಕರೆ ನೀಡುತ್ತೇವೆ. ಅವರಿಗೆ ಸ್ವಾಗತ, ನಾವೆಲ್ಲರೂ ಒಂದೇ ಕುಟುಂಬ. ಅವರಿಗೆ ಒಳ್ಳೆಯದಾಗುವುದಾದರೆ ನಾನು ಅವರನ್ನು ವೈಯಕ್ತಿಕವಾಗಿ ಭೇಟಿಯಾಗಲು ಸಿದ್ಧಳಿದ್ದೇನೆ” ಎಂದಿದ್ದಾರೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರ ಮೇಲೆ ನಡೆದ ಮತ್ತು ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಜಸ್ಟೀಸ್ ಹೇಮಾ ಸಮಿತಿ ನೀಡಿದ್ದ ವರದಿಯನ್ನು 2024 ರ ಆಗಸ್ಟ್ 19 ರಂದು ಸರ್ಕಾರ ಸಾರ್ವಜನಿಕಗೊಳಿಸಿತ್ತು. ಆ ಬಳಿಕ ಅನೇಕ ನಟರ ಮೇಲೆ ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದಿತ್ತು, ಪ್ರಕರಣಗಳು ದಾಖಲಾಗಿತ್ತು. ಈ ನಡುವೆ ನಟ ಮೋಹನ್‌ಲಾಲ್‌ ನೇತೃತ್ವದ ಎ.ಎಂ.ಎಂ.ಎ ಆಡಳಿತ ಸಮಿತಿಯಿಂದ ಸಿನಿಮಾ ದಿಗ್ಗಜರು ಕೆಳಗಿಳಿದಿದ್ದರು. ಹಾಗಾಗಿ, ಸಮಿತಿಗೆ ಚುನಾವಣೆ ಅಗತ್ಯವಾಗಿತ್ತು.

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ಕೆಲಸದ ಪರಿಸ್ಥಿತಿಗಳನ್ನು ಅಧ್ಯಯನ ಮಾಡಲು ಹೇಮಾ ಸಮಿತಿಯನ್ನು 2019ರಲ್ಲಿ ಸರ್ಕಾರ ರಚಿಸಿತ್ತು. ಈ ಸಮಿತಿಯ ವರದಿಯು ಲೈಂಗಿಕ ಕಿರುಕುಳ ಮತ್ತು ಇತರ ಹಿಂಸಾಚಾರ ಸೇರಿದಂತೆ ಪುರುಷ ಸಹೋದ್ಯೋಗಿಗಳಿಂದ ಮಹಿಳೆಯರು ಎದುರಿಸುತ್ತಿರುವ ಭಯಾನಕ ದೌರ್ಜನ್ಯಗಳನ್ನು ಬಹಿರಂಗಪಡಿಸಿತ್ತು.

ವರದಿ ಬಿಡುಗಡೆಯಾದ ನಂತರ, ಕಲಾವಿದರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಸೇರಿದಂತೆ ಹಲವಾರು ನಟರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಆರೋಪಗಳು ಕೇಳಿ ಬಂದಿತ್ತು. ಪತ್ರಿಕಾ ಹೇಳಿಕೆಯಲ್ಲಿ, ಎ.ಎಂ.ಎಂ.ಎ. ಆಡಳಿತ ಸಮಿತಿಯು ನೈತಿಕ ಹೊಣೆಗಾರಿಕೆಯನ್ನು ಉಲ್ಲೇಖಿಸಿ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿತ್ತು.

2025ರ ಆಗಸ್ಟ್ 15ರಂದು ನಡೆದ ಚುನಾವಣೆಯಲ್ಲಿ, ಕುಕ್ಕು ಪರಮೇಶ್ವರನ್ 172 ಮತಗಳನ್ನು ಪಡೆದಿದ್ದು, ಅವರ ವಿರುದ್ಧ ಸ್ಪರ್ಧಿಸಿದ್ದ ರವೀಂದ್ರನ್ 115 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಸಂಘಕ್ಕೆ ಜಯನ್ ಆರ್ ಮತ್ತು ಲಕ್ಷ್ಮಿ ಪ್ರಿಯಾ ಅವರು ಉಪಾಧ್ಯಕ್ಷರಾಗಿ, ಹನ್ಸಿಬಾ ಹಸನ್ ಜಂಟಿ ಕಾರ್ಯದರ್ಶಿಯಾಗಿ ಮತ್ತು ಉನ್ನಿ ಶಿವಪಾಲ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯಲ್ಲಿ ಮಹಿಳೆಯರಿಗೆ ಮೀಸಲಾದ ಹುದ್ದೆಗಳಿಗೆ ಸರಯು ಮೋಹನ್, ಅಂಜಲಿ ನಾಯರ್, ಆಶಾ ಅರವಿಂದ್ ಮತ್ತು ನೀನಾ ಕುರುಪ್ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸಾಮಾನ್ಯ ಸದಸ್ಯ ಹುದ್ದೆಗಳಿಗೆ, ಸಂತೋಷ್ ಕೀಜತ್ತೂರ್, ವಿನು ಮೋಹನ್, ಕೈಲಾಶ್, ಟಿನಿ ಟಾಮ್, ಜಾಯ್ ಮ್ಯಾಥ್ಯೂ, ರೋನಿ ಡೇವಿಡ್ ರಾಜ್, ಮತ್ತು ಸಿಜೋಯ್ ವರ್ಗೀಸ್ ಆಯ್ಕೆಗೊಂಡಿದ್ದಾರೆ.

ಧರ್ಮಸ್ಥಳ ಶವಶೋಧ| ಮಧ್ಯಂತರ ವರದಿ ಇಲ್ಲ; ನ್ಯಾಯಾಲಯಕ್ಕೆ ಪೂರ್ಣ ವರದಿ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....