Homeಮುಖಪುಟ'ಅಮ್ಮ' ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು...

‘ಅಮ್ಮ’ ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು ಆಯ್ಕೆ

- Advertisement -
- Advertisement -

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಎ.ಎಂ.ಎಂ.ಎ- ಅಮ್ಮ) ಅಧ್ಯಕ್ಷೆಯಾಗಿ ನಟಿ ಶ್ವೇತಾ ಮೆನನ್ ಆಯ್ಕೆಯಾಗಿದ್ದು, ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಒಟ್ಟು 159 ಮತಗಳನ್ನು ಪಡೆದು ಶ್ವೇತಾ ಮೆನನ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ನಟ ದೇವನ್ ಅವರಿಗೆ ಸೋಲಾಗಿದೆ. ದೇವನ್ 132 ಮತಗಳನ್ನು ಪಡೆದಿದ್ದಾರೆ. ನಟಿ ಹಾಗೂ ಡಬ್ಬಿಂಗ್ ಕಲಾವಿದೆ ಕುಕ್ಕು ಪರಮೇಶ್ವರನ್ ಅವರು ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಎ.ಎಂ.ಎಂ.ಎನ ಉನ್ನತ ಹುದ್ದೆಗಳಿಗೆ ಮಹಿಳೆಯರು ಆಯ್ಕೆಯಾಗಿದ್ದಾರೆ.

 

View this post on Instagram

 

A post shared by AMMA (@amma.association)

“ನಾವು ಮಹಿಳೆಯರು ಚುನಾವಣೆಯಲ್ಲಿ ಗೆದ್ದಿದ್ದೇವೆ. ನನಗೆ ತುಂಬಾ ಸಂತೋಷವಾಗಿದೆ” ಎಂದು ಶ್ವೇತಾ ಮಾಧ್ಯಮಗಳಿಗೆ ತಿಳಿಸಿದ್ದು, ಎಲ್ಲಾ ಸದಸ್ಯರು ಒಟ್ಟಾಗಿ ಸಂಘವಾಗಿ ಮುಂದುವರಿಯುತ್ತೇವೆ.
ಈ ಹಿಂದೆ ಎ.ಎಂ.ಎಂ.ಎ ತೊರೆದ ಮಹಿಳಾ ನಟರನ್ನು ಮರಳಿ ಕರೆತರಲು ಕರೆ ನೀಡುತ್ತೇವೆ. ಅವರಿಗೆ ಸ್ವಾಗತ, ನಾವೆಲ್ಲರೂ ಒಂದೇ ಕುಟುಂಬ. ಅವರಿಗೆ ಒಳ್ಳೆಯದಾಗುವುದಾದರೆ ನಾನು ಅವರನ್ನು ವೈಯಕ್ತಿಕವಾಗಿ ಭೇಟಿಯಾಗಲು ಸಿದ್ಧಳಿದ್ದೇನೆ” ಎಂದಿದ್ದಾರೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರ ಮೇಲೆ ನಡೆದ ಮತ್ತು ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಜಸ್ಟೀಸ್ ಹೇಮಾ ಸಮಿತಿ ನೀಡಿದ್ದ ವರದಿಯನ್ನು 2024 ರ ಆಗಸ್ಟ್ 19 ರಂದು ಸರ್ಕಾರ ಸಾರ್ವಜನಿಕಗೊಳಿಸಿತ್ತು. ಆ ಬಳಿಕ ಅನೇಕ ನಟರ ಮೇಲೆ ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದಿತ್ತು, ಪ್ರಕರಣಗಳು ದಾಖಲಾಗಿತ್ತು. ಈ ನಡುವೆ ನಟ ಮೋಹನ್‌ಲಾಲ್‌ ನೇತೃತ್ವದ ಎ.ಎಂ.ಎಂ.ಎ ಆಡಳಿತ ಸಮಿತಿಯಿಂದ ಸಿನಿಮಾ ದಿಗ್ಗಜರು ಕೆಳಗಿಳಿದಿದ್ದರು. ಹಾಗಾಗಿ, ಸಮಿತಿಗೆ ಚುನಾವಣೆ ಅಗತ್ಯವಾಗಿತ್ತು.

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ಕೆಲಸದ ಪರಿಸ್ಥಿತಿಗಳನ್ನು ಅಧ್ಯಯನ ಮಾಡಲು ಹೇಮಾ ಸಮಿತಿಯನ್ನು 2019ರಲ್ಲಿ ಸರ್ಕಾರ ರಚಿಸಿತ್ತು. ಈ ಸಮಿತಿಯ ವರದಿಯು ಲೈಂಗಿಕ ಕಿರುಕುಳ ಮತ್ತು ಇತರ ಹಿಂಸಾಚಾರ ಸೇರಿದಂತೆ ಪುರುಷ ಸಹೋದ್ಯೋಗಿಗಳಿಂದ ಮಹಿಳೆಯರು ಎದುರಿಸುತ್ತಿರುವ ಭಯಾನಕ ದೌರ್ಜನ್ಯಗಳನ್ನು ಬಹಿರಂಗಪಡಿಸಿತ್ತು.

ವರದಿ ಬಿಡುಗಡೆಯಾದ ನಂತರ, ಕಲಾವಿದರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಸೇರಿದಂತೆ ಹಲವಾರು ನಟರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಆರೋಪಗಳು ಕೇಳಿ ಬಂದಿತ್ತು. ಪತ್ರಿಕಾ ಹೇಳಿಕೆಯಲ್ಲಿ, ಎ.ಎಂ.ಎಂ.ಎ. ಆಡಳಿತ ಸಮಿತಿಯು ನೈತಿಕ ಹೊಣೆಗಾರಿಕೆಯನ್ನು ಉಲ್ಲೇಖಿಸಿ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿತ್ತು.

2025ರ ಆಗಸ್ಟ್ 15ರಂದು ನಡೆದ ಚುನಾವಣೆಯಲ್ಲಿ, ಕುಕ್ಕು ಪರಮೇಶ್ವರನ್ 172 ಮತಗಳನ್ನು ಪಡೆದಿದ್ದು, ಅವರ ವಿರುದ್ಧ ಸ್ಪರ್ಧಿಸಿದ್ದ ರವೀಂದ್ರನ್ 115 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಸಂಘಕ್ಕೆ ಜಯನ್ ಆರ್ ಮತ್ತು ಲಕ್ಷ್ಮಿ ಪ್ರಿಯಾ ಅವರು ಉಪಾಧ್ಯಕ್ಷರಾಗಿ, ಹನ್ಸಿಬಾ ಹಸನ್ ಜಂಟಿ ಕಾರ್ಯದರ್ಶಿಯಾಗಿ ಮತ್ತು ಉನ್ನಿ ಶಿವಪಾಲ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯಲ್ಲಿ ಮಹಿಳೆಯರಿಗೆ ಮೀಸಲಾದ ಹುದ್ದೆಗಳಿಗೆ ಸರಯು ಮೋಹನ್, ಅಂಜಲಿ ನಾಯರ್, ಆಶಾ ಅರವಿಂದ್ ಮತ್ತು ನೀನಾ ಕುರುಪ್ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸಾಮಾನ್ಯ ಸದಸ್ಯ ಹುದ್ದೆಗಳಿಗೆ, ಸಂತೋಷ್ ಕೀಜತ್ತೂರ್, ವಿನು ಮೋಹನ್, ಕೈಲಾಶ್, ಟಿನಿ ಟಾಮ್, ಜಾಯ್ ಮ್ಯಾಥ್ಯೂ, ರೋನಿ ಡೇವಿಡ್ ರಾಜ್, ಮತ್ತು ಸಿಜೋಯ್ ವರ್ಗೀಸ್ ಆಯ್ಕೆಗೊಂಡಿದ್ದಾರೆ.

ಧರ್ಮಸ್ಥಳ ಶವಶೋಧ| ಮಧ್ಯಂತರ ವರದಿ ಇಲ್ಲ; ನ್ಯಾಯಾಲಯಕ್ಕೆ ಪೂರ್ಣ ವರದಿ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...