Homeಮುಖಪುಟ'ಅಮ್ಮ' ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು...

‘ಅಮ್ಮ’ ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು ಆಯ್ಕೆ

- Advertisement -
- Advertisement -

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಎ.ಎಂ.ಎಂ.ಎ- ಅಮ್ಮ) ಅಧ್ಯಕ್ಷೆಯಾಗಿ ನಟಿ ಶ್ವೇತಾ ಮೆನನ್ ಆಯ್ಕೆಯಾಗಿದ್ದು, ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಒಟ್ಟು 159 ಮತಗಳನ್ನು ಪಡೆದು ಶ್ವೇತಾ ಮೆನನ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ನಟ ದೇವನ್ ಅವರಿಗೆ ಸೋಲಾಗಿದೆ. ದೇವನ್ 132 ಮತಗಳನ್ನು ಪಡೆದಿದ್ದಾರೆ. ನಟಿ ಹಾಗೂ ಡಬ್ಬಿಂಗ್ ಕಲಾವಿದೆ ಕುಕ್ಕು ಪರಮೇಶ್ವರನ್ ಅವರು ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಎ.ಎಂ.ಎಂ.ಎನ ಉನ್ನತ ಹುದ್ದೆಗಳಿಗೆ ಮಹಿಳೆಯರು ಆಯ್ಕೆಯಾಗಿದ್ದಾರೆ.

 

View this post on Instagram

 

A post shared by AMMA (@amma.association)

“ನಾವು ಮಹಿಳೆಯರು ಚುನಾವಣೆಯಲ್ಲಿ ಗೆದ್ದಿದ್ದೇವೆ. ನನಗೆ ತುಂಬಾ ಸಂತೋಷವಾಗಿದೆ” ಎಂದು ಶ್ವೇತಾ ಮಾಧ್ಯಮಗಳಿಗೆ ತಿಳಿಸಿದ್ದು, ಎಲ್ಲಾ ಸದಸ್ಯರು ಒಟ್ಟಾಗಿ ಸಂಘವಾಗಿ ಮುಂದುವರಿಯುತ್ತೇವೆ.
ಈ ಹಿಂದೆ ಎ.ಎಂ.ಎಂ.ಎ ತೊರೆದ ಮಹಿಳಾ ನಟರನ್ನು ಮರಳಿ ಕರೆತರಲು ಕರೆ ನೀಡುತ್ತೇವೆ. ಅವರಿಗೆ ಸ್ವಾಗತ, ನಾವೆಲ್ಲರೂ ಒಂದೇ ಕುಟುಂಬ. ಅವರಿಗೆ ಒಳ್ಳೆಯದಾಗುವುದಾದರೆ ನಾನು ಅವರನ್ನು ವೈಯಕ್ತಿಕವಾಗಿ ಭೇಟಿಯಾಗಲು ಸಿದ್ಧಳಿದ್ದೇನೆ” ಎಂದಿದ್ದಾರೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರ ಮೇಲೆ ನಡೆದ ಮತ್ತು ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಜಸ್ಟೀಸ್ ಹೇಮಾ ಸಮಿತಿ ನೀಡಿದ್ದ ವರದಿಯನ್ನು 2024 ರ ಆಗಸ್ಟ್ 19 ರಂದು ಸರ್ಕಾರ ಸಾರ್ವಜನಿಕಗೊಳಿಸಿತ್ತು. ಆ ಬಳಿಕ ಅನೇಕ ನಟರ ಮೇಲೆ ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದಿತ್ತು, ಪ್ರಕರಣಗಳು ದಾಖಲಾಗಿತ್ತು. ಈ ನಡುವೆ ನಟ ಮೋಹನ್‌ಲಾಲ್‌ ನೇತೃತ್ವದ ಎ.ಎಂ.ಎಂ.ಎ ಆಡಳಿತ ಸಮಿತಿಯಿಂದ ಸಿನಿಮಾ ದಿಗ್ಗಜರು ಕೆಳಗಿಳಿದಿದ್ದರು. ಹಾಗಾಗಿ, ಸಮಿತಿಗೆ ಚುನಾವಣೆ ಅಗತ್ಯವಾಗಿತ್ತು.

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ಕೆಲಸದ ಪರಿಸ್ಥಿತಿಗಳನ್ನು ಅಧ್ಯಯನ ಮಾಡಲು ಹೇಮಾ ಸಮಿತಿಯನ್ನು 2019ರಲ್ಲಿ ಸರ್ಕಾರ ರಚಿಸಿತ್ತು. ಈ ಸಮಿತಿಯ ವರದಿಯು ಲೈಂಗಿಕ ಕಿರುಕುಳ ಮತ್ತು ಇತರ ಹಿಂಸಾಚಾರ ಸೇರಿದಂತೆ ಪುರುಷ ಸಹೋದ್ಯೋಗಿಗಳಿಂದ ಮಹಿಳೆಯರು ಎದುರಿಸುತ್ತಿರುವ ಭಯಾನಕ ದೌರ್ಜನ್ಯಗಳನ್ನು ಬಹಿರಂಗಪಡಿಸಿತ್ತು.

ವರದಿ ಬಿಡುಗಡೆಯಾದ ನಂತರ, ಕಲಾವಿದರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಸೇರಿದಂತೆ ಹಲವಾರು ನಟರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಆರೋಪಗಳು ಕೇಳಿ ಬಂದಿತ್ತು. ಪತ್ರಿಕಾ ಹೇಳಿಕೆಯಲ್ಲಿ, ಎ.ಎಂ.ಎಂ.ಎ. ಆಡಳಿತ ಸಮಿತಿಯು ನೈತಿಕ ಹೊಣೆಗಾರಿಕೆಯನ್ನು ಉಲ್ಲೇಖಿಸಿ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿತ್ತು.

2025ರ ಆಗಸ್ಟ್ 15ರಂದು ನಡೆದ ಚುನಾವಣೆಯಲ್ಲಿ, ಕುಕ್ಕು ಪರಮೇಶ್ವರನ್ 172 ಮತಗಳನ್ನು ಪಡೆದಿದ್ದು, ಅವರ ವಿರುದ್ಧ ಸ್ಪರ್ಧಿಸಿದ್ದ ರವೀಂದ್ರನ್ 115 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಸಂಘಕ್ಕೆ ಜಯನ್ ಆರ್ ಮತ್ತು ಲಕ್ಷ್ಮಿ ಪ್ರಿಯಾ ಅವರು ಉಪಾಧ್ಯಕ್ಷರಾಗಿ, ಹನ್ಸಿಬಾ ಹಸನ್ ಜಂಟಿ ಕಾರ್ಯದರ್ಶಿಯಾಗಿ ಮತ್ತು ಉನ್ನಿ ಶಿವಪಾಲ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯಲ್ಲಿ ಮಹಿಳೆಯರಿಗೆ ಮೀಸಲಾದ ಹುದ್ದೆಗಳಿಗೆ ಸರಯು ಮೋಹನ್, ಅಂಜಲಿ ನಾಯರ್, ಆಶಾ ಅರವಿಂದ್ ಮತ್ತು ನೀನಾ ಕುರುಪ್ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸಾಮಾನ್ಯ ಸದಸ್ಯ ಹುದ್ದೆಗಳಿಗೆ, ಸಂತೋಷ್ ಕೀಜತ್ತೂರ್, ವಿನು ಮೋಹನ್, ಕೈಲಾಶ್, ಟಿನಿ ಟಾಮ್, ಜಾಯ್ ಮ್ಯಾಥ್ಯೂ, ರೋನಿ ಡೇವಿಡ್ ರಾಜ್, ಮತ್ತು ಸಿಜೋಯ್ ವರ್ಗೀಸ್ ಆಯ್ಕೆಗೊಂಡಿದ್ದಾರೆ.

ಧರ್ಮಸ್ಥಳ ಶವಶೋಧ| ಮಧ್ಯಂತರ ವರದಿ ಇಲ್ಲ; ನ್ಯಾಯಾಲಯಕ್ಕೆ ಪೂರ್ಣ ವರದಿ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....