Homeಕರ್ನಾಟಕಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

ಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈ ಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ.

ಈ ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರ್ಕಾರ ಮಾತ್ರವಲ್ಲ, ಸ್ವತಃ ಯಡ್ಯೂರಪ್ಪನವರೇ ಬಿಜೆಪಿಯೊಳಗೆ ಇನ್ನಷ್ಟು ಕಾಲ ಸೇಫ್ ಆಗಿದ್ದಾರೆ. 15 ಕ್ಷೇತ್ರಗಳ ಪೈಕಿ 12ರಲ್ಲಿ ಗೆದ್ದಿರುವ ಬಿಜೆಪಿಯ ಸಂಖ್ಯಾಬಲ ಈಗ 117ಕ್ಕೆ ಏರಿದೆ. ಇನ್ನೂ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿಯಿದ್ದು, ಅಲ್ಲೂ ಗೆದ್ದರೆ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಅಧಿಕಾರ ನಡೆಸಲು ಯಾವ ಬಾಹ್ಯ ಆತಂಕವೂ ಇರುವುದಿಲ್ಲ. ಆದರೆ ಆ ಮೂರೂವರೆ ವರ್ಷವೂ ಯಡ್ಯೂರಪ್ಪನವರೇ ಸಿಎಂ ಹುದ್ದೆಯಲ್ಲಿರುತ್ತಾರಾ? ಎಂಬ ಪ್ರಶ್ನೆ ಚುನಾವಣೆಗೂ ಮುನ್ನ ಸಾಕಷ್ಟು ಹರಿದಾಡಿತ್ತು. ಟಿಕೆಟ್ ಕೈತಪ್ಪಿದವರ ಲೋಕಲ್ ಭಿನ್ನಮತ ಹಾಗೂ ಸಿಎಂ ಗಾದಿ ಮೇಲೆ ಕಣ್ಣಿಟ್ಟಿದ್ದ ಬಿ.ಎಲ್.ಸಂತೋಷ್ ಬಣದ ಹೈಕಮಾಂಡ್ ಅಸಹಕಾರದ ನಡುವೆಯೂ ಎಲ್ಲರ ನಿರೀಕ್ಷೆ ಸುಳ್ಳು ಮಾಡಿ 12 ಅನರ್ಹ ಶಾಸಕರನ್ನು ಅರ್ಹ ಶಾಸಕರನ್ನಾಗಿ ಪರಿವರ್ತಿಸಲು ಒನ್‍ಮ್ಯಾನ್ ಆರ್ಮಿಯಂತೆ ಯಡ್ಯೂರಪ್ಪ ನಡೆಸಿದ ಸೆಣೆಸಾಟವಿದೆಯಲ್ಲ, ಅದು ಸದ್ಯದ ಮಟ್ಟಿಗೆ ಪಕ್ಷದೊಳಗೆ ಅವರ ಕೈ ಬಲಪಡಿಸಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ. ಆದರೆ ಉಪಚುನಾವಣೆಗೆ ಮೊದಲು ಈ ಪರಿಸ್ಥಿತಿ ಇರಲಿಲ್ಲ. ಆಪರೇಷನ್ ಕಮಲದ ಕಸರತ್ತುಗಳು ಶುರುವಾದಾಗಿನಿಂದ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು, ಸಂಪುಟ ವಿಸ್ತರಣೆ ಮಾಡಲು ಹೆಜ್ಜೆಹೆಜ್ಜೆಗೂ ತಕರಾರು ತೆಗೆಯುತ್ತಲೇ ಬಂದಿದ್ದ ಹೈಕಮಾಂಡ್ ಕೊನೆಗೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿ ಯಡ್ಯೂರಪ್ಪನವರನ್ನು ಕಟ್ಟಿಹಾಕುವ ಪ್ರಯತ್ನವನ್ನೂ ಮಾಡಿತ್ತು. ಸಾಲದ್ದಕ್ಕೆ ಪ್ರವಾಹಕ್ಕೆ ಪರಿಹಾರ ನೀಡುವಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಯಡ್ಯೂರಪ್ಪನವರಿಗೆ ಸಾಕಷ್ಟು ಮುಜುಗರ ಉಂಟಾಗುವಂತೆ ನೋಡಿಕೊಂಡಿತ್ತಲ್ಲದೆ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಶಾಕ್ ಕೊಟ್ಟಿತ್ತು. ಇದೆಲ್ಲದರ ಹಿಂದೆ ಕರ್ನಾಟಕದ ಸಿಎಂ ಆಗಬೇಕೆಂಬ ಮಹಾಗನಸು ಹೊತ್ತು ಕೂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ರ ಹಕೀಕತ್ತುಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು.

ಕೊನೆಗೆ ಉಪಚುನಾವಣೆಯ ಅಷ್ಟೂ ಹೊಣೆಯನ್ನು ಯಡ್ಯೂರಪ್ಪನವರ ಹೆಗಲಿಗೇರಿಸಿದ್ದ ದಿಲ್ಲಿ ನಾಯಕರು, ನಿಮ್ಮ ಸರ್ಕಾರ ಉಳಿಯಬೇಕೆಂದಿದ್ದರೆ ಬೇಕಾದಷ್ಟು ಸಂಖ್ಯೆಯ ಎಂಎಲ್‍ಎಗಳನ್ನು ನೀವೇ ಗೆಲ್ಲಿಸಿಕೊಳ್ಳಿ ಎಂದು ಕೈತೊಳೆದುಕೊಂಡಿದ್ದರು. ಇತ್ತ ಅನರ್ಹರ ವಿರುದ್ಧ ಪಕ್ಷದೊಳಗೇ ಬಂಡಾಯ ಭುಗಿಲೇಳುವಂತ ವಾತಾವರಣವನ್ನೂ ಸೃಷ್ಟಿ ಮಾಡಲಾಗಿತ್ತು. ಹುಬ್ಬಳ್ಳಿಯ ಕಾರ್ಯಕರ್ತರ ಸಮಾವೇಶದಲ್ಲಿ ಯಡ್ಯೂರಪ್ಪನವರು ಮಾಡಿದ್ದ ಭಾಷಣದ ವೀಡಿಯೊ ತುಣುಕೇ ಇದಕ್ಕೆ ಸಾಕ್ಷಿ. ಮತ್ತೊಂದು ಕಡೆ, ಹಣದಾಸೆಗೆ ಶಾಸಕ ಸ್ಥಾನ ಮಾರಿಕೊಂಡವರು ಎಂಬ ನೈತಿಕ ಮುಜುಗರಕ್ಕೆ ಈಡಾಗಿದ್ದ ಅನರ್ಹರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಶುರುವಾಗಿತ್ತು. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನೂ ಹಿಮ್ಮೆಟ್ಟಿಸಿ ಏಕಾಂಗಿಯಾಗಿ ತಮ್ಮ ಸರ್ಕಾರವನ್ನು ಸೇಫ್ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಅಷ್ಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವಲ್ಲಿ ಯಡ್ಯೂರಪ್ಪನವರ `ಲಿಂಗಾಯತ-ವೀರಶೈವ’ ಸ್ಟೇಟ್‍ಮೆಂಟ್ ಸಾಕಷ್ಟು ಕೆಲಸ ಮಾಡಿದೆ. ಲಿಂಗಾಯತರ ಒಂದೂ ಮತ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಬಹಿರಂಗವಾಗಿಯೇ ಅವರು ಹೇಳಿಕೆ ಕೊಟ್ಟ ನಂತರ ಸೋಲಿನ ಭೀತಿಯಲ್ಲಿದ್ದ ರಾಣೆಬೆನ್ನೂರು, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳು ಸಾರಾಸಗಟಾಗಿ ಬಿಜೆಪಿಗೆ ಒಲಿದಿವೆ. ಆ ಮೂಲಕ ಈಗಲೂ ಲಿಂಗಾಯತ ಓಟ್ ಬ್ಯಾಂಕ್‍ಗೆ ನಾನೇ ಅಧಿಪತಿ ಅನ್ನೋದನ್ನು ಅವರು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಹಾರಾಷ್ಟ್ರವನ್ನು ತನ್ನ ತೆಕ್ಕೆಯಿಂದ ಕಳೆದುಕೊಂಡ ನಂತರ ದೇಶದಲ್ಲಿ ಬಿಜೆಪಿ ಆಳ್ವಿಕೆಯ ಪ್ರಾಂತ್ಯಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ರಾಜ್ಯಗಳಲ್ಲಿ ಒಂದಾದ, ಅದರಲ್ಲೂ ದಕ್ಷಿಣ ಭಾರತದ ಬಿಜೆಪಿ ಆಳ್ವಿಕೆಯ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಕಿಂಚಿತ್ತೂ ರಿಸ್ಕ್ ತೆಗೆದುಕೊಳ್ಳಲು ಹೈಕಮಾಂಡ್ ಮುಂದಾಗದು. ಸಂಪುಟ ವಿಸ್ತರಣೆಯಲ್ಲಿ ಯಡ್ಯೂರಪ್ಪನವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಗುವುದು ಮಾತ್ರವಲ್ಲ, ಬಿ.ಎಲ್.ಸಂತೋಷ್ ಆಸೆಗೂ ತಣ್ಣೀರು ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...