Homeಕರ್ನಾಟಕಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

ಯಡ್ಯೂರಪ್ಪ ಮತ್ತೆ ಬಲಿಷ್ಠ ಸಂತೋಷ್ ಸಿಎಂ ಕನಸಿಗೆ ತಣ್ಣೀರೆರಚಿದ ಫಲಿತಾಂಶ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈ ಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ.

ಈ ಉಪಚುನಾವಣೆಯ ಫಲಿತಾಂಶದಿಂದ ಬಿಜೆಪಿ ಸರ್ಕಾರ ಮಾತ್ರವಲ್ಲ, ಸ್ವತಃ ಯಡ್ಯೂರಪ್ಪನವರೇ ಬಿಜೆಪಿಯೊಳಗೆ ಇನ್ನಷ್ಟು ಕಾಲ ಸೇಫ್ ಆಗಿದ್ದಾರೆ. 15 ಕ್ಷೇತ್ರಗಳ ಪೈಕಿ 12ರಲ್ಲಿ ಗೆದ್ದಿರುವ ಬಿಜೆಪಿಯ ಸಂಖ್ಯಾಬಲ ಈಗ 117ಕ್ಕೆ ಏರಿದೆ. ಇನ್ನೂ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿಯಿದ್ದು, ಅಲ್ಲೂ ಗೆದ್ದರೆ ಬಿಜೆಪಿ ಸರ್ಕಾರ ಮೂರೂವರೆ ವರ್ಷ ಅಧಿಕಾರ ನಡೆಸಲು ಯಾವ ಬಾಹ್ಯ ಆತಂಕವೂ ಇರುವುದಿಲ್ಲ. ಆದರೆ ಆ ಮೂರೂವರೆ ವರ್ಷವೂ ಯಡ್ಯೂರಪ್ಪನವರೇ ಸಿಎಂ ಹುದ್ದೆಯಲ್ಲಿರುತ್ತಾರಾ? ಎಂಬ ಪ್ರಶ್ನೆ ಚುನಾವಣೆಗೂ ಮುನ್ನ ಸಾಕಷ್ಟು ಹರಿದಾಡಿತ್ತು. ಟಿಕೆಟ್ ಕೈತಪ್ಪಿದವರ ಲೋಕಲ್ ಭಿನ್ನಮತ ಹಾಗೂ ಸಿಎಂ ಗಾದಿ ಮೇಲೆ ಕಣ್ಣಿಟ್ಟಿದ್ದ ಬಿ.ಎಲ್.ಸಂತೋಷ್ ಬಣದ ಹೈಕಮಾಂಡ್ ಅಸಹಕಾರದ ನಡುವೆಯೂ ಎಲ್ಲರ ನಿರೀಕ್ಷೆ ಸುಳ್ಳು ಮಾಡಿ 12 ಅನರ್ಹ ಶಾಸಕರನ್ನು ಅರ್ಹ ಶಾಸಕರನ್ನಾಗಿ ಪರಿವರ್ತಿಸಲು ಒನ್‍ಮ್ಯಾನ್ ಆರ್ಮಿಯಂತೆ ಯಡ್ಯೂರಪ್ಪ ನಡೆಸಿದ ಸೆಣೆಸಾಟವಿದೆಯಲ್ಲ, ಅದು ಸದ್ಯದ ಮಟ್ಟಿಗೆ ಪಕ್ಷದೊಳಗೆ ಅವರ ಕೈ ಬಲಪಡಿಸಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹೆಣಗಾಡಿ ಕೈಸುಟ್ಟುಕೊಂಡಿರುವ ಕೇಂದ್ರ ಬಿಜೆಪಿ ನಾಯಕರು ಪ್ರಾದೇಶಿಕ ನಾಯಕತ್ವಗಳಲ್ಲಿ ಅಷ್ಟಾಗಿ ಹಸ್ತಕ್ಷೇಪ ಮಾಡುವ ಸ್ಥಿತಿಯಲ್ಲಿರದ ಸಮಯದಲ್ಲೆ ಯಡ್ಯೂರಪ್ಪನವರು ಬಂಪರ್ ಫಸಲು ತೆಗೆದು ತೋರಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಕೂಡಾ ತೆಪ್ಪಗಾಗಬೇಕಾಗಿದೆ. ಆದರೆ ಉಪಚುನಾವಣೆಗೆ ಮೊದಲು ಈ ಪರಿಸ್ಥಿತಿ ಇರಲಿಲ್ಲ. ಆಪರೇಷನ್ ಕಮಲದ ಕಸರತ್ತುಗಳು ಶುರುವಾದಾಗಿನಿಂದ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು, ಸಂಪುಟ ವಿಸ್ತರಣೆ ಮಾಡಲು ಹೆಜ್ಜೆಹೆಜ್ಜೆಗೂ ತಕರಾರು ತೆಗೆಯುತ್ತಲೇ ಬಂದಿದ್ದ ಹೈಕಮಾಂಡ್ ಕೊನೆಗೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿ ಯಡ್ಯೂರಪ್ಪನವರನ್ನು ಕಟ್ಟಿಹಾಕುವ ಪ್ರಯತ್ನವನ್ನೂ ಮಾಡಿತ್ತು. ಸಾಲದ್ದಕ್ಕೆ ಪ್ರವಾಹಕ್ಕೆ ಪರಿಹಾರ ನೀಡುವಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಯಡ್ಯೂರಪ್ಪನವರಿಗೆ ಸಾಕಷ್ಟು ಮುಜುಗರ ಉಂಟಾಗುವಂತೆ ನೋಡಿಕೊಂಡಿತ್ತಲ್ಲದೆ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲೂ ಶಾಕ್ ಕೊಟ್ಟಿತ್ತು. ಇದೆಲ್ಲದರ ಹಿಂದೆ ಕರ್ನಾಟಕದ ಸಿಎಂ ಆಗಬೇಕೆಂಬ ಮಹಾಗನಸು ಹೊತ್ತು ಕೂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ರ ಹಕೀಕತ್ತುಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು.

ಕೊನೆಗೆ ಉಪಚುನಾವಣೆಯ ಅಷ್ಟೂ ಹೊಣೆಯನ್ನು ಯಡ್ಯೂರಪ್ಪನವರ ಹೆಗಲಿಗೇರಿಸಿದ್ದ ದಿಲ್ಲಿ ನಾಯಕರು, ನಿಮ್ಮ ಸರ್ಕಾರ ಉಳಿಯಬೇಕೆಂದಿದ್ದರೆ ಬೇಕಾದಷ್ಟು ಸಂಖ್ಯೆಯ ಎಂಎಲ್‍ಎಗಳನ್ನು ನೀವೇ ಗೆಲ್ಲಿಸಿಕೊಳ್ಳಿ ಎಂದು ಕೈತೊಳೆದುಕೊಂಡಿದ್ದರು. ಇತ್ತ ಅನರ್ಹರ ವಿರುದ್ಧ ಪಕ್ಷದೊಳಗೇ ಬಂಡಾಯ ಭುಗಿಲೇಳುವಂತ ವಾತಾವರಣವನ್ನೂ ಸೃಷ್ಟಿ ಮಾಡಲಾಗಿತ್ತು. ಹುಬ್ಬಳ್ಳಿಯ ಕಾರ್ಯಕರ್ತರ ಸಮಾವೇಶದಲ್ಲಿ ಯಡ್ಯೂರಪ್ಪನವರು ಮಾಡಿದ್ದ ಭಾಷಣದ ವೀಡಿಯೊ ತುಣುಕೇ ಇದಕ್ಕೆ ಸಾಕ್ಷಿ. ಮತ್ತೊಂದು ಕಡೆ, ಹಣದಾಸೆಗೆ ಶಾಸಕ ಸ್ಥಾನ ಮಾರಿಕೊಂಡವರು ಎಂಬ ನೈತಿಕ ಮುಜುಗರಕ್ಕೆ ಈಡಾಗಿದ್ದ ಅನರ್ಹರ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಶುರುವಾಗಿತ್ತು. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನೂ ಹಿಮ್ಮೆಟ್ಟಿಸಿ ಏಕಾಂಗಿಯಾಗಿ ತಮ್ಮ ಸರ್ಕಾರವನ್ನು ಸೇಫ್ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಅಷ್ಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವಲ್ಲಿ ಯಡ್ಯೂರಪ್ಪನವರ `ಲಿಂಗಾಯತ-ವೀರಶೈವ’ ಸ್ಟೇಟ್‍ಮೆಂಟ್ ಸಾಕಷ್ಟು ಕೆಲಸ ಮಾಡಿದೆ. ಲಿಂಗಾಯತರ ಒಂದೂ ಮತ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಬಾರದು ಎಂದು ಬಹಿರಂಗವಾಗಿಯೇ ಅವರು ಹೇಳಿಕೆ ಕೊಟ್ಟ ನಂತರ ಸೋಲಿನ ಭೀತಿಯಲ್ಲಿದ್ದ ರಾಣೆಬೆನ್ನೂರು, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳು ಸಾರಾಸಗಟಾಗಿ ಬಿಜೆಪಿಗೆ ಒಲಿದಿವೆ. ಆ ಮೂಲಕ ಈಗಲೂ ಲಿಂಗಾಯತ ಓಟ್ ಬ್ಯಾಂಕ್‍ಗೆ ನಾನೇ ಅಧಿಪತಿ ಅನ್ನೋದನ್ನು ಅವರು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಹಾರಾಷ್ಟ್ರವನ್ನು ತನ್ನ ತೆಕ್ಕೆಯಿಂದ ಕಳೆದುಕೊಂಡ ನಂತರ ದೇಶದಲ್ಲಿ ಬಿಜೆಪಿ ಆಳ್ವಿಕೆಯ ಪ್ರಾಂತ್ಯಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದೊಡ್ಡ ರಾಜ್ಯಗಳಲ್ಲಿ ಒಂದಾದ, ಅದರಲ್ಲೂ ದಕ್ಷಿಣ ಭಾರತದ ಬಿಜೆಪಿ ಆಳ್ವಿಕೆಯ ಏಕೈಕ ರಾಜ್ಯವಾದ ಕರ್ನಾಟಕದಲ್ಲಿ ಕಿಂಚಿತ್ತೂ ರಿಸ್ಕ್ ತೆಗೆದುಕೊಳ್ಳಲು ಹೈಕಮಾಂಡ್ ಮುಂದಾಗದು. ಸಂಪುಟ ವಿಸ್ತರಣೆಯಲ್ಲಿ ಯಡ್ಯೂರಪ್ಪನವರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಗುವುದು ಮಾತ್ರವಲ್ಲ, ಬಿ.ಎಲ್.ಸಂತೋಷ್ ಆಸೆಗೂ ತಣ್ಣೀರು ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...