Homeಮುಖಪುಟಹೆತ್ತ ತಾಯಿ ಮೇಲೆ ಅತ್ಯಾಚಾರ ಆರೋಪ: ಮಗನನ್ನು ಬಂಧಿಸಿದ ಪೊಲೀಸರು

ಹೆತ್ತ ತಾಯಿ ಮೇಲೆ ಅತ್ಯಾಚಾರ ಆರೋಪ: ಮಗನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಹೆತ್ತ ತಾಯಿ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿಯ ಹೌಜ್ ಖಾಝಿ ಪ್ರದೇಶದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರನ್ನು ಭೇಟಿಯಾಗಿ ದೂರು ಸಲ್ಲಿಸಿದ ಸಂತ್ರಸ್ತೆ ತಾಯಿ, ತನ್ನ ಮಗ ಕೋಣೆಯಲ್ಲಿ ಕೂಡಿ ಹಾಕಿ ಬುರ್ಖಾ ಕಳಚುವಂತೆ ಒತ್ತಾಯಿಸಿ ಥಳಿಸಿದ್ದಾನೆ. ಅಲ್ಲದೆ, ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.

“ದಶಕಗಳ ಹಿಂದೆ ನೀನು ವಿವಾಹೇತರ ಸಂಬಂಧ ಹೊಂದಿದ್ದೆ. ಅದಕ್ಕಾಗಿ ನಿನ್ನನ್ನು ಶಿಕ್ಷಿಸುತ್ತೀದ್ದೇನೆ” ಎಂದ ಮಗ ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾನೆ” ಎಂದು 65 ವರ್ಷದ ತಾಯಿ ಆರೋಪಿಸಿದ್ದಾರೆ.

ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ ಪ್ರಕಾರ, ಆಕೆ ನಿವೃತ್ತ ಸರ್ಕಾರಿ ನೌಕರನಾಗಿರುವ ತನ್ನ ಪತಿ, ಮಗಳು ಮತ್ತು ಆರೋಪಿ ಮಗನ ಜೊತೆ ದೆಹಲಿಯ ಹೌಜ್ ಖಾಝಿ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆಕೆಯ ದೊಡ್ಡ ಮಗಳು ಪಕ್ಕದಲ್ಲೇ ತನ್ನ ಗಂಡನ ಜೊತೆ ಪ್ರತ್ಯೇಕ ಮನೆ ಮಾಡಿದ್ದಾರೆ.

ಜುಲೈ 17ರಂದು, ಮಹಿಳೆ, ಆಕೆಯ ಪತಿ ಮತ್ತು ಕಿರಿಯ ಮಗಳು ಸೌದಿ ಅರೇಬಿಯಾಗೆ ಉಮ್ರಾ ಯಾತ್ರೆ ತೆರಳಿದ್ದರು. ಎಂಟು ದಿನಗಳ ನಂತರ, ಅವರು ಇನ್ನೂ ಸೌದಿಯಲ್ಲೇ ಇದ್ದಾಗ ಆರೋಪಿಯು ತನ್ನ ತಂದೆಗೆ ಪದೇ ಪದೇ ಕರೆ ಮಾಡಿ ದೆಹಲಿಗೆ ಮರಳುವಂತೆ ಒತ್ತಾಯಿಸಿದ್ದ.

ತನ್ನ ತಂದೆ ತಾಯಿಗೆ ವಿಚ್ಚೇದನ ನೀಡಬೇಕೆಂದು ಆತ ಬಯಸಿದ್ದ. ಇದಕ್ಕೆ ಆತ, ತನ್ನ ತಂಗಿ ಹುಟ್ಟುವ ಮೊದಲು ತಂದೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ತಾಯಿ ಪರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದುತ್ತಿದ್ದರು ಎಂದು ಕಾರಣ ಕೊಟ್ಟಿದ್ದ.

ಆಗಸ್ಟ್ 1ರಂದು ಕುಟುಂಬವು ಸೌದಿ ಅರೇಬಿಯಾದಿಂದ ಮನೆಗೆ ಮರಳಿದಾಗ ಆರೋಪಿ ಮಗ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಮನೆಯ ಕೋಣೆಯಲ್ಲಿ ಕೂಡಿ ಹಾಕಿ ಬುರ್ಖಾ ಕಳಚುವಂತೆ ಒತ್ತಾಯಿಸಿ ಥಳಿಸಿದ್ದಾನೆ.ಆತ ತನ್ನ ಪತಿಗೆ ತನ್ನನ್ನು ಕೆಡಿಸಿದ್ದಾಗಿ ಹೇಳಿದ್ದಾನೆ ಎಂದು ಸಂತ್ರಸ್ತೆ ಮಹಿಳೆ ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಆಗಸ್ಟ್ 11ರಂದು ಆರೋಪಿಯು ತನ್ನ ತಾಯಿಯೊಂದಿಗೆ ಖಾಸಗಿಯಾಗಿ ಮಾತನಾಡಬೇಕೆಂದು ಕುಟುಂಬ ಸದಸ್ಯರಿಗೆ ತಿಳಿಸಿದ್ದ. ಬಳಿಕ ಆಕೆಯನ್ನು ಮನೆಯ ಕೋಣೆಯಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾನೆ. ತಾಯಿ ಎಷ್ಟು ಬೇಡಿಕೊಂಡರೂ ಕೇಳದ ಆತ, “ದಶಕಗಳ ಹಿಂದೆ ಮಾಡಿದ ತಪ್ಪಿಗೆ ಶಿಕ್ಷಿಸುತ್ತಿದ್ದೇನೆ” ಎಂದು ದೌರ್ಜನ್ಯ ನಡೆಸಿದ್ದಾನೆ.

ಇದರಿಂದ ಭಯಭೀತರಾಗಿದ್ದ ಮಹಿಳೆ ಆರಂಭದಲ್ಲಿ ತನ್ನ ಹಿರಿಯ ಮಗಳ ಮನೆಯಲ್ಲಿ ಆಶ್ರಯ ಪಡೆದಿದ್ದರು. ಪರಿಸ್ಥಿತಿ ಹದಗೆಟ್ಟಾಗ ಮನೆಗೆ ಹಿಂತಿರುಗಿದ್ದರು.

ಆಗಸ್ಟ್ 14ರಂದು ಆರೋಪಿ ತನ್ನ ತಾಯಿ ಮಲಗಿದ್ದ ಕೋಣೆಗೆ ನುಗ್ಗಿ ಮತ್ತೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಮರುದಿನ, ಮಹಿಳೆ ತನ್ನ ಕಿರಿಯ ಮಗಳಿಗೆ ವಿಷಯ ತಿಳಿಸಿದ್ದು, ಪೊಲೀಸರನ್ನು ಸಂಪರ್ಕಿಸುವಂತೆ ಒತ್ತಾಯಿಸಿದ್ದಾರೆ.

ಬಳಿಕ ಮಗಳು ತಾಯಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಸಹೋದರ ವಿರುದ್ದ ದೂರು ದಾಖಲಿಸಿದ್ದಾರೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...