Homeಮುಖಪುಟಹೆತ್ತ ತಾಯಿ ಮೇಲೆ ಅತ್ಯಾಚಾರ ಆರೋಪ: ಮಗನನ್ನು ಬಂಧಿಸಿದ ಪೊಲೀಸರು

ಹೆತ್ತ ತಾಯಿ ಮೇಲೆ ಅತ್ಯಾಚಾರ ಆರೋಪ: ಮಗನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಹೆತ್ತ ತಾಯಿ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿಯ ಹೌಜ್ ಖಾಝಿ ಪ್ರದೇಶದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರನ್ನು ಭೇಟಿಯಾಗಿ ದೂರು ಸಲ್ಲಿಸಿದ ಸಂತ್ರಸ್ತೆ ತಾಯಿ, ತನ್ನ ಮಗ ಕೋಣೆಯಲ್ಲಿ ಕೂಡಿ ಹಾಕಿ ಬುರ್ಖಾ ಕಳಚುವಂತೆ ಒತ್ತಾಯಿಸಿ ಥಳಿಸಿದ್ದಾನೆ. ಅಲ್ಲದೆ, ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.

“ದಶಕಗಳ ಹಿಂದೆ ನೀನು ವಿವಾಹೇತರ ಸಂಬಂಧ ಹೊಂದಿದ್ದೆ. ಅದಕ್ಕಾಗಿ ನಿನ್ನನ್ನು ಶಿಕ್ಷಿಸುತ್ತೀದ್ದೇನೆ” ಎಂದ ಮಗ ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾನೆ” ಎಂದು 65 ವರ್ಷದ ತಾಯಿ ಆರೋಪಿಸಿದ್ದಾರೆ.

ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ ಪ್ರಕಾರ, ಆಕೆ ನಿವೃತ್ತ ಸರ್ಕಾರಿ ನೌಕರನಾಗಿರುವ ತನ್ನ ಪತಿ, ಮಗಳು ಮತ್ತು ಆರೋಪಿ ಮಗನ ಜೊತೆ ದೆಹಲಿಯ ಹೌಜ್ ಖಾಝಿ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆಕೆಯ ದೊಡ್ಡ ಮಗಳು ಪಕ್ಕದಲ್ಲೇ ತನ್ನ ಗಂಡನ ಜೊತೆ ಪ್ರತ್ಯೇಕ ಮನೆ ಮಾಡಿದ್ದಾರೆ.

ಜುಲೈ 17ರಂದು, ಮಹಿಳೆ, ಆಕೆಯ ಪತಿ ಮತ್ತು ಕಿರಿಯ ಮಗಳು ಸೌದಿ ಅರೇಬಿಯಾಗೆ ಉಮ್ರಾ ಯಾತ್ರೆ ತೆರಳಿದ್ದರು. ಎಂಟು ದಿನಗಳ ನಂತರ, ಅವರು ಇನ್ನೂ ಸೌದಿಯಲ್ಲೇ ಇದ್ದಾಗ ಆರೋಪಿಯು ತನ್ನ ತಂದೆಗೆ ಪದೇ ಪದೇ ಕರೆ ಮಾಡಿ ದೆಹಲಿಗೆ ಮರಳುವಂತೆ ಒತ್ತಾಯಿಸಿದ್ದ.

ತನ್ನ ತಂದೆ ತಾಯಿಗೆ ವಿಚ್ಚೇದನ ನೀಡಬೇಕೆಂದು ಆತ ಬಯಸಿದ್ದ. ಇದಕ್ಕೆ ಆತ, ತನ್ನ ತಂಗಿ ಹುಟ್ಟುವ ಮೊದಲು ತಂದೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ತಾಯಿ ಪರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದುತ್ತಿದ್ದರು ಎಂದು ಕಾರಣ ಕೊಟ್ಟಿದ್ದ.

ಆಗಸ್ಟ್ 1ರಂದು ಕುಟುಂಬವು ಸೌದಿ ಅರೇಬಿಯಾದಿಂದ ಮನೆಗೆ ಮರಳಿದಾಗ ಆರೋಪಿ ಮಗ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಮನೆಯ ಕೋಣೆಯಲ್ಲಿ ಕೂಡಿ ಹಾಕಿ ಬುರ್ಖಾ ಕಳಚುವಂತೆ ಒತ್ತಾಯಿಸಿ ಥಳಿಸಿದ್ದಾನೆ.ಆತ ತನ್ನ ಪತಿಗೆ ತನ್ನನ್ನು ಕೆಡಿಸಿದ್ದಾಗಿ ಹೇಳಿದ್ದಾನೆ ಎಂದು ಸಂತ್ರಸ್ತೆ ಮಹಿಳೆ ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಆಗಸ್ಟ್ 11ರಂದು ಆರೋಪಿಯು ತನ್ನ ತಾಯಿಯೊಂದಿಗೆ ಖಾಸಗಿಯಾಗಿ ಮಾತನಾಡಬೇಕೆಂದು ಕುಟುಂಬ ಸದಸ್ಯರಿಗೆ ತಿಳಿಸಿದ್ದ. ಬಳಿಕ ಆಕೆಯನ್ನು ಮನೆಯ ಕೋಣೆಯಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾನೆ. ತಾಯಿ ಎಷ್ಟು ಬೇಡಿಕೊಂಡರೂ ಕೇಳದ ಆತ, “ದಶಕಗಳ ಹಿಂದೆ ಮಾಡಿದ ತಪ್ಪಿಗೆ ಶಿಕ್ಷಿಸುತ್ತಿದ್ದೇನೆ” ಎಂದು ದೌರ್ಜನ್ಯ ನಡೆಸಿದ್ದಾನೆ.

ಇದರಿಂದ ಭಯಭೀತರಾಗಿದ್ದ ಮಹಿಳೆ ಆರಂಭದಲ್ಲಿ ತನ್ನ ಹಿರಿಯ ಮಗಳ ಮನೆಯಲ್ಲಿ ಆಶ್ರಯ ಪಡೆದಿದ್ದರು. ಪರಿಸ್ಥಿತಿ ಹದಗೆಟ್ಟಾಗ ಮನೆಗೆ ಹಿಂತಿರುಗಿದ್ದರು.

ಆಗಸ್ಟ್ 14ರಂದು ಆರೋಪಿ ತನ್ನ ತಾಯಿ ಮಲಗಿದ್ದ ಕೋಣೆಗೆ ನುಗ್ಗಿ ಮತ್ತೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಮರುದಿನ, ಮಹಿಳೆ ತನ್ನ ಕಿರಿಯ ಮಗಳಿಗೆ ವಿಷಯ ತಿಳಿಸಿದ್ದು, ಪೊಲೀಸರನ್ನು ಸಂಪರ್ಕಿಸುವಂತೆ ಒತ್ತಾಯಿಸಿದ್ದಾರೆ.

ಬಳಿಕ ಮಗಳು ತಾಯಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಸಹೋದರ ವಿರುದ್ದ ದೂರು ದಾಖಲಿಸಿದ್ದಾರೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...