Homeಮುಖಪುಟಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಚುನಾವಣಾ ಆಯೋಗ ಕೇಂದ್ರದಲ್ಲಿರುವ ‘ಅಪಾಯಕಾರಿ’ ನರೇಂದ್ರ ಮೋದಿ ಸರ್ಕಾರದ ‘ಏಜೆಂಟ್’ನಂತೆ ವರ್ತಿಸುತ್ತಿದೆ. ಈ ಮೂಲಕ ಸಂವಿಧಾನ ಮತ್ತು ಜನರ ಮತದಾನದ ಹಕ್ಕಿಗೆ ‘ಬೆದರಿಕೆ’ ಒಡ್ಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ (ಆ.17) ಹೇಳಿದರು.

ಬಿಹಾರದ ಸಸರಾಮ್‌ನಲ್ಲಿ ನಡೆದ ರಾಹುಲ್ ಗಾಂಧಿ ನೇತೃತ್ವದ 16 ದಿನಗಳ ‘ವೋಟರ್ ಅಧಿಕಾರ್ ಯಾತ್ರೆ’ಯ ಚಾಲನಾ ಕಾರ್ಯಕ್ರಮದಲ್ಲಿ ಜನರು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರದಲ್ಲಿರುವವರೆಗೆ ಸಂವಿಧಾನ ಅಪಾಯದಲ್ಲಿರುತ್ತದೆ. ಈ ಸರ್ಕಾರ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ನಡೆದು ಕೆಲ ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಈ ಅವಧಿಯಲ್ಲಿ 1 ಕೋಟಿ ಹೊಸ ಮತದಾರರ ಹೆಸರುಗಳನ್ನು ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಮಾಡಿರುವ ಆರೋಪಗಳನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿದ ಖರ್ಗೆ ಅವರು, “ಎಲ್ಲರೂ ಬಿಜೆಪಿ ನೇತೃತ್ವದ ಒಕ್ಕೂಟಕ್ಕೆ ಮತ ಚಲಾಯಿಸಿದಂತೆ ಕಾಣುತ್ತದೆ” ಎಂದರು.

ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳ ಮೊದಲು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯೊಂದಿಗೆ ಬಿಹಾರದಲ್ಲಿ ಇದೇ ರೀತಿಯ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದ ಖರ್ಗೆ ಅವರು, “ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಏಜೆಂಟ್ ಆಗಿ ಮಾರ್ಪಟ್ಟಿದೆ” ಎಂದು ವಾಗ್ದಾಳಿ ನಡೆಸಿದರು.

ಚುನಾವಣಾ ಆಯೋಗವು ತನ್ನ ಮಾತಿಗೆ ವಿಧೇಯರಾಗಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ, ಮೋದಿ ಸರ್ಕಾರವು ಚುನಾವಣಾ ಆಯೋಗದ ಆಯ್ಕೆ ಸಮಿತಿಯಲ್ಲಿ ಕೇಂದ್ರ ಸಚಿವರು ಇರಬೇಕೆಂದು ನಿರ್ಧರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಸೇರಿಸಿಕೊಳ್ಳಬೇಕೆಂಬ ಸುಪ್ರೀಂ ಕೋರ್ಟ್‌ನ ಸಲಹೆಯನ್ನು  ನಿರ್ಲಕ್ಷಿಸಿದೆ ಎಂದು ಖರ್ಗೆ ಆರೋಪಿಸಿದರು.

ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಕೆಂಪು ಕೋಟೆ ಮೇಲೆ ನಿಂತು, ದೇಶದ ಸ್ವಾತಂತ್ರ್ಯದ ಶ್ರೇಯಸ್ಸು ಆರ್‌ಎಸ್‌ಎಸ್‌ಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್ ಸ್ವಯಂಸೇವಕರು ಬ್ರಿಟಿಷ್ ಸಾಮ್ರಾಜ್ಯಶಾಹಿಗಳಿಗಾಗಿ ಕೆಲಸ ಮಾಡಿದ್ದರು. ಬ್ರಿಟಿಷರಿಗೆ ನಿಜವಾದ ಸ್ವಾತಂತ್ರ್ಯ ಹೋರಾಟಗಾರರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದರು. ಇದಕ್ಕೆ ಪ್ರತಿಯಾಗಿ ಕ್ಷಮೆಯಂತಹ ಕೃಪೆಗಳನ್ನು ಬಯಸುತ್ತಿದ್ದರು ಎಂದು ಖರ್ಗೆ ಹೇಳಿದರು.

ತಮ್ಮ ತಾಯ್ನಾಡಿಗಾಗಿ ರಕ್ತ, ಬೆವರು ಮತ್ತು ಕಣ್ಣೀರು ಸುರಿಸಿದ್ದ ದೇಶದ ಸ್ವಾತಂತ್ರ್ಯ ಹೋರಾಟಗಾರರು, ನರೇಂದ್ರ ಮೋದಿಯವರ ಮಾತು ಕೇಳಿ ತಮ್ಮ ಸಮಾಧಿಯಲ್ಲೇ ನೋವು ಪಡುತ್ತಿರಬಹುದು. ಮೋದಿ ತುಂಬಾ ಅಪಾಯಕಾರಿ ವ್ಯಕ್ತಿ ಎಂದು ತೋರುತ್ತದೆ. ಅವರು ಸಂವಿಧಾನ ಮತ್ತು ಅದರಲ್ಲಿ ಪ್ರತಿಪಾದಿಸಲಾದ ಮತದಾನದ ಹಕ್ಕಿಗೆ ಅಪಾಯ ಉಂಟು ಮಾಡುತ್ತಿದ್ದಾರೆ. ಅವರನ್ನು ಸಿಂಹಾಸನದಿಂದ ಕೆಳಗಿಳಿಸುವ ಮೂಲಕ ಈ ಹಕ್ಕುಗಳನ್ನು ರಕ್ಷಿಸುವುದು ಜನರ ಕರ್ತವ್ಯ. 1942ರ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ವೀರಾವೇಶದಿಂದ ಹೋರಾಡಿದ ಬಿಹಾರದ ಜನರು ಈ ಸಂದರ್ಭಕ್ಕೆ ತಕ್ಕಂತೆ ಎದ್ದು ನಿಲ್ಲುತ್ತಾರೆ ಎಂದು ನನಗೆ ಭರವಸೆ ಇದೆ ಎಂದರು.

ಆರ್‌ಎಸ್‌ಎಸ್ ಯಾವಾಗಲೂ ಪ್ರಜಾಪ್ರಭುತ್ವವನ್ನು ವಿರೋಧಿಸುತ್ತದೆ. ಅದು ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕನ್ನು ಪರಿಚಯಿಸಿದ್ದಕ್ಕಾಗಿ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರನ್ನು ಟೀಕಿಸಿತ್ತು. ಸಬಲೀಕರಣಗೊಳಿಸುತ್ತಿದ್ದ ಮಹಿಳೆಯರು ಒಂದು ದಿನ ನೆಹರು ವಿರುದ್ಧ ತಿರುಗಿ ಬಿದ್ದು ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಆರ್‌ಎಸ್‌ಎಸ್‌ನವರು ಅಪಹಾಸ್ಯ ಮಾಡಿದ್ದರು. ಆ ಮನಸ್ಥಿತಿ ಇಂದಿಗೂ ಅವರಲ್ಲಿ ಚಾಲ್ತಿಯಲ್ಲಿದೆ” ಎಂದು ಹೇಳಿದರು.

ಬಿಹಾರದ ಸಿಎಂ ನಿತೀಶ್ ಕುಮಾರ್ ನೇತೃತ್ವದ ರಾಜ್ಯ ಸರ್ಕಾರವನ್ನು ಟೀಕಿಸಿದ ಖರ್ಗೆ, ಸರ್ಕಾರವನ್ನು ‘ಕುರುಡರು’ ಮತ್ತು ‘ಕಿವುಡರಂತೆ’ ಕಾಣುವ ಜನರು ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

‘ಮತಗಳ್ಳತನ’ ಆರೋಪಕ್ಕೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸಿ: ರಾಹುಲ್‌ ಗಾಂಧಿಗೆ ಹೇಳಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...