Homeಮುಖಪುಟಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

- Advertisement -
- Advertisement -

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಿಹಾರದ ಮತದಾರರ ಪಟ್ಟಿಯಿಂದ ಕೈ ಬಿಟ್ಟಿರುವ 65 ಲಕ್ಷ ಹೆಸರುಗಳನ್ನು ಚುನಾವಣಾ ಆಯೋಗ ಸೋಮವಾರ (ಆ.18) ಬಹಿರಂಗಪಡಿಸಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಬಳಿಕ, ಆಗಸ್ಟ್ 1ರಂದು ಚುನಾವಣಾ ಆಯೋಗ ಬಿಹಾರದ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿತ್ತು. ಅದರಲ್ಲಿ ವಿವಿಧ ಕಾರಣಗಳನ್ನು ನೀಡಿ 65 ಲಕ್ಷ ಹೆಸರುಗಳನ್ನು ಕೈಬಿಟ್ಟಿತ್ತು.

ಚುನಾವಣಾ ಆಯೋಗದ ಕ್ರಮ ವಿರೋಧಿಸಿ ಹಲವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಮತದಾರರ ಪಟ್ಟಿಯಿಂದ ಕೈ ಬಿಟ್ಟ 65 ಲಕ್ಷ ಹೆಸರುಗಳು ಮತ್ತು ಅವುಗಳನ್ನು ಕೈಬಿಟ್ಟ ಕಾರಣವನ್ನು ಆಗಸ್ಟ್ 19ರೊಳಗೆ ಬಹಿರಂಗಪಡಿಸುವಂತೆ ನಿರ್ದೇಶಿಸಿತ್ತು ಮತ್ತು ಆಗಸ್ಟ್ 22ರ ಒಳಗೆ ಅನುಸರಣಾ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ಚುನಾವಣಾ ಆಯೋಗವು ಎಲ್ಲಾ ಮತಗಟ್ಟೆಗಳಲ್ಲಿ ಗೈರುಹಾಜರಿ, ಸ್ಥಳಾಂತರಗೊಂಡ ಮತ್ತು ಮೃತ (ಎಎಸ್‌ಡಿ) ಮತದಾರರ ಹೆಸರುಗಳನ್ನು ಪ್ರಕಟಿಸುತ್ತಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆನ್‌ಲೈನ್‌ನಲ್ಲಿಯೂ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.

ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಪ್ರಕಾರ, ರೋಹ್ತಾಸ್, ಬೇಗುಸರಾಯ್, ಅರ್ವಾಲ್ ಮತ್ತು ಇತರ ಸ್ಥಳಗಳ ಮತಗಟ್ಟೆಗಳಲ್ಲಿ ಎಎಸ್‌ಡಿ ಪಟ್ಟಿಗಳನ್ನು ಪ್ರದರ್ಶಿಸಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಚುನಾವಣಾ ಆಯೋಗ ಹೇಳಿದಂತೆ ಗೈರುಹಾಜರಿ, ಸ್ಥಳಾಂತರಗೊಂಡ ಮತ್ತು ಮೃತ ಮತದಾರರ ಹೆಸರುಗಳು ಒಳಗೊಂಡಿರುವ ಪಟ್ಟಿಯನ್ನು ಪಂಚಾಯತ್ ಮಟ್ಟದ ಕಚೇರಿ ಮತ್ತು ಜಿಲ್ಲಾ ಮಟ್ಟದ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಕಾರಣಗಳೊಂದಿಗೆ ಪ್ರದರ್ಶಿಸಲು ನ್ಯಾಯಾಲಯ ನಿರ್ದೇಶಿಸಿದೆ.

ಪಟ್ಟಿ ಲಭ್ಯವಿರುವ ಸ್ಥಳಗಳ ಬಗ್ಗೆ ಜನರಿಗೆ ತಿಳಿಸಲು ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ರೇಡಿಯೋಗಳ ಜೊತೆಗೆ ಸ್ಥಳೀಯ ಮತ್ತು ಇಂಗ್ಲಿಷ್ ಸೇರಿದಂತೆ ಪತ್ರಿಕೆಗಳ ಮೂಲಕ ವ್ಯಾಪಕ ಪ್ರಚಾರವನ್ನು ಮಾಡುವಂತೆ ನ್ಯಾಯಪೀಠ ಒತ್ತಿ ಹೇಳಿದೆ.

ಆಗಸ್ಟ್ 22ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದ ಪೀಠ, ಚುನಾವಣಾ ಆಯೋಗವು ತನ್ನ ನಿರ್ದೇಶನದ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಆಗಸ್ಟ್ 1ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ, ಪಟ್ಟಿಯಿಂದ ಕೈಬಿಡಲಾದ 65 ಲಕ್ಷ ಮತದಾರರ ಪೈಕಿ 22.34 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ, 36.28 ಲಕ್ಷ ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಪರಿಶೀಲನೆಯ ವೇಳೆ ಗೈರುಹಾಜರಾದವರು ಮತ್ತು 7.01 ಲಕ್ಷ ಜನರ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ದಾಖಲಾಗಿತ್ತು ಎಂದಿದೆ.

ಮತಗಳ್ಳತನ ಆರೋಪ| ಪ್ರಮಾಣಪತ್ರ ಸಲ್ಲಿಸಲು ಅನುರಾಗ್ ಠಾಕೂರ್‌ಗೆ ಏಕೆ ಕೇಳಿಲ್ಲ: ಚು. ಆಯೋಗಕ್ಕೆ ರಾಹುಲ್ ಗಾಂಧಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...