Homeಮುಖಪುಟ'ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ...

‘ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಪಕ್ಷ ವಾಗ್ದಾಳಿ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ವಿರೋಧ ಪಕ್ಷಗಳ ನಾಯಕರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಯ ಅಕ್ರಮಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲು ಅವರು ವಿಫಲರಾಗಿದ್ದಾರೆ ಎಂದು ಸೋಮವಾರ (ಆ.18) ಹೇಳಿದರು.

ಇಂಡಿಯಾ ಒಕ್ಕೂಟದ ಸಭೆ ಬಳಿಕ ದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್, ಟಿಎಂಸಿ, ಎಸ್‌ಪಿ, ಡಿಎಂಕೆ ಮತ್ತು ಆರ್‌ಜೆಡಿ ಸೇರಿದಂತೆ ಎಂಟು ಪ್ರಮುಖ ವಿರೋಧ ಪಕ್ಷಗಳ ಪ್ರತಿನಿಧಿಗಳು, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು. ನಾವು ಎತ್ತಿದ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಚುನಾವಣಾ ಆಯುಕ್ತರು ಭಾನುವಾರದ ತಮ್ಮ ಪತ್ರಿಕಾಗೋಷ್ಠಿಯನ್ನು ನಮ್ಮ ಮೇಲೆ ವಾಗ್ದಾಳಿ ನಡೆಸಲು ಬಳಸಿಕೊಂಡಿದ್ದಾರೆ ಎಂದರು.

“ಮತದಾನ ಸಂವಿಧಾನ ದೇಶದ ನಾಗರಿಕರಿಗೆ ನೀಡಿರುವ ಪ್ರಮುಖ ಹಕ್ಕು. ಪ್ರಜಾಪ್ರಭುತ್ವವು ಅದರ ಮೇಲೆ ಅವಲಂಬಿತವಾಗಿದೆ. ಚುನಾವಣಾ ಆಯೋಗವು ಅದನ್ನು ರಕ್ಷಿಸಲು ಉದ್ದೇಶಿಸಲಾದ ಸಂಸ್ಥೆಯಾಗಿದೆ. ಆದರೆ, ರಾಜಕೀಯ ಪಕ್ಷಗಳು ಎತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಮುಖ್ಯ ಚುನಾವಣಾ ಆಯುಕ್ತರು ಉತ್ತರಿಸಿಲ್ಲ. ಅವರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಹೇಳಿದರು.

ವಿರೋಧ ಪಕ್ಷಗಳು ಕೇಳಿದ ಸರಿಯಾದ ಪ್ರಶ್ನೆಗಳಿಗೆ ಅವರು ಉತ್ತರಿಸಬೇಕಿತ್ತು. ಆದರೆ, ಅವರು ರಾಜಕೀಯ ಪಕ್ಷಗಳಿಗೇ ಪ್ರಶ್ನೆಗಳನ್ನು ಹಾಕಿ ವಾಗ್ದಾಳಿ ನಡೆಸಿದ್ದಾರೆ ಎಂದು ಕಿಡಿಕಾರಿದರು.

“ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೆ ಕೇವಲ ಮೂರು ತಿಂಗಳು ಬಾಕಿ ಇರುವಾಗ, ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸದೆ ತರಾತುರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದ್ದೇಕೆ? ಪರಿಷ್ಕೃತ ಮತದಾರರ ಪಟ್ಟಿ ಪ್ರಕಟಿಸಲು ಅವರು ಆತುರಪಟ್ಟಿದ್ದೇಕೆ?” ಎಂದು ಗೊಗೊಯ್ ಪ್ರಶ್ನಿಸಿದರು.

ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸುವುದು ಚುನಾವಣಾ ಆಯೋಗದ ಸಾಂವಿಧಾನಿಕ ಕರ್ತವ್ಯ. ಆದರೆ, ಆಯೋಗದ ಚುಕ್ಕಾಣಿ ಹಿಡಿಯುವ ಅಧಿಕಾರಿಗಳು ವಿರೋಧ ಪಕ್ಷಗಳ ಆರೋಪಗಳ ತನಿಖೆಗೆ ಅವಕಾಶ ನೀಡುತ್ತಿಲ್ಲ ಎಂದು ದೂರಿದರು.

“ಚುನಾವಣಾ ಆಯೋಗವು ಕೆಲವು ಪಕ್ಷಪಾತಿ ಅಧಿಕಾರಿಗಳ ಕೈಯಲ್ಲಿದೆ ಎಂಬುದು ಸ್ಪಷ್ಟ. ಅಂತಹ ಅಧಿಕಾರಿಗಳು ಎಲ್ಲಾ ರೀತಿಯ ತನಿಖೆಗಳನ್ನು ವಿರೋಧಿಸುತ್ತಿದ್ದಾರೆ” ಎಂದು ಗೊಗೊಯ್ ಆರೋಪಿಸಿದರು.

ಸಮಾಜವಾದಿ ಪಕ್ಷದ ನಾಯಕ ರಾಮಗೋಪಾಲ್ ಯಾದವ್ ಮಾತನಾಡಿ, ಚುನಾವಣಾ ಆಯೋಗವು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಕೇಳುತ್ತಿದೆ. ಆದರೆ, ನಮ್ಮ ಪಕ್ಷ 2022ರಲ್ಲಿ ಸುಮಾರು 18,000 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ದೂರನ್ನು ಪ್ರಮಾಣ ಪತ್ರದೊಂದಿಗೆ ಸಲ್ಲಿಸಿದೆ. ಆದರೆ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

“2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದರು. ಈ ಆರೋಪಕ್ಕೆ ನಾವು ಪ್ರಮಾಣಪತ್ರ ಸಲ್ಲಿಸಿದ್ದೆವು. ಆದರೆ, ಚುನಾವಣಾ ಆಯೋಗ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ತಿಳಿಸಿದರು.

ಕಳೆದ ಸಾರ್ವತ್ರಿಕ ಚುನಾವಣೆ ನಡೆದ ಮತದಾರರ ಪಟ್ಟಿ ಸರಿಯಾಗಿಲ್ಲದಿದ್ದರೆ, ಲೋಕಸಭೆಯನ್ನು ವಿಸರ್ಜಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಒತ್ತಾಯಿಸಿದರು.

“ಲೋಕಸಭಾ ಚುನಾವಣೆ ನಡೆದ ಪಟ್ಟಿಯು ವಂಚನೆಯೇ? ಅದು ನಿಜವಾಗಿದ್ದರೆ, ಪ್ರಸ್ತುತ ಮತ್ತು ಹಿಂದಿನ ಚುನಾವಣಾ ಆಯುಕ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಈ ಲೋಕಸಭೆಯನ್ನು ತಕ್ಷಣವೇ ವಿಸರ್ಜಿಸಬೇಕು” ಎಂದು ಅವರು ಹೇಳಿದರು.

“ನಿನ್ನೆ ನಾವು ನಮ್ಮ ಚುನಾವಣಾ ಆಯುಕ್ತರನ್ನು ಹುಡುಕುತ್ತಿದ್ದೆವು, ಆದರೆ, ನಮಗೆ ಹೊಸ ಬಿಜೆಪಿ ವಕ್ತಾರರು ಸಿಕ್ಕರು” ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮನೋಜ್ ಝಾ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು.

ಶಿವಸೇನೆಯ (ಯುಬಿಟಿ) ನಾಯಕ ಅರವಿಂದ್ ಸಾವಂತ್ ಕೂಡ ಮುಖ್ಯ ಚುನಾವಣಾಧಿಕಾರಿ “ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಭಾನುವಾರ (ಆ.16) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, “ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು. ಇಲ್ಲದಿದ್ದರೆ ಅವರ ಆರೋಪಗಳನ್ನು ಆಧಾರರಹಿತ ಎಂಬುವುದಾಗಿ ಪರಿಗಣಿಸಲಾಗುವುದು” ಎಂದಿದ್ದರು. ಅಲ್ಲದೆ, “ಪ್ರಮಾಣಪತ್ರ ಸಲ್ಲಿಸಿ. ಇಲ್ಲವೇ, ಕ್ಷಮೆಯಾಚಿಸಿ” ಎಂದು ರಾಹುಲ್ ಗಾಂಧಿಗೆ ತಾಕೀತು ಮಾಡಿದ್ದರು.

ಬಿಹಾರ| ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳನ್ನು ಬಹಿರಂಗಪಡಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...