Homeಎಲೆಮರೆಊರಿಗೆ ಊರನ್ನೆ ಶಾಲಾ ಪತ್ರಿಕೆಯ ಓದುಗರನ್ನಾಗಿಸಿದ ಶಿಕ್ಷಕ ಬಿ.ಕೊಟ್ರೇಶ್

ಊರಿಗೆ ಊರನ್ನೆ ಶಾಲಾ ಪತ್ರಿಕೆಯ ಓದುಗರನ್ನಾಗಿಸಿದ ಶಿಕ್ಷಕ ಬಿ.ಕೊಟ್ರೇಶ್

- Advertisement -
- Advertisement -

ಕಾರಟಗಿಯಲ್ಲಿ ಸಮಾಜ ವಿಜ್ಞಾನ ಸಂಶೋಧನಾ ಸಂಸ್ಥೆಯ ಬಿ.ಪೀರಬಾಷ ಮತ್ತು ಗೆಳೆಯರು ಸೇರಿ ಕುವೆಂಪು ಕುರಿತಂತೆ ಕಮ್ಮಟವನ್ನು ಏರ್ಪಡಿಸಿದ್ದರು. ರಾಮಲಿಂಗಪ್ಪ ಟಿ. ಬೇಗೂರು ಮತ್ತು ನಾನು ಕಮ್ಮಟವನ್ನು ನಿರ್ವಹಿಸುವ ಹೊಣೆ ಹೊತ್ತಿದ್ದೆವು. ಆಗ ಕೊಪ್ಪಳ ಸಿಂಧನೂರು ಗಂಗಾವತಿ ಭಾಗದ ಶಿಕ್ಷಕರು ಶಿಬಿರಾರ್ಥಿಗಳಾಗಿ ಬಂದಿದ್ದರು. ಬಿಡುವಿನ ವೇಳೆಯಲ್ಲಿ ಶಿಕ್ಷಕ ಬಿ.ಕೊಟ್ರೇಶ್ ತಾನು ಶಾಲೆಯಿಂದ ತರುತ್ತಿರುವ ಪತ್ರಿಕೆಯೊಂದನ್ನು ಕೈಗೆ ಕೊಟ್ಟರು. ಸುಮ್ಮನೆ ಕಣ್ಣಾಡಿಸಿದರೆ ಆ ಪತ್ರಿಕೆಯ ವೈವಿಧ್ಯ, ಹರವು, ದೃಷ್ಟಿಕೋನ ಅಚ್ಚರಿ ಹುಟ್ಟಿಸಿತು. ಶಾಲಾ ಮಕ್ಕಳೆ ಪ್ರಕಟಿಸುತ್ತಾರೆಂದಾಗ ನಂಬಲಾಗಲಿಲ್ಲ. ಕಳೆದ ನಾಲ್ಕು ವರ್ಷದಿಂದ ಈ ಪತ್ರಿಕೆ ತರುವುದಾಗಿಯೂ, ಪತ್ರಿಕೆಯನ್ನು ಶಾಲಾಮಕ್ಕಳೇ ಸಂಪಾದಿಸುತ್ತಿದ್ದು, ಅವರೇ ಬರೆದು, ಅವರೇ ಹಂಚುತ್ತಾರೆ ಎಂದು ಮತ್ತಷ್ಟು ವಿವರಿಸಿದರು. ಇದನ್ನು ಕೇಳಿ ಪೇಸ್‍ಬುಕ್‍ನಲ್ಲಿ ಮೆಚ್ಚುಗೆಯ ಪೋಸ್ಟ್ ಹಾಕಿ ಸುಮ್ಮನಾಗಿದ್ದೆ. ಇದೀಗ ರಾಷ್ಟ್ರೀಯ ಪತ್ರಿಕೆಗಳಲ್ಲಿ ಪೆನ್ಸಿಲ್ ಪತ್ರಿಕೆಯ ಬಗ್ಗೆ ವಿಶೇಷ ಸುದ್ದಿಗಳು ಪ್ರಕಟವಾಗಿ ಗಮನ ಸೆಳೆಯುತ್ತಿದೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಬೆಳಗುರ್ಕಿ ಒಂದು ಪುಟ್ಟ ಹಳ್ಳಿ. ಐದು ಸಾವಿರದಷ್ಟು ಜನಸಂಖ್ಯೆ ಇರುವ ಬೆಳಗುರ್ಕಿಯ ಶಾಲೆಯಲ್ಲಿ 310 ರಷ್ಟು ವಿದ್ಯಾರ್ಥಿಗಳಿದ್ದು, ಎಂಟು ಜನ ಶಿಕ್ಷಕರು, ಇಬ್ಬರು ಅತಿಥಿ ಶಿಕ್ಷಕರಿದ್ದಾರೆ. ಆ ಹಳ್ಳಿಗೆ ಈಗಲೂ ದಿನಪತ್ರಿಕೆಗಳು ಬರುವುದಿಲ್ಲ. ಆದರೆ ಈ ಊರಿನ ಹಿರಿಯರಿಗೆ ತಮ್ಮೂರಿನ ಶಾಲಾಮಕ್ಕಳ ಪೆನ್ಸಿಲ್ ಪತ್ರಿಕೆ ಅಚ್ಚುಮೆಚ್ಚು. ಹರಟೆಕಟ್ಟೆಗಳೀಗ `ಪೆನ್ಸಿಲ್ ಪತ್ರಿಕಾ’ ಕಟ್ಟೆಗಳಾಗಿ ಬದಲಾಗಿವೆ. ಈ ಪತ್ರಿಕೆಯ ಪ್ರಭಾವಕ್ಕೆ ಒಳಗಾಗಿ ಕೆಲವು ದಿನಪತ್ರಿಕೆಗಳೂ ಉಚಿತವಾಗಿ ಊರು ಸೇರುತ್ತಿವೆ. ಊರಲ್ಲೊಂದು ಓದುಗವರ್ಗ ಸೃಷ್ಠಿಯಾಗಿದೆ.

ಶಾಲೆಯಿಂದ ಹೊರಗುಳಿಯುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವುದರ ಉದ್ದೇಶದಿಂದ ಕೊಟ್ರೇಶ್ ಶಾಲಾ ಬಿಟ್ಟ ಮಕ್ಕಳ ಕತೆಯನ್ನು ಅವರದೆ ಫೋಟೋ ಹಾಕಿ ಆರಂಭಕ್ಕೆ ಗೋಡೆ ಪತ್ರಿಕೆಯಲ್ಲಿ ಪ್ರಕಟಿಸಲು ತೊಡಗುತ್ತಾರೆ. ಇದಕ್ಕೆ ಮಕ್ಕಳ ಪ್ರತಿಕ್ರಿಯೆ ಉತ್ಸಾಹ ಹೆಚ್ಚಾಗತೊಡಗುತ್ತದೆ. ಗೋಡೆ ಪತ್ರಿಕೆಯನ್ನೆ ಯಾಕೆ ಸ್ವತಂತ್ರ ಪತ್ರಿಕೆ ಮಾಡಬಾರದು ಎನ್ನುವ ಯೋಚನೆಯಿಂದ `ಪೆನ್ಸಿಲ್’ ಪತ್ರಿಕೆ ಹುಟ್ಟುತ್ತದೆ. ಪತ್ರಿಕೆಯೊಂದರಲ್ಲಿ ಕೆಲಸ ಮಾಡುವ ಕೊಟ್ರೇಶ್ ಅವರ ಸ್ನೇಹಿತ ಉಲ್ಲಾಸ್ ಎನ್ನುವವರು ಪುಟವಿನ್ಯಾಸ ಮಾಡುತ್ತಾರೆ. ಇದರಿಂದಾಗಿ ಯಾವುದೇ ದಿನಪತ್ರಿಕೆಗೂ ಕಡಿಮೆ ಇಲ್ಲದಂತೆ `ಪೆನ್ಸಿಲ್’ ರೂಪು ಪಡೆಯುತ್ತದೆ. ದೂರದ ನಗರಗಳಲ್ಲಿ ಮುದ್ರಣವಾಗಿ ಬರುವ ಪತ್ರಿಕೆಗಳ ಬಗೆಗೆ ಜನರಿಗಿದ್ದ ಸಹಜ ಕುತೂಹಲ `ನಮ್ಮೂರಿನ ಶಾಲೆಯೂ ಒಂದು ಪತ್ರಿಕೆ ತರುತ್ತಿದೆ’ ಎನ್ನುವ ಬೆರಗು ಮೂಡಿಸುತ್ತದೆ. ಈ ಬೆರಗಿನಿಂದಲೇ ಶಾಲಾಪತ್ರಿಕೆಯನ್ನು ಊರಿನ ಜನ ಓದಲು ತೊಡಗುತ್ತಾರೆ.

2013 ರ ಸೆಪ್ಟೆಂಬರ್ ತಿಂಗಳಲ್ಲಿ ಪೆನ್ಸಿಲ್‍ನ ಮೊದಲ ಮುದ್ರಿತ ಸಂಚಿಕೆ ಬರುತ್ತದೆ. 2016 ರ ತನಕ ಪೆನ್ಸಿಲ್ ಪತ್ರಿಕೆ ತಿಂಗಳ ಪತ್ರಿಕೆಯಾಗಿ ಪ್ರಕಟವಾಗುತ್ತಾ ಗಮನ ಸೆಳೆಯಿತು. 2016 ರಲ್ಲಿ ಪತ್ರಿಕೆ ರೂಪಿಸುವ ಹೊಣೆಹೊತ್ತ ಶಿಕ್ಷಕ ಕೊಟ್ರೇಶ್ ಅವರು ಬಿಇಓ ಕಚೇರಿಯ ಸಿಆರ್‍ಪಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಹೀಗಾಗಿ ಕೆಲಕಾಲ ಪತ್ರಿಕೆ ನಿಲ್ಲುತ್ತದೆ. ನಂತರ ಇಂಡಿಯನ್ ಫೌಂಡೇಷನ್ ಫಾರ್ ದಿ ಆಟ್ರ್ಸ್‍ನಲ್ಲಿ ಕೊಟ್ರೇಶ್ ತಮ್ಮ ಪತ್ರಿಕೆಗೆ ಆರ್ಥಿಕ ನೆರವು ಕೇಳಿದಾಗ ಫೌಂಡೇಷನ್ ಒಂದು ವರ್ಷದ ಪತ್ರಿಕೆ ವೆಚ್ಚವನ್ನು ಪ್ರಾಯೋಜಿಸುತ್ತಾರೆ. ಹೀಗಾಗಿ ಮತ್ತಷ್ಟು ಉತ್ಸಾಹದೊಂದಿಗೆ ಪತ್ರಿಕೆ ದ್ವೈಮಾಸಿಕ ಸಂಚಿಕೆಯಾಗಿ ಮುದ್ರಿತವಾಗುತ್ತದೆ. ಇದೀಗ ಊರಿನವರೆ ಒಂದೊಂದು ಸಂಚಿಕೆಯ ವೆಚ್ಚವನ್ನು ಪ್ರಾಯೋಜಿಸಲು ಮುಂದೆ ಬರುವಷ್ಟು ಪತ್ರಿಕೆ ಬೇರುಬಿಟ್ಟಿದೆ. ಮುಂದೆ ಹಣದ ಕೊರತೆಯಿಂದ ಪತ್ರಿಕೆ ನಿಂತರೆ ಹೇಗೆ ಎಂದು ಕೊಟ್ರೇಶ್ ಮಕ್ಕಳನ್ನು ಕೇಳಿದರೆ, ನಾವೇ ಸೇವಿಂಗ್ಸ್ ಬ್ಯಾಂಕ್ ಮೂಲಕ ಹಣ ಉಳಿಸಿ ಪ್ರಕಟಿಸೋಣ ಸರ್ ಎಂದು ಮಕ್ಕಳೆ ಕೊಟ್ರೇಶರಿಗೆ ದೈರ್ಯ ತುಂಬುತ್ತಾರೆ.

ಕರ್ನಾಟಕದ ಬೇರೆ ಬೇರೆ ಶಾಲೆಗಳಲ್ಲಿ ಶಿಕ್ಷಕರು ಶಾಲಾಪತ್ರಿಕೆಗಳನ್ನು ರೂಪಿಸುತ್ತಿದ್ದಾರೆ. ಆದರೆ ಪೆನ್ಸಿಲ್ ಪತ್ರಿಕೆಗೂ ಅವುಗಳಿಗೂ ಫರಕಿದೆ. ಮೊದಲನೆಯದಾಗಿ ಬಹುಪಾಲು ಶಿಕ್ಷಕರು ಮಕ್ಕಳಿಗಾಗಿ ಬರೆದ ಅಥವಾ ಸಂಗ್ರಹಿಸಿದ ಬರಹಗಳಿರುತ್ತವೆ. ಆದರೆ ಪೆನ್ಸಿಲ್ ಪತ್ರಿಕೆಯಲ್ಲಿ ಶಿಕ್ಷಕರ ಸಂಪಾದಕೀಯ ಹೊರತುಪಡಿಸಿದರೆ ಇಡೀ ಪತ್ರಿಕೆ ತುಂಬಾ ಶಾಲೆಯ ಮಕ್ಕಳೇ ಬರೆಯುತ್ತಾರೆ. ಮುಖ್ಯವಾಗಿ ಬೇರೆ ಪತ್ರಿಕೆಗಳು ಆಯಾ ಶಾಲೆ, ಶಾಲೆಯ ಮಕ್ಕಳಿಗೆ ಸೀಮಿತವಾಗಿದ್ದರೆ, ಪೆನ್ಸಿಲ್ ಪತ್ರಿಕೆ ಊರಿನ ಮನೆಮನೆಗೆ ಹಂಚಲ್ಪಡುತ್ತದೆ. ಹಾಗಾಗಿ ಪತ್ರಿಕೆ ಜನಸಮುದಾಯಕ್ಕೆ ವಿಸ್ತರಿಸಿದೆ. ಶಾಲಾಮಕ್ಕಳು ತಮ್ಮದೇ ಊರಿನ ಕಲಾವಿದರು, ಹಿರಿಯರು, ಸಾಧಕರನ್ನು ಸಂದರ್ಶನ ಮಾಡುತ್ತಾರೆ. ತಮ್ಮ ಊರಿನ ಹಬ್ಬ ಜಾತ್ರೆಗಳ ಬಗ್ಗೆಯೂ, ಶಾಲಾ ಕಾರ್ಯಕ್ರಮಗಳ ಬಗ್ಗೆಯೂ ವರದಿ ಮಾಡುತ್ತಾರೆ. ಹೀಗಾಗಿಯೇ ಶಾಲಾಮಕ್ಕಳನ್ನು ಸಮೀಪದ ಪತ್ರಿಕಾ ಕಚೇರಿಗಳಿಗೂ ಭೇಟಿಮಾಡಿಸಲಾಗುತ್ತದೆ. ಪತ್ರಕರ್ತರೊಂದಿಗೆ ಮಕ್ಕಳ ಸಂವಾದಗಳನ್ನು ಏರ್ಪಡಿಸಲಾಗುತ್ತದೆ. ಶಾಲಾ ಮಕ್ಕಳು ಏಕಕಾಲದಲ್ಲಿ ಪತ್ರಕರ್ತರಂತೆಯೂ, ಪತ್ರಿಕೆ ರೂಪುಗೊಳ್ಳುವ ಸಮಯಕ್ಕೆ ಶಾಲೆಯೇ ಪತ್ರಿಕಾ ಕಚೇರಿಯಂತೆಯೂ ಬದಲಾಗುತ್ತದೆ.

ಕೊಟ್ರೇಶ್ ಮಾತನಾಡುತ್ತಾ `ನಮ್ಮ ಶಾಲೆಯ ಮುಖ್ಯ ಶಿಕ್ಷಕರಾದ ಪರಮೇಶ್ ಚಿಂತಮಾನದೊಡ್ಡಿ, ಶಿಕ್ಷಕರಾದ ಪುಟ್ಟಸ್ವಾಮಿ, ಮಲ್ಲೇಶ್ ಕರಿಗಾರ, ತಿಮ್ಮಾರೆಡ್ಡಿ, ಸುನೀಲ್, ಶಿಕ್ಷಕಿಯರಾದ ಮೀನಾಕ್ಷಿ, ಬಸಿರಾ ಬೇಗಂ ಎಲ್ಲರ ಶ್ರಮದಿಂದಾಗಿ ಪೆನ್ಸಿಲ್ ಪತ್ರಿಕೆ ರೂಪುಗೊಳ್ಳುತ್ತಿದೆ. ಅಂತೆಯೇ ಬೆಳಗುರ್ಕಿಯ ಗ್ರಾಮಸ್ಥರು, ನಮ್ಮ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮಾಧ್ಯಮದ ಸ್ನೇಹಿತರು ತುಂಬಾ ಸಹಕಾರ ಕೊಡುತ್ತಿದ್ದಾರೆ. ಇಂಡಿಯನ್ ಫೌಂಡೇಷನ್ ಫಾರ್ ದಿ ಆಟ್ರ್ಸ್(ಕಲಿ-ಕಲಿಸು) ಕಲಾ ಅಂತರ್ಗತ ಯೋಜನೆಗೆ ನಮ್ಮ ಶಾಲೆಯನ್ನು ಆಯ್ದುಕೊಂಡಿದ್ದಾರೆ. ಈ ಸಂಸ್ಥೆಯ ಕಾರ್ಯಕ್ರಮ ನಿರ್ವಾಹಕರಾದ ಕೃಷ್ಣಮೂರ್ತಿ ಹಾಗೂ ರಾಧಿಕಾ ಭಾರದ್ವಾಜ್ ಅವರುಗಳು ಪತ್ರಿಕೆಗೆ ಮಾರ್ಗದರ್ಶನ ಮಾಡುತ್ತಾರೆ. ನಾನು ಪತ್ರಿಕೆಯ ಜವಾಬ್ದಾರಿ ನಿರ್ವಹಿಸಿದರೂ, ಅದರ ಹಿಂದೆ ಈ ಎಲ್ಲರ ಸಹಕಾರ ಮತ್ತು ಪ್ರೀತಿಯೇ ಪೆನ್ಸಿಲ್ ಪತ್ರಿಕೆಯನ್ನು ಗಮನ ಸೆಳೆಯುವಂತೆ ಮಾಡಿದೆ. ಇದರಿಂದಾಗಿ ನಮ್ಮ ಜವಾಬ್ದಾರಿಯೂ ಹೆಚ್ಚಾಗಿದೆ’ ಎನ್ನುತ್ತಾರೆ.

ಇದೀಗ ಬೆಳಗುರ್ಕಿ ಶಾಲೆಯ ಮಕ್ಕಳು ಮಕ್ಕಳ ಗ್ರಾಮಸಭೆಗೆ ಹಾಜರಾಗಿ ಜಬರ್ದಸ್ತ್ ಪ್ರಶ್ನೆ ಮಾಡಿ ಗ್ರಾಮಪಂಚಾಯ್ತಿಯಿಂದ ಶಾಲೆಗೆ ಬರಬೇಕಾದ ಸೌಲಭ್ಯಗಳನ್ನು ಪಡೆದಿದ್ದಾರೆ. ಈಗಾಗಲೆ ಮಕ್ಕಳೆಲ್ಲಾ ಸೇರಿ ನಮ್ಮೂರಲ್ಲಿ ಸಾರಾಯಿ ಅಂಗಡಿಯನ್ನು ಏಕೆ ನಿಲ್ಲಿಸಬಾರದು? ನಾವು ನಮ್ಮ ಪತ್ರಿಕೆಗೆ ಈಗಿನ ಶಿಕ್ಷಣ ಮಂತ್ರಿಯನ್ನೇಕೆ ಸಂದರ್ಶನ ಮಾಡಬಾರದು ಎಂದೆಲ್ಲಾ ಯೋಚನೆ ಮಾಡಲು ಶುರು ಮಾಡಿದ್ದಾರೆ. ಹೀಗೆ ಸದ್ದಿಲ್ಲದಂತೆ ಪೆನ್ಸಿಲ್ ಪತ್ರಿಕೆ ಶಾಲಾಮಕ್ಕಳನ್ನು ಜಾಗೃತ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಪ್ರೇರೇಪಿಸುತ್ತಿದೆ. ಕೊಟ್ರೇಶ್‍ನಂತಹ ಶಿಕ್ಷಕರೂ, ಪೆನ್ಸಿಲ್‍ನಂತಹ ಪತ್ರಿಕೆಗಳು ಎಲ್ಲಾ ಸರಕಾರಿ ಶಾಲೆಗಳಲ್ಲೂ ಜೀವ ತಳೆಯಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...