Homeಮುಖಪುಟರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

- Advertisement -
- Advertisement -

ರಾಜ್ಯಕ್ಕೆ ಮರಳುವ ಬಂಗಾಳದ ವಲಸೆ ಕಾರ್ಮಿಕರು ಮಾಸಿಕ 5 ಸಾವಿರ ರೂಪಾಯಿ ಧನ ಸಹಾಯ ಪಡೆಯಲಿದ್ದಾರೆ ಎಂದು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆ.18) ಘೋಷಿಸಿದ್ದಾರೆ.

ರಾಜ್ಯ ಆಡಳಿತ ಕೇಂದ್ರವಾದ ನಬನ್ನಾದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಮಮತಾ ಬ್ಯಾನರ್ಜಿ, “ಇತರ ರಾಜ್ಯಗಳಿಂದ ಪಶ್ಚಿಮ ಬಂಗಾಳಕ್ಕೆ ಹಿಂದಿರುಗುವ ವಲಸೆ ಕಾರ್ಮಿಕರಿಗೆ ಮುಂದಿನ 12 ತಿಂಗಳವರೆಗೆ ಮಾಸಿಕ 5,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುವುದು ಮತ್ತು ‘ಖಾದ್ಯ ಸತಿ’ ಮತ್ತು ‘ಸ್ವಸ್ಥ ಸತಿ’ ನಂತಹ ಸಾಮಾಜಿಕ ಪ್ರಯೋಜನಗಳನ್ನು ಅವರು ಪಡೆಯಬಹುದು ಎಂದು ಹೇಳಿದ್ದಾರೆ.

ಈ ಸೌಲಭ್ಯಗಳನ್ನು ಜಾರಿಗೆ ತರಲು ‘ಶ್ರಮಶ್ರೀ’ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

“ಈ ಯೋಜನೆಯು ಬಂಗಾಳದ ವಲಸೆ ಕಾರ್ಮಿಕರಿಗೆ ಮಾತ್ರ ಅನ್ವಯವಾಗುತ್ತದೆ. ರಾಜ್ಯಕ್ಕೆ ಮರಳುವವರು ಪ್ರಯಾಣ ಸಹಾಯದೊಂದಿಗೆ 5,000 ರೂ.ಗಳ ಒಂದು ಮೊದಲ ಪಾವತಿಯನ್ನು ಪಡೆಯಲಿದ್ದಾರೆ. ಇದು ಪುನರ್ವಸತಿ ಭತ್ಯೆಯಾಗಿದೆ. ಅವರಿಗೆ ಹೊಸ ಕೆಲಸದ ವ್ಯವಸ್ಥೆ ಮಾಡುವವರೆಗೆ, ಕನಿಷ್ಠ ಒಂದು ವರ್ಷದವರೆಗೆ ತಿಂಗಳಿಗೆ 5,000 ರೂ.ಗಳ ಆರ್ಥಿಕ ಸಹಾಯವನ್ನು ಸಹ ನೀಡಲಾಗುವುದು” ಎಂದು ಮಮತಾ ಬ್ಯಾರ್ಜಿ ತಿಳಿಸಿದ್ದಾರೆ.

ಈ ಯೋಜನೆಗೆ ಪಶ್ಚಿಮ ಬಂಗಾಳ ಕಾರ್ಮಿಕ ಇಲಾಖೆ ನೋಡಲ್ ಇಲಾಖೆಯಾಗಿದೆ. ರಾಜ್ಯ ಸರ್ಕಾರದ ‘ಉತ್ಕರ್ಷ್ ಬಾಂಗ್ಲಾ’ ಯೋಜನೆಯ ಮೂಲಕ ವಲಸೆ ಕಾರ್ಮಿಕರಿಗೆ ಕೌಶಲ್ಯ ತರಬೇತಿಯನ್ನೂ ನೀಡಲಾಗುವುದು ಎಂದು ಹೇಳಿದ್ದಾರೆ.

“ರಾಜ್ಯಕ್ಕೆ ಮರಳುವ ಕಾರ್ಮಿಕರ ಕೌಶಲ್ಯಗಳನ್ನು ನಾವು ಪರಿಶೀಲಿಸುತ್ತೇವೆ. ಅವರಲ್ಲಿ ಕೌಶಲ್ಯವಿದ್ದರೆ ಅದಕ್ಕೆ ತಕ್ಕ ತರಬೇತಿ ನೀಡುತ್ತೇವೆ. ಅಲ್ಲದೆ, ಉದ್ಯೋಗವನ್ನೂ ಒದಗಿಸುತ್ತೇವೆ. ಜೊತೆಗೆ ‘ಉದ್ಯೋಗ ಕಾರ್ಡ್’ಗಳನ್ನು ವಿತರಿಸುತ್ತೇವೆ. ‘ಕರ್ಮಶ್ರೀ’ ಯೋಜನೆಯಡಿ ಇದುವರೆಗೆ 78 ಲಕ್ಷ ಉದ್ಯೋಗ ಕಾರ್ಡ್‌ಗಳನ್ನು ನೀಡಲಾಗಿದೆ” ಎಂದು ಸಿಎಂ ತಿಳಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಮನೆ ಇಲ್ಲದಿದ್ದರೆ ಸಮುದಾಯ ತರಬೇತಿ ಕೇಂದ್ರಗಳಲ್ಲಿ ಅವರಿಗೆ ವಸತಿ ಒದಗಿಸಲಾಗುವುದು. ಅವರ ಮಕ್ಕಳಿಗೆ ಶಾಲಾ ಪ್ರವೇಶ ವ್ಯವಸ್ಥೆ ಮಾಡಲಾಗುವುದು. ಇದಲ್ಲದೆ ವಲಸೆ ಕಾರ್ಮಿಕರು ‘ಕನ್ಯಾಶ್ರೀ’ ಮತ್ತು ‘ಶಿಕ್ಷಶ್ರೀ’ಯ ಯೋಜನೆಗಳ ಪ್ರಯೋಜನಗಳನ್ನು ಕೂಡ ಪಡೆಯಲಿದ್ದಾರೆ ಎಂದಿದ್ದಾರೆ.

“ಬಂಗಾಳದಿಂದ ವಲಸೆ ಹೋಗಿರುವ 22.40 ಲಕ್ಷ ಕಾರ್ಮಿಕರಿಗೆ ‘ಶ್ರಮಶ್ರೀ’ ಯೋಜನೆಯ ಪ್ರಯೋಜನಗಳು ಸಿಗಲಿವೆ. ಅವರು ‘ಶ್ರಮಶ್ರೀ’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡರೆ, ಐ-ಕಾರ್ಡ್ ನೀಡಲಾಗುವುದು. ಇದರ ಮೂಲಕ ಅವರು ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಾರೆ” ಎಂದು ಮಾಹಿತಿ ನೀಡಿದ್ದಾರೆ.

ಕಳೆದ ಕೆಲ ದಿನಗಳಲ್ಲಿ, ಇತರ ರಾಜ್ಯಗಳಲ್ಲಿ ಚಿತ್ರಹಿಂಸೆಗೊಳಗಾದ 2,700 ಕುಟುಂಬಗಳು ಬಂಗಾಳಕ್ಕೆ ಮರಳಿವೆ . ರಾಜ್ಯ ಸರ್ಕಾರವು 10,000ಕ್ಕೂ ಹೆಚ್ಚು ಜನರನ್ನು ಕರೆತಂದಿದೆ ಎಂದು ಸಿಎಂ ವಿವರಿಸಿದ್ದಾರೆ.

ಬಿಜೆಪಿಯ ಹೆಸರನ್ನು ಉಲ್ಲೇಖಿಸದೆ, ‘ಡಬಲ್ ಎಂಜಿನ್ ಸರ್ಕಾರ’ ಆಳ್ವಿಕೆ ನಡೆಸುತ್ತಿರುವ ವಿವಿಧ ರಾಜ್ಯಗಳಲ್ಲಿ ಬಂಗಾಳಿ ಭಾಷೆ ಮತ್ತು ಬಂಗಾಳಿ ಗುರುತಿನ ಮೇಲೆ ದಾಳಿ ನಡೆಸಲಾಗುತ್ತಿದೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಯಾರಾದರೂ ಬಂಗಾಳಿ ಮಾತನಾಡಿದರೆ, ಅವರನ್ನು ಅಪರಾಧಿ ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ. ಸಿಕ್ಕ ಸಿಕ್ಕವರನ್ನು ಬಾಂಗ್ಲಾದೇಶಕ್ಕೆ ತಳ್ಳಲಾಗುತ್ತಿದೆ. ಎಲ್ಲೋ ಅವರನ್ನು ಜೈಲಿಗೆ ಹಾಕಲಾಗುತ್ತಿದೆ. ಎಲ್ಲೋ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಕಿರುಕುಳ ನೀಡಲಾಗುತ್ತಿದೆ” ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಸುಮಾರು 22 ಲಕ್ಷ ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಬಂಗಾಳಿ ಮಾತನಾಡಿದಕ್ಕಾಗಿ ಕಿರುಕುಳ ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇತರ ರಾಜ್ಯಗಳ ಸುಮಾರು 1.5 ಕೋಟಿ ಜನರು ಕೆಲಸ ಮಾಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಇದೇ ವೇಳೆ ಹೇಳಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ | ‘ಇಂಡಿಯಾ’ ಅಭ್ಯರ್ಥಿಯಾಗಿ ನಿವೃತ್ತ ನ್ಯಾ. ಬಿ ಸುದರ್ಶನ್ ರೆಡ್ಡಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...