Homeಮುಖಪುಟಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್...

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

- Advertisement -
- Advertisement -

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ 3,000 ಬಿಘಾ ಅಥವಾ ಸುಮಾರು 1 ಸಾವಿರ ಎಕರೆ ಭೂಮಿಯನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ಮಂಜೂರು ಮಾಡಿದ್ದಕ್ಕೆ ಗುವಾಹಟಿ ಹೈಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದ್ದು, ಯಾವ ನಿಯಮದಡಿ ಇಷ್ಟು ದೊಡ್ಡ ಪ್ರಮಾಣದ ಭೂಮಿ ನೀಡಲಾಗಿದೆ ಎಂದು ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಒಂದು ಸಾವಿರ ಎಕರೆ ಭೂಮಿಯನ್ನು ಒಂದು ಸಿಮೆಂಟ್ ಕಾರ್ಖಾನೆಗೆ ಧಾರೆ ಎರೆದಿರುವುದು ಕೇವಲ ಒಂದು ವ್ಯವಹಾರವಾಗಿ ಉಳಿದಿಲ್ಲ, ಇದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದ ಹೈಕೋರ್ಟ್ ನ್ಯಾಯಾಧೀಶ ಸಂಜಯ್ ಕುಮಾರ್ ಮೇಧಿ ಅವರು, “ಇದೇನು ತಮಾಷೆಯೇ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಏನಿದು ಪ್ರಕರಣ?

2024ರ ಅಕ್ಟೋಬರ್‌ನಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ದಿಮಾ ಹಸಾವೊ ಜಿಲ್ಲೆಯಲ್ಲಿ 2,000 ಬಿಘಾ ಅಥವಾ ಸುಮಾರು 650ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಬಳಿಕ ಅದೇ ವರ್ಷ ನವೆಂಬರ್‌ನಲ್ಲಿ ಮತ್ತೆ 1000 ಸಾವಿರ ಬಿಘಾ ಅಥವಾ ಸುಮಾರು 330 ಎಕರೆ ಭೂಮಿ ಹೆಚ್ಚುವರಿಯಾಗಿದೆ ನೀಡಿದೆ.

ದಿಮಾ ಹಸಾವೊ ಅಸ್ಸಾಂನಲ್ಲಿರುವ ಬುಡಕಟ್ಟು ಜನಾಂಗದವರು ಬಹುಸಂಖ್ಯಾತರಾಗಿರುವ ಗುಡ್ಡಗಾಡು ಜಿಲ್ಲೆಯಾಗಿದೆ. ಇದನ್ನು ಸಂವಿಧಾನದ ಆರನೇ ಶೆಡ್ಯೂಲ್‌ನ ನಿಬಂಧನೆಗಳ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಮೂಲಕ ನಿರ್ವಹಿಸಲಾಗುತ್ತದೆ.

ಸಂವಿಧಾನದ ಆರನೇ ಶೆಡ್ಯೂಲ್ ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಮಿಜೋರಾಂನಲ್ಲಿನ ಬುಡಕಟ್ಟು ಪ್ರದೇಶಗಳ ಆಡಳಿತವನ್ನು ನಿಯಂತ್ರಿಸುತ್ತದೆ.

ಅಕ್ಟೋಬರ್ 2024ರಲ್ಲಿ ಸಿಮೆಂಟ್ ಕಾರ್ಖಾನೆಗೆ ಭೂಮಿ ಮಂಜೂರು ಮಾಡುವ ಆದೇಶವನ್ನು ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಹೆಚ್ಚುವರಿ ಕಾರ್ಯದರ್ಶಿ (ಕಂದಾಯ) ಹೊರಡಿಸಿದ್ದರು. ಹಂಚಿಕೆಯ ಉದ್ದೇಶ ಸಿಮೆಂಟ್ ಕಾರ್ಖಾನೆ ಸ್ಥಾಪಿಸುವುದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಭೂಮಿ ಮಂಜೂರಾತಿ ವಿರುದ್ದ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ಕಳೆದವಾರ ಗುವಾಹಟಿ ಹೈಕೋರ್ಟ್‌ನಲ್ಲಿ ನಡೆದಿದೆ.

ಸಿಮೆಂಟ್ ಕಾರ್ಖಾನೆಗೆ ಕೊಡಲು ನಮ್ಮ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ದಿಮಾ ಹಸಾವೊನ ಸ್ಥಳೀಯರ ಗುಂಪೊಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಈ ವರ್ಷದ ಆರಂಭದಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು, ನಿರ್ಮಾಣ ಕಾರ್ಯಗಳಲ್ಲಿ ‘ಸ್ಥಳೀಯ ಗ್ರಾಮಸ್ಥರು ಸೃಷ್ಟಿಸುವ ಅಡಚಣೆಗಳಿಂದ’ ರಕ್ಷಣೆ ಕೋರಿ ಆರಂಭಿಕ ಅರ್ಜಿಯನ್ನು ಸಲ್ಲಿಸಿತ್ತು.

ಆಗಸ್ಟ್ 12ರಂದು ತನ್ನ ಆದೇಶದಲ್ಲಿ ನ್ಯಾಯಾಲಯವು “ಪ್ರಕರಣದ ಸತ್ಯಾಸತ್ಯತೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮಂಜೂರು ಮಾಡಲು ಕೋರಿರುವ ಭೂಮಿ ಸುಮಾರು 3,000 ಬಿಘಾಗಳಾಗಿದ್ದು, ಅದು ಅಸಾಧಾರಣವೆಂದು ತೋರುತ್ತದೆ” ಎಂದು ಹೇಳಿದೆ.

“3,000 ಬಿಘಾ ಅಳತೆಯ ಇಷ್ಟು ದೊಡ್ಡ ಭೂಮಿಯನ್ನು ಕಾರ್ಖಾನೆಗೆ ಹಂಚಿಕೆ ಮಾಡುವ” ನೀತಿಯನ್ನು ಒಳಗೊಂಡಿರುವ ದಾಖಲೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಜಿಲ್ಲೆಯ ಉಮ್ರಾಂಗ್ಸೊ ಪ್ರದೇಶವು “ವಲಸೆ ಹಕ್ಕಿಗಳು, ವನ್ಯಜೀವಿಗಳು ಇತ್ಯಾದಿಗಳಿಗೆ ಬಿಸಿನೀರಿನ ಬುಗ್ಗೆ, ನಿಲುಗಡೆ ಸ್ಥಳಗಳನ್ನು ಹೊಂದಿರುವ ಪರಿಸರ ತಾಣ” ಎಂಬುವುದನ್ನೂ ನ್ಯಾಯಾಲಯ ಗಮನಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

ವಿಚಾರಣೆ ವೇಳೆ, ನ್ಯಾಯಮೂರ್ತಿಗಳು ಸರ್ಕಾರದ ನಿರ್ಧಾರವನ್ನು ಕಂಡು ದಂಗಾಗಿದ್ದಾರೆ. ನ್ಯಾಯಾಧೀಶರು ಸರ್ಕಾರದ ವಕೀಲರನ್ನು ಕೇಳಿದ ಪ್ರಶ್ನೆಯ ವೀಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ.

ನ್ಯಾಯಾಧೀಶರು ಆಶ್ಚರ್ಯ ಮತ್ತು ಆಕ್ರೋಶದಿಂದ, “ಇದೇನು ತಮಾಷೆಯೇ? ನೀವು ಇಡೀ ಜಿಲ್ಲೆಯನ್ನೇ ಕೊಡುತ್ತಿದ್ದೀರಿ. ನಿಮ್ಮ ಅಗತ್ಯ ಮುಖ್ಯವಲ್ಲ, ಸಾರ್ವಜನಿಕ ಹಿತಾಸಕ್ತಿಯೇ ಇಲ್ಲಿ ಮುಖ್ಯ,” ಎಂದು ಖಡಕ್ ಮಾತುಗಳಲ್ಲಿ ಹೇಳಿದ್ದಾರೆ.

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...