Homeಕರ್ನಾಟಕಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ, ಕ್ಷೇಮಾಭಿವೃದ್ಧಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ, ಕ್ಷೇಮಾಭಿವೃದ್ಧಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ-2025 ವಿಧಾನಸಭೆಯ ಮಂಗಳವಾರ (ಆ.19) ಅಂಗೀಕಾರಗೊಂಡಿದೆ.

ಗಿಗ್ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಈ ವಿಧೇಯಕ ಸಾಮಾಜಿಕ ಭದ್ರತೆ, ಔದ್ಯೋಗಿಕ ಆರೋಗ್ಯ ಮತ್ತು ಗಿಗ್ ಕಾರ್ಮಿಕರ ಸುರಕ್ಷತೆಗಾಗಿ ಅಗ್ರಿಗೇಟರ್‌ಗಳ ಮೇಲೆ ಜವಾಬ್ದಾರಿಗಳನ್ನು ಹೇರುವ ಗುರಿಯನ್ನು ಹೊಂದಿದೆ. ಇದು ರಾಜ್ಯಾದ್ಯಂತ ವಿವಿಧ ವೇದಿಕೆಗಳಲ್ಲಿ ಕೆಲಸ ಮಾಡುವ ಸುಮಾರು 4 ಲಕ್ಷ ಗಿಗ್ ಕಾರ್ಮಿಕರನ್ನು ಒಳಗೊಳ್ಳುತ್ತದೆ.

ವಿಧಾನಸಭೆ ಶಾಸನ ರಚನೆ ಕಲಾಪದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ವಿಧೇಯಕವನ್ನು ಮಂಡಿಸಿದರು. ಬಳಿಕ ವಿವರಣೆ ನೀಡಿದ ಅವರು, ಇದು ಸವಾರಿ ಹಂಚಿಕೆ, ಆಹಾರ ಮತ್ತು ಕಿರಾಣಿ ವಿತರಣೆ, ಲಾಜಿಸ್ಟಿಕ್ಸ್ ಸೇವೆಗಳು, ಇ-ಮಾರುಕಟ್ಟೆ, ವೃತ್ತಿಪರ ಸೇವೆಗಳನ್ನು ಒದಗಿಸುವವರು, ಆರೋಗ್ಯ ಸಂರಕ್ಷಣೆ, ಪ್ರವಾಸ ಮತ್ತು ಆತಿಥ್ಯ, ವಿಷಯ ಮತ್ತು ಮಾಧ್ಯಮ ಸೇವೆಗಳು ಸೇರಿ ಒಟ್ಟು ಎಂಟು ಸೇವೆಗಳಿಗೆ ಅನ್ವಯಿಸುತ್ತದೆ ಎಂದು ತಿಳಿಸಿದರು.

ಈ ಮಸೂದೆಯು ಸರ್ಕಾರ ಗಿಗ್ ಕಾರ್ಮಿಕರ ಕಲ್ಯಾಣ ನಿಧಿಗಾಗಿ ಅಗ್ರಿಗೇಟರ್‌ಗಳ ಮೇಲೆ ಶೇಕಡಾ 1 ರಿಂದ 5 ರವರೆಗೆ ಕಲ್ಯಾಣ ಶುಲ್ಕವನ್ನು ವಿಧಿಸಲು ಅವಕಾಶ ನೀಡುತ್ತದೆ. ಈ ಶುಲ್ಕವನ್ನು ಏಕರೂಪವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಹಾಗಾಗಿ, ನಿಯಮಗಳನ್ನು ರೂಪಿಸಿದಾಗ ಸರ್ಕಾರವು ಕಲ್ಯಾಣ ಶುಲ್ಕವನ್ನು ಸಹ ನಿರ್ಧರಿಸುತ್ತದೆ” ಎಂದು ಸಂತೋಷ್ ಲಾಡ್ ಹೇಳಿದರು.

ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ವಿವಿಧ ಅಗ್ರಿಗೇಟರ್‌ಗಳಿಗೆ ಶುಲ್ಕದಲ್ಲಿನ ವ್ಯತ್ಯಾಸವು ಭ್ರಷ್ಟಾಚಾರಕ್ಕೆ ಕಾರಣವಾಗಬಹುದು ಎಂದು ಹೇಳಿದರು. ಒಂದೇ ರೀತಿಯ ದರ ನಿಗದಿಪಡಿಸುವುದು ಸೂಕ್ತ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ವಿವಿಧ ಅಗ್ರಿಗೇಟರ್‌ಗಳಲ್ಲಿ ವ್ಯತ್ಯಾಸಗಳಿರುವುದರಿಂದ ಹಾಗೆ ಮಾಡಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ : ನಮ್ಮ ಯಾತ್ರಿ (ರೈಡ್-ಹೇಲಿಂಗ್ ಅಪ್ಲಿಕೇಶನ್) ನೇರವಾಗಿ ವಿಧಿಸುವ ಮೊತ್ತವನ್ನು (ಚಾಲಕರಿಗೆ) ವರ್ಗಾಯಿಸುತ್ತದೆ. ಹಾಗಾದರೆ, ನಾವು ಅದನ್ನು ಬಳಕೆದಾರ ಶುಲ್ಕದಿಂದ ತೆಗೆದುಕೊಳ್ಳಬೇಕೇ? ಅರ್ಬನ್ ಕ್ಲಾಪ್‌ನಂತಹ ಕಂಪನಿಗಳು ಸೇವಾ ಮತ್ತು ಸಾರಿಗೆ ಶುಲ್ಕವನ್ನು ಪಾವತಿಸುತ್ತವೆ. ಅದನ್ನು ಅವರಿಂದ ಹೇಗೆ ಸಂಗ್ರಹಿಸಬೇಕು?” ಎಂದು ಪ್ರಶ್ನಿಸಿದರು. ಶುಲ್ಕವನ್ನು ಅಂತಿಮಗೊಳಿಸಲು ಸರ್ಕಾರ ತಜ್ಞರೊಂದಿಗೆ ಚರ್ಚೆ ನಡೆಸಿದೆ ಎಂದು ತಿಳಿಸಿದರು.

ವಿಧೇಯಕದ ಅಗತ್ಯವನ್ನು ವಿವರಿಸಿದ ಸಚಿವರು, ಕೆಲವು ಗಿಗ್ ಕಾರ್ಮಿಕರು ಸುಮಾರು 1,600 ರಿಂದ 1,800 ರೂ. ಗಳಿಸಲು 16 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ರೀತಿಯ ಕೆಲಸದ ಕಾರಣದಿಂದಾಗಿ, ಈ ಕಾರ್ಮಿಕರು ಭವಿಷ್ಯದಲ್ಲಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಬಿಜೆಪಿ ಶಾಸಕ ಧೀರಜ್ ಮುನಿರಾಜು ಮಾತನಾಡಿ, “ಸರ್ಕಾರ ಗಿಗ್ ಕಾರ್ಮಿಕರಿಗೆ ಕನಿಷ್ಠ ವೇತನ ಮತ್ತು ಗರಿಷ್ಠ ಕೆಲಸದ ಸಮಯವನ್ನು ನಿಗದಿಪಡಿಸಬಹುದೇ? ಎಂದು ಕೇಳಿದರು. ಎಲ್ಲಾ ಗಿಗ್ ಕೆಲಸಗಾರರನ್ನು ‘ಫ್ಲೆಕ್ಸಿ-ಹವರ್ ಆಧಾರದ ಮೇಲೆ’ ನೇಮಿಸಿಕೊಳ್ಳಲಾಗುತ್ತದೆ ಮತ್ತು ಅವರು ಬಯಸಿದಷ್ಟು ಕೆಲಸ ಮಾಡಲು ಸ್ವತಂತ್ರರು ಎಂದು ಸಚಿವರು ಉತ್ತರಿಸಿರು. ಅವರಿಗೆ ಕೆಲಸವನ್ನು ನಿರಾಕರಿಸುವ ಹಕ್ಕಿದೆ’ಎಂದು ತಿಳಿಸಿದರು.

ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುದಕ್ಕೂ ಮೊದಲು ಸರ್ಕಾರ ಈ ವರ್ಷದ ಆರಂಭದಲ್ಲಿ ಇದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿತ್ತು.

ಧರ್ಮಸ್ಥಳದಲ್ಲಿ ಶವ ಶೋಧ ಮುಂದುವರಿಸಬೇಕೆ ಬೇಡವೇ ಎಂದು ಎಸ್‌ಐಟಿ ತೀರ್ಮಾನಿಸುತ್ತದೆ: ಗೃಹ ಸಚಿವ ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...