Homeಕರ್ನಾಟಕಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

ಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 2013ರಲ್ಲಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿದ್ದ ಕಾಂಗ್ರೆಸ್‍ಗೂ, ದಿವಂಗತ ದೇವರಾಜು ಅರಸು ನಂತರ 5 ವರ್ಷ ಸುಭದ್ರ ಸರ್ಕಾರ ನೀಡಿದ ಖ್ಯಾತಿಗೆ ಒಳಗಾಗಿದ್ದ ಸಿದ್ದರಾಮಯ್ಯನವರಿಗೂ 2018ರ ವಿಧಾನಸಭೆ ದೊಡ್ಡ ಹೊಡೆತ ಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ 122 ಸ್ಥಾನದಿಂದ ಕೇವಲ 88 ಸ್ಥಾನಕ್ಕೆ ಕುಸಿದಿತ್ತು. ಆದರೂ ಪಕ್ಷದಲ್ಲಿ ರಾಜೀನಾಮೆ ಪರ್ವ ಆರಂಭವಾಗಿರಲಿಲ್ಲ.

ಇನ್ನು 2019ರ ಲೋಕಸಭಾ ಚುನಾವಣೆಯಂತೂ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಹೇಳಹೆಸರಿಲ್ಲದಂತೆ ಮಾಡಿತ್ತು. 2014ರಲ್ಲಿ ದೇಶಾದ್ಯಂತ ವ್ಯಾಪಿಸಿದ್ದ ನರೇಂದ್ರ ಮೋದಿ ಅಲೆಯ ನಡುವೆಯೂ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸಿಕೊಂಡು ಚುನಾವಣೆ ಎದುರಿಸಿದ್ದಾಗ್ಯೂ ಕೇವಲ 1 ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಾಗಿ ಬಂದದ್ದು ವಿಪರ್ಯಾಸ. ಆಗಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಲಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರಾಗಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಈ ಒಂದು ಉಪಚುನಾವಣೆ ಕೈ ಪಕ್ಷದಲ್ಲಿ ದೊಡ್ಡ ತಲ್ಲಣಕ್ಕೆ ಕಾರಣವಾಗಿದೆ.

ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ.

ಉಪಚುನಾವಣೆಯ ಹೊಣೆಹೊತ್ತು ಸಾಲುಸಾಲು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಸೋಮವಾರ ಫಲಿತಾಂಶ ಹೊರಬೀಳುತ್ತಿದ್ದಂತೆ ಸಂಜೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿದ್ದ ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಆಪ್ತರೊಂದಿಗೆ ರಾಜೀನಾಮೆಯ ಕಾರಣ ಬಿಚ್ಚಿಟ್ಟಿರುವ ಸಿದ್ದರಾಮಯ್ಯ, “ನಾನು ಬಿಜೆಪಿಯ ಎದುರು ಸೆಣಸಬಲ್ಲೆ. ಆದರೆ, ಕತ್ತಲಿನಲ್ಲಿ ನಿಂತು ಬಾಣ ಬಿಡುವ ಸ್ವಪಕ್ಷದ ಹಿತಶತ್ರುಗಳ ವಿರುದ್ಧ ಹೋರಾಡಲಾರೆ” ಎಂದು ಹೇಳಿರುವುದು ಕೈ ಪಕ್ಷದೊಳಗಿರುವ ಭಿನ್ನಮತಕ್ಕೆ ಸಾಕ್ಷಿಯಾಗಿದೆ.

ಇನ್ನೂ ಸಿದ್ದರಾಮಯ್ಯ ಬೆನ್ನಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಈ ಇಬ್ಬರೂ ನಾಯಕರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೆ ಅಚ್ಚರಿಯಿಲ್ಲ.

ಅಲ್ಲಿಗೆ ವಿಧಾನಸಭೆ-ಲೋಕಸಭೆ ಚುನಾವಣಾ ಸೋಲಿಗೆ ಕುಗ್ಗದ ಕಾಂಗ್ರೆಸ್ ಘಟಾನುಘಟಿ ನಾಯಕರನ್ನು 15 ಕ್ಷೇತ್ರದ ಉಪಚುನಾವಣೆ ಹುರಿದು ಮುಕ್ಕಿದಂತಾಗಿದೆ. ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪ ಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಾಮಾನ್ಯವಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವ ನಿರ್ವಾತ ಸ್ಥಿತಿಗೆ ಕಾರಣವಾಗಿದ್ದು, ಹೈಕಮಾಂಡ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿರುವುದು ಸುಳ್ಳಲ್ಲ.

ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು?

ಸತತ ಎಲ್ಲಾ ಚುನಾವಣೆಯಲ್ಲೂ ಸೋಲನುಭವಿಸಿದರೂ ಸಹ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಈಗಲೂ ವರ್ಚಸ್ವಿ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸತತ 5 ವರ್ಷ ಸಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಸ್ಥಾನವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲದೆ, ಆಡಳಿತಾರೂಢ ಪಕ್ಷವನ್ನು ಕಟು ಟೀಕೆಗೆ ಗುರಿಪಡಿಸುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಬಲ್ಲ ಸಾಮಥ್ರ್ಯವಿರುವ ನಾಯಕ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಬೆನ್ನಿಗಿದೆ.

ಮುಂದಿನ ಮೂರೂ ವರ್ಷವೂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಆಡಳಿತ ಪಕ್ಷದ ಎಲ್ಲಾ ವೈಫಲ್ಯವನ್ನು ಜನರ ಮುಂದೆ ಬಿಚ್ಚಿಡುತ್ತಾರೆ ಎಂಬ ಭಯ ಸ್ವತಃ ಬಿಜೆಪಿ ಪಾಳಯದಲ್ಲೂ ಇರುವುದು ಸುಳ್ಳಲ್ಲ. ಅಕಸ್ಮಾತ್ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿದರೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸೈಲೆಂಟ್ ಆಗಿಬಿಡುತ್ತಾರೆ. ಈ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಬಹುದಾದ ಲಾಭದ ಕುರಿತ ಮಾಹಿತಿ ಕಾಂಗ್ರೆಸ್ ರಾಷ್ಟ್ರ ನಾಯಕರಿಗೂ ತಿಳಿದಿದೆ. ಅಲ್ಲದೆ, ಪ್ರಸ್ತುತ ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಮತ್ತೋರ್ವ ನಾಯಕನ ಹುಡುಕಾಟ ಮಾಡುತ್ತಾ ಕೂತರೆ ಮತ್ತಷ್ಟು ಭಿನ್ನಮತ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಲ್ಲಿ ಉಳಿಸಿಕೊಳ್ಳದೆ ಬೇರೆ ವಿಧಿಯಿಲ್ಲ. ಇದೇ ಕಾರಣಕ್ಕೆ ಉಪಚುನಾವಣಾ ಫಲಿತಾಂಶದ ಕಾವು ತಣ್ಣಗಾದ ನಂತರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಂದುವರೆಸುತ್ತದೆ ಅನ್ನುತ್ತವೆ ರಾಜಕೀಯ ವಠಾರಗಳು. ಇಲ್ಲದೆ ಹೋದರೆ ಎಂ ಬಿ ಪಾಟೀಲ್, ಎಚ್ ಕೆ ಪಾಟೀಲ್ ಇಲ್ಲವೇ ಕೃಷ್ಣ ಭೈರೆಗೌಡರಿಗೆ ಲಾಟರಿ ಹೊಡೆಯಬಹುದು….

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕ ಸಾಧ್ಯತೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್‍ಗೆ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ದಿನದಿಂದ ಒಂದಲ್ಲಾ ಒಂದು ಅಪಸ್ವರ, ಭಿನ್ನಮತ ಕೇಳಿಬರುತ್ತಲೇ ಇವೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸರಿಸುಮಾರು ಒಂದು ತಿಂಗಳು ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದುಬಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗ್ರಾಫ್ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವುದಕ್ಕೂ, ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿರುವುದಕ್ಕೂ ಸರಿಯಾಗಿದೆ.

ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕರ ಪೈಕಿ ಡಿ.ಕೆ. ಶಿವಕುಮಾರ್ ಮುಂಚೂಣಿ ನಾಯಕ. ಯಾವುದೇ ಸಂದರ್ಭದಲ್ಲಿ ಪಕ್ಷಕ್ಕೆ ಎದುರಾಗಬಲ್ಲ ಸಮಸ್ಯೆಯನ್ನು ನೀಗಿಸಬಲ್ಲ ಸಾಮಥ್ರ್ಯವಿರುವ ನಾಯಕ. ಇದೇ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದು ಕರೆಯಲಾಗುತ್ತದೆ. ಆದರೆ, ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಕೆಲವಾರು ಪ್ರಕರಣಗಳು ಇದ್ದ ಕಾರಣಕ್ಕೆ ಅವರಿಗೆ ಪಕ್ಷದಲ್ಲಿ ಈವರೆಗೆ ಉನ್ನತ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಆದರೆ, ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದ್ದು ಪಕ್ಷವನ್ನು ಮತ್ತೆ ಮೇಲೆತ್ತಲು ಡಿ.ಕೆ. ಶಿವಕುಮಾರ್ ಅವರಂತಹ ನಾಯಕತ್ವದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದರೂ ಅಚ್ಚರಿ ಇಲ್ಲ. ಇಲ್ಲದೇ ಹೋದರೆ ಚುನಾವಣೆ ಹತ್ತಿರ ಬರುವವರೆಗು ಶಾಂತಿ ಸಮಯದ ನಾಯಕ ಸ್ಥಾನ ಮುನಿಯಪ್ಪ, ಪಾಟೀಲ್ ಇಲ್ಲವೇ ಸತೀಶ್ ಜಾರಕಿಹೊಳಿ ಪಾಲಾದರು ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...