Homeಕರ್ನಾಟಕಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

- Advertisement -
- Advertisement -

ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ಪರಿಶಿಷ್ಟ ಜಾತಿಗಳ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ ಶೇ 6ರಷ್ಟು, ಮತ್ತು ಭೋವಿ, ಕೊರಚ, ಕೊರಮ, ಲಂಬಾಣಿ, ಬಂಜಾರ ಸೇರಿದಂತೆ ಇತರೆ ಸ್ಪೃಶ್ಯ ಸಮುದಾಯಗಳಿಗೆ ಶೇ 5ರಷ್ಟು ಮೀಸಲಾತಿ ನೀಡುವ ತೀರ್ಮಾನವನ್ನು ಸಮಿತಿ ವಿರೋಧಿಸಿದೆ. ಈ ನಿರ್ಧಾರದಲ್ಲಿ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಸಮುದಾಯಗಳ ಗುಂಪಿಗೆ ಸೇರಿಸಿರುವುದು ಆ ಸಮುದಾಯಗಳಿಗೆ ಮಾಡಿದ ಐತಿಹಾಸಿಕ ದ್ರೋಹ ಎಂದು ಸಮಿತಿ ಆರೋಪಿಸಿದೆ.

ನ್ಯಾ. ನಾಗನೋಹನ್ ದಾಸ್ ವರದಿಯು ನ್ಯಾಯಯುತವಾಗಿತ್ತು ಎಂದು ಸಮಿತಿ ಹೇಳಿದೆ. ಆ ವರದಿಯಲ್ಲಿ ಸಮುದಾಯಗಳ ಗುಂಪು ಮಾಡದೆ, ಹಿಂದುಳಿದಿರುವಿಕೆಯ ಆಧಾರದ ಮೇಲೆ ಐದು ಗುಂಪುಗಳನ್ನು ರಚಿಸಿ ಮೀಸಲಾತಿ ಹಂಚಲಾಗಿತ್ತು. ಅದರಂತೆ ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಶೇ.1ರಷ್ಟು ಮೀಸಲಾತಿಯೊಂದಿಗೆ ಮೊದಲ ಆದ್ಯತೆ ನೀಡಲಾಗಿತ್ತು. ಆದರೆ, ಈಗಿನ ನಿರ್ಧಾರವು ಅವರಿಗೆ ಕೊನೆಯ ಆದ್ಯತೆ ನೀಡಿದೆ ಎಂದು ಸಮಿತಿ ತಿಳಿಸಿದೆ.

ಇದರ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿಯ ಅಹೋರಾತ್ರಿ ಹೋರಾಟವನ್ನು ಮುಂದುವರೆಸುವುದಾಗಿ ಸಮಿತಿ ಘೋಷಿಸಿದೆ. ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಹೋರಾಟಗಾರರ ಆಕ್ರೋಶ

ಹೋರಾಟಗಾರ ಹುಲಿಕುಂಟೆ ಮೂರ್ತಿ ಅವರು, “ನಾವು ಜಸ್ಟೀಸ್ ನಾಗನೋಹನ್ ದಾಸ್ ಅವರು ಅಲೆಮಾರಿಗಳಿಗೆ ನೀಡಿದ್ದ ಶೇ 1ರಷ್ಟು ಮೀಸಲಾತಿಗೆ ಕೈ ಹಾಕಬೇಡಿ ಎಂದು ಎಲ್ಲಾ ಸಮುದಾಯಗಳ ಮುಖಂಡರ ಬಳಿ ಅಂಗಲಾಚಿದ್ದೆವು. ಆದರೆ, ಅಸ್ಪೃಶ್ಯ ಸಮುದಾಯಗಳ ಮಂತ್ರಿಗಳು ಕೂಡ ಒಬ್ಬನೇ ಒಬ್ಬ ಸ್ಪೃಶ್ಯ ಮಂತ್ರಿಯ ಒತ್ತಡಕ್ಕೆ ಮಣಿದು ಅನ್ಯಾಯಕ್ಕೆ ಸಮ್ಮತಿಸಿದ್ದಾರೆ. ಈ ನಿರ್ಧಾರವನ್ನು ಸಹಿಸಿಕೊಂಡರೆ ನಾವು ಶವಗಳಿಗೆ ಸಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿಕುಮಾರ್ ಈಚಲಮರ ಅವರು ಮಾತನಾಡಿ, “ಅಲೆಮಾರಿ ಸಮುದಾಯಗಳು ಈಗಲೂ ಬಡತನ, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಸಾಮಾಜಿಕ ತಾರತಮ್ಯದಿಂದ ಬಳಲುತ್ತಿವೆ. ಅವರಿಗೆ ಸರಿಯಾದ ಮನೆಗಳಿಲ್ಲ, ಶಾಲೆಗಳಿಲ್ಲ ಮತ್ತು ರಕ್ಷಣೆಯಿಲ್ಲ. ಅಂಥ ಸಮುದಾಯಗಳಿಗೆ ನ್ಯಾಯ ಕೊಡದೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಹೋರಾಟ ಕೇವಲ ಮಾದಿಗರ ಹೋರಾಟವಲ್ಲ, ನೂರಾರು ಅಲೆಮಾರಿ ಸಮುದಾಯಗಳ ಹೋರಾಟ” ಎಂದು ಹೇಳಿದರು.

ಜಾಗೃತ ಕರ್ನಾಟಕದ ಮುತ್ತುರಾಜು ಅವರು, “ಸಿದ್ದರಾಮಯ್ಯನವರು ಅಲೆಮಾರಿ ಸಮುದಾಯಗಳಿಗೆ ಐತಿಹಾಸಿಕ ದ್ರೋಹ ಎಸಗಿದ್ದಾರೆ. ಅವರು ಅಲೆಮಾರಿ ಸಮುದಾಯಗಳನ್ನು ಮಾದಿಗ ಅಥವಾ ಹೊಲೆಯ ಸಂಬಂಧಿತ ಜಾತಿಗಳ ಪ್ರವರ್ಗದಲ್ಲಿ ಸೇರಿಸಬೇಡಿ ಎಂದು ನಾವು ಒತ್ತಾಯಿಸಿದ್ದೆವು. ಏಕೆಂದರೆ ಅವರು ಅಲ್ಲಿ ಏನನ್ನೂ ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ, ಈಗ ಅವರನ್ನು ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಲಾಗಿದೆ. ಇದರಿಂದ ಅವರು ಉಸಿರಾಡಲೂ ಸಾಧ್ಯವಿಲ್ಲದ ಪರಿಸ್ಥಿತಿ ಬಂದಿದೆ” ಎಂದು ಆರೋಪಿಸಿದರು.

ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ, “ಸಿದ್ದರಾಮಯ್ಯನವರು ಈಗಲೂ ಎಚ್ಚೆತ್ತುಕೊಂಡು ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಸ್ಪೃಶ್ಯ ಸಮುದಾಯಕ್ಕೆ ಕೊಟ್ಟಿರುವ ಮೀಸಲಾತಿಯಲ್ಲಿ ಹಂಚಿಕೆ ಮಾಡುವ ಮೂಲಕ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬಹುದು. ಇಲ್ಲದಿದ್ದರೆ ಈ ಕಳಂಕವು ಅವರಿಗೆ ಅಂಟಿಕೊಳ್ಳಲಿದೆ. ಈ ಹೋರಾಟವನ್ನು ಬೀದಿ ಹೋರಾಟ ಮತ್ತು ಕಾನೂನು ಹೋರಾಟ ಎರಡರ ಮೂಲಕವೂ ಮುಂದುವರೆಸುತ್ತೇವೆ. ಅನ್ಯಾಯದ ವಿರುದ್ಧ ನಾವು ಹೋರಾಡಿದ್ದೇವೆ ಎಂದು ಮುಂದಿನ ಪೀಳಿಗೆಗೆ ಹೇಳಲು ಈ ಹೋರಾಟ ಅಗತ್ಯವಾಗಿದೆ” ಎಂದರು.

ಶಿವಸುಂದರ್ ಅವರು, “ಒಂದು ತುತ್ತೂ ಸಿಗದವರನ್ನು, ಒಂದೆರಡು ತುತ್ತು ಕಡಿಮೆಯಾದವರ ಜೊತೆ ಸೇರಿಸುವುದು ಸಾಮಾಜಿಕ ನ್ಯಾಯವಲ್ಲ, ಅದು ಸಾಮಾಜಿಕ ಕ್ರೌರ್ಯ” ಎಂದು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಸಂಪುಟ ಅಸ್ತು: ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...