Homeಕರ್ನಾಟಕಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

- Advertisement -
- Advertisement -

ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ಪರಿಶಿಷ್ಟ ಜಾತಿಗಳ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ ಶೇ 6ರಷ್ಟು, ಮತ್ತು ಭೋವಿ, ಕೊರಚ, ಕೊರಮ, ಲಂಬಾಣಿ, ಬಂಜಾರ ಸೇರಿದಂತೆ ಇತರೆ ಸ್ಪೃಶ್ಯ ಸಮುದಾಯಗಳಿಗೆ ಶೇ 5ರಷ್ಟು ಮೀಸಲಾತಿ ನೀಡುವ ತೀರ್ಮಾನವನ್ನು ಸಮಿತಿ ವಿರೋಧಿಸಿದೆ. ಈ ನಿರ್ಧಾರದಲ್ಲಿ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಸಮುದಾಯಗಳ ಗುಂಪಿಗೆ ಸೇರಿಸಿರುವುದು ಆ ಸಮುದಾಯಗಳಿಗೆ ಮಾಡಿದ ಐತಿಹಾಸಿಕ ದ್ರೋಹ ಎಂದು ಸಮಿತಿ ಆರೋಪಿಸಿದೆ.

ನ್ಯಾ. ನಾಗನೋಹನ್ ದಾಸ್ ವರದಿಯು ನ್ಯಾಯಯುತವಾಗಿತ್ತು ಎಂದು ಸಮಿತಿ ಹೇಳಿದೆ. ಆ ವರದಿಯಲ್ಲಿ ಸಮುದಾಯಗಳ ಗುಂಪು ಮಾಡದೆ, ಹಿಂದುಳಿದಿರುವಿಕೆಯ ಆಧಾರದ ಮೇಲೆ ಐದು ಗುಂಪುಗಳನ್ನು ರಚಿಸಿ ಮೀಸಲಾತಿ ಹಂಚಲಾಗಿತ್ತು. ಅದರಂತೆ ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಶೇ.1ರಷ್ಟು ಮೀಸಲಾತಿಯೊಂದಿಗೆ ಮೊದಲ ಆದ್ಯತೆ ನೀಡಲಾಗಿತ್ತು. ಆದರೆ, ಈಗಿನ ನಿರ್ಧಾರವು ಅವರಿಗೆ ಕೊನೆಯ ಆದ್ಯತೆ ನೀಡಿದೆ ಎಂದು ಸಮಿತಿ ತಿಳಿಸಿದೆ.

ಇದರ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿಯ ಅಹೋರಾತ್ರಿ ಹೋರಾಟವನ್ನು ಮುಂದುವರೆಸುವುದಾಗಿ ಸಮಿತಿ ಘೋಷಿಸಿದೆ. ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಹೋರಾಟಗಾರರ ಆಕ್ರೋಶ

ಹೋರಾಟಗಾರ ಹುಲಿಕುಂಟೆ ಮೂರ್ತಿ ಅವರು, “ನಾವು ಜಸ್ಟೀಸ್ ನಾಗನೋಹನ್ ದಾಸ್ ಅವರು ಅಲೆಮಾರಿಗಳಿಗೆ ನೀಡಿದ್ದ ಶೇ 1ರಷ್ಟು ಮೀಸಲಾತಿಗೆ ಕೈ ಹಾಕಬೇಡಿ ಎಂದು ಎಲ್ಲಾ ಸಮುದಾಯಗಳ ಮುಖಂಡರ ಬಳಿ ಅಂಗಲಾಚಿದ್ದೆವು. ಆದರೆ, ಅಸ್ಪೃಶ್ಯ ಸಮುದಾಯಗಳ ಮಂತ್ರಿಗಳು ಕೂಡ ಒಬ್ಬನೇ ಒಬ್ಬ ಸ್ಪೃಶ್ಯ ಮಂತ್ರಿಯ ಒತ್ತಡಕ್ಕೆ ಮಣಿದು ಅನ್ಯಾಯಕ್ಕೆ ಸಮ್ಮತಿಸಿದ್ದಾರೆ. ಈ ನಿರ್ಧಾರವನ್ನು ಸಹಿಸಿಕೊಂಡರೆ ನಾವು ಶವಗಳಿಗೆ ಸಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿಕುಮಾರ್ ಈಚಲಮರ ಅವರು ಮಾತನಾಡಿ, “ಅಲೆಮಾರಿ ಸಮುದಾಯಗಳು ಈಗಲೂ ಬಡತನ, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಸಾಮಾಜಿಕ ತಾರತಮ್ಯದಿಂದ ಬಳಲುತ್ತಿವೆ. ಅವರಿಗೆ ಸರಿಯಾದ ಮನೆಗಳಿಲ್ಲ, ಶಾಲೆಗಳಿಲ್ಲ ಮತ್ತು ರಕ್ಷಣೆಯಿಲ್ಲ. ಅಂಥ ಸಮುದಾಯಗಳಿಗೆ ನ್ಯಾಯ ಕೊಡದೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಹೋರಾಟ ಕೇವಲ ಮಾದಿಗರ ಹೋರಾಟವಲ್ಲ, ನೂರಾರು ಅಲೆಮಾರಿ ಸಮುದಾಯಗಳ ಹೋರಾಟ” ಎಂದು ಹೇಳಿದರು.

ಜಾಗೃತ ಕರ್ನಾಟಕದ ಮುತ್ತುರಾಜು ಅವರು, “ಸಿದ್ದರಾಮಯ್ಯನವರು ಅಲೆಮಾರಿ ಸಮುದಾಯಗಳಿಗೆ ಐತಿಹಾಸಿಕ ದ್ರೋಹ ಎಸಗಿದ್ದಾರೆ. ಅವರು ಅಲೆಮಾರಿ ಸಮುದಾಯಗಳನ್ನು ಮಾದಿಗ ಅಥವಾ ಹೊಲೆಯ ಸಂಬಂಧಿತ ಜಾತಿಗಳ ಪ್ರವರ್ಗದಲ್ಲಿ ಸೇರಿಸಬೇಡಿ ಎಂದು ನಾವು ಒತ್ತಾಯಿಸಿದ್ದೆವು. ಏಕೆಂದರೆ ಅವರು ಅಲ್ಲಿ ಏನನ್ನೂ ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ, ಈಗ ಅವರನ್ನು ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಲಾಗಿದೆ. ಇದರಿಂದ ಅವರು ಉಸಿರಾಡಲೂ ಸಾಧ್ಯವಿಲ್ಲದ ಪರಿಸ್ಥಿತಿ ಬಂದಿದೆ” ಎಂದು ಆರೋಪಿಸಿದರು.

ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ, “ಸಿದ್ದರಾಮಯ್ಯನವರು ಈಗಲೂ ಎಚ್ಚೆತ್ತುಕೊಂಡು ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಸ್ಪೃಶ್ಯ ಸಮುದಾಯಕ್ಕೆ ಕೊಟ್ಟಿರುವ ಮೀಸಲಾತಿಯಲ್ಲಿ ಹಂಚಿಕೆ ಮಾಡುವ ಮೂಲಕ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬಹುದು. ಇಲ್ಲದಿದ್ದರೆ ಈ ಕಳಂಕವು ಅವರಿಗೆ ಅಂಟಿಕೊಳ್ಳಲಿದೆ. ಈ ಹೋರಾಟವನ್ನು ಬೀದಿ ಹೋರಾಟ ಮತ್ತು ಕಾನೂನು ಹೋರಾಟ ಎರಡರ ಮೂಲಕವೂ ಮುಂದುವರೆಸುತ್ತೇವೆ. ಅನ್ಯಾಯದ ವಿರುದ್ಧ ನಾವು ಹೋರಾಡಿದ್ದೇವೆ ಎಂದು ಮುಂದಿನ ಪೀಳಿಗೆಗೆ ಹೇಳಲು ಈ ಹೋರಾಟ ಅಗತ್ಯವಾಗಿದೆ” ಎಂದರು.

ಶಿವಸುಂದರ್ ಅವರು, “ಒಂದು ತುತ್ತೂ ಸಿಗದವರನ್ನು, ಒಂದೆರಡು ತುತ್ತು ಕಡಿಮೆಯಾದವರ ಜೊತೆ ಸೇರಿಸುವುದು ಸಾಮಾಜಿಕ ನ್ಯಾಯವಲ್ಲ, ಅದು ಸಾಮಾಜಿಕ ಕ್ರೌರ್ಯ” ಎಂದು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಸಂಪುಟ ಅಸ್ತು: ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...