Homeಕರ್ನಾಟಕಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

- Advertisement -
- Advertisement -

ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ಪರಿಶಿಷ್ಟ ಜಾತಿಗಳ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ ಶೇ 6ರಷ್ಟು, ಮತ್ತು ಭೋವಿ, ಕೊರಚ, ಕೊರಮ, ಲಂಬಾಣಿ, ಬಂಜಾರ ಸೇರಿದಂತೆ ಇತರೆ ಸ್ಪೃಶ್ಯ ಸಮುದಾಯಗಳಿಗೆ ಶೇ 5ರಷ್ಟು ಮೀಸಲಾತಿ ನೀಡುವ ತೀರ್ಮಾನವನ್ನು ಸಮಿತಿ ವಿರೋಧಿಸಿದೆ. ಈ ನಿರ್ಧಾರದಲ್ಲಿ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಸಮುದಾಯಗಳ ಗುಂಪಿಗೆ ಸೇರಿಸಿರುವುದು ಆ ಸಮುದಾಯಗಳಿಗೆ ಮಾಡಿದ ಐತಿಹಾಸಿಕ ದ್ರೋಹ ಎಂದು ಸಮಿತಿ ಆರೋಪಿಸಿದೆ.

ನ್ಯಾ. ನಾಗನೋಹನ್ ದಾಸ್ ವರದಿಯು ನ್ಯಾಯಯುತವಾಗಿತ್ತು ಎಂದು ಸಮಿತಿ ಹೇಳಿದೆ. ಆ ವರದಿಯಲ್ಲಿ ಸಮುದಾಯಗಳ ಗುಂಪು ಮಾಡದೆ, ಹಿಂದುಳಿದಿರುವಿಕೆಯ ಆಧಾರದ ಮೇಲೆ ಐದು ಗುಂಪುಗಳನ್ನು ರಚಿಸಿ ಮೀಸಲಾತಿ ಹಂಚಲಾಗಿತ್ತು. ಅದರಂತೆ ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಶೇ.1ರಷ್ಟು ಮೀಸಲಾತಿಯೊಂದಿಗೆ ಮೊದಲ ಆದ್ಯತೆ ನೀಡಲಾಗಿತ್ತು. ಆದರೆ, ಈಗಿನ ನಿರ್ಧಾರವು ಅವರಿಗೆ ಕೊನೆಯ ಆದ್ಯತೆ ನೀಡಿದೆ ಎಂದು ಸಮಿತಿ ತಿಳಿಸಿದೆ.

ಇದರ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿಯ ಅಹೋರಾತ್ರಿ ಹೋರಾಟವನ್ನು ಮುಂದುವರೆಸುವುದಾಗಿ ಸಮಿತಿ ಘೋಷಿಸಿದೆ. ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಹೋರಾಟಗಾರರ ಆಕ್ರೋಶ

ಹೋರಾಟಗಾರ ಹುಲಿಕುಂಟೆ ಮೂರ್ತಿ ಅವರು, “ನಾವು ಜಸ್ಟೀಸ್ ನಾಗನೋಹನ್ ದಾಸ್ ಅವರು ಅಲೆಮಾರಿಗಳಿಗೆ ನೀಡಿದ್ದ ಶೇ 1ರಷ್ಟು ಮೀಸಲಾತಿಗೆ ಕೈ ಹಾಕಬೇಡಿ ಎಂದು ಎಲ್ಲಾ ಸಮುದಾಯಗಳ ಮುಖಂಡರ ಬಳಿ ಅಂಗಲಾಚಿದ್ದೆವು. ಆದರೆ, ಅಸ್ಪೃಶ್ಯ ಸಮುದಾಯಗಳ ಮಂತ್ರಿಗಳು ಕೂಡ ಒಬ್ಬನೇ ಒಬ್ಬ ಸ್ಪೃಶ್ಯ ಮಂತ್ರಿಯ ಒತ್ತಡಕ್ಕೆ ಮಣಿದು ಅನ್ಯಾಯಕ್ಕೆ ಸಮ್ಮತಿಸಿದ್ದಾರೆ. ಈ ನಿರ್ಧಾರವನ್ನು ಸಹಿಸಿಕೊಂಡರೆ ನಾವು ಶವಗಳಿಗೆ ಸಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿಕುಮಾರ್ ಈಚಲಮರ ಅವರು ಮಾತನಾಡಿ, “ಅಲೆಮಾರಿ ಸಮುದಾಯಗಳು ಈಗಲೂ ಬಡತನ, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಸಾಮಾಜಿಕ ತಾರತಮ್ಯದಿಂದ ಬಳಲುತ್ತಿವೆ. ಅವರಿಗೆ ಸರಿಯಾದ ಮನೆಗಳಿಲ್ಲ, ಶಾಲೆಗಳಿಲ್ಲ ಮತ್ತು ರಕ್ಷಣೆಯಿಲ್ಲ. ಅಂಥ ಸಮುದಾಯಗಳಿಗೆ ನ್ಯಾಯ ಕೊಡದೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಹೋರಾಟ ಕೇವಲ ಮಾದಿಗರ ಹೋರಾಟವಲ್ಲ, ನೂರಾರು ಅಲೆಮಾರಿ ಸಮುದಾಯಗಳ ಹೋರಾಟ” ಎಂದು ಹೇಳಿದರು.

ಜಾಗೃತ ಕರ್ನಾಟಕದ ಮುತ್ತುರಾಜು ಅವರು, “ಸಿದ್ದರಾಮಯ್ಯನವರು ಅಲೆಮಾರಿ ಸಮುದಾಯಗಳಿಗೆ ಐತಿಹಾಸಿಕ ದ್ರೋಹ ಎಸಗಿದ್ದಾರೆ. ಅವರು ಅಲೆಮಾರಿ ಸಮುದಾಯಗಳನ್ನು ಮಾದಿಗ ಅಥವಾ ಹೊಲೆಯ ಸಂಬಂಧಿತ ಜಾತಿಗಳ ಪ್ರವರ್ಗದಲ್ಲಿ ಸೇರಿಸಬೇಡಿ ಎಂದು ನಾವು ಒತ್ತಾಯಿಸಿದ್ದೆವು. ಏಕೆಂದರೆ ಅವರು ಅಲ್ಲಿ ಏನನ್ನೂ ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ, ಈಗ ಅವರನ್ನು ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಲಾಗಿದೆ. ಇದರಿಂದ ಅವರು ಉಸಿರಾಡಲೂ ಸಾಧ್ಯವಿಲ್ಲದ ಪರಿಸ್ಥಿತಿ ಬಂದಿದೆ” ಎಂದು ಆರೋಪಿಸಿದರು.

ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ, “ಸಿದ್ದರಾಮಯ್ಯನವರು ಈಗಲೂ ಎಚ್ಚೆತ್ತುಕೊಂಡು ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಸ್ಪೃಶ್ಯ ಸಮುದಾಯಕ್ಕೆ ಕೊಟ್ಟಿರುವ ಮೀಸಲಾತಿಯಲ್ಲಿ ಹಂಚಿಕೆ ಮಾಡುವ ಮೂಲಕ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬಹುದು. ಇಲ್ಲದಿದ್ದರೆ ಈ ಕಳಂಕವು ಅವರಿಗೆ ಅಂಟಿಕೊಳ್ಳಲಿದೆ. ಈ ಹೋರಾಟವನ್ನು ಬೀದಿ ಹೋರಾಟ ಮತ್ತು ಕಾನೂನು ಹೋರಾಟ ಎರಡರ ಮೂಲಕವೂ ಮುಂದುವರೆಸುತ್ತೇವೆ. ಅನ್ಯಾಯದ ವಿರುದ್ಧ ನಾವು ಹೋರಾಡಿದ್ದೇವೆ ಎಂದು ಮುಂದಿನ ಪೀಳಿಗೆಗೆ ಹೇಳಲು ಈ ಹೋರಾಟ ಅಗತ್ಯವಾಗಿದೆ” ಎಂದರು.

ಶಿವಸುಂದರ್ ಅವರು, “ಒಂದು ತುತ್ತೂ ಸಿಗದವರನ್ನು, ಒಂದೆರಡು ತುತ್ತು ಕಡಿಮೆಯಾದವರ ಜೊತೆ ಸೇರಿಸುವುದು ಸಾಮಾಜಿಕ ನ್ಯಾಯವಲ್ಲ, ಅದು ಸಾಮಾಜಿಕ ಕ್ರೌರ್ಯ” ಎಂದು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಸಂಪುಟ ಅಸ್ತು: ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...