Homeಮುಖಪುಟಲೋಕಸಭೆಯಲ್ಲಿ ಗದ್ದಲ: ಮಸೂದೆಗಳ ಪ್ರತಿ ಹರಿದು ವಿಪಕ್ಷಗಳ ಪ್ರತಿಭಟನೆ

ಲೋಕಸಭೆಯಲ್ಲಿ ಗದ್ದಲ: ಮಸೂದೆಗಳ ಪ್ರತಿ ಹರಿದು ವಿಪಕ್ಷಗಳ ಪ್ರತಿಭಟನೆ

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಮತ್ತು ಸಚಿವರ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಮಂಡಿಸಿದ ಅಮಿತ್ ಶಾ

- Advertisement -
- Advertisement -

ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿತರಾದರೆ ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸಚಿವರನ್ನು ಪದಚ್ಯುತಗೊಳಿಸಲು ಅನುವು ಮಾಡಿಕೊಡುವ ಮೂರು ಮಸೂದೆಗಳು ಬುಧವಾರ (ಆ.20) ಸಂಸತ್ತಿನಲ್ಲಿ ಮಂಡನೆ ಆಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025; ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025; ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ 2025 ಅನ್ನು ಮಂಡಿಸಿದರು. 

ಪ್ರತಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಮಸೂದೆಗಳ ಪ್ರತಿಗಳನ್ನು ಹರಿದು ಬಿಸಾಕಿದರು.

ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಮೊದಲು ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿದರು. ಇದು ಸರ್ಕಾರಗಳನ್ನು ಅಸ್ಥಿರಗೊಳಿಸುವ ಅಸ್ತ್ರವೇ ಹೊರತು, ಇನ್ನೇನು ಅಲ್ಲ ಎಂದರು.

ಓವೈಸಿ ಮಾತಿಗೆ ಧ್ವನಿಗೂಡಿಸಿದ ಪ್ರತಿಪಕ್ಷ ಸಂಸದರು, ಘೋಷಣೆಗಳನ್ನು ಕೂಗಿದರು. ಇದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು. ಗದ್ದಲ ಹೆಚ್ಚಾಗುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಮೂರು ಗಂಟೆಗೆ ಮತ್ತೆ ಸಭೆ ಸೇರಿದಾಗ ಪ್ರತಿಪಕ್ಷ ಸದಸ್ಯರ ಪ್ರತಿಭಟನೆ ಮುಂದುವರಿಯಿತು. ಹಾಗಾಗಿ, ಸ್ಪೀಕರ್ ಕಲಾಪವನ್ನು ಸಂಜೆ 5 ಗಂಟೆಗೆ ಮುಂದೂಡಿಕೆ ಮಾಡಿದರು.

ಮಸೂದೆಗಳ ಮಂಡನೆಯ ಬಳಿಕ ಅಮಿತ್ ಶಾ ಅವರು ಅವುಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವ ನಿರ್ಣಯವನ್ನು ಮಂಡಿಸಿದರು. ಅದಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆಯಿತು. 

ಮೂರು ಮಸೂದೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ವಿರೋಧ ಪಕ್ಷಗಳ ಆಡಳಿತದ ರಾಜ್ಯಗಳಲ್ಲಿ ಸರ್ಕಾವನ್ನು ಉರುಳಿಸಲು ದುರುಪಯೋಗಪಡಿಸಿಕೊಳ್ಳಬಹುದು. ಹೊಸ ಮಸೂದೆಗಳು ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ವಿರೋಧ ಪಕ್ಷಗಳ ಚುನಾಯಿತ ಮುಖ್ಯಮಂತ್ರಿ, ಸಚಿವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲು ಮತ್ತು ನ್ಯಾಯಾಲಯದಲ್ಲಿ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಅನುವು ಮಾಡಿಕೊಡುತ್ತದೆ ಎಂದು ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿವೆ.

ಇಂತಹ ಮಸೂದೆಗಳನ್ನು ತರುವ ಮೂಲಕ ಬಿಜೆಪಿ ಸರ್ಕಾರ ಜನರ ಕಣ್ಣಿಗೆ ಮಣ್ಣೆರಚುಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

“ಇದೊಂದು ಕಠಿಣ ನಿಲುವಾಗಿದೆ. ಭ್ರಷ್ಟಾಚಾರ ವಿರೋಧಿ ಕ್ರಮ ಎಂದು ಕೇಂದ್ರ ಸರ್ಕಾರ ಹೇಳಿಕೊಂಡರೂ, ಇದು ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನವಾಗಿದೆ. ಅಪರಾಧಿ ಎಂದು ಸಾಬೀತಾಗುವ ಮೊದಲೇ ಚುನಾಯಿತ ಪ್ರತಿನಿಧಿಗಳನ್ನು ಪದಚ್ಯುತಗೊಳಿಸಲು ಇದು ಅವಕಾಶ ನೀಡುತ್ತದೆ” ಎಂದು ಸಂಸತ್ ಸಂಕೀರ್ಣದಲ್ಲಿ ಮಾತನಾಡುವಾಗ ಪ್ರಿಯಾಂಕಾ ಗಾಂಧಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಬಂಧನವಾದರೆ ಹುದ್ದೆಯಿಂದ ವಜಾಗೊಳಿಸಲು ಮಸೂದೆ: ಕಳವಳ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...