Homeಕರ್ನಾಟಕಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

"ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ ರಚನೆ, ಶೀಘ್ರ ನೇಮಕಾತಿ ಪ್ರಕ್ರಿಯೆ ಆರಂಭ, ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನ"

- Advertisement -
- Advertisement -

ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರ ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ, ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ತೀರ್ಮಾನದ ಕುರಿತು ಬುಧವಾರ (ಆ.20) ಅವರು ವಿಧಾನಸಭೆಯಲ್ಲಿ ಹೇಳಿಕೆ ನೀಡಿದರು.

ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್‌ದಾಸ್ ಅವರ ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ 1 ಆಗಸ್ಟ್ 2025ರಂದು ವರದಿ ನೀಡಿತ್ತು. ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಸಚಿವ ಸಂಪುಟವು ಈ ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿದೆ ಎಂದು ಸಿಎಂ ತಿಳಿಸಿದರು.

19 ಆಗಸ್ಟ್ 2025ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗದ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ. ​ಎಡಗೈ ಸಂಬಂಧಿತ ಜಾತಿಗಳೆಂದು ಆಯೋಗವು ಗುರುತಿಸಿರುವ ಸಮುದಾಯಗಳಿಗೆ ಶೇ.6ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬಂಧಿತ ಜಾತಿಗಳನ್ನು ಎಡಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿದೆ ಎಂಬುವುದನ್ನು ಗಮನಿಸಿದ ಸಚಿವ ಸಂಪುಟವು, ಈ ಜಾತಿಗಳನ್ನು ಬಲಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬಂಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ವಿವರಿಸಿದರು.

ಇದರ ಜೊತೆಯಲ್ಲಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬಂಧಿತ ಮತ್ತು ಬಲಗೈ ಸಂಬಂಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.

​ಸ್ಪೃಶ್ಯ ಜಾತಿಗಳ ಗುಂಪಿಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಶೇ. 4ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಹಾಗೆಯೇ, 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ.6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ.6 ಹಾಗೂ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದರು.

ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲಾ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ಹೇಳಿದರು.

​ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ. ​ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದರು.

ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ನಮ್ಮ ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ. ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕವು ಸಾಮಾಜಿಕ ನ್ಯಾಯದ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂಬುದನ್ನು ನಮ್ಮ ಸರ್ಕಾರವು ಸಾಬೀತು ಮಾಡಿದೆ ಎಂದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...