Homeಕರ್ನಾಟಕಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: 'ಭೂಮಿ ಮತ್ತು ವಸತಿ' ಹಕ್ಕು ಮಾನ್ಯ ಮಾಡಲು 'ಒನ್...

ಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: ‘ಭೂಮಿ ಮತ್ತು ವಸತಿ’ ಹಕ್ಕು ಮಾನ್ಯ ಮಾಡಲು ‘ಒನ್ ಟೈಮ್ ಸೆಟಲ್ಮೆಂಟ್’ಗೆ ಆಗ್ರಹ

- Advertisement -
- Advertisement -

ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ‘ಭೂಮಿ-ವಸತಿ’ ಹಕ್ಕುಗಳನ್ನು ಮಾನ್ಯ ಮಾಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಸರ್ಕಾರಕ್ಕೆ ಆಗ್ರಹಿಸಿದೆ.

ಸ್ವಾತಂತ್ರ್ಯದ ಪೂರ್ವದಿಂದಲೂ ಭೂಮಿಯಿಲ್ಲದೆ ಜೀತಗಾರರಾಗಿ ಬದುಕಿದ, ಗೇಣಿಯಲ್ಲೇ ಜೀವನ ಸವೆಸಿದ ಬಡ ಕೂಲಿಕಾರರಿಗೆ ‘ಉಳುವವನೇ ಭೂ ಒಡೆಯ’ ಕಾನೂನು ಜಾರಿಗೆ ತಂದು ಲಕ್ಷಾಂತರ ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಭೂಮಿಯ ಹಕ್ಕು ದೊರಕಿಸಿಕೊಟ್ಟ ಅರಸು ಅವರ ಕೊಡುಗೆಯನ್ನು ಸಮಿತಿಯು ಸ್ಮರಿಸಿಕೊಂಡಿತು. ಆಗಿನ ಸರ್ಕಾರ ಭೂಮಾಲೀಕರಿಂದ ಭೂಮಿಯನ್ನು ಪಡೆದು ಬಡವರಿಗೆ ನೀಡಿದರೆ, ಈಗ ಬಗರ್ ಹುಕುಂ ಸಾಗುವಳಿದಾರರ ಮಾಲೀಕ ಸರ್ಕಾರವೇ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಭೂಮಿ ನೀಡಲು ಕಠಿಣ ನೀತಿಗಳನ್ನು ಅನುಸರಿಸುತ್ತಿದ್ದರೆ, ಕಾರ್ಪೊರೇಟ್ ಕಂಪನಿಗಳಿಗೆ ಸುಲಭವಾಗಿ ಭೂಮಿಯನ್ನು ನೀಡುತ್ತಿದೆ ಎಂದು ಸಮಿತಿ ಆರೋಪಿಸಿತು.

ಸರ್ಕಾರದ ಕಾನೂನು ತೊಡಕುಗಳ ಬಗ್ಗೆ ಆರೋಪ

ರಾಜ್ಯದಲ್ಲಿ 33 ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಅರ್ಜಿಗಳು ಬಾಕಿ ಉಳಿದಿದ್ದು, ಶೇಕಡಾ 90ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಭೂಮಿ ನೀಡಲು ಕಾನೂನು ತೊಡಕುಗಳಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದರೆ, ಈಗಿನ ಸರ್ಕಾರ ಕಾನೂನುಗಳನ್ನು ಮುಂದಿಟ್ಟು ಬಡವರ ಹಕ್ಕುಗಳನ್ನು ನಿರಾಕರಿಸುತ್ತಿದೆ. ಅರಣ್ಯ ಹಕ್ಕು ಕಾಯ್ದೆಯಿದ್ದರೂ, ಅದನ್ನು ಸಮರ್ಪಕವಾಗಿ ಜಾರಿಗೆ ತರದೆ ಅರಣ್ಯ ಇಲಾಖೆಯ ಅಧಿಕಾರಿಗಳು ಜನರ ಹಕ್ಕುಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಹೋರಾಟ ಸಮಿತಿಯು ತಿಳಿಸಿದೆ.

ಒನ್ ಟೈಮ್ ಸೆಟಲ್ಮೆಂಟ್‌ಗೆ ಆಗ್ರಹ

‘ಭೂಮಿ ರಕ್ಷಿಸಲು ಕಾಯ್ದೆಗಳ ಬೇಲಿಗಳಿವೆ, ಆದರೆ ಬಡವರಿಗೆ ಭೂಮಿ ಮಂಜೂರು ಮಾಡಲು ಕಾನೂನು ತೊಡಕುಗಳಿವೆ. ಕಾರ್ಪೊರೇಟ್ ಕಂಪನಿಗಳಿಗೆ ಭೂಮಿ ದಾಟಲು ಕಾನೂನುಗಳಿವೆ’ ಎಂದು ಸಮಿತಿಯು ಬೇಸರ ವ್ಯಕ್ತಪಡಿಸಿದೆ. ದಲಿತರು, ಅಲೆಮಾರಿ, ಹಿಂದುಳಿದ ವರ್ಗದವರು ತಲೆಮಾರುಗಳಿಂದ ಭೂಮಿಯ ಒಡೆತನದ ಕನಸು ಕಾಣುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು, ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ಗಾಗಿ ಬಡವರನ್ನು ಬಳಸಿಕೊಳ್ಳುವ ಬದಲು, ಅರಸು ಅವರ ಸಾಮಾಜಿಕ ನ್ಯಾಯದ ನೀತಿಯನ್ನು ಅನುಸರಿಸಿ, ಸಾಗುವಳಿ ಮಾಡುತ್ತಿರುವ ಎಲ್ಲ ಭೂರಹಿತರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಭೂಮಿ ಮಂಜೂರು ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಸಮಿತಿಯ ಪ್ರಮುಖ ಬೇಡಿಕೆಗಳು:

ಗೋಮಾಳ ಭೂಮಿ: 100 ರಾಸುಗಳಿಗೆ 30 ಎಕರೆ ಗೋಮಾಳ ಭೂಮಿ ಮೀಸಲಿಡುವ ಹಳೆಯ ಮಾನದಂಡವನ್ನು ಬದಲಾಯಿಸಬೇಕು. ಇಂದಿನ ಕೃಷಿ ಮತ್ತು ಪಶುಸಂಗೋಪನೆಯ ವಾಸ್ತವ ಸ್ಥಿತಿಯನ್ನು ಪರಿಗಣಿಸಿ, ಗೋಮಾಳದ ಪರಿಕಲ್ಪನೆಯನ್ನು ಪುನರಾಲೋಚಿಸಬೇಕು.

ಕಂದಾಯ ಭೂಮಿ: ಸರ್ಕಾರಿ ಅ ಖರಾಬ್, ಬ ಖರಾಬ್, ಗೋಮಾಳ, ಹುಲ್ಲುಬನ್ನಿ, ಪೈಸಾರಿ, ಅರಣ್ಯದಂತಹ ನೂರಾರು ವರ್ಷಗಳಿಂದ ಮೂಲ ಸ್ವರೂಪ ಬದಲಿಸಿರುವ ಭೂಮಿಗಳ ಬಗ್ಗೆ ಹೊಸ ನೀತಿ ರೂಪಿಸಬೇಕು.

ನಗರ ಮಿತಿ ಅರ್ಜಿಗಳು: ನಗರ ಮಿತಿಯ ಹೆಸರಿನಲ್ಲಿ ತಿರಸ್ಕರಿಸಲ್ಪಟ್ಟ ಫಾರಂ 50, 53, ಮತ್ತು 57ರ ಅರ್ಜಿಗಳನ್ನು ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಇತ್ಯರ್ಥಪಡಿಸಬೇಕು.

ಸಾಮಾಜಿಕ ನ್ಯಾಯ: ಸಾಗುವಳಿ ಮಾಡುತ್ತಿರುವ ಭೂರಹಿತರಲ್ಲಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರೇ ಆಗಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಭೂಮಿ ಹಕ್ಕು ನೀಡಬೇಕು.

ವಸತಿ ಹಕ್ಕು: ಪ್ರತಿ ಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತರಿಗೆ ಗೌರವಯುತ ಜೀವನ ನಡೆಸಲು ವಸತಿ ಜಾಗವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಕ್ಕು ಪತ್ರ ನೀಡಬೇಕು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು, ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸವಿನೆನಪಿಗಾಗಿ ಆಚರಿಸುತ್ತಿರುವ ಸರ್ಕಾರದ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೆ, ಬಡವರ ಬದುಕಿನಲ್ಲಿ ನಿಜವಾದ ಬದಲಾವಣೆ ತರಬೇಕು ಎಂದು ಕರೆ ನೀಡಿದೆ.

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...