Homeಮುಖಪುಟಬಿಹಾರ: ಗೋಪಾಲ್‌ಗಂಜ್‌ನಲ್ಲಿ ಅಮಾನವೀಯ ಘಟನೆ: ಹಸು ಸಾಕಣೆಗಾಗಿ ಹೋಗುತ್ತಿದ್ದ ಮುಸ್ಲಿಂ ದಂಪತಿಗೆ ಹಿಂದೂ ಸಂಘಟನೆಯಿಂದ ಕಿರುಕುಳ

ಬಿಹಾರ: ಗೋಪಾಲ್‌ಗಂಜ್‌ನಲ್ಲಿ ಅಮಾನವೀಯ ಘಟನೆ: ಹಸು ಸಾಕಣೆಗಾಗಿ ಹೋಗುತ್ತಿದ್ದ ಮುಸ್ಲಿಂ ದಂಪತಿಗೆ ಹಿಂದೂ ಸಂಘಟನೆಯಿಂದ ಕಿರುಕುಳ

- Advertisement -
- Advertisement -

ಗೋಪಾಲ್‌ಗಂಜ್ (ಬಿಹಾರ): ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ, ಗೋವುಗಳನ್ನು ಸಾಕಣೆಗಾಗಿ ಸಾಗಿಸುತ್ತಿದ್ದ ವೃದ್ಧ ಮುಸ್ಲಿಂ ದಂಪತಿಯನ್ನು ಹಿಂದೂ ಸಂಘಟನೆಯೊಂದರ ನಾಯಕರು ತಡೆದು ನಿಲ್ಲಿಸಿ, ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಎಂದು ದಿ ಅಬ್ಸರ್ವರ್ ಪೋಸ್ಟ್‌ ವರದಿ ಮಾಡಿದೆ.

ಘಟನೆಯು ಪಂಚದೇವರಿಯ ಗ್ರಾಮದಲ್ಲಿ ನಡೆದಿದ್ದು, ದಂಪತಿಯು ತಾವು ಸಾಕಲು ಖರೀದಿಸಿದ್ದ ಎರಡು ಹಸುಗಳನ್ನು ಹುಲ್ಲುಗಾವಲು ಮೈದಾನಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ, ಹಿಂದೂ ಸಂಘಟನೆಯ ನಾಯಕ ಪ್ರದೀಪ್ ಮೌರ್ಯ ತನ್ನ ಸಹಚರರೊಂದಿಗೆ ದಂಪತಿಯನ್ನು ಅಡ್ಡಗಟ್ಟಿ, “ಗೋ ಕಳ್ಳಸಾಗಣೆದಾರರು” ಎಂದು ಆರೋಪಿಸಿದ್ದಾನೆ. ಆರೋಪಿಗಳಾದ ಮೌರ್ಯ ಮತ್ತು ಆತನ ಸಂಗಡಿಗರು ಯಾವುದೇ ದಾಖಲೆಗಳನ್ನು ಪರಿಶೀಲಿಸಲು ಮುಂದಾಗದೆ, ದಂಪತಿಯ ಹೇಳಿಕೆಯನ್ನೂ ನಂಬಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ದಂಪತಿಯ ನಿರಂತರ ಮನವಿ

ದಂಪತಿಯಲ್ಲಿನ ವೃದ್ಧ ವ್ಯಕ್ತಿ ತಮ್ಮನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದು, “ನಾನು ಈ ಹಸುಗಳನ್ನು ಸಾಕಲು ತೆಗೆದುಕೊಂಡು ಹೋಗುತ್ತಿದ್ದೇನೆ. ಇದು ನಮ್ಮ ಕುಟುಂಬದ ವ್ಯಾಪಾರ. ಹಾಲು ಮತ್ತು ಇತರ ವ್ಯವಹಾರಗಳಿಗಾಗಿ ನಾವು ಯಾವಾಗಲೂ ಎರಡು-ಮೂರು ಹಸುಗಳನ್ನು ಸಾಕುತ್ತೇವೆ. ನಾನು ಮಾಡುತ್ತಿರುವುದು ಕಾನೂನುಬಾಹಿರವಾದುದಲ್ಲ” ಎಂದು ಹೇಳಿದ್ದಾರೆ. ಅವರ ಪತ್ನಿಯೂ, “ನಾವು ಈ ಹಸುಗಳನ್ನು ಪ್ರೀತಿಯಿಂದ ನೋಡಿಕೊಳ್ಳಲು ಖರೀದಿಸಿದ್ದೇವೆ. ನಮ್ಮನ್ನು ಯಾಕೆ ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ?” ಎಂದು ಕಣ್ಣೀರು ಹಾಕಿದ್ದಾರೆ.

ಬೆದರಿಕೆ ಹಾಕಿದ ಆರೋಪಿ

ದಂಪತಿಯ ಮನವಿಗೆ ಕಿವಿಗೊಡದ ಮೌರ್ಯ, ಅವರಿಗೆ ಬೆದರಿಕೆ ಹಾಕಿರುವುದು ವೈರಲ್ ಆದ ವಿಡಿಯೋದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. “ನೀವು ಪ್ರತಿದಿನ ಹಸುಗಳನ್ನು ಸಾಗಿಸುವುದನ್ನು ನಾನು ನೋಡಿದ್ದೇನೆ. ಮುಂದಿನ ಬಾರಿ ನೀವು ನನ್ನ ಕಣ್ಣಿಗೆ ಬಿದ್ದರೆ, ನಾನು ನಿಮ್ಮನ್ನು ಇಲ್ಲಿಯೇ ಕಟ್ಟಿಹಾಕುತ್ತೇನೆ ಮತ್ತು ಪೊಲೀಸರಿಗೆ ಕರೆ ಮಾಡುತ್ತೇನೆ” ಎಂದು ಆತ ಗದರಿಸಿದ್ದಾನೆ. ಈ ಬೆದರಿಕೆ ದಂಪತಿಯನ್ನು ಇನ್ನಷ್ಟು ಆತಂಕಕ್ಕೆ ದಳ್ಳಿದೆ.

ಸ್ಥಳೀಯರ ಆಕ್ಷೇಪ

ಘಟನೆಯ ಬಗ್ಗೆ ಸ್ಥಳೀಯರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಸರನ್ನು ಬಹಿರಂಗಪಡಿಸಲು ಇಚ್ಛಿಸದ ಒಬ್ಬ ಸ್ಥಳೀಯ ನಿವಾಸಿ, “ಗ್ರಾಮಗಳ ನಡುವೆ ಹಸು ಅಥವಾ ಎಮ್ಮೆಗಳನ್ನು ಖರೀದಿಸುವುದು ಮತ್ತು ಸಾಗಿಸುವುದು ಇಲ್ಲಿನ ರೈತರಿಗೆ ಸಾಮಾನ್ಯ ಅಭ್ಯಾಸ. ಇದು ಹಾಲು ಮತ್ತು ಜಾನುವಾರು ಸಾಕಣೆಗೆ ಅಗತ್ಯವಾಗಿದೆ. ಇದರಲ್ಲಿ ಯಾವುದೇ ಕಾನೂನು ಉಲ್ಲಂಘನೆ ಇಲ್ಲ” ಎಂದು ಹೇಳಿದ್ದಾರೆ. ದಂಪತಿಯನ್ನು ಅನಗತ್ಯವಾಗಿ ಗುರಿಯಾಗಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಘಟನೆಯು ಬಿಹಾರದ ಗ್ರಾಮೀಣ ಪ್ರದೇಶಗಳಲ್ಲಿ ಧಾರ್ಮಿಕ ಆಧಾರದ ಮೇಲೆ ನಡೆಯುತ್ತಿರುವ ದ್ವೇಷ ಮತ್ತು ಬೆದರಿಕೆಗಳ ಬಗ್ಗೆ ಗಂಭೀರ ಕಳವಳ ಮೂಡಿಸಿದೆ. ಕಾನೂನು ತಜ್ಞರು, ಗೋವು ಸಾಕಣೆ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಲ್ಲ ಮತ್ತು ಕೇವಲ ಧರ್ಮದ ಆಧಾರದ ಮೇಲೆ ಜನರನ್ನು ಬೆದರಿಸುವುದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಹೇಳಿದ್ದಾರೆ.

ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಹಂಚಿಕೆಯಾಗುತ್ತಿದ್ದಂತೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಹಲವರು “ಕಾನೂನುಬದ್ಧ ವ್ಯಾಪಾರವನ್ನು ಮಾಡುವುದಕ್ಕೆ ಯಾರನ್ನೂ ಬೆದರಿಸಬಾರದು” ಎಂದು ಪ್ರತಿಕ್ರಿಯಿಸಿದ್ದಾರೆ. ಸದ್ಯಕ್ಕೆ, ಗೋಪಾಲ್‌ಗಂಜ್ ಜಿಲ್ಲಾಡಳಿತ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಜುನೈದ್ ಖಾನ್ ಹತ್ಯೆ ಪ್ರಕರಣ: ಪ್ರಧಾನ ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...