Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಸಿ.ಎಸ್‌. ದ್ವಾರಕಾನಾಥ್‌ ಮಾತನಾಡಿ, “ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಕೊಡುವುದಲ್ಲ, ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದೇ ಸಾಮಾಜಿಕ ನ್ಯಾಯ. ಹಾಗಾಗಿ ಸರ್ಕಾರ ಮಿದುಳಿನಿಂದ ಅಲ್ಲದೇ ಹೃದಯದಿಂದ ಯೋಚಿಸಬೇಕಿದೆ. ಸರ್ಕಾರ ಹೃದಯದಿಂದ ಯೋಚಿಸಿ ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದಾದರೆ ನನ್ನ ಪ್ರಕಾರ ಶೇ.1ಅಲ್ಲ 2 ಅಲ್ಲ ಶೇ.3 ಮೀಸಲಾತಿಯನ್ನು ಪ್ರಾತಿನಿಧ್ಯವೇ ಇಲ್ಲದ ಅಲೆಮಾರಿ ಸಮುದಾಯಕ್ಕೆ ಕೊಡಬೇಕಾಗುತ್ತದೆ. ಈ ಹೋರಾಟಕ್ಕಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬರಲು ಸಿದ್ದನಿದ್ದೇನೆ” ಎಂದು ಘೋಷಿಸಿದರು.

ಚಲನಚಿತ್ರ ನಟರು, ಸಾಮಾಜಿಕ ಹೋರಾಟಗಾರರಾದ ಚೇತನ್‌ ಮಾತನಾಡಿ, “ನಾನು ಕ್ಯಾಮೆರಾ ಆನ್‌ ಆದ್ರೆ ಮಾತ್ರ ನಟನೆ ಮಾಡೋನು. ಆದರೆ, ನೀವೆಲ್ಲಾ ಶತಮಾನಗಳಿಂದ ಕಲೆಯನ್ನು ಉಳಿಸಿ ಬೆಳಿಸಿದವರು. ನಾನು ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ್ದೇನೆ, ನೀವು ಬಡ ಕುಟುಂಬದಲ್ಲಿ ಹುಟ್ಟಿದ್ದೀರಿ ಯಾಕೆ? ಯಾಕೆಂದರೆ ಇದು ಸಮಾಜಿಕ ಅಸಮಾನತೆಯೇ ಕಾರಣವಾಗಿದೆ. ಈ ಅಸಮಾನತೆ ಸರಿ ಆಗಬೇಕು ಅಂದರೆ ಅಲೆಮಾರಿಗಳಿಗೆ ಜನಸಂಖ್ಯೆ ಆಧಾರದ ಮೇಲೆ ಪ್ರಾತಿನಿಧ್ಯದ ಒಳಮೀಸಲಾತಿ ಜಾರಿ ಆಗಲೇಬೇಕು. ಎಸ್.ಸಿ ಒಳಮೀಸಲಾತಿ ಮಾತ್ರವಲ್ಲ ಎಸ್‌.ಎಟಿ ಅಲೆಮಾರಿಗಳಿಗೂ ಒಳಮೀಸಲಾತಿ ಜಾರಿಯಾಗಲೇಬೇಕು. ಸರ್ಕಾರದ ಕುರ್ಚಿ ಅಲುಗಾಡಿಸುವ ಹೋರಾಟ ಮಾಡಿದಾಗ ಇದು ಜಾರಿ ಅಗಿಯೇ ಆಗುತ್ತದೆ” ಎಂದರು.

ಒಳಮೀಸಲಾತಿ ಹೋರಾಟಗಾರರಾದ ಎಸ್‌.ಮಾರೆಪ್ಪ ಮಾತನಾಡಿ, “ನಾಗಮೋಹನ್ ದಾಸ್ ಅವರು ಕೊಟ್ಟಿರುವ ವರದಿಯಲ್ಲಿ ಅಲೆಮಾರಿಗಳು 59 ಸಮುದಾಯ ಎಂದು ಹೇಳಿದ್ದಾರೆ; ಆದರೆ ನಾನು ಅದನ್ನು ಒಪ್ಪುವುದಿಲ್ಲ. ಕೇವಲ 49 ಜಾತಿಗಳನ್ನು ಮಾತ್ರ ನಾನು ಈವರೆಗಿನ ಅಲೆಮಾರಿಗಳ ಜೊತೆಗಿನ ನನ್ನ ಹೋರಾಟದಲ್ಲಿ ಗುರುತಿಸಿದ್ದೇನೆ. 2018ರಲ್ಲಿ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಲೆಮಾರಿ ಸಮುದಾಯಗಳಿಗಾಗಿ ಅಲೆಮಾರಿ ಕೋಶ ಮಾಡಲಾಗಿದೆ. ಏಕೆಂದರೆ, ಈ 49 ಸಮುದಾಯಗಳು ಇಂದು ತೀವ್ರನಿಗಾಘಟಕದಲ್ಲಿವೆ” ಎಂದರು.

“ನಾಗಮೋಹನ್ ದಾಸ್ ಅವರ ವರದಿ ಪ್ರಕಾರ, 63 ಸಮುದಾಯಗಳಲ್ಲಿ 12 ಸಮುದಾಯಗಳು ಈವರೆಗೆ ಶಿಕ್ಷಣ, ನೌಕರಿ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಪಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಅದರಲ್ಲಿ ಸುಡುಗಾಡು ಸಿದ್ದರು ಮತ್ತು ಸಿಳ್ಳೇಕ್ಯಾತ ಸೇರಿದಂತೆ ಹಲವು ಸಮುದಾಯಗಳಿವೆ. ಇವರು ಅತ್ಯಂತ ಕಡಿಮೆ ಪ್ರಮಾಣದ ಪ್ರಾತಿನಿಧ್ಯ ಪಡೆದುಕೊಂಡಿದ್ದಾರೆ. ನಾಗಮೋಹನ್ ದಾಸ್ ಅವರ ವರದಿಯಲ್ಲಿ ಅಲೆಮಾರಿಗಳ ವಿಷಯಗಳ ಕುರಿತಂತೆ ಸಾಕಷ್ಟು ತಪ್ಪುಗಳಿದ್ದರೂ, ಸಾಕಷ್ಟು ತಾಯ್ತನದ ಅಂಶಗಳನ್ನೂ ನಾನು ಕಂಡುಕೊಂಡಿದ್ದೇನೆ” ಎಂದರು.

ಸಾಮಾಜಿಕ ಚಿಂತಕರಾದ ಶಿವಸುಂದರ್ ಮಾತನಾಡಿ, “ಅಲೆಮಾರಿ ಸಮುದಾಯದಗಳು, ಆಗಿರುವ ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನಿರದೆ ಹೋರಾಟಕ್ಕೆ ಬಂದಿರುವುದಕ್ಕೆ ನಿಮಗೆ ಅಭಿನಂದನೆಗಳು. ಮಾದಿಗ ಸಮುದಾಯವು ಹೋರಾಟಕ್ಕೆ ಬೆಂಬಲವಾಗಿ ಬಂದಿರುವುದಕ್ಕೆ ಅವರಿಗೂ ಅಭಿನಂದನೆಗಳು” ಎಂದು ಪ್ರಶಂಸಿದರು.

“ಹಿಂದುಳಿದ ಜಾತಿಗಳೆಂದು ಕರೆಯಲಾಗುತ್ತದೆ. ಹಿಂದುಳಿದ ಜಾತಿಗಳಲ್ಲ, ಹಿಂದುಳಿಸಲ್ಪಟ್ಟ ಜಾತಿಗಳೆಂದು ಕರೆಯಬೇಕು. ಮೀಸಲಾತಿ ಸಮಾನತೆಯ ವಿಷಯ. ಎಲ್ಲರಿಗೂ ಸಮಾನತೆ ಇದ್ದಾಗ ಅತ್ಯಂತ ಶೋಷಿತರಿಗೆ ಮೊದಲ ಆದ್ಯತೆಯನ್ನು ನೀಡಬೇಕು. ಪರಿಶಿಷ್ಟ ಜಾತಿಯ ಯಾರನ್ನು ಕೂಡ ಮೀಸಲಾತಿಯಿಂದ ಹೊರಗಿಡುವುದಲ್ಲ. ಒಳಮೀಸಲಾತಿಯನ್ನು ಕೊಡಬೇಕಾದರೆ, ಯಾರು ಉಳಿದವರಿಗಿಂತ ಹಿಂದುಳಿದಿದ್ದಾರೋ ಅವರನ್ನು ಪ್ರತ್ಯೇಕ ವರ್ಗ ಮಾಡಬೇಕು. ಹೋಲಿಕೆಯಲ್ಲಿ ಅತ್ಯಂತ ಮುಂದುವರಿದ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಜಾತಿಗಳನ್ನು ಸೇರಿಸಿದರೆ ಅದು ಅನ್ಯಾಯ” ಎಂದರು.

“ಅಲೆಮಾರಿ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು, ಅನ್ಯಾಯವಾಗಲು ಬಿಡಬಾರದು. ಅಲೆಮಾರಿ ಸಮುದಾಯಗಳಿಗೆ ನ್ಯಾಯ ಕೊಡಿಸುವ ಮೂಲಕ ಸಂವಿಧಾನ ವನ್ನು, ಸಾಮಾಜಿಕ ನ್ಯಾಯವನ್ನು ಉಳಿಸಿಕೊಳ್ಳಬೇಕು. ನಿಮ್ಮ ಹೋರಾಟದ ಜೊತೆ ನಾನೂ ಇರುತ್ತೇನೆ” ಎಂದು ಹೇಳಿದರು.

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...