Homeಮುಖಪುಟಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಾಮ್‌ಕೂಟತ್ತಿಲ್ ರಾಜೀನಾಮೆ

ಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಾಮ್‌ಕೂಟತ್ತಿಲ್ ರಾಜೀನಾಮೆ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಗಳ ಹಿನ್ನೆಲೆಯಲ್ಲಿ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತು ಪಾಲಕ್ಕಾಡ್ ಶಾಸಕ ರಾಹುಲ್ ಮಾಮ್‌ಕೂಟತ್ತಿಲ್ ಅವರು ಗುರುವಾರ (ಆ.21) ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಯುವ ಕಾಂಗ್ರೆಸ್‌ನೊಳಗೆ ಒತ್ತಡ ಹೆಚ್ಚಾದ ಹಿನ್ನೆಲೆ ಮತ್ತು ಹಿರಿಯ ನಾಯಕರಿಂದ ತೀವ್ರ ಟೀಕೆ ವ್ಯಕ್ತವಾದ ಕಾರಣ ಕಾಂಗ್ರೆಸ್ ನಾಯಕತ್ವವು ಹುದ್ದೆಗಳಿಗೆ ರಾಜೀನಾಮೆ ನೀಡುವಂತೆ ರಾಹುಲ್ ಅವರಿಗೆ ಸೂಚಿಸಿದೆ ಎಂದು ವರದಿಯಾಗಿದೆ.

ರಾಹುಲ್ ಕಾಂಗ್ರೆಸ್ ಪಕ್ಷದ ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರೂ, ಪಕ್ಷವು ಅವರನ್ನು ಅಮಾನತುಗೊಳಿಸಲು ಅಥವಾ ಹೊರಹಾಕಲು ನಿರ್ಧರಿಸದ ಹೊರತು, ಅವರು ಪಾಲಕ್ಕಾಡ್‌ನಿಂದ ಸ್ವತಂತ್ರ ಶಾಸಕರಾಗಿ ಮುಂದುವರಿಯಬಹುದು ಎಂದು ಹಿರಿಯ ಕಾಂಗ್ರೆಸ್ ಮೂಲವೊಂದು ತಿಳಿಸಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಮೂರು ವರ್ಷಗಳ ಹಿಂದೆ ಕೇರಳದ ಯುವ ರಾಜಕಾರಣಿಯೊಬ್ಬರು ತನಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ ಹೋಟೆಲ್ ಕೋಣೆಗೆ ಆಹ್ವಾನಿಸಿದ್ದರು” ಎಂದು ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಅವರು ಆಗಸ್ಟ್ 20ರಂದು ಆರೋಪಿಸಿದ್ದರು.

ರಿನಿ ಆರೋಪ ಮಾಡುವಾಗ ಯುವ ರಾಜಕಾರಣಿ ರಾಹುಲ್ ಮಾಮ್‌ಕೂಟತ್ತಿಲ್ ಎಂದು ಹೇಳಿರಲಿಲ್ಲ. ಆದರೆ, ಪಾಲಕ್ಕಾಡ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಘಟಕದ ನಾಯಕರು ರಿನಿ ಆರೋಪ ಮಾಡಿರುವುದು ರಾಹುಲ್ ವಿರುದ್ದವೇ ಎಂದಿದ್ದರು.

ರಿನಿ ಆರೋಪ ಬೆನ್ನಲ್ಲೇ ಮಲಯಾಳಂ ಬರಗಾರ್ತಿ ಹನಿ ಭಾಸ್ಕರನ್ ಕೂಡ ರಾಹುಲ್ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. “ತಾನು ಶ್ರೀಲಂಕಾದಲ್ಲಿದ್ದಾಗ ರಾಹುಲ್ ಇನ್‌ಸ್ಟಾಗ್ರಾಮ್ ಮೂಲಕ ಸಂಭಾಷಣೆ ಆರಂಭಿಸಿದ್ದರು. ನಂತರ, ಖಾಸಗಿ ವಿಷಯಗಳನ್ನು ಹಂಚಿಕೊಳ್ಳಲು ಶುರು ಮಾಡಿದ್ದರು. ಈ ಬಗ್ಗೆ ಅವರ ಗೆಳೆಯರಲ್ಲಿ ಹೇಳಿಕೊಂಡು ತನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಹನಿ ಭಾಸ್ಕರನ್ ಸಾರ್ವಜನಿಕವಾಗಿ ಆರೋಪಿಸಿದ್ದರು.

ರಾಹುಲ್ ವಿರುದ್ದದ  ಈ  ಗಂಭೀರ ಆರೋಪಗಳು ಯುವ ಕಾಂಗ್ರೆಸ್‌ನೊಳಗೆ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌.ವಿ ಸ್ನೇಹಾ ಮತ್ತು ಉಪಾಧ್ಯಕ್ಷ ವಿಷ್ಣು ಸುನಿಲ್ ಪಂದಲಂ ಸೇರಿದಂತೆ ಹಲವಾರು ನಾಯಕರು ರಾಹುಲ್ ರಾಜೀನಾಮೆಗೆ ಒತ್ತಾಯಿಸಿದ್ದರು. ಶಾಸಕ ಚಾಂಡಿ ಉಮ್ಮನ್ ಅವರ ಬೆಂಬಲಿಗರು ಕೂಡ ರಾಹುಲ್ ಅವರನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದ್ದರು.

ಗಂಭೀರ ಆರೋಪಗಳ ನಡುವೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಹುಲ್, “ನಾನು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ನನ್ನಲ್ಲಿ ಯಾರೂ ರಾಜೀನಾಮೆ ಕೇಳಿಲ್ಲ. ನನ್ನ ವಿರುದ್ದ ಕೇಳಿ ಬಂದಿರುವ ಆರೋಪಗಳೆಲ್ಲ ಸುಳ್ಳು” ಎಂದಿದ್ದಾರೆ.

ಈ ನಡುವೆ, “ಯುವ ನಟ ತನ್ನ ವಿರುದ್ಧ ಮಾತನಾಡಿದ್ದಾರೆಂದು ತಾನು ಭಾವಿಸುವುದಿಲ್ಲ. ಅವರು ನನ್ನ ಹೆಸರನ್ನು ಎಲ್ಲೂ ಉಲ್ಲೇಖಿಸಿಲ್ಲ. ನಾನು ಕಾನೂನುಬಾಹಿರ ಅಥವಾ ಸಂವಿಧಾನಬಾಹಿರವಾದ ಏನನ್ನೂ ಮಾಡಿಲ್ಲ” ಎಂದು ರಾಹುಲ್ ಸಮರ್ಥಿಸಿಕೊಂಡಿದ್ದಾರೆ.

ರಾಹುಲ್ ಅವರ ರಾಜೀನಾಮೆಯಿಂದ ತೆರವಾದ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಬಿನ್ ವರ್ಗೀಸ್ ಮತ್ತು ಕೆ.ಎಂ ಅಭಿಜಿತ್ ಅವರನ್ನು ಪರಿಗಣಿಸಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟನ್ ವರದಿ ಮಾಡಿದೆ.

ರಾಹುಲ್ ವಿರುದ್ದ ಯಾವುದೇ ಔಪಚಾರಿಕ ದೂರು ಬಂದಿಲ್ಲ. ಆದರೆ, ಪಕ್ಷವು ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ಹಾಗೂ ಕಾಂಗ್ರೆಸ್‌ನ ನಾಯಕ ವಿ.ಡಿ. ಸತೀಶನ್ ಗುರುವಾರ ಭರವಸೆ ನೀಡಿದ್ದಾರೆ.

2024ರಲ್ಲಿ ನಡೆದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 18,840 ಮತಗಳ ಅಂತರದಿಂದ ರಾಹುಲ್ ದಾಖಲೆಯ ಗೆಲುವು ಸಾಧಿಸಿದ್ದರು. ಕೇರಳ ವಿದ್ಯಾರ್ಥಿ ಸಂಘದ ಮೂಲಕ ತಮ್ಮ ರಾಜಕೀಯ ಪಯಣ ಆರಂಭಿಸಿದ ರಾಹುಲ್, ನಂತರ ಯುವ ಕಾಂಗ್ರೆಸ್‌ನ ಅಧ್ಯಕ್ಷ ಹುದ್ದೆಗೇರುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಯುವ ನಾಯಕ ಎನಿಸಿಕೊಂಡರು.

ನವೆಂಬರ್ 2023ರಲ್ಲಿ ಕೇರಳದಲ್ಲಿ ನಡೆದ ಭಾರತೀಯ ಯುವ ಕಾಂಗ್ರೆಸ್ ಪಕ್ಷದ ಆಂತರಿಕ ಚುನಾವಣೆಯಲ್ಲಿ 2,21,986 ಮತಗಳನ್ನು ಪಡೆದು ರಾಹುಲ್ ಜಯಗಳಿಸಿದ್ದರು. ಅವರ ಹತ್ತಿರದ ಪ್ರತಿಸ್ಪರ್ಧಿ ಅಬಿನ್ ವರ್ಕಿ ಕೊಡಿಯಾಟ್ಟು ಅವರು 53,398 ಮತಗಳ ಅಂತರದಿಂದ ಸೋಲನುಭವಿಸಿದ್ದರು.

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...