Homeಮುಖಪುಟಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

ಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

- Advertisement -
- Advertisement -

ಮುಖ್ಯಮಂತ್ರಿಯ ಪೋರ್ಟಲ್‌ನಲ್ಲಿ ದೂರು ದಾಖಲಾಗಿರುವ ಹಿನ್ನೆಲೆ, ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಪೊಲೀಸರು ಮುಸ್ಲಿಂ ಮದುವೆ ಬ್ಯಾಂಡ್‌ಗಳ ನಿರ್ವಾಹಕರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡದಂತೆ ಆದೇಶಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಗುರುವಾರ ವರದಿ ಮಾಡಿದೆ.

ಜಿಲ್ಲೆಯಲ್ಲಿ ಸುಮಾರು 15 ರಿಂದ 20 ಮುಸ್ಲಿಂ ಬ್ಯಾಂಡ್ ನಿರ್ವಾಹಕರು ಹಿಂದೂ ದೇವತೆಗಳ ಹೆಸರನ್ನು ಬಳಸಿಕೊಂಡು ತಮ್ಮ ವ್ಯವಹಾರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶಬಿ ಶರ್ಮಾ ಎಂಬ ವಕೀಲ ಜುಲೈ 9 ರಂದು ದೂರು ದಾಖಲಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಮುಸ್ಲಿಮರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡುದರಿಂದ ತನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ದೂರುದಾರ ಹೇಳಿಕೊಂಡಿದ್ದಾರೆ.

ಮಂಗಳವಾರ ಜಿಲ್ಲೆಯ ಹಲವಾರು ಬ್ಯಾಂಡ್ ಆಪರೇಟರ್‌ಗಳನ್ನು ಕರೆಸಿ, ಹಿಂದೂ ದೇವರುಗಳ ಹೆಸರುಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ. ಅವರೆಲ್ಲರೂ ಹೆಸರುಗಳನ್ನು ತೆಗೆದುಹಾಕುವುದಾಗಿ ಹೇಳಿದ್ದಾರೆ ಎಂದು ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಕುಮಾರ್ ರಣವಿಜಯ್ ಸಿಂಗ್ ತಿಳಿಸಿದ್ದಾಗಿ ಅಮರ್ ಉಜಾಲಾ ವರದಿ ಮಾಡಿದೆ.

ಮೊರಾದಾಬಾದ್‌ನಲ್ಲಿ ಮದುವೆ ಬ್ಯಾಂಡ್ ಉದ್ಯಮದಲ್ಲಿ ಹೆಚ್ಚಾಗಿ ಮುಸ್ಲಿಮರ ಪ್ರಾಬಲ್ಯವಿದೆ. ಆದರೆ, ಅವರು ತಮ್ಮ ಬ್ಯಾಂಡ್‌ಗಳು ದೇವರು ಮತ್ತು ದೇವತೆಗಳ ಸೇರಿದಂತೆ ಹಲವು ಹಿಂದೂ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರುದಾರ ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದು ಗುರುತನ್ನು ವಿರೂಪಗೊಳಿಸುವ ಪ್ರಯತ್ನ ಎಂದು ದೂರುದಾರ ಆರೋಪಿಸಿದ್ದು, ಸಿಎಂ ಸ್ವತಃ ಇಂತಹ ಪದ್ಧತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರೆ ಒತ್ತಾಯಿಸಿದ್ದಾರೆ. ತಮ್ಮ ದೂರಿನ ಆಧಾರದ ಮೇಲೆ ಪೊಲೀಸರು ತೆಗೆದುಕೊಂಡ ಕ್ರಮವು ತಾರತಮ್ಯವಲ್ಲ, ಬದಲಾಗಿ ಕಾನೂನು ಕ್ರಮ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ತೀರ್ಥಯಾತ್ರೆ ಮಾರ್ಗದಲ್ಲಿರುವ ಅಂಗಡಿ, ಹೋಟೆಲ್‌ಗಳ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ವಿವಾದಾತ್ಮಕ ಆದೇಶದ ನೀಡಿದ ಬಳಿಕ, ಇದೀಗ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಪೊಲೀಸರು ಸೂಚಿಸಿದ್ದಾರೆ.

ಕನ್ವರ್ ಯಾತ್ರೆ ಮಾರ್ಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆ ವೇಳೆ ಉತ್ತರಾಖಂಡ ಸರ್ಕಾರದ ಪರ ವಕೀಲರು ನಿಜವಾದ ಸಮಸ್ಯೆ ಎಂದರೆ ‘ಶಿವ ಡಾಬಾ, ಪಾರ್ವತಿ ಧಾಬಾ’ ಎಂಬ ಹೆಸರುಗಳನ್ನು ಮುಸ್ಲಿಮರು ತಮ್ಮ ಡಾಬಾಗಳಿಗೆ ಇಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ಜುಲೈ 22ರಂದು, ಎರಡೂ ರಾಜ್ಯ ಸರ್ಕಾರಗಳು ಹೊರಡಿಸಿದ ನಿರ್ದೇಶನಗಳ ಕಾನೂನುಬದ್ಧತೆಯನ್ನು ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿತ್ತು.

2024ರಲ್ಲಿ ಉತ್ತರ ಪ್ರದೇಶ ಸರ್ಕಾರ ಇದೇ ರೀತಿಯ ಆದೇಶಗಳನ್ನು ಹೊರಡಿಸಿತ್ತು. ಆ ಸಮಯದಲ್ಲಿ ರಾಜ್ಯದ ಮುಜಫರ್‌ನಗರದ ಪೊಲೀಸರು ಕನ್ವರ್ ಯಾತ್ರೆ ಮಾರ್ಗದಲ್ಲಿ ಭಕ್ತರ ಗೊಂದಲ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.

ಸುಪ್ರೀಂ ಕೋರ್ಟ್ ಜುಲೈ 2024ರಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ, ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಗುರುತನ್ನು ಬಹಿರಂಗಪಡಿಸುವಂತೆ ಒತ್ತಾಯಿಸುವುದನ್ನು ನಿಷೇಧಿಸಿತ್ತು.

ಬಿಹಾರ: ಗೋಪಾಲ್‌ಗಂಜ್‌ನಲ್ಲಿ ಅಮಾನವೀಯ ಘಟನೆ: ಹಸು ಸಾಕಣೆಗಾಗಿ ಹೋಗುತ್ತಿದ್ದ ಮುಸ್ಲಿಂ ದಂಪತಿಗೆ ಹಿಂದೂ ಸಂಘಟನೆಯಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....