Homeಮುಖಪುಟಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

ಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

- Advertisement -
- Advertisement -

ಮುಖ್ಯಮಂತ್ರಿಯ ಪೋರ್ಟಲ್‌ನಲ್ಲಿ ದೂರು ದಾಖಲಾಗಿರುವ ಹಿನ್ನೆಲೆ, ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಪೊಲೀಸರು ಮುಸ್ಲಿಂ ಮದುವೆ ಬ್ಯಾಂಡ್‌ಗಳ ನಿರ್ವಾಹಕರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡದಂತೆ ಆದೇಶಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಗುರುವಾರ ವರದಿ ಮಾಡಿದೆ.

ಜಿಲ್ಲೆಯಲ್ಲಿ ಸುಮಾರು 15 ರಿಂದ 20 ಮುಸ್ಲಿಂ ಬ್ಯಾಂಡ್ ನಿರ್ವಾಹಕರು ಹಿಂದೂ ದೇವತೆಗಳ ಹೆಸರನ್ನು ಬಳಸಿಕೊಂಡು ತಮ್ಮ ವ್ಯವಹಾರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶಬಿ ಶರ್ಮಾ ಎಂಬ ವಕೀಲ ಜುಲೈ 9 ರಂದು ದೂರು ದಾಖಲಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಮುಸ್ಲಿಮರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡುದರಿಂದ ತನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ದೂರುದಾರ ಹೇಳಿಕೊಂಡಿದ್ದಾರೆ.

ಮಂಗಳವಾರ ಜಿಲ್ಲೆಯ ಹಲವಾರು ಬ್ಯಾಂಡ್ ಆಪರೇಟರ್‌ಗಳನ್ನು ಕರೆಸಿ, ಹಿಂದೂ ದೇವರುಗಳ ಹೆಸರುಗಳನ್ನು ತೆಗೆದುಹಾಕುವಂತೆ ಸೂಚಿಸಲಾಗಿದೆ. ಅವರೆಲ್ಲರೂ ಹೆಸರುಗಳನ್ನು ತೆಗೆದುಹಾಕುವುದಾಗಿ ಹೇಳಿದ್ದಾರೆ ಎಂದು ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಕುಮಾರ್ ರಣವಿಜಯ್ ಸಿಂಗ್ ತಿಳಿಸಿದ್ದಾಗಿ ಅಮರ್ ಉಜಾಲಾ ವರದಿ ಮಾಡಿದೆ.

ಮೊರಾದಾಬಾದ್‌ನಲ್ಲಿ ಮದುವೆ ಬ್ಯಾಂಡ್ ಉದ್ಯಮದಲ್ಲಿ ಹೆಚ್ಚಾಗಿ ಮುಸ್ಲಿಮರ ಪ್ರಾಬಲ್ಯವಿದೆ. ಆದರೆ, ಅವರು ತಮ್ಮ ಬ್ಯಾಂಡ್‌ಗಳು ದೇವರು ಮತ್ತು ದೇವತೆಗಳ ಸೇರಿದಂತೆ ಹಲವು ಹಿಂದೂ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರುದಾರ ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದು ಗುರುತನ್ನು ವಿರೂಪಗೊಳಿಸುವ ಪ್ರಯತ್ನ ಎಂದು ದೂರುದಾರ ಆರೋಪಿಸಿದ್ದು, ಸಿಎಂ ಸ್ವತಃ ಇಂತಹ ಪದ್ಧತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರೆ ಒತ್ತಾಯಿಸಿದ್ದಾರೆ. ತಮ್ಮ ದೂರಿನ ಆಧಾರದ ಮೇಲೆ ಪೊಲೀಸರು ತೆಗೆದುಕೊಂಡ ಕ್ರಮವು ತಾರತಮ್ಯವಲ್ಲ, ಬದಲಾಗಿ ಕಾನೂನು ಕ್ರಮ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ತೀರ್ಥಯಾತ್ರೆ ಮಾರ್ಗದಲ್ಲಿರುವ ಅಂಗಡಿ, ಹೋಟೆಲ್‌ಗಳ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ವಿವಾದಾತ್ಮಕ ಆದೇಶದ ನೀಡಿದ ಬಳಿಕ, ಇದೀಗ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಪೊಲೀಸರು ಸೂಚಿಸಿದ್ದಾರೆ.

ಕನ್ವರ್ ಯಾತ್ರೆ ಮಾರ್ಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆ ವೇಳೆ ಉತ್ತರಾಖಂಡ ಸರ್ಕಾರದ ಪರ ವಕೀಲರು ನಿಜವಾದ ಸಮಸ್ಯೆ ಎಂದರೆ ‘ಶಿವ ಡಾಬಾ, ಪಾರ್ವತಿ ಧಾಬಾ’ ಎಂಬ ಹೆಸರುಗಳನ್ನು ಮುಸ್ಲಿಮರು ತಮ್ಮ ಡಾಬಾಗಳಿಗೆ ಇಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ಜುಲೈ 22ರಂದು, ಎರಡೂ ರಾಜ್ಯ ಸರ್ಕಾರಗಳು ಹೊರಡಿಸಿದ ನಿರ್ದೇಶನಗಳ ಕಾನೂನುಬದ್ಧತೆಯನ್ನು ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿತ್ತು.

2024ರಲ್ಲಿ ಉತ್ತರ ಪ್ರದೇಶ ಸರ್ಕಾರ ಇದೇ ರೀತಿಯ ಆದೇಶಗಳನ್ನು ಹೊರಡಿಸಿತ್ತು. ಆ ಸಮಯದಲ್ಲಿ ರಾಜ್ಯದ ಮುಜಫರ್‌ನಗರದ ಪೊಲೀಸರು ಕನ್ವರ್ ಯಾತ್ರೆ ಮಾರ್ಗದಲ್ಲಿ ಭಕ್ತರ ಗೊಂದಲ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.

ಸುಪ್ರೀಂ ಕೋರ್ಟ್ ಜುಲೈ 2024ರಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ, ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಗುರುತನ್ನು ಬಹಿರಂಗಪಡಿಸುವಂತೆ ಒತ್ತಾಯಿಸುವುದನ್ನು ನಿಷೇಧಿಸಿತ್ತು.

ಬಿಹಾರ: ಗೋಪಾಲ್‌ಗಂಜ್‌ನಲ್ಲಿ ಅಮಾನವೀಯ ಘಟನೆ: ಹಸು ಸಾಕಣೆಗಾಗಿ ಹೋಗುತ್ತಿದ್ದ ಮುಸ್ಲಿಂ ದಂಪತಿಗೆ ಹಿಂದೂ ಸಂಘಟನೆಯಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...