Homeಕರ್ನಾಟಕಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

- Advertisement -
- Advertisement -

ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಪ್ರಕರಣದ ಸುತ್ತ ಗೊಂದಲ ಸೃಷ್ಟಿಯಾಗಿದೆ. ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಹೇಳಿಕೆಗಳು ಈ ಗೊಂದಲಗಳಿಗೆ ಕಾರಣವಾಗಿದೆ.

ಶುಕ್ರವಾರ (ಆ.22) ‘ಇನ್‌ಸೈಟ್‌ರಶ್’ ಎಂಬ ಯೂಟ್ಯೂಬ್ ಚಾನೆಲ್ ಅಪ್ಲೋಡ್ ಮಾಡಿದ್ದ ವಿಡಿಯೋದಲ್ಲಿ ಮಾತನಾಡಿದ ಸುಜಾತಾ ಭಟ್, “ಅನನ್ಯಾ ಭಟ್ ನನ್ನ ಮಗಳು ಎನ್ನುವುದು ಸುಳ್ಳು. ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ. ಕೆಲ ವ್ಯಕ್ತಿಗಳು ಆ ರೀತಿ ಹೇಳುವಂತೆ ಒತ್ತಡ ಹೇರಿದ್ದರಿಂದ ನಾನು ಸುಳ್ಳು ಕಥೆ ಹೆಣೆದೆ ಎಂದು ಸ್ಪಷ್ಟಪಡಿಸಿದ್ದರು. ಆ ವ್ಯಕ್ತಿಗಳು ಯಾರು ಎಂದು ವರದಿಗಾರ್ತಿ ಕೇಳಿದಾಗ, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಎಂದು ಹೆಸರು ಹೇಳಿದ್ದರು.

ಮುಂದುರಿದು, ಆಸ್ತಿ ವಿವಾದ ಇತ್ತು ಅದಕ್ಕೆ ನಾನು ಅನನ್ಯಾ ಭಟ್ ಕಥೆ ಹೇಳಿದೆ. ನನ್ನ ಅಜ್ಜನ ಆಸ್ತಿಯನ್ನು ದಾನವಾಗಿ ದೇವಸ್ಥಾನಕ್ಕೆ ಕೊಡುವಾಗ ಮೊಮ್ಮಗಳಾದ ನನ್ನ ಸಹಿ ತೆಗೆದುಕೊಳ್ಳಬೇಕಿತ್ತು. ನನಗೆ ಹಕ್ಕಿದೆ, ಆದರೆ ಹಾಗೆ ಮಾಡದೆ ದಾನವಾಗಿ ನಮ್ಮ ತಾತನ ಜಮೀನನ್ನು ಧರ್ಮಸ್ಥಳಕ್ಕೆ ಬರೆದುಕೊಟ್ಟರು. ನನ್ನನ್ನು ಸತ್ತಂತೆ ಪರಿಗಣಿಸಿದರು. ಅದು ನನಗೆ ತುಂಬಾ ನೋವು ಕೊಟ್ಟಿತು. ಹಾಗಾಗಿ ಅವರು ಹೇಳಿದಂತೆ ಮಾಡಿದ್ದೇನೆ. ನಾನು ತೋರಿಸಿರುವ ಫೋಟೋ ಎಲ್ಲವೂ ನಕಲಿ. ನಾನು ಧರ್ಮಸ್ಥಳ ಕ್ಷೇತ್ರ ಅಥವಾ ಅಲ್ಲಿನ ಯಾವುದೇ ವ್ಯಕ್ತಿ ವಿರುದ್ಧ ದೂರು ಕೊಟ್ಟಿಲ್ಲ, ಧರ್ಮಸ್ಥಳ ಗ್ರಾಮದಲ್ಲಿ ಎಂದು ದೂರು ಕೊಟ್ಟಿದ್ದೆ ಎಂದಿದ್ದರು.

ನನಗೆ ಈ ಕುರಿತು ಯಾರೂ ಹಣದ ಆಮಿಷ ಒಡ್ಡಿಲ್ಲ. ಕೇವಲ ಒಂದು ಬಾರಿಯಷ್ಟೇ ಅವರನ್ನು ಭೇಟಿಯಾಗಿದ್ದೇನೆ. ಮಗಳ ಕಥೆ ಹೇಳಿ ಎಂದು ಹೇಳಿಕೊಟ್ಟರು. ನನ್ನ ತಲೆಗೆ ತುರುಕಿದರು. ಅದರಂತೆ ಹೇಳಿದ್ದೇನೆ. ಆದರೆ, ಅದು ಈ ಮಟ್ಟಕ್ಕೆ ಹೋಗುತ್ತದೆ, ಇಷ್ಟೊಂದು ತೇಜೋವಧೆ ಆಗುತ್ತದೆ ಎಂದು ಯಾವತ್ತೂ ಭಾವಿಸಿರಲಿಲ್ಲ. ನಾನು ಲೀವಿಂಗ್ ಟುಗೆದರ್‌ನಲ್ಲಿ ಇದ್ದದ್ದು ನಿಜ. ಆದರೆ, ಆ ವ್ಯಕ್ತಿಯನ್ನು (ಸಂಗಾತಿಯನ್ನು) ನಾನೇ ದುಡಿದು ಸಾಕಿದ್ದೇನೆ. ಯಾರ ಮುಂದೆಯೂ ಕೈಚಾಚಿದವಳು ಅಲ್ಲ ಎಂದು ಸುಜಾತಾ ಭಟ್ ಅವರು ಹೇಳಿದ್ದರು.

ಈ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ಮನೆಯಿಂದ ಸುದ್ದಿ ವಾಹಿನಿಗಳ ಜೊತೆ ಮಾತನಾಡಿದ ಸುಜಾತಾ ಭಟ್, “ಇವತ್ತು ಸಂಜೆ 5 ಗಂಟೆಗೆ ಒಬ್ಬರು ವಕೀಲರು ಬಂದು ನನ್ನನ್ನು ಕರೆದುಕೊಂಡು ಹೋಗಿ ಯೂಟ್ಯೂಬ್ ಚಾನೆಲ್‌ ಜೊತೆ ಮಾತನಾಡಿಸಿದರು. ಅವರ ಕಾರಿನಲ್ಲಿ ನನ್ನನ್ನು ಕೂರಿಸಿಕೊಂಡು ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂಬ ಹೇಳಿಕೆ ಕೊಡಿಸಿದರು. ಅನನ್ಯಾ ಭಟ್ ಕಥೆ ಹೆಣೆಯಲು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ಮತ್ತು ಜಯಂತ್ ಟಿ ನನ್ನನ್ನು ಪ್ರಚೋದಿಸಿದರು ಎಂದು ಬಲವಂತವಾಗಿ ಹೇಳಿಸಿದರು. ಇದು ಈ ರೀತಿ ಚಾನೆಲ್‌ನಲ್ಲಿ ಬರುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ನಾನು ಎಸ್‌ಐಟಿ ಮುಂದೆ ಹೋಗಿ ಎಲ್ಲಾ ವಿಷಯವನ್ನು ಹೇಳುತ್ತೇನೆ. ದಯವಿಟ್ಟು ಅಲ್ಲಿಯವರೆಗೆ ನನಗೆ ಸಮಯ ಕೊಡಿ ಎಂದಿದ್ದಾರೆ.

ನನ್ನನ್ನು ಕತ್ರಿಗುಪ್ಪೆ ಕಾಮಾಕ್ಯ ರಸ್ತೆಯಲ್ಲಿ ಕರೆದುಕೊಂಡು ಹೋಗಿ, ಎಲ್ಲೋ ಒಳ ರಸ್ತೆಯಲ್ಲಿ ಕಾರಿನೊಳಗೆ ಕೂರಿಸಿ ನನ್ನಿಂದ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇನ್ನೊಂದು ವಾಹಿನಿಯವರ ಜೊತೆಯೂ ನೀವು ಅನನ್ಯಾ ಭಟ್ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದೀರಲ್ವಾ? ಎಂದು ಸುದ್ದಿವಾಹಿನಿ ವರದಿಗಾರ ಕೇಳಿದಾಗ, ಆ ವಾಹಿನಿಯವರು ಕೂಡ ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ್ದಾರೆ ಎಂದಿದ್ದಾರೆ.

ನಾನು ಮೊದಲು ಎಸ್‌ಐಟಿ ಮುಂದೆ ಹೇಳಿಕೆ ಕೊಡುತ್ತೇನೆ. ಆ ಬಳಿಕ ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಇನ್ನು ಎಸ್‌ಐಟಿ ಮುಂದೆಯೇ ಹೇಳಿಕೆ ಕೊಡುತ್ತೇನೆ. ಎಸ್‌ಐಟಿಯವರು ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ಸೂಚಿಸಿದ್ದಾರೆ. ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡಿದ್ದೇನೆ. ಅವರು ಎಸ್‌ಐಟಿ ಮುಂದೆ ಹೋಗೋಣ ಎಂದಿದ್ದಾರೆ. ಹಾಗಾಗಿ, ನಾನು ಎಸ್ಐಟಿ ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ಸುಜಾತಾ ಭಟ್ ತಿಳಿಸಿದ್ದಾರೆ.

2003ರಲ್ಲಿ ಸ್ನೇಹಿತೆಯರ ಜೊತೆ ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತಾಯಿ ಸುಜಾತಾ ಭಟ್ 2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ಮಗಳ ನಾಪತ್ತೆ ಬಗ್ಗೆ ಈ ಹಿಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ಕೊಟ್ಟಿದ್ದರೂ ನನಗೆ ನ್ಯಾಯ ಸಿಕ್ಕಿಲ್ಲ. ಈಗ ಅನಾಮಿಕ ಕೊಟ್ಟ ದೂರಿನಂತೆ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನನಗೆ ಆಶಾ ಭಾವನೆ ಮೂಡಿದೆ. ಎಸ್‌ಐಟಿಯವರು ನನ್ನ ಮಗಳ ನಾಪತ್ತೆ ಪ್ರಕರಣವನ್ನೂ ಬೇಧಿಸಿ, ಅವಳ ಅಸ್ತಿ ಹುಡುಕಿ ಕೊಟ್ಟರೆ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತೇನೆ” ಎಂದಿದ್ದರು.

ಸುಜಾತಾ ಭಟ್ ಅವರ ಸಂಪೂರ್ಣ ಹೇಳಿಕೆಯ ಲಿಂಕ್ ಇಲ್ಲಿದೆ

ಅನನ್ಯಾ ಭಟ್ ನಾಪತ್ತೆ ದೂರು ಧರ್ಮಸ್ಥಳ ಠಾಣೆಯಿಂದ ಆಗಸ್ಟ್ 20, 2025ರಂದು ಎಸ್‌ಐಟಿಗೆ ವರ್ಗಾವಣೆಯಾಗಿದೆ. ಎಸ್‌ಐಟಿಯವರು ವಿಚಾರಣೆಗೆ ಹಾಜರಾಗುವಂತೆ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಸುದ್ದಿ ವಾಹಿನಿಯೊಂದು ಸುಜಾತಾ ಭಟ್ ಅವರಿಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂದು ನಿರಂತರ ಸುದ್ದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸುಜಾತಾ ಭಟ್, ಯುವತಿಯೊಬ್ಬರ ಫೋಟೋ ಬಿಡುಗಡೆ ಮಾಡಿ, “ಇದೇ ಅನನ್ಯಾ ಭಟ್” ಎಂದಿದ್ದರು. ಆದರೆ, ಸುದ್ದಿವಾಹಿನಿ ಮತ್ತು ಕೆಲ ಯೂಟ್ಯೂಬ್ ಚಾನೆಲ್‌ಗಳು ಆ ಫೋಟೋ ನಕಲಿ ಎಂದು ಆರೋಪಿಸಿತ್ತು. ವಾಸಂತಿ ಎನ್ನುವವರ ಫೋಟೋವನ್ನು ಯೂಟ್ಯೂಬರ್ ಸಮೀರ್ ಎಐ ಮೂಲಕ ಬದಲಾಯಿಸಿ ಅನನ್ಯಾ ಭಟ್ ಎಂದು ಬಿಂಬಿಸಿದ್ದಾರೆ ಎಂದಿತ್ತು.

ಸುಜಾತಾ ಭಟ್ ಅವರಿಗೆ ಅನನ್ಯಾ ಎಂಬ ಮಗಳೇ ಇರಲಿಲ್ಲ ಎಂಬುವುದಕ್ಕೆ ಸುದ್ದಿವಾಹಿನಿ, ಸುಜಾತಾ ಭಟ್ ಸಂಬಂಧಿಕರು ಎನ್ನಲಾದ ಕೆಲ ವ್ಯಕ್ತಿಗಳಿಂದ ಹೇಳಿಕೆಯನ್ನೂ ಪಡೆದಿತ್ತು. ಇದನ್ನು ಗಮನಿಸಿದ ಜನರು ಸುಜಾತಾ ಭಟ್ ಆರೋಪ ನಿಜವೋ, ಸುಳ್ಳೋ ಎಂಬ ಗೊಂದಲಕ್ಕೀಡಾಗಿದ್ದರು.

ಈ ಬೆನ್ನಲ್ಲೇ ‘ಇನ್‌ಸೈಟ್‌ರಶ್’ ಯೂಟ್ಯೂಬ್ ಚಾನೆಲ್‌ಗೆ ಸುಜಾತಾ ಭಟ್ ನೀಡಿದ್ದ ಹೇಳಿಕೆ ಸಂಚಲನ ಸೃಷ್ಟಿಸಿತ್ತು. ಇದಾಗಿ, ಗಂಟೆಯೊಳಗೆ “ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ” ಎಂಬ ಸುಜಾತಾ ಮಾತು ಜನರಲ್ಲಿ ಗೊಂದಲ ಉಂಟು ಮಾಡಿದೆ. ಹಾಗಾಗಿ, ಅನನ್ಯಾ ಭಟ್ ಪ್ರಕರಣದ ಸತ್ಯಾಸತ್ಯತೆ ಎಸ್‌ಐಟಿ ತನಿಖೆಯಿಂದಲೇ ಬಯಲಾಗಬೇಕಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...