Homeಕರ್ನಾಟಕಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

- Advertisement -
- Advertisement -

ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಪ್ರಕರಣದ ಸುತ್ತ ಗೊಂದಲ ಸೃಷ್ಟಿಯಾಗಿದೆ. ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಹೇಳಿಕೆಗಳು ಈ ಗೊಂದಲಗಳಿಗೆ ಕಾರಣವಾಗಿದೆ.

ಶುಕ್ರವಾರ (ಆ.22) ‘ಇನ್‌ಸೈಟ್‌ರಶ್’ ಎಂಬ ಯೂಟ್ಯೂಬ್ ಚಾನೆಲ್ ಅಪ್ಲೋಡ್ ಮಾಡಿದ್ದ ವಿಡಿಯೋದಲ್ಲಿ ಮಾತನಾಡಿದ ಸುಜಾತಾ ಭಟ್, “ಅನನ್ಯಾ ಭಟ್ ನನ್ನ ಮಗಳು ಎನ್ನುವುದು ಸುಳ್ಳು. ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ. ಕೆಲ ವ್ಯಕ್ತಿಗಳು ಆ ರೀತಿ ಹೇಳುವಂತೆ ಒತ್ತಡ ಹೇರಿದ್ದರಿಂದ ನಾನು ಸುಳ್ಳು ಕಥೆ ಹೆಣೆದೆ ಎಂದು ಸ್ಪಷ್ಟಪಡಿಸಿದ್ದರು. ಆ ವ್ಯಕ್ತಿಗಳು ಯಾರು ಎಂದು ವರದಿಗಾರ್ತಿ ಕೇಳಿದಾಗ, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಎಂದು ಹೆಸರು ಹೇಳಿದ್ದರು.

ಮುಂದುರಿದು, ಆಸ್ತಿ ವಿವಾದ ಇತ್ತು ಅದಕ್ಕೆ ನಾನು ಅನನ್ಯಾ ಭಟ್ ಕಥೆ ಹೇಳಿದೆ. ನನ್ನ ಅಜ್ಜನ ಆಸ್ತಿಯನ್ನು ದಾನವಾಗಿ ದೇವಸ್ಥಾನಕ್ಕೆ ಕೊಡುವಾಗ ಮೊಮ್ಮಗಳಾದ ನನ್ನ ಸಹಿ ತೆಗೆದುಕೊಳ್ಳಬೇಕಿತ್ತು. ನನಗೆ ಹಕ್ಕಿದೆ, ಆದರೆ ಹಾಗೆ ಮಾಡದೆ ದಾನವಾಗಿ ನಮ್ಮ ತಾತನ ಜಮೀನನ್ನು ಧರ್ಮಸ್ಥಳಕ್ಕೆ ಬರೆದುಕೊಟ್ಟರು. ನನ್ನನ್ನು ಸತ್ತಂತೆ ಪರಿಗಣಿಸಿದರು. ಅದು ನನಗೆ ತುಂಬಾ ನೋವು ಕೊಟ್ಟಿತು. ಹಾಗಾಗಿ ಅವರು ಹೇಳಿದಂತೆ ಮಾಡಿದ್ದೇನೆ. ನಾನು ತೋರಿಸಿರುವ ಫೋಟೋ ಎಲ್ಲವೂ ನಕಲಿ. ನಾನು ಧರ್ಮಸ್ಥಳ ಕ್ಷೇತ್ರ ಅಥವಾ ಅಲ್ಲಿನ ಯಾವುದೇ ವ್ಯಕ್ತಿ ವಿರುದ್ಧ ದೂರು ಕೊಟ್ಟಿಲ್ಲ, ಧರ್ಮಸ್ಥಳ ಗ್ರಾಮದಲ್ಲಿ ಎಂದು ದೂರು ಕೊಟ್ಟಿದ್ದೆ ಎಂದಿದ್ದರು.

ನನಗೆ ಈ ಕುರಿತು ಯಾರೂ ಹಣದ ಆಮಿಷ ಒಡ್ಡಿಲ್ಲ. ಕೇವಲ ಒಂದು ಬಾರಿಯಷ್ಟೇ ಅವರನ್ನು ಭೇಟಿಯಾಗಿದ್ದೇನೆ. ಮಗಳ ಕಥೆ ಹೇಳಿ ಎಂದು ಹೇಳಿಕೊಟ್ಟರು. ನನ್ನ ತಲೆಗೆ ತುರುಕಿದರು. ಅದರಂತೆ ಹೇಳಿದ್ದೇನೆ. ಆದರೆ, ಅದು ಈ ಮಟ್ಟಕ್ಕೆ ಹೋಗುತ್ತದೆ, ಇಷ್ಟೊಂದು ತೇಜೋವಧೆ ಆಗುತ್ತದೆ ಎಂದು ಯಾವತ್ತೂ ಭಾವಿಸಿರಲಿಲ್ಲ. ನಾನು ಲೀವಿಂಗ್ ಟುಗೆದರ್‌ನಲ್ಲಿ ಇದ್ದದ್ದು ನಿಜ. ಆದರೆ, ಆ ವ್ಯಕ್ತಿಯನ್ನು (ಸಂಗಾತಿಯನ್ನು) ನಾನೇ ದುಡಿದು ಸಾಕಿದ್ದೇನೆ. ಯಾರ ಮುಂದೆಯೂ ಕೈಚಾಚಿದವಳು ಅಲ್ಲ ಎಂದು ಸುಜಾತಾ ಭಟ್ ಅವರು ಹೇಳಿದ್ದರು.

ಈ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ಮನೆಯಿಂದ ಸುದ್ದಿ ವಾಹಿನಿಗಳ ಜೊತೆ ಮಾತನಾಡಿದ ಸುಜಾತಾ ಭಟ್, “ಇವತ್ತು ಸಂಜೆ 5 ಗಂಟೆಗೆ ಒಬ್ಬರು ವಕೀಲರು ಬಂದು ನನ್ನನ್ನು ಕರೆದುಕೊಂಡು ಹೋಗಿ ಯೂಟ್ಯೂಬ್ ಚಾನೆಲ್‌ ಜೊತೆ ಮಾತನಾಡಿಸಿದರು. ಅವರ ಕಾರಿನಲ್ಲಿ ನನ್ನನ್ನು ಕೂರಿಸಿಕೊಂಡು ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂಬ ಹೇಳಿಕೆ ಕೊಡಿಸಿದರು. ಅನನ್ಯಾ ಭಟ್ ಕಥೆ ಹೆಣೆಯಲು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ಮತ್ತು ಜಯಂತ್ ಟಿ ನನ್ನನ್ನು ಪ್ರಚೋದಿಸಿದರು ಎಂದು ಬಲವಂತವಾಗಿ ಹೇಳಿಸಿದರು. ಇದು ಈ ರೀತಿ ಚಾನೆಲ್‌ನಲ್ಲಿ ಬರುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ನಾನು ಎಸ್‌ಐಟಿ ಮುಂದೆ ಹೋಗಿ ಎಲ್ಲಾ ವಿಷಯವನ್ನು ಹೇಳುತ್ತೇನೆ. ದಯವಿಟ್ಟು ಅಲ್ಲಿಯವರೆಗೆ ನನಗೆ ಸಮಯ ಕೊಡಿ ಎಂದಿದ್ದಾರೆ.

ನನ್ನನ್ನು ಕತ್ರಿಗುಪ್ಪೆ ಕಾಮಾಕ್ಯ ರಸ್ತೆಯಲ್ಲಿ ಕರೆದುಕೊಂಡು ಹೋಗಿ, ಎಲ್ಲೋ ಒಳ ರಸ್ತೆಯಲ್ಲಿ ಕಾರಿನೊಳಗೆ ಕೂರಿಸಿ ನನ್ನಿಂದ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇನ್ನೊಂದು ವಾಹಿನಿಯವರ ಜೊತೆಯೂ ನೀವು ಅನನ್ಯಾ ಭಟ್ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದೀರಲ್ವಾ? ಎಂದು ಸುದ್ದಿವಾಹಿನಿ ವರದಿಗಾರ ಕೇಳಿದಾಗ, ಆ ವಾಹಿನಿಯವರು ಕೂಡ ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ್ದಾರೆ ಎಂದಿದ್ದಾರೆ.

ನಾನು ಮೊದಲು ಎಸ್‌ಐಟಿ ಮುಂದೆ ಹೇಳಿಕೆ ಕೊಡುತ್ತೇನೆ. ಆ ಬಳಿಕ ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಇನ್ನು ಎಸ್‌ಐಟಿ ಮುಂದೆಯೇ ಹೇಳಿಕೆ ಕೊಡುತ್ತೇನೆ. ಎಸ್‌ಐಟಿಯವರು ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ಸೂಚಿಸಿದ್ದಾರೆ. ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡಿದ್ದೇನೆ. ಅವರು ಎಸ್‌ಐಟಿ ಮುಂದೆ ಹೋಗೋಣ ಎಂದಿದ್ದಾರೆ. ಹಾಗಾಗಿ, ನಾನು ಎಸ್ಐಟಿ ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ಸುಜಾತಾ ಭಟ್ ತಿಳಿಸಿದ್ದಾರೆ.

2003ರಲ್ಲಿ ಸ್ನೇಹಿತೆಯರ ಜೊತೆ ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತಾಯಿ ಸುಜಾತಾ ಭಟ್ 2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ಮಗಳ ನಾಪತ್ತೆ ಬಗ್ಗೆ ಈ ಹಿಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ಕೊಟ್ಟಿದ್ದರೂ ನನಗೆ ನ್ಯಾಯ ಸಿಕ್ಕಿಲ್ಲ. ಈಗ ಅನಾಮಿಕ ಕೊಟ್ಟ ದೂರಿನಂತೆ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನನಗೆ ಆಶಾ ಭಾವನೆ ಮೂಡಿದೆ. ಎಸ್‌ಐಟಿಯವರು ನನ್ನ ಮಗಳ ನಾಪತ್ತೆ ಪ್ರಕರಣವನ್ನೂ ಬೇಧಿಸಿ, ಅವಳ ಅಸ್ತಿ ಹುಡುಕಿ ಕೊಟ್ಟರೆ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತೇನೆ” ಎಂದಿದ್ದರು.

ಸುಜಾತಾ ಭಟ್ ಅವರ ಸಂಪೂರ್ಣ ಹೇಳಿಕೆಯ ಲಿಂಕ್ ಇಲ್ಲಿದೆ

ಅನನ್ಯಾ ಭಟ್ ನಾಪತ್ತೆ ದೂರು ಧರ್ಮಸ್ಥಳ ಠಾಣೆಯಿಂದ ಆಗಸ್ಟ್ 20, 2025ರಂದು ಎಸ್‌ಐಟಿಗೆ ವರ್ಗಾವಣೆಯಾಗಿದೆ. ಎಸ್‌ಐಟಿಯವರು ವಿಚಾರಣೆಗೆ ಹಾಜರಾಗುವಂತೆ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಸುದ್ದಿ ವಾಹಿನಿಯೊಂದು ಸುಜಾತಾ ಭಟ್ ಅವರಿಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂದು ನಿರಂತರ ಸುದ್ದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸುಜಾತಾ ಭಟ್, ಯುವತಿಯೊಬ್ಬರ ಫೋಟೋ ಬಿಡುಗಡೆ ಮಾಡಿ, “ಇದೇ ಅನನ್ಯಾ ಭಟ್” ಎಂದಿದ್ದರು. ಆದರೆ, ಸುದ್ದಿವಾಹಿನಿ ಮತ್ತು ಕೆಲ ಯೂಟ್ಯೂಬ್ ಚಾನೆಲ್‌ಗಳು ಆ ಫೋಟೋ ನಕಲಿ ಎಂದು ಆರೋಪಿಸಿತ್ತು. ವಾಸಂತಿ ಎನ್ನುವವರ ಫೋಟೋವನ್ನು ಯೂಟ್ಯೂಬರ್ ಸಮೀರ್ ಎಐ ಮೂಲಕ ಬದಲಾಯಿಸಿ ಅನನ್ಯಾ ಭಟ್ ಎಂದು ಬಿಂಬಿಸಿದ್ದಾರೆ ಎಂದಿತ್ತು.

ಸುಜಾತಾ ಭಟ್ ಅವರಿಗೆ ಅನನ್ಯಾ ಎಂಬ ಮಗಳೇ ಇರಲಿಲ್ಲ ಎಂಬುವುದಕ್ಕೆ ಸುದ್ದಿವಾಹಿನಿ, ಸುಜಾತಾ ಭಟ್ ಸಂಬಂಧಿಕರು ಎನ್ನಲಾದ ಕೆಲ ವ್ಯಕ್ತಿಗಳಿಂದ ಹೇಳಿಕೆಯನ್ನೂ ಪಡೆದಿತ್ತು. ಇದನ್ನು ಗಮನಿಸಿದ ಜನರು ಸುಜಾತಾ ಭಟ್ ಆರೋಪ ನಿಜವೋ, ಸುಳ್ಳೋ ಎಂಬ ಗೊಂದಲಕ್ಕೀಡಾಗಿದ್ದರು.

ಈ ಬೆನ್ನಲ್ಲೇ ‘ಇನ್‌ಸೈಟ್‌ರಶ್’ ಯೂಟ್ಯೂಬ್ ಚಾನೆಲ್‌ಗೆ ಸುಜಾತಾ ಭಟ್ ನೀಡಿದ್ದ ಹೇಳಿಕೆ ಸಂಚಲನ ಸೃಷ್ಟಿಸಿತ್ತು. ಇದಾಗಿ, ಗಂಟೆಯೊಳಗೆ “ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ” ಎಂಬ ಸುಜಾತಾ ಮಾತು ಜನರಲ್ಲಿ ಗೊಂದಲ ಉಂಟು ಮಾಡಿದೆ. ಹಾಗಾಗಿ, ಅನನ್ಯಾ ಭಟ್ ಪ್ರಕರಣದ ಸತ್ಯಾಸತ್ಯತೆ ಎಸ್‌ಐಟಿ ತನಿಖೆಯಿಂದಲೇ ಬಯಲಾಗಬೇಕಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...