Homeಕರ್ನಾಟಕಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1ರ ಮೀಸಲಾತಿ ಬೇಡಿಕೆ: ಇಂದು ಮುಖ್ಯಮಂತ್ರಿಗಳ ಜೊತೆ ನಿರ್ಣಾಯಕ ಸಭೆ

ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1ರ ಮೀಸಲಾತಿ ಬೇಡಿಕೆ: ಇಂದು ಮುಖ್ಯಮಂತ್ರಿಗಳ ಜೊತೆ ನಿರ್ಣಾಯಕ ಸಭೆ

- Advertisement -
- Advertisement -

ಬೆಂಗಳೂರು: ರಾಜ್ಯದ 59 ಅತಿ ಸೂಕ್ಷ್ಮ ಮತ್ತು ಅಲೆಮಾರಿ ಸಮುದಾಯಗಳು ತಮ್ಮ ಹಕ್ಕುಗಳಿಗಾಗಿ ಪ್ರತ್ಯೇಕ ಶೇ.1ರ ಮೀಸಲಾತಿಯನ್ನು ಕೋರಿ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯು ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಕುರಿತು ಸರ್ಕಾರದ ನಿಲುವು ಮತ್ತು ಮುಂದಿನ ಕ್ರಮಗಳ ಬಗ್ಗೆ ರಾಜ್ಯದಾದ್ಯಂತ ಕುತೂಹಲ ಮೂಡಿದ್ದು, ಮುಖ್ಯಮಂತ್ರಿಗಳು ಇಂದು ಅಲೆಮಾರಿ ಸಮುದಾಯಗಳ ಮುಖಂಡರ ಜೊತೆ ಮಹತ್ವದ ಸಭೆ ಕರೆದಿದ್ದಾರೆ. ಈ ಸಭೆಯ ನಿರ್ಣಯವು ಸಮುದಾಯಗಳ ಭವಿಷ್ಯವನ್ನು ನಿರ್ಧರಿಸಲಿದೆ.

ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿಗಳ ಒಕ್ಕೂಟದ ಅಧ್ಯಕ್ಷ ಡಿ.ಕೆ. ಮಾಳೇಶ್ ಅವರು ಮಾತನಾಡಿ, “ಇದು ನಮ್ಮ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಅಂತಿಮ ಹೋರಾಟವಾಗಿದೆ. ದಶಕಗಳಿಂದ ನಾವು ಅವಕಾಶ ವಂಚಿತರಾಗಿದ್ದು, ನಮ್ಮ ದನಿಯನ್ನು ಯಾರೂ ಆಲಿಸಿಲ್ಲ. ಇಂದು ಕರ್ನಾಟಕದ ಎಲ್ಲಾ ಅಲೆಮಾರಿಗಳು ಮತ್ತು ಸಮುದಾಯದ ಬೆಂಬಲಿಗರು ಒಗ್ಗೂಡಿ ಈ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ನಾನು ಕರೆ ನೀಡುತ್ತೇನೆ. ಮುಖ್ಯಮಂತ್ರಿಗಳೊಂದಿಗಿನ ಇಂದಿನ ಸಭೆಯು ಫಲಪ್ರದವಾಗಲಿದೆ ಎಂದು ನಾವು ಆಶಿಸುತ್ತೇವೆ. ಇದು ಕೇವಲ ನಮ್ಮ ಸಮುದಾಯದ ಮೀಸಲಾತಿಯ ಪ್ರಶ್ನೆಯಲ್ಲ, ಇದು ಬದುಕು ಕಟ್ಟಿಕೊಳ್ಳುವ ಹೋರಾಟ,” ಎಂದು ಹೇಳಿದರು.

ಕ್ಯಾಬಿನೆಟ್ ನಿರ್ಣಯ ಅಲೆಮಾರಿಗಳಿಗೆ ‘ಮರಣ ಶಾಸನ’ ಏಕೆ?

ಪರಿಶಿಷ್ಟಜಾತಿಯ 59 ಸೂಕ್ಷ್ಮ ಅತಿ ಸೂಕ್ಷ್ಮ ಅಲೆಮಾರಿಗಳ ಸಮುದಾಯಗಳ ಒಳಮೀಸಲಾತಿ ವಂಚಿತ ಹೋರಾಟ ಸಮಿತಿಯು ಸರ್ಕಾರದ ಇತ್ತೀಚಿನ ಕ್ಯಾಬಿನೆಟ್ ನಿರ್ಣಯವನ್ನು ತೀವ್ರವಾಗಿ ಖಂಡಿಸಿದೆ. ಸರ್ಕಾರದ ಈ ನಿರ್ಧಾರವು ಅಲೆಮಾರಿ ಸಮುದಾಯಗಳಿಗೆ ‘ಮರಣ ಶಾಸನ’ ಬರೆದಂತಿದೆ ಎಂದು ಸಮಿತಿ ಆರೋಪಿಸಿದೆ. ಬಂಜಾರ, ಭೋವಿ, ಕೊರಮ, ಕೊರಚರಂತಹ ಪ್ರಬಲ ಸಮುದಾಯಗಳನ್ನು ಸೇರಿಸಿ ಒಳಮೀಸಲಾತಿಯನ್ನು ಪ್ರವರ್ಗ-ಸಿ ಅಡಿಯಲ್ಲಿ ಶೇ. 5ರಷ್ಟು ನಿಗದಿಪಡಿಸಿರುವುದರಿಂದ, ಸಣ್ಣ ಮತ್ತು ಸೂಕ್ಷ್ಮ ಅಲೆಮಾರಿ ಸಮುದಾಯಗಳಿಗೆ ಮೀಸಲಾತಿಯ ನಿಜವಾದ ಪ್ರಯೋಜನ ಸಿಗುವುದಿಲ್ಲ ಎಂಬುದು ಅವರ ಆತಂಕ. ಪ್ರಬಲ ಸಮುದಾಯಗಳು ಹೆಚ್ಚಿನ ಪಾಲನ್ನು ಪಡೆದುಕೊಂಡು ಈ ಸಮುದಾಯಗಳನ್ನು ಮತ್ತಷ್ಟು ಅವಕಾಶವಂಚಿತರನ್ನಾಗಿ ಮಾಡುತ್ತವೆ ಎಂಬುದು ಸಮಿತಿಯ ಮುಖ್ಯ ವಾದವಾಗಿದೆ.

ನಾಗಮೋಹನ್ ದಾಸ್ ವರದಿಯ ಅಗತ್ಯವೇನು?

ಸಮಿತಿಯು ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದೆ. ಆಯೋಗವು ವೈಜ್ಞಾನಿಕ ಸಮೀಕ್ಷೆಗಳ ಆಧಾರದ ಮೇಲೆ ಈ 59 ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳನ್ನು ‘ಪ್ರವರ್ಗ-ಎ’ ಅಡಿಯಲ್ಲಿ ವರ್ಗೀಕರಿಸಲು ಶಿಫಾರಸು ಮಾಡಿತ್ತು. ‘ಪ್ರವರ್ಗ-ಎ’ ಅಡಿಯಲ್ಲಿ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಶಿಫಾರಸು ಮಾಡಿತ್ತು. ಈ ಸಮುದಾಯಗಳಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ, ಈ ವರದಿಯೇ ಸೂಕ್ತವಾಗಿದೆ ಎಂಬುದು ಹೋರಾಟಗಾರರ ವಾದ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳಂತೆ, ಮೀಸಲಾತಿಯ ಫಲ ಮೊದಲಿಗೆ ಕಟ್ಟಕಡೆಯವರಿಗೆ ತಲುಪಬೇಕು. ಶೇ. 1ರಷ್ಟು ಮೀಸಲಾತಿ ನೀಡಿದರೂ ಅದು ಈ ಅನಾಥ ಸಮುದಾಯಗಳಿಗೆ ಹೊಸ ಬದುಕು ನೀಡುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

ಐತಿಹಾಸಿಕ ಹೋರಾಟ ಮತ್ತು ಭವಿಷ್ಯದ ನಿರೀಕ್ಷೆ

ಸಾವಿರಾರು ವರ್ಷಗಳಿಂದ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅವಕಾಶ ವಂಚಿತರಾಗಿ ಬದುಕುತ್ತಿರುವ ಈ ಅಲೆಮಾರಿ ಸಮುದಾಯಗಳು, ಸ್ವಾತಂತ್ರ್ಯಾನಂತರವೂ ಸಂವಿಧಾನಬದ್ಧ ಸೌಲಭ್ಯಗಳನ್ನು ಪಡೆಯಲು ವಿಫಲವಾಗಿವೆ. ಮೀಸಲಾತಿಯ ನಿಜವಾದ ಉದ್ದೇಶವೇ ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವುದು. ಆದರೆ ಇದುವರೆಗೂ ಪ್ರಬಲ ಸಮುದಾಯಗಳಿಂದಾಗಿ ಇವರಿಗೆ ನ್ಯಾಯ ಸಿಗುತ್ತಿಲ್ಲ ಎಂಬುದು ಅವರ ಅಳಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ 30 ವರ್ಷಗಳಿಂದ ಒಳಮೀಸಲಾತಿಗಾಗಿ ನಿರಂತರ ಹೋರಾಟ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದಿನ ಸಭೆಯು ಮಹತ್ವದ ಘಟ್ಟವಾಗಿದೆ. ಸರ್ಕಾರವು ನಾಗಮೋಹನ್ ದಾಸ್ ವರದಿಯ ಶಿಫಾರಸುಗಳನ್ನು ಒಪ್ಪಿ, ಪ್ರತ್ಯೇಕ ಮೀಸಲಾತಿಯ ಬೇಡಿಕೆಯನ್ನು ಈಡೇರಿಸುತ್ತದೆಯೇ ಅಥವಾ ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿಯುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಅಲೆಮಾರಿ ಸಮುದಾಯಗಳ ಈ ಹೋರಾಟವು ಕೇವಲ ಮೀಸಲಾತಿಗಾಗಿ ಅಲ್ಲ, ಅದು ನ್ಯಾಯ, ಸಮಾನತೆ ಮತ್ತು ಈ ಸಮುದಾಯಗಳ ಭವಿಷ್ಯವನ್ನು ಕಟ್ಟುವ ಹೋರಾಟವಾಗಿದೆ.

59 ಅಲೆಮಾರಿ ಸಮುದಾಯಗಳಿಂದ ಶೇ. 1ರ ಪ್ರತ್ಯೇಕ ಮೀಸಲಾತಿಗೆ ಆಗ್ರಹ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...