Homeಮುಖಪುಟಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಶೇಕಡ 20 ಎಥೆನಾಲ್ (E20) ಬೆರೆಸಿದ ಪೆಟ್ರೋಲ್ ಮಾರಾಟವನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಅಕ್ಷಯ್ ಮಲ್ಹೋತ್ರಾ ಎಂಬ ವಕೀಲ ಅರ್ಜಿ ಸಲ್ಲಿಸಿದ್ದು, ಗ್ರಾಹಕರಿಗೆ ಎಥೆನಾಲ್ ಮುಕ್ತ ಪೆಟ್ರೋಲ್ (E0) ಆಯ್ಕೆಯನ್ನು ಒದಗಿಸದೆ E20 ಪೆಟ್ರೋಲ್ ಅನ್ನು ಮಾತ್ರ ಲಭ್ಯವಾಗುವಂತೆ ಮಾಡುವುದು, ಹೆಚ್ಚಿನ ಎಥೆನಾಲ್ ಮಿಶ್ರಣದೊಂದಿಗೆ ಹೊಂದಿಕೆಯಾಗದ ಲಕ್ಷಾಂತರ ವಾಹನ ಮಾಲೀಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಅಲ್ಲದೆ, ಸಾರ್ವಜನಿಕ ಜಾಗೃತಿ ಮೂಡಿಸದೆ ಇಂತಹ ಯೋಜನೆ ಜಾರಿಗೊಳಿಸುವುದು ಗ್ರಾಹಕ ಸಂರಕ್ಷಣಾ ಕಾಯ್ದೆ, 2019ರ ಪ್ರಕಾರ ಮಾಹಿತಿಯುಕ್ತ ಆಯ್ಕೆಯನ್ನು ಹೊಂದುವ ಗ್ರಾಹಕರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಲಕ್ಷಾಂತರ ಭಾರತೀಯರಿಗೆ ತಮ್ಮ ವಾಹನಗಳಲ್ಲಿರುವ ಪೆಟ್ರೋಲ್ 100% ಪೆಟ್ರೋಲ್ ಅಲ್ಲ, ಬದಲಾಗಿ ಎಥೆನಾಲ್ ಮತ್ತು ಪೆಟ್ರೋಲ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ ಎಂದು ಅರ್ಜಿದಾರ ವಾದಿಸಿದ್ದಾರೆ. ಗ್ರಾಹಕರಿಗೆ ಯಾವುದೇ ವಾಸ್ತವಾಂಶವನ್ನು ಬಹಿರಂಗಪಡಿಸದ ಕಾರಣ ‘ತಿಳುವಳಿಕೆಯುಳ್ಳ ಗ್ರಾಹಕ’ ಆಯ್ಕೆಯ ಮೂಲ ಅಂಶವನ್ನು ಇದು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

E20 ಪೆಟ್ರೋಲ್ ಬಳಕೆಯು ಇಂಧನ ದಕ್ಷತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ವಿವಿಧ ವಾಹನ ಘಟಕಗಳ ಸವೆತಕ್ಕೆ ಕಾರಣವಾಗಬಹುದು. ಇದರಿಂದಾಗಿ ಗ್ರಾಹಕರ ಮೇಲೆ ಹೆಚ್ಚುವರಿ ವೆಚ್ಚಗಳು ಮತ್ತು ಸುರಕ್ಷತಾ ಕಾಳಜಿಗಳನ್ನು ಹೇರಿದಂತಾಗುತ್ತದೆ. E20ಗೆ ಅನುಗುಣವಾಗಿ ವಾಹನಗಳನ್ನು ವಿನ್ಯಾಸಗೊಳಿಸಲು ಮತ್ತು ಬಿಡುಗಡೆ ಮಾಡಲು ಆಟೋಮೊಬೈಲ್ ತಯಾರಕರಿಗೆ ಸಾಕಷ್ಟು ಅವಕಾಶವನ್ನು ನೀಡದೆ ನೀತಿಯನ್ನು ಜಾರಿಗೆ ತರುವ ಕೇಂದ್ರದ ಕ್ರಮವು ‘ಅಸಮಂಜಸ ಮತ್ತು ಅನಿಯಂತ್ರಿತ’ ಎಂದು ಅರ್ಜಿದಾರ ಹೇಳಿದ್ದಾರೆ.

ಏಪ್ರಿಲ್ 2023ರ ಮೊದಲು ಭಾರತದಲ್ಲಿ ತಯಾರಾದ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುವುದಿಲ್ಲ. ಅಲ್ಲದೆ, 2 ವರ್ಷ ಹಳೆಯದಾದ ಈ ವಾಹನಗಳು, BS-VI ಗೆ ಅನುಗುಣವಾಗಿದ್ದರೂ, ಶೇ. 20 ಎಥೆನಾಲ್‌ಗೆ ಹೊಂದಿಕೆಯಾಗುವುದಿಲ್ಲ, ಅವು E-10ಗೆ ಹೊಂದಿಕೆಯಾಗಬಹುದು ಎಂದಿದ್ದಾರೆ.

ಪೆಟ್ರೋಲ್‌ನಲ್ಲಿರುವ ಎಥೆನಾಲ್ ಅಂಶವು ಎಂಜಿನ್ ಭಾಗಗಳ ಸವೆತಕ್ಕೆ ಕಾರಣವಾಗುತ್ತದೆ. ಇದು ಇಂಧನ ದಕ್ಷತೆಯನ್ನು ಕಡಿಮೆ ಮಾಡುತ್ತದೆ. ವಾಹನಗಳ ಅಕಾಲಿಕ ಹಾನಿಗೊಳಗಾಗಲು ಕಾರಣವಾಗುತ್ತದೆ. ಇಂಧನ ಮಾರ್ಗಗಳು, ಪ್ಲಾಸ್ಟಿಕ್/ರಬ್ಬರ್ ಘಟಕಗಳು ಇತ್ಯಾದಿಗಳಿಗೆ ಹಾನಿ ಮಾಡುತ್ತದೆ. ವಾಹನದ ಕಡಿಮೆ ದಕ್ಷತೆಯಿಂದಾಗಿ ಪೆಟ್ರೋಲ್ ಬಳಕೆ ಹೆಚ್ಚಾಗಿರುತ್ತದೆ. ಎಂಜಿನ್‌ಗಳು ಹಾನಿಗೊಳಗಾಗುತ್ತವೆ. ಮೈಲೇಜ್ ಕಡಿಮೆಯಾಗುತ್ತದೆ. ಮಾಲಿನ್ಯವನ್ನು ಹೆಚ್ಚಿಸುತ್ತದೆ. ಕಾರುಗಳ ದುರಸ್ತಿ ಬಿಲ್‌ಗಳು ಹೆಚ್ಚಾಗುತ್ತವೆ ಮತ್ತು ವಿಮಾ ಹಕ್ಕುಗಳನ್ನು ನಿರಾಕರಿಸಲಾಗುತ್ತದೆ ಎಮದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ಮಾರುಕಟ್ಟೆಯಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0) ಲಭ್ಯವಾಗುವಂತೆ ನೋಡಿಕೊಳ್ಳಲು ಮತ್ತು ಮಾರಾಟವಾಗುತ್ತಿರುವ ಪೆಟ್ರೋಲ್ E20 ಎಂದು ಸ್ಪಷ್ಟವಾಗಿ ಸೂಚಿಸುವ ಲೇಬಲ್‌ಗಳನ್ನು ಇಂಧನ ಪಂಪ್‌ಗಳಲ್ಲಿ ಅಳವಡಿಸಲು ನಿರ್ದೇಶನಗಳನ್ನು ನೀಡುವಂತೆ ಪಿಐಎಲ್‌ ಕೋರಿದೆ.

ಪೆಟ್ರೋಲ್‌ಗೆ ಶೇ. 20 ಎಥೆನಾಲ್ ಬೆರೆಸುತ್ತಿದ್ದರೂ, ಪೆಟ್ರೋಲ್ ಬೆಲೆ ಕಡಿಮೆಯಾಗಿಲ್ಲ ಎಂದು ಅರ್ಜಿದಾರರು ಗಮನಸೆಳೆದಿದ್ದಾರೆ. ಪೆಟ್ರೋಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಕಂಪನಿಗಳು ಗಳಿಸುವ ಲಾಭವನ್ನು ಅಂತಿಮವಾಗಿ ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ, ಅವರು ಅದೇ ಮೊತ್ತವನ್ನು ಪಾವತಿಸುತ್ತಲೇ ಇರುತ್ತಾರೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಪೆಟ್ರೋಲ್‌ನೊಂದಿಗೆ ಎಥೆನಾಲ್ ಬೆರೆಸುವ ಯೋಜನೆಯು ಜಾಗತಿಕ ಪದ್ಧತಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಪಿಐಎಲ್ ಎತ್ತಿ ತೋರಿಸಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟದಲ್ಲಿ, ಎಥೆನಾಲ್ ಮುಕ್ತ ಪೆಟ್ರೋಲ್ ಇನ್ನೂ ಲಭ್ಯವಿದೆ. ಮಿಶ್ರಿತ ಇಂಧನವನ್ನು ಪೆಟ್ರೋಲ್ ಬಂಕ್‌ಗಳಲ್ಲಿ ಸ್ಪಷ್ಟ ಲೇಬಲ್‌ಗಳೊಂದಿಗೆ ನೀಡಲಾಗುತ್ತಿದೆ. ಆದ್ದರಿಂದ ಗ್ರಾಹಕರು ಮಾಹಿತಿಯುಕ್ತ ಆಯ್ಕೆ ಮಾಡಬಹುದು. ಆದರೆ, ಭಾರತದಲ್ಲಿ, ವಾಹನ ಚಾಲಕರ ಕಣ್ಣಿಗೆ ಮಣ್ಣೆಚರಲಾಗುತ್ತುದೆ. ಪೆಟ್ರೋಲ್ ಪಂಪ್‌ಗಳು ತಮ್ಮ ವಾಹನಗಳಿಗೆ ಏನು ತುಂಬಿಸುತ್ತಿವೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡದೆ ಎಥೆನಾಲ್-ಮಿಶ್ರಿತ ಇಂಧನವನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ಅರ್ಜಿದಾರ ಹೇಳಿದ್ದಾರೆ.

ಎಲ್ಲಾ ಇಂಧನ ಕೇಂದ್ರಗಳಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0)ಆಯ್ಕೆಯನ್ನೂ ನೀಡಬೇಕು. ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸ್ಪಷ್ಟ ಲೇಬಲ್ ಹಾಕಿ ಗ್ರಾಹಕರಿಗೆ ಮಾಹಿತಿ ನೀಡಬೇಕು. ಇಂಧನ ತುಂಬಿಸುವ ಸಮಯದಲ್ಲಿ ಗ್ರಾಹಕರಿಗೆ ಅವರ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುತ್ತವೆಯೇ ಎಂದು ತಿಳಿಸಬೇಕು. ಗ್ರಾಹಕ ವ್ಯವಹಾರಗಳ ಸಚಿವಾಲಯವು ಎಥೆನಾಲ್ ಮಿಶ್ರಿತ ಇಂಧನಗಳಿಗೆ ಗ್ರಾಹಕ ರಕ್ಷಣಾ ನಿಯಮಗಳನ್ನು ಜಾರಿಗೊಳಿಸಬೇಕು ಮತ್ತು ಸರಿಯಾದ ಸಲಹೆಗಳನ್ನು ನೀಡಬೇಕು. ಇಂಧನ ದಕ್ಷತೆ ಮತ್ತು ಹೊಂದಾಣಿಕೆಯಾಗದ ವಾಹನಗಳಲ್ಲಿ ಸವೆತಗಳ ಮೇಲೆ ಶೇ. 20 ಎಥೆನಾಲ್-ಮಿಶ್ರಿತ ಪೆಟ್ರೋಲ್ (E20) ಪ್ರಭಾವದ ಕುರಿತು ರಾಷ್ಟ್ರವ್ಯಾಪಿ ಅಧ್ಯಯನ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...