Homeಮುಖಪುಟಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಗ್ರಾಹಕರಿಗೆ ಮಾಹಿತಿ ನೀಡದೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟ: ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಶೇಕಡ 20 ಎಥೆನಾಲ್ (E20) ಬೆರೆಸಿದ ಪೆಟ್ರೋಲ್ ಮಾರಾಟವನ್ನು ಕಡ್ಡಾಯಗೊಳಿಸುವ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಅಕ್ಷಯ್ ಮಲ್ಹೋತ್ರಾ ಎಂಬ ವಕೀಲ ಅರ್ಜಿ ಸಲ್ಲಿಸಿದ್ದು, ಗ್ರಾಹಕರಿಗೆ ಎಥೆನಾಲ್ ಮುಕ್ತ ಪೆಟ್ರೋಲ್ (E0) ಆಯ್ಕೆಯನ್ನು ಒದಗಿಸದೆ E20 ಪೆಟ್ರೋಲ್ ಅನ್ನು ಮಾತ್ರ ಲಭ್ಯವಾಗುವಂತೆ ಮಾಡುವುದು, ಹೆಚ್ಚಿನ ಎಥೆನಾಲ್ ಮಿಶ್ರಣದೊಂದಿಗೆ ಹೊಂದಿಕೆಯಾಗದ ಲಕ್ಷಾಂತರ ವಾಹನ ಮಾಲೀಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಅಲ್ಲದೆ, ಸಾರ್ವಜನಿಕ ಜಾಗೃತಿ ಮೂಡಿಸದೆ ಇಂತಹ ಯೋಜನೆ ಜಾರಿಗೊಳಿಸುವುದು ಗ್ರಾಹಕ ಸಂರಕ್ಷಣಾ ಕಾಯ್ದೆ, 2019ರ ಪ್ರಕಾರ ಮಾಹಿತಿಯುಕ್ತ ಆಯ್ಕೆಯನ್ನು ಹೊಂದುವ ಗ್ರಾಹಕರ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಲಕ್ಷಾಂತರ ಭಾರತೀಯರಿಗೆ ತಮ್ಮ ವಾಹನಗಳಲ್ಲಿರುವ ಪೆಟ್ರೋಲ್ 100% ಪೆಟ್ರೋಲ್ ಅಲ್ಲ, ಬದಲಾಗಿ ಎಥೆನಾಲ್ ಮತ್ತು ಪೆಟ್ರೋಲ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ ಎಂದು ಅರ್ಜಿದಾರ ವಾದಿಸಿದ್ದಾರೆ. ಗ್ರಾಹಕರಿಗೆ ಯಾವುದೇ ವಾಸ್ತವಾಂಶವನ್ನು ಬಹಿರಂಗಪಡಿಸದ ಕಾರಣ ‘ತಿಳುವಳಿಕೆಯುಳ್ಳ ಗ್ರಾಹಕ’ ಆಯ್ಕೆಯ ಮೂಲ ಅಂಶವನ್ನು ಇದು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

E20 ಪೆಟ್ರೋಲ್ ಬಳಕೆಯು ಇಂಧನ ದಕ್ಷತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ವಿವಿಧ ವಾಹನ ಘಟಕಗಳ ಸವೆತಕ್ಕೆ ಕಾರಣವಾಗಬಹುದು. ಇದರಿಂದಾಗಿ ಗ್ರಾಹಕರ ಮೇಲೆ ಹೆಚ್ಚುವರಿ ವೆಚ್ಚಗಳು ಮತ್ತು ಸುರಕ್ಷತಾ ಕಾಳಜಿಗಳನ್ನು ಹೇರಿದಂತಾಗುತ್ತದೆ. E20ಗೆ ಅನುಗುಣವಾಗಿ ವಾಹನಗಳನ್ನು ವಿನ್ಯಾಸಗೊಳಿಸಲು ಮತ್ತು ಬಿಡುಗಡೆ ಮಾಡಲು ಆಟೋಮೊಬೈಲ್ ತಯಾರಕರಿಗೆ ಸಾಕಷ್ಟು ಅವಕಾಶವನ್ನು ನೀಡದೆ ನೀತಿಯನ್ನು ಜಾರಿಗೆ ತರುವ ಕೇಂದ್ರದ ಕ್ರಮವು ‘ಅಸಮಂಜಸ ಮತ್ತು ಅನಿಯಂತ್ರಿತ’ ಎಂದು ಅರ್ಜಿದಾರ ಹೇಳಿದ್ದಾರೆ.

ಏಪ್ರಿಲ್ 2023ರ ಮೊದಲು ಭಾರತದಲ್ಲಿ ತಯಾರಾದ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುವುದಿಲ್ಲ. ಅಲ್ಲದೆ, 2 ವರ್ಷ ಹಳೆಯದಾದ ಈ ವಾಹನಗಳು, BS-VI ಗೆ ಅನುಗುಣವಾಗಿದ್ದರೂ, ಶೇ. 20 ಎಥೆನಾಲ್‌ಗೆ ಹೊಂದಿಕೆಯಾಗುವುದಿಲ್ಲ, ಅವು E-10ಗೆ ಹೊಂದಿಕೆಯಾಗಬಹುದು ಎಂದಿದ್ದಾರೆ.

ಪೆಟ್ರೋಲ್‌ನಲ್ಲಿರುವ ಎಥೆನಾಲ್ ಅಂಶವು ಎಂಜಿನ್ ಭಾಗಗಳ ಸವೆತಕ್ಕೆ ಕಾರಣವಾಗುತ್ತದೆ. ಇದು ಇಂಧನ ದಕ್ಷತೆಯನ್ನು ಕಡಿಮೆ ಮಾಡುತ್ತದೆ. ವಾಹನಗಳ ಅಕಾಲಿಕ ಹಾನಿಗೊಳಗಾಗಲು ಕಾರಣವಾಗುತ್ತದೆ. ಇಂಧನ ಮಾರ್ಗಗಳು, ಪ್ಲಾಸ್ಟಿಕ್/ರಬ್ಬರ್ ಘಟಕಗಳು ಇತ್ಯಾದಿಗಳಿಗೆ ಹಾನಿ ಮಾಡುತ್ತದೆ. ವಾಹನದ ಕಡಿಮೆ ದಕ್ಷತೆಯಿಂದಾಗಿ ಪೆಟ್ರೋಲ್ ಬಳಕೆ ಹೆಚ್ಚಾಗಿರುತ್ತದೆ. ಎಂಜಿನ್‌ಗಳು ಹಾನಿಗೊಳಗಾಗುತ್ತವೆ. ಮೈಲೇಜ್ ಕಡಿಮೆಯಾಗುತ್ತದೆ. ಮಾಲಿನ್ಯವನ್ನು ಹೆಚ್ಚಿಸುತ್ತದೆ. ಕಾರುಗಳ ದುರಸ್ತಿ ಬಿಲ್‌ಗಳು ಹೆಚ್ಚಾಗುತ್ತವೆ ಮತ್ತು ವಿಮಾ ಹಕ್ಕುಗಳನ್ನು ನಿರಾಕರಿಸಲಾಗುತ್ತದೆ ಎಮದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ಮಾರುಕಟ್ಟೆಯಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0) ಲಭ್ಯವಾಗುವಂತೆ ನೋಡಿಕೊಳ್ಳಲು ಮತ್ತು ಮಾರಾಟವಾಗುತ್ತಿರುವ ಪೆಟ್ರೋಲ್ E20 ಎಂದು ಸ್ಪಷ್ಟವಾಗಿ ಸೂಚಿಸುವ ಲೇಬಲ್‌ಗಳನ್ನು ಇಂಧನ ಪಂಪ್‌ಗಳಲ್ಲಿ ಅಳವಡಿಸಲು ನಿರ್ದೇಶನಗಳನ್ನು ನೀಡುವಂತೆ ಪಿಐಎಲ್‌ ಕೋರಿದೆ.

ಪೆಟ್ರೋಲ್‌ಗೆ ಶೇ. 20 ಎಥೆನಾಲ್ ಬೆರೆಸುತ್ತಿದ್ದರೂ, ಪೆಟ್ರೋಲ್ ಬೆಲೆ ಕಡಿಮೆಯಾಗಿಲ್ಲ ಎಂದು ಅರ್ಜಿದಾರರು ಗಮನಸೆಳೆದಿದ್ದಾರೆ. ಪೆಟ್ರೋಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಕಂಪನಿಗಳು ಗಳಿಸುವ ಲಾಭವನ್ನು ಅಂತಿಮವಾಗಿ ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ, ಅವರು ಅದೇ ಮೊತ್ತವನ್ನು ಪಾವತಿಸುತ್ತಲೇ ಇರುತ್ತಾರೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಪೆಟ್ರೋಲ್‌ನೊಂದಿಗೆ ಎಥೆನಾಲ್ ಬೆರೆಸುವ ಯೋಜನೆಯು ಜಾಗತಿಕ ಪದ್ಧತಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ಪಿಐಎಲ್ ಎತ್ತಿ ತೋರಿಸಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟದಲ್ಲಿ, ಎಥೆನಾಲ್ ಮುಕ್ತ ಪೆಟ್ರೋಲ್ ಇನ್ನೂ ಲಭ್ಯವಿದೆ. ಮಿಶ್ರಿತ ಇಂಧನವನ್ನು ಪೆಟ್ರೋಲ್ ಬಂಕ್‌ಗಳಲ್ಲಿ ಸ್ಪಷ್ಟ ಲೇಬಲ್‌ಗಳೊಂದಿಗೆ ನೀಡಲಾಗುತ್ತಿದೆ. ಆದ್ದರಿಂದ ಗ್ರಾಹಕರು ಮಾಹಿತಿಯುಕ್ತ ಆಯ್ಕೆ ಮಾಡಬಹುದು. ಆದರೆ, ಭಾರತದಲ್ಲಿ, ವಾಹನ ಚಾಲಕರ ಕಣ್ಣಿಗೆ ಮಣ್ಣೆಚರಲಾಗುತ್ತುದೆ. ಪೆಟ್ರೋಲ್ ಪಂಪ್‌ಗಳು ತಮ್ಮ ವಾಹನಗಳಿಗೆ ಏನು ತುಂಬಿಸುತ್ತಿವೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡದೆ ಎಥೆನಾಲ್-ಮಿಶ್ರಿತ ಇಂಧನವನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ಅರ್ಜಿದಾರ ಹೇಳಿದ್ದಾರೆ.

ಎಲ್ಲಾ ಇಂಧನ ಕೇಂದ್ರಗಳಲ್ಲಿ ಎಥೆನಾಲ್ ಮುಕ್ತ ಪೆಟ್ರೋಲ್ (E0)ಆಯ್ಕೆಯನ್ನೂ ನೀಡಬೇಕು. ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸ್ಪಷ್ಟ ಲೇಬಲ್ ಹಾಕಿ ಗ್ರಾಹಕರಿಗೆ ಮಾಹಿತಿ ನೀಡಬೇಕು. ಇಂಧನ ತುಂಬಿಸುವ ಸಮಯದಲ್ಲಿ ಗ್ರಾಹಕರಿಗೆ ಅವರ ವಾಹನಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೆಯಾಗುತ್ತವೆಯೇ ಎಂದು ತಿಳಿಸಬೇಕು. ಗ್ರಾಹಕ ವ್ಯವಹಾರಗಳ ಸಚಿವಾಲಯವು ಎಥೆನಾಲ್ ಮಿಶ್ರಿತ ಇಂಧನಗಳಿಗೆ ಗ್ರಾಹಕ ರಕ್ಷಣಾ ನಿಯಮಗಳನ್ನು ಜಾರಿಗೊಳಿಸಬೇಕು ಮತ್ತು ಸರಿಯಾದ ಸಲಹೆಗಳನ್ನು ನೀಡಬೇಕು. ಇಂಧನ ದಕ್ಷತೆ ಮತ್ತು ಹೊಂದಾಣಿಕೆಯಾಗದ ವಾಹನಗಳಲ್ಲಿ ಸವೆತಗಳ ಮೇಲೆ ಶೇ. 20 ಎಥೆನಾಲ್-ಮಿಶ್ರಿತ ಪೆಟ್ರೋಲ್ (E20) ಪ್ರಭಾವದ ಕುರಿತು ರಾಷ್ಟ್ರವ್ಯಾಪಿ ಅಧ್ಯಯನ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...