Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

- Advertisement -
- Advertisement -

ಒಳ ಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇಕಡ 1ರಷ್ಟು ಮೀಸಲಾತಿ ಕೊಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ (ಆ.23) ನಡೆದ ಸಭೆ ವಿಫಲಗೊಂಡಿದೆ.

ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಕಾವೇರಿ ನಿವಾಸದಲ್ಲಿ ಸಿಎಂ ಸಭೆ ನಡೆಸಿದ್ದು, ಪ್ರತ್ಯೇಕ ಮೀಸಲಾತಿ ಕಲ್ಪಿಸಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಸಭೆಯಲ್ಲಿ ಬೇಡಿಕೆ ಈಡೇರದ ಹಿನ್ನೆಲೆ ಹೋರಾಟ ಮುಂದುವರಿಸಲು ಅಲೆಮಾರಿ ಸಮುದಾಯದ ಮುಖಂಡರು ಮತ್ತು ಇತರ ಹೋರಾಟಗಾರರು ತೀರ್ಮಾನಿಸಿದ್ದಾರೆ.

ಶೇ. 1ರಷ್ಟು ಒಳ ಮೀಸಲಾತಿ ಪಡೆಯುವವರೆಗೂ, ‘ಎ’ ಗುಂಪಿನಲ್ಲಿ ಸೇರಿಸುವವರೆಗೂ ಹೋರಾಟ ಮುಂದುವರೆಯುತ್ತದೆ. ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಹೋರಾಟವನ್ನು ತೀವ್ರಗೊಳಿಸುತ್ತೇವೆ. ಅಲೆಮಾರಿಗಳನ್ನು ಮೀಸಲಾತಿಯಿಂದ ವಂಚಿಸುವ ಅನ್ಯಾಯ ಮಾಡಿದ ಸಚಿವ ಸಂಪುಟದ ಎಲ್ಲಾ ಮಂತ್ರಿಗಳಿಗೆ ಪ್ರತಿಭಟನಾ ಹಕ್ಕೊತ್ತಾಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸಿಎಂ ಸಭೆ ಬಳಿಕ ಹೇಳಿಕೆ ನೀಡಿರುವ ಅಲೆಮಾರಿ ಸಮುದಾಯದ ಮುಖಂಡ ಚಾವಡೆ ಲೋಕೇಶ್‌ ಗೋಸಂಗಿ, “ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌ ಹೋರಾಟಕ್ಕೆ ಬರುವಾಗ ಟೆಂಟ್‌ಗಳು, ಕೌದಿಗಳನ್ನು ತನ್ನಿ. ಫ್ರೀಡಂ ಪಾರ್ಕ್‌ನಲ್ಲಿ ಟೆಂಟ್‌ ಹಾಕಿ ಇಲ್ಲಿಯೇ ಊಟ ಮಾಡಿಕೊಂಡು ಜೀವನ ಮಾಡೋಣ. ತಂಗಡಗಿಯಂತಹ ಸಚಿವರಿಗೆ ಹಸಿದಿದ್ದರೆ ಅವರಿಗೂ ಊಟ ಹಾಕೋಣ. ನಾವು ನ್ಯಾಯ ಪಡೆದೇ ವಾಪಸ್‌ ಹೋಗೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಪ್ರೊ. ಎ.ಎಸ್ ಪ್ರಭಾಕರ್ ಹೇಳಿಕೆ ನೀಡಿ ” ಮುಖ್ಯಮಂತ್ರಿಗಳ ಬಗ್ಗೆ ನಮಗೆ ಭರವಸೆ ಇತ್ತು. ಆದರೆ, ಅವರ ಮಾತಿನಲ್ಲಿ ವಿಷಾದ, ಹತಾಶೆ ಇತ್ತು. ಅವರಂತಹ ಗಟ್ಟಿ ಸೈದ್ಧಾಂತಿಕ ರಾಜಕಾರಣಿ ಇವತ್ತು ಹತಾಶೆಗೆ ಒಳಗಾಗಿದ್ದಾರೆ ಎಂದರೆ ದೊಡ್ಡ ದೊಡ್ಡ ಲಾಬಿಗಳು ಅವರನ್ನು ಮಣಿಸುತ್ತಿವೆ” ಎಂದಿದ್ದಾರೆ.

“ನಾವು ಹೋರಾಟ ಮುಂದುವರೆಸಬೇಕು. ಆದರೆ, ಅಲೆಮಾರಿಗಳು ಶೇ. 90ರಷ್ಟು ಜನರು ಕೂಲಿ ಕಾರ್ಮಿಕರು. ಅವರು ಬೆಂಗಳೂರಿಗೆ ಬರುವುದು ಬಹಳ ಕಷ್ಟ. ಹಾಗಾಗಿ, ನಮ್ಮ ನಮ್ಮ ಜಿಲ್ಲೆಗಳಲ್ಲಿ ಹೋರಾಟ ಮುಂದುವರೆಸೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

“ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ತೀರ್ಪಿನ ದೊಡ್ಡ ಬಲವಿದೆ. ಸಂವಿಧಾನದ ಬಲವಿದೆ. ಕೋರ್ಟ್‌ಗೆ ಹೋಗುವುದು ಸೇರಿದಂತೆ ಇನ್ನೂ ಯಾವ ಯಾವ ಸಾಧ್ಯತೆಗಳಿವೆ ಎಂಬುದನ್ನು ಪರಿಶೀಲಿಸುತ್ತೇವೆ. ನಮ್ಮವರು ಯಾರೂ ಕೂಡ ಹತಾಶರಾಗಬಾರದು. 101 ಸಮುದಾಯಗಳು ನಮ್ಮ ಸಹೋದರರು. ಇದೊಂದು ಸಣ್ಣ ದಾಯಾದಿ ಕಲಹ ಅಷ್ಟೇ. ನಾವು ಯಾರನ್ನೂ ದೂಷಿಸಬಾರದು. ಐಕ್ಯತೆ ಬಹಳ ಮುಖ್ಯ. ನಾವು ಅಲೆಮಾರಿಗಳು ಈ ವ್ಯವಸ್ಥೆಯ ಅಂತರಾತ್ಮವನ್ನು ಕಲಕುತ್ತೇವೆ. ನಮ್ಮ ಅನ್ನ ಕಸಿದುಕೊಂಡ ಪ್ರತಿಯೊಬ್ಬರ ಹೃದಯವನ್ನು ಕಾಡುತ್ತೇವೆ” ಎಂದು ಹೇಳಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಹೇಳಿಕೆ ನೀಡಿ “ನಾವು ಸೋತಿದ್ದೇವೆ ಎಂಬುದು ಸುಳ್ಳು. ದಯವಿಟ್ಟು ಯಾರೂ ನಿರಾಶರಾಗಬೇಡಿ. ನಾವು 11ನೇ ತಾರೀಖು ಹೋರಾಟಕ್ಕೆ ಕೂತಾಗ ಕೆಲವರು ಮುಖ್ಯವಾಗಿ ರಾಜಕಾರಣಿಗಳು ಇದು ಆಗುವ ಮಾತಲ್ಲ, ಹೋರಾಟ ಕೈಬಿಡಿ ಎಂದರು. ಮಳೆ, ಗಾಳಿ, ಚಳಿ ಎಂದು ಹೆದರಿಸಿದರು, ಜನ ಬರುವುದಿಲ್ಲ ಎಂದರು. ಆದರೆ, ಕೊನೆಗೆ ಏನಾಯಿತು. ಸರ್ಕಾರದ ಮೇಲೆ ಒತ್ತಡ ತಂದು ಒಳ ಮೀಸಲಾತಿ ಜಾರಿಗೊಳಿಸಿದ್ದೀವಿ. ಆದರೆ, 6%  ನಮಗೆ ಸಮಾಧಾನ ತಂದಿಲ್ಲ. ನಾವು ಸಂತಸಪಟ್ಟಿಲ್ಲ. ನಾವು 35 ವರ್ಷ ಹೋರಾಡಿದ್ದು ಇದಕ್ಕೆ ಮಾತ್ರವೇ? ಅಲೆಮಾರಿಗಳನ್ನು ಮರೆತುಬಿಡಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

“ನಾಗಮೋಹನ್‌ ದಾಸ್‌ರವರು ಸಹ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು ಸಾಧ್ಯವಾಗಿಲ್ಲ ಎಂಬ ನೋವು ಅವರನ್ನು ಕಾಡುತ್ತಿದೆ. ಅವರು ವೇತನ ಪಡೆಯದೇ ಕೆಲಸ ಮಾಡಿದ್ದಾರೆ. ನಾವು ಹೋರಾಟ ಮುಂದುವರೆಸೋಣ. ಹೋರಾಟದ ಟೆಂಟ್‌ ಮುಂದುವರೆಯುತ್ತದೆ. ಪ್ರತಿದಿನ 50 ಜನ ಇದ್ದು ಹೋರಾಟ ಮುಂದುವರೆಸೋಣ. ಬಾಬಾ ಸಾಹೇಬರು ಹೇಳಿದಂತೆ ಮಹಾತ್ಮರು ಬರುವರು, ಮಹಾತ್ಮರು ಹೋಗುವರು. ಮಂತ್ರಿಗಳು ಬಂದು ಹೋಗುವರು ಯಾರೂ ಉದ್ದಾರ ಮಾಡುವುದಿಲ್ಲ. ನಿಮ್ಮ ಉದ್ಧಾರ ನಿಮ್ಮ ಕೈಯಲ್ಲಿದೆ ಎಂದು ಹೇಳಿದ್ದಾರೆ. ಹಾಗಾಗಿ ನಮ್ಮ ಹೋರಾಟವೇ ನಮಗೆ ಹಕ್ಕು ಕೊಡಿಸುತ್ತದೆ” ಎಂದಿದ್ದಾರೆ.

“ಪೂನಾ ಒಪ್ಪಂದ ಆದಾಗ ಬಾಬಾ ಸಾಹೇಬರು ಸೋತರೆ? ಹತಾಶರಾಗಿ ಕೈಬಿಟ್ಟರೆ? ಇಲ್ಲ ಅವರು ಹೋರಾಟ ಮುಂದುವರೆಸಿ ನಮಗೆಲ್ಲ ಮೀಸಲಾತಿ ಕೊಡಲಿಲ್ಲವೇ? ಅದೇ ರೀತಿ ಒಳ ಮೀಸಲಾತಿಗಾಗಿಯೂ ಯಾವ ಸರ್ಕಾರ, ಯಾವ ರಾಜಕಾರಣಿಗಳು ಮಾಡದ್ದನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮೂಲಕ ಜಾರಿ ಮಾಡಿಸಿಕೊಂಡಿದ್ದೀವಿ. 370ಜೆ, ಒಳ ಮೀಸಲಾತಿ ಎಲ್ಲವೂ ಸಂವಿಧಾನದ ಮೂಲಕ ಜಾರಿಯಾಗಿದೆ. ಸುಪ್ರೀಂ ಕೋರ್ಟ್‌ನ ತೀರ್ಪು ಸತ್ತಿಲ್ಲ. ಅದನ್ನು ಇಟ್ಟುಕೊಂಡು ಕಾನೂನು ಹೋರಾಟ ಸಹ ಮಾಡೋಣ. 1% ಮೀಸಲಾತಿ ನಮಗೆ ದಕ್ಕೆ ದಕ್ಕುತ್ತದೆ. ನಮ್ಮ ಪರವಾಗಿ ಪ್ರೊ.ಹರಗೋಪಾಲ್‌ ನಮ್ಮ ಹೋರಾಟಕ್ಕೆ ಬೆಂಬಲ ಘೋಷಿಸಿ ಇಲ್ಲಿಗೆ ಬರುತ್ತಿದ್ದಾರೆ. ಮೀಸಲಾತಿ ನಮ್ಮ ಭಿಕ್ಷೆಯಲ್ಲ, ಹಕ್ಕು ಎಂದು ಸಾರಿದ್ದಾರೆ. ಪ್ರೊ.ಸಾಯಿಬಾಬಾರವರು ಎಷ್ಟು ಹೋರಾಟ ಮಾಡಿದ್ದಾರೆ? ಪಾಪಾ ಅವರನ್ನು ಜೈಲಿಗೆ ಹಾಕಿದರೂ ಹೋರಾಟ ಬಿಡಲಿಲ್ಲ. ಹಾಗಾಗಿ ನಾವು ಹತಾಶರಾಗುವುದು ಬೇಡ. ನಿಮ್ಮ ಕೈಮುಗಿದು ಹೇಳುತ್ತೇನೆ, ನಿರಾಶರಾಗಬೇಡಿ, ಜೊತೆಗೂಡಿ ಹೋರಾಡೋಣ ಬನ್ನಿ” ಎಂದು ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಸಣ್ಣ ಮಾರಣ್ಣ ಹೇಳಿಕೆ ನೀಡಿ, “ಈ ರಾಜ್ಯದ ದುರ್ಬಲ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯನವರು ಮಾತ್ರ. ನಾವು ಅವರನ್ನು ಧೀಮಂತ ನಾಯಕ ಎಂದುಕೊಂಡಿದ್ದೆವು. ಆದರೆ, ಇವತ್ತು ಕೆಲವರ ಬಲಾಢ್ಯರ ಒತ್ತಡಕ್ಕೆ ರಾಜ್ಯದ ಮುಖ್ಯಮಂತ್ರಿ ಮಣಿದಿದ್ದಾರೆ. ಆದರೆ, ನಾವು ಕುಗ್ಗಬಾರದು, ಹೋರಾಟ ಮುಂದುವರೆಸೋಣ” ಎಂದಿದ್ದಾರೆ.

ಇನ್ನೊಬ್ಬರು ಒಳ ಮೀಸಲಾತಿ ಹೋರಾಟಗಾರ ವೀರೇಶ್‌ ಹೇಳಿಕೆ ನೀಡಿ “ನನಗೆ ಮಾತೇ ತೋಚುತ್ತಿಲ್ಲ. ನನ್ನ ಎರಡು ವರ್ಷದ ಅವಧಿಯಲ್ಲಿ ಕುಟುಂಬದಿಂದ ಹೊರಗಿದ್ದು ಒಳ ಮೀಸಲಾತಿಯ ಹೋರಾಟಕ್ಕೆ ಮೀಸಲಿಟ್ಟಿದ್ದೆ. ಈ ಹಿಂದೆಯೇ ನಾಗಮೋಹನ್‌ ದಾಸ್‌ರವರಿಗೆ 3% ಮೀಸಲಾತಿ ಕೊಡಬೇಕೆಂದು ಮನವಿ ಕೊಟ್ಟಿದ್ದೆವು. ಅವರು ಸೂಕ್ತ ದತ್ತಾಂಶದೊಂದಿಗೆ ಉತ್ತಮ ವರ್ಗೀಕರಣ ಮಾಡಿ ವರದಿ ನೀಡಿದ್ದರು. 59 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಮಾಡಿ 1% ಮೀಸಲಾತಿ ನಿಗದಿ ಮಾಡಿದ್ದರು. ಆದರೆ, ಸರ್ಕಾರ ಅಲೆಮಾರಿಗಳಿಗೆ ಅನ್ಯಾಯ ಮಾಡಿ ನಮ್ಮಿಂದ 1% ಕಿತ್ತುಕೊಂಡಿದೆ. ನಮಗೆ ಶಿಕ್ಷಣ, ಉದ್ಯೋಗ, ಮನೆ, ಬಂಡವಾಳ ಇಲ್ಲದೇ ನಮಗೆ ಮರಣಶಾಸನ ಬರೆಯಲಾಗಿದೆ. ಮುಖ್ಯಮಂತ್ರಿಗಳು ಒತ್ತಡಕ್ಕೆ ಮಣಿದು ನಮ್ಮ ಕತ್ತು ಕುಯ್ದಿದ್ದಾರೆ. ನಮ್ಮನ್ನು ಮತ್ತೆ ಜೀತಕ್ಕೆ, ಭಿಕ್ಷೆಗೆ ಕಳಿಸುತ್ತಿದ್ದಾರೆ. ಮಾನವೀಯತೆ, ಮನುಷ್ಯತ್ವ ಸರ್ಕಾರಕ್ಕೆ ಇದ್ದಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. ನಾವು ಹೋರಾಟವನ್ನು ಮುಂದುವರೆಸುತ್ತೇವೆ. ನಾವು ಸುಪ್ರೀಂ ಕೋರ್ಟ್‌ ಕದ ತಟ್ಟಿ ನ್ಯಾಯ ಪಡೆಯೋಣ” ಎಂದು ಬೇಸರ ಹೊರ ಹಾಕಿದ್ದಾರೆ.

“1% ಮೀಸಲಾತಿ ಕೊಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಲೆಮಾರಿಗಳಿಗೆ ವಿಶೇಷ ಮಂಡಳಿ ರಚನೆ ಮಾಡಬಹುದು, ಅನುದಾನ ಕೊಡಬಹುದು ಇತ್ಯಾದಿ ಹೇಳಿದ್ದಾರೆ. ಅದಕ್ಕೆ ನಾವು ಒಪ್ಪಿಲ್ಲ. ನಮಗೆ ವರ್ಗೀಕರಣವೇ ಬಹಳ ಮುಖ್ಯ ಎಂದು ಪಟ್ಟು ಹಿಡಿದೆವು. ಕಟ್ಟಕಡೆಯ ಅಲೆಮಾರಿ ಜನರು ನೋವಿನಲ್ಲಿರುವಾಗ ಖುಷಿಯ ಮಾತೆಲ್ಲಿ?” ಎಂದು ಒಳ ಮೀಸಲಾತಿ ಹೋರಾಟಗಾರ ಬಾಲಗುರುಮೂರ್ತಿ ಪ್ರಶ್ನಿಸಿದ್ದಾರೆ.

ಆಗಸ್ಟ್ 19ರಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ನ್ಯಾ.ನಾಗಮೋಹನ್‌ ದಾಸ್ ಅವರ ಒಳ ಮೀಸಲಾತಿ ವರದಿಯನ್ನು ಅಂಗೀಕರಿಸಿರುವ ಸರ್ಕಾರ, ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ ಘೋಷಿಸಿದೆ. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ 1 ಶೇ. ಮೀಸಲಾತಿ ಪ್ರಸ್ತಾಪಿಸಿದ್ದರೂ, ಸರ್ಕಾರ ಅವರನ್ನು ಕೊಲಂಬೋ ಜೊತೆ ಸೇರಿಸಿ ಅನ್ಯಾಯ ಮಾಡಿದೆ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿರಂತರ ಹೋರಾಟ ನಡೆಯುತ್ತಿದೆ.

ದೂರುದಾರನನ್ನು ಬಂಧಿಸಲಾಗಿದೆ, ಹೆಚ್ಚಿನ ಮಾಹಿತಿ ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ: ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...