Homeಕರ್ನಾಟಕಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

- Advertisement -
- Advertisement -

ಒಳ ಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇಕಡ 1ರಷ್ಟು ಮೀಸಲಾತಿ ಕೊಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ (ಆ.23) ನಡೆದ ಸಭೆ ವಿಫಲಗೊಂಡಿದೆ.

ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಕಾವೇರಿ ನಿವಾಸದಲ್ಲಿ ಸಿಎಂ ಸಭೆ ನಡೆಸಿದ್ದು, ಪ್ರತ್ಯೇಕ ಮೀಸಲಾತಿ ಕಲ್ಪಿಸಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಸಭೆಯಲ್ಲಿ ಬೇಡಿಕೆ ಈಡೇರದ ಹಿನ್ನೆಲೆ ಹೋರಾಟ ಮುಂದುವರಿಸಲು ಅಲೆಮಾರಿ ಸಮುದಾಯದ ಮುಖಂಡರು ಮತ್ತು ಇತರ ಹೋರಾಟಗಾರರು ತೀರ್ಮಾನಿಸಿದ್ದಾರೆ.

ಶೇ. 1ರಷ್ಟು ಒಳ ಮೀಸಲಾತಿ ಪಡೆಯುವವರೆಗೂ, ‘ಎ’ ಗುಂಪಿನಲ್ಲಿ ಸೇರಿಸುವವರೆಗೂ ಹೋರಾಟ ಮುಂದುವರೆಯುತ್ತದೆ. ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಹೋರಾಟವನ್ನು ತೀವ್ರಗೊಳಿಸುತ್ತೇವೆ. ಅಲೆಮಾರಿಗಳನ್ನು ಮೀಸಲಾತಿಯಿಂದ ವಂಚಿಸುವ ಅನ್ಯಾಯ ಮಾಡಿದ ಸಚಿವ ಸಂಪುಟದ ಎಲ್ಲಾ ಮಂತ್ರಿಗಳಿಗೆ ಪ್ರತಿಭಟನಾ ಹಕ್ಕೊತ್ತಾಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸಿಎಂ ಸಭೆ ಬಳಿಕ ಹೇಳಿಕೆ ನೀಡಿರುವ ಅಲೆಮಾರಿ ಸಮುದಾಯದ ಮುಖಂಡ ಚಾವಡೆ ಲೋಕೇಶ್‌ ಗೋಸಂಗಿ, “ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌ ಹೋರಾಟಕ್ಕೆ ಬರುವಾಗ ಟೆಂಟ್‌ಗಳು, ಕೌದಿಗಳನ್ನು ತನ್ನಿ. ಫ್ರೀಡಂ ಪಾರ್ಕ್‌ನಲ್ಲಿ ಟೆಂಟ್‌ ಹಾಕಿ ಇಲ್ಲಿಯೇ ಊಟ ಮಾಡಿಕೊಂಡು ಜೀವನ ಮಾಡೋಣ. ತಂಗಡಗಿಯಂತಹ ಸಚಿವರಿಗೆ ಹಸಿದಿದ್ದರೆ ಅವರಿಗೂ ಊಟ ಹಾಕೋಣ. ನಾವು ನ್ಯಾಯ ಪಡೆದೇ ವಾಪಸ್‌ ಹೋಗೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಪ್ರೊ. ಎ.ಎಸ್ ಪ್ರಭಾಕರ್ ಹೇಳಿಕೆ ನೀಡಿ ” ಮುಖ್ಯಮಂತ್ರಿಗಳ ಬಗ್ಗೆ ನಮಗೆ ಭರವಸೆ ಇತ್ತು. ಆದರೆ, ಅವರ ಮಾತಿನಲ್ಲಿ ವಿಷಾದ, ಹತಾಶೆ ಇತ್ತು. ಅವರಂತಹ ಗಟ್ಟಿ ಸೈದ್ಧಾಂತಿಕ ರಾಜಕಾರಣಿ ಇವತ್ತು ಹತಾಶೆಗೆ ಒಳಗಾಗಿದ್ದಾರೆ ಎಂದರೆ ದೊಡ್ಡ ದೊಡ್ಡ ಲಾಬಿಗಳು ಅವರನ್ನು ಮಣಿಸುತ್ತಿವೆ” ಎಂದಿದ್ದಾರೆ.

“ನಾವು ಹೋರಾಟ ಮುಂದುವರೆಸಬೇಕು. ಆದರೆ, ಅಲೆಮಾರಿಗಳು ಶೇ. 90ರಷ್ಟು ಜನರು ಕೂಲಿ ಕಾರ್ಮಿಕರು. ಅವರು ಬೆಂಗಳೂರಿಗೆ ಬರುವುದು ಬಹಳ ಕಷ್ಟ. ಹಾಗಾಗಿ, ನಮ್ಮ ನಮ್ಮ ಜಿಲ್ಲೆಗಳಲ್ಲಿ ಹೋರಾಟ ಮುಂದುವರೆಸೋಣ” ಎಂದು ಸಮುದಾಯಕ್ಕೆ ಕರೆ ಕೊಟ್ಟಿದ್ದಾರೆ.

“ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ತೀರ್ಪಿನ ದೊಡ್ಡ ಬಲವಿದೆ. ಸಂವಿಧಾನದ ಬಲವಿದೆ. ಕೋರ್ಟ್‌ಗೆ ಹೋಗುವುದು ಸೇರಿದಂತೆ ಇನ್ನೂ ಯಾವ ಯಾವ ಸಾಧ್ಯತೆಗಳಿವೆ ಎಂಬುದನ್ನು ಪರಿಶೀಲಿಸುತ್ತೇವೆ. ನಮ್ಮವರು ಯಾರೂ ಕೂಡ ಹತಾಶರಾಗಬಾರದು. 101 ಸಮುದಾಯಗಳು ನಮ್ಮ ಸಹೋದರರು. ಇದೊಂದು ಸಣ್ಣ ದಾಯಾದಿ ಕಲಹ ಅಷ್ಟೇ. ನಾವು ಯಾರನ್ನೂ ದೂಷಿಸಬಾರದು. ಐಕ್ಯತೆ ಬಹಳ ಮುಖ್ಯ. ನಾವು ಅಲೆಮಾರಿಗಳು ಈ ವ್ಯವಸ್ಥೆಯ ಅಂತರಾತ್ಮವನ್ನು ಕಲಕುತ್ತೇವೆ. ನಮ್ಮ ಅನ್ನ ಕಸಿದುಕೊಂಡ ಪ್ರತಿಯೊಬ್ಬರ ಹೃದಯವನ್ನು ಕಾಡುತ್ತೇವೆ” ಎಂದು ಹೇಳಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಹೇಳಿಕೆ ನೀಡಿ “ನಾವು ಸೋತಿದ್ದೇವೆ ಎಂಬುದು ಸುಳ್ಳು. ದಯವಿಟ್ಟು ಯಾರೂ ನಿರಾಶರಾಗಬೇಡಿ. ನಾವು 11ನೇ ತಾರೀಖು ಹೋರಾಟಕ್ಕೆ ಕೂತಾಗ ಕೆಲವರು ಮುಖ್ಯವಾಗಿ ರಾಜಕಾರಣಿಗಳು ಇದು ಆಗುವ ಮಾತಲ್ಲ, ಹೋರಾಟ ಕೈಬಿಡಿ ಎಂದರು. ಮಳೆ, ಗಾಳಿ, ಚಳಿ ಎಂದು ಹೆದರಿಸಿದರು, ಜನ ಬರುವುದಿಲ್ಲ ಎಂದರು. ಆದರೆ, ಕೊನೆಗೆ ಏನಾಯಿತು. ಸರ್ಕಾರದ ಮೇಲೆ ಒತ್ತಡ ತಂದು ಒಳ ಮೀಸಲಾತಿ ಜಾರಿಗೊಳಿಸಿದ್ದೀವಿ. ಆದರೆ, 6%  ನಮಗೆ ಸಮಾಧಾನ ತಂದಿಲ್ಲ. ನಾವು ಸಂತಸಪಟ್ಟಿಲ್ಲ. ನಾವು 35 ವರ್ಷ ಹೋರಾಡಿದ್ದು ಇದಕ್ಕೆ ಮಾತ್ರವೇ? ಅಲೆಮಾರಿಗಳನ್ನು ಮರೆತುಬಿಡಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

“ನಾಗಮೋಹನ್‌ ದಾಸ್‌ರವರು ಸಹ ಕಣ್ಣೀರು ಹಾಕುತ್ತಿದ್ದಾರೆ. ನಾನಂದುಕೊಂಡ ಸಮುದಾಯಕ್ಕೆ ನ್ಯಾಯ ಕೊಡಲು ಸಾಧ್ಯವಾಗಿಲ್ಲ ಎಂಬ ನೋವು ಅವರನ್ನು ಕಾಡುತ್ತಿದೆ. ಅವರು ವೇತನ ಪಡೆಯದೇ ಕೆಲಸ ಮಾಡಿದ್ದಾರೆ. ನಾವು ಹೋರಾಟ ಮುಂದುವರೆಸೋಣ. ಹೋರಾಟದ ಟೆಂಟ್‌ ಮುಂದುವರೆಯುತ್ತದೆ. ಪ್ರತಿದಿನ 50 ಜನ ಇದ್ದು ಹೋರಾಟ ಮುಂದುವರೆಸೋಣ. ಬಾಬಾ ಸಾಹೇಬರು ಹೇಳಿದಂತೆ ಮಹಾತ್ಮರು ಬರುವರು, ಮಹಾತ್ಮರು ಹೋಗುವರು. ಮಂತ್ರಿಗಳು ಬಂದು ಹೋಗುವರು ಯಾರೂ ಉದ್ದಾರ ಮಾಡುವುದಿಲ್ಲ. ನಿಮ್ಮ ಉದ್ಧಾರ ನಿಮ್ಮ ಕೈಯಲ್ಲಿದೆ ಎಂದು ಹೇಳಿದ್ದಾರೆ. ಹಾಗಾಗಿ ನಮ್ಮ ಹೋರಾಟವೇ ನಮಗೆ ಹಕ್ಕು ಕೊಡಿಸುತ್ತದೆ” ಎಂದಿದ್ದಾರೆ.

“ಪೂನಾ ಒಪ್ಪಂದ ಆದಾಗ ಬಾಬಾ ಸಾಹೇಬರು ಸೋತರೆ? ಹತಾಶರಾಗಿ ಕೈಬಿಟ್ಟರೆ? ಇಲ್ಲ ಅವರು ಹೋರಾಟ ಮುಂದುವರೆಸಿ ನಮಗೆಲ್ಲ ಮೀಸಲಾತಿ ಕೊಡಲಿಲ್ಲವೇ? ಅದೇ ರೀತಿ ಒಳ ಮೀಸಲಾತಿಗಾಗಿಯೂ ಯಾವ ಸರ್ಕಾರ, ಯಾವ ರಾಜಕಾರಣಿಗಳು ಮಾಡದ್ದನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮೂಲಕ ಜಾರಿ ಮಾಡಿಸಿಕೊಂಡಿದ್ದೀವಿ. 370ಜೆ, ಒಳ ಮೀಸಲಾತಿ ಎಲ್ಲವೂ ಸಂವಿಧಾನದ ಮೂಲಕ ಜಾರಿಯಾಗಿದೆ. ಸುಪ್ರೀಂ ಕೋರ್ಟ್‌ನ ತೀರ್ಪು ಸತ್ತಿಲ್ಲ. ಅದನ್ನು ಇಟ್ಟುಕೊಂಡು ಕಾನೂನು ಹೋರಾಟ ಸಹ ಮಾಡೋಣ. 1% ಮೀಸಲಾತಿ ನಮಗೆ ದಕ್ಕೆ ದಕ್ಕುತ್ತದೆ. ನಮ್ಮ ಪರವಾಗಿ ಪ್ರೊ.ಹರಗೋಪಾಲ್‌ ನಮ್ಮ ಹೋರಾಟಕ್ಕೆ ಬೆಂಬಲ ಘೋಷಿಸಿ ಇಲ್ಲಿಗೆ ಬರುತ್ತಿದ್ದಾರೆ. ಮೀಸಲಾತಿ ನಮ್ಮ ಭಿಕ್ಷೆಯಲ್ಲ, ಹಕ್ಕು ಎಂದು ಸಾರಿದ್ದಾರೆ. ಪ್ರೊ.ಸಾಯಿಬಾಬಾರವರು ಎಷ್ಟು ಹೋರಾಟ ಮಾಡಿದ್ದಾರೆ? ಪಾಪಾ ಅವರನ್ನು ಜೈಲಿಗೆ ಹಾಕಿದರೂ ಹೋರಾಟ ಬಿಡಲಿಲ್ಲ. ಹಾಗಾಗಿ ನಾವು ಹತಾಶರಾಗುವುದು ಬೇಡ. ನಿಮ್ಮ ಕೈಮುಗಿದು ಹೇಳುತ್ತೇನೆ, ನಿರಾಶರಾಗಬೇಡಿ, ಜೊತೆಗೂಡಿ ಹೋರಾಡೋಣ ಬನ್ನಿ” ಎಂದು ಕರೆ ಕೊಟ್ಟಿದ್ದಾರೆ.

ಒಳ ಮೀಸಲಾತಿ ಹೋರಾಟಗಾರ ಸಣ್ಣ ಮಾರಣ್ಣ ಹೇಳಿಕೆ ನೀಡಿ, “ಈ ರಾಜ್ಯದ ದುರ್ಬಲ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯನವರು ಮಾತ್ರ. ನಾವು ಅವರನ್ನು ಧೀಮಂತ ನಾಯಕ ಎಂದುಕೊಂಡಿದ್ದೆವು. ಆದರೆ, ಇವತ್ತು ಕೆಲವರ ಬಲಾಢ್ಯರ ಒತ್ತಡಕ್ಕೆ ರಾಜ್ಯದ ಮುಖ್ಯಮಂತ್ರಿ ಮಣಿದಿದ್ದಾರೆ. ಆದರೆ, ನಾವು ಕುಗ್ಗಬಾರದು, ಹೋರಾಟ ಮುಂದುವರೆಸೋಣ” ಎಂದಿದ್ದಾರೆ.

ಇನ್ನೊಬ್ಬರು ಒಳ ಮೀಸಲಾತಿ ಹೋರಾಟಗಾರ ವೀರೇಶ್‌ ಹೇಳಿಕೆ ನೀಡಿ “ನನಗೆ ಮಾತೇ ತೋಚುತ್ತಿಲ್ಲ. ನನ್ನ ಎರಡು ವರ್ಷದ ಅವಧಿಯಲ್ಲಿ ಕುಟುಂಬದಿಂದ ಹೊರಗಿದ್ದು ಒಳ ಮೀಸಲಾತಿಯ ಹೋರಾಟಕ್ಕೆ ಮೀಸಲಿಟ್ಟಿದ್ದೆ. ಈ ಹಿಂದೆಯೇ ನಾಗಮೋಹನ್‌ ದಾಸ್‌ರವರಿಗೆ 3% ಮೀಸಲಾತಿ ಕೊಡಬೇಕೆಂದು ಮನವಿ ಕೊಟ್ಟಿದ್ದೆವು. ಅವರು ಸೂಕ್ತ ದತ್ತಾಂಶದೊಂದಿಗೆ ಉತ್ತಮ ವರ್ಗೀಕರಣ ಮಾಡಿ ವರದಿ ನೀಡಿದ್ದರು. 59 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಮಾಡಿ 1% ಮೀಸಲಾತಿ ನಿಗದಿ ಮಾಡಿದ್ದರು. ಆದರೆ, ಸರ್ಕಾರ ಅಲೆಮಾರಿಗಳಿಗೆ ಅನ್ಯಾಯ ಮಾಡಿ ನಮ್ಮಿಂದ 1% ಕಿತ್ತುಕೊಂಡಿದೆ. ನಮಗೆ ಶಿಕ್ಷಣ, ಉದ್ಯೋಗ, ಮನೆ, ಬಂಡವಾಳ ಇಲ್ಲದೇ ನಮಗೆ ಮರಣಶಾಸನ ಬರೆಯಲಾಗಿದೆ. ಮುಖ್ಯಮಂತ್ರಿಗಳು ಒತ್ತಡಕ್ಕೆ ಮಣಿದು ನಮ್ಮ ಕತ್ತು ಕುಯ್ದಿದ್ದಾರೆ. ನಮ್ಮನ್ನು ಮತ್ತೆ ಜೀತಕ್ಕೆ, ಭಿಕ್ಷೆಗೆ ಕಳಿಸುತ್ತಿದ್ದಾರೆ. ಮಾನವೀಯತೆ, ಮನುಷ್ಯತ್ವ ಸರ್ಕಾರಕ್ಕೆ ಇದ್ದಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. ನಾವು ಹೋರಾಟವನ್ನು ಮುಂದುವರೆಸುತ್ತೇವೆ. ನಾವು ಸುಪ್ರೀಂ ಕೋರ್ಟ್‌ ಕದ ತಟ್ಟಿ ನ್ಯಾಯ ಪಡೆಯೋಣ” ಎಂದು ಬೇಸರ ಹೊರ ಹಾಕಿದ್ದಾರೆ.

“1% ಮೀಸಲಾತಿ ಕೊಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಲೆಮಾರಿಗಳಿಗೆ ವಿಶೇಷ ಮಂಡಳಿ ರಚನೆ ಮಾಡಬಹುದು, ಅನುದಾನ ಕೊಡಬಹುದು ಇತ್ಯಾದಿ ಹೇಳಿದ್ದಾರೆ. ಅದಕ್ಕೆ ನಾವು ಒಪ್ಪಿಲ್ಲ. ನಮಗೆ ವರ್ಗೀಕರಣವೇ ಬಹಳ ಮುಖ್ಯ ಎಂದು ಪಟ್ಟು ಹಿಡಿದೆವು. ಕಟ್ಟಕಡೆಯ ಅಲೆಮಾರಿ ಜನರು ನೋವಿನಲ್ಲಿರುವಾಗ ಖುಷಿಯ ಮಾತೆಲ್ಲಿ?” ಎಂದು ಒಳ ಮೀಸಲಾತಿ ಹೋರಾಟಗಾರ ಬಾಲಗುರುಮೂರ್ತಿ ಪ್ರಶ್ನಿಸಿದ್ದಾರೆ.

ಆಗಸ್ಟ್ 19ರಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ನ್ಯಾ.ನಾಗಮೋಹನ್‌ ದಾಸ್ ಅವರ ಒಳ ಮೀಸಲಾತಿ ವರದಿಯನ್ನು ಅಂಗೀಕರಿಸಿರುವ ಸರ್ಕಾರ, ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ ಘೋಷಿಸಿದೆ. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ 1 ಶೇ. ಮೀಸಲಾತಿ ಪ್ರಸ್ತಾಪಿಸಿದ್ದರೂ, ಸರ್ಕಾರ ಅವರನ್ನು ಕೊಲಂಬೋ ಜೊತೆ ಸೇರಿಸಿ ಅನ್ಯಾಯ ಮಾಡಿದೆ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿರಂತರ ಹೋರಾಟ ನಡೆಯುತ್ತಿದೆ.

ದೂರುದಾರನನ್ನು ಬಂಧಿಸಲಾಗಿದೆ, ಹೆಚ್ಚಿನ ಮಾಹಿತಿ ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ: ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...